Homeಮುಖಪುಟಎಸ್‌ಐಆರ್ 'ಸಾಂಸ್ಥಿಕ ಮತಗಳ್ಳತನ', ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ: ರಾಹುಲ್ ಗಾಂಧಿ

ಎಸ್‌ಐಆರ್ ‘ಸಾಂಸ್ಥಿಕ ಮತಗಳ್ಳತನ’, ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ: ರಾಹುಲ್ ಗಾಂಧಿ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಾಂಸ್ಥಿಕ ಮತಗಳ್ಳತನವಾಗಿದೆ. ಚುನಾವಣಾ ಆಯೋಗ ಬಿಜೆಪಿ ಜೊತೆ ಕೈ ಜೋಡಿಸಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಎಸ್‌ಐಆರ್ ಮತ್ತು ಮತಗಳ್ಳತನದ ವಿರುದ್ದ ಬಿಹಾರದಲ್ಲಿ ಹಮ್ಮಿಕೊಂಡಿರುವ ‘ವೋಟರ್ ಅಧಿಕಾರ್’ ಯಾತ್ರೆಯಲ್ಲಿ ಭಾನುವಾರ ಅವರು ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ಹೇಗೆ ಸೇರ್ಪಡೆ ಮಾಡಲಾಗಿದೆ ಎಂಬ ನಮ್ಮ ಪ್ರಶ್ನೆಗೆ ಚುನಾವಣಾ ಆಯೋಗ ಉತ್ತರ ನೀಡಿಲ್ಲ. ಹಾಗಾಗಿ, ಅದರ ಎಲ್ಲರಿಗೂ ಸ್ಪಷ್ಟವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಹಾರದ ಅರಾರಿಯಾದಲ್ಲಿ ‘ವೋಟರ್ ಅಧಿಕಾರ್’ ಯಾತ್ರೆಯ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಮುಂಬರುವ ಬಿಹಾರ ಚುನಾವಣೆಗಾಗಿ ಇಂಡಿಯಾ ಒಕ್ಕೂಟವು ‘ಸೈದ್ಧಾಂತಿಕ ಮತ್ತು ರಾಜಕೀಯವಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದೆ. ಚುನಾವಣೆಯ ಫಲಿತಾಂಶ ನಮಗೆ ಫಲಪ್ರದವಾಗಲಿದೆ. ನಾವೆಲ್ಲ ಸಾಮಾನ್ಯ ಪ್ರಣಾಳಿಕೆಯೊಂದಿಗೆ ಮತದಾರರ ಮುಂದೆ ಹೋಗುತ್ತೇವೆ” ಎಂದಿದ್ದಾರೆ.

ಮತಗಳ್ಳತನಕ್ಕೆ ಸಂಬಂಧಿಸಿದ ತನ್ನ ಆರೋಪಕ್ಕೆ ಚುನಾವಣಾ ಆಯೋಗ ಪ್ರಮಾಣಪತ್ರ ಕೇಳಿದೆ ಎಂದ ರಾಹುಲ್ ಗಾಂಧಿ, ಅನುರಾಗ್ ಠಾಕೂರ್ ಅಂತಹದ್ದೇ ಆರೋಪ ಮಾಡಿದರೂ ಅವರಿಂದ ಪ್ರಮಾಣಪತ್ರ ಕೇಳಿಲ್ಲ ಎಂದಿದ್ದಾರೆ.

“ನಾನು ಮಹದೇವಪುರದ ಮತಗಳ್ಳತನದ ಕುರಿತು ಪತ್ರಿಕಾಗೋಷ್ಠಿ ಮಾಡುತ್ತಿದ್ದೆ. ಐದು ನಿಮಿಷಗಳಲ್ಲಿ, ರಾಹುಲ್ ಗಾಂಧಿ ಪ್ರಮಾಣಪತ್ರ ನೀಡಬೇಕು. ಅವರು ಪ್ರಮಾಣಪತ್ರ ಸಲ್ಲಿಸದಿದ್ದರೆ ಆರೋಪಗಳನ್ನು ಸ್ವೀಕರಿಸುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ. ಕೆಲ ದಿನಗಳ ನಂತರ, ಅನುರಾಗ್ ಠಾಕೂರ್ ಅದೇ  ರೀತಿಯ ಆರೋಪಗಳನ್ನು ಮಾಡಿದರು. ಆದರೆ, ಅವರಿಂದ ಯಾವುದೇ ಪ್ರಮಾಣಪತ್ರ ಕೇಳಿಲ್ಲ. ನಾನು ನಕಲಿ ಮತದಾರರ ಬಗ್ಗೆ ಮಾತನಾಡಿದ್ದೆ, ಅವರು ಕೂಡ ಅದನ್ನೇ ಮಾಡಿದ್ದರು. ಐದು ನಿಮಿಷಗಳಲ್ಲಿ ನನ್ನಿಂದ ಪ್ರಮಾಣಪತ್ರ ಕೇಳಲಾಯಿತು. ಆದರೆ, ಇಂದಿನವರೆಗೆ ಅನುರಾಗ್ ಠಾಕೂರ್ ಅವರಿಂದ ಕೇಳಿಲ್ಲ” ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ಸಿಪಿಐ (ಎಂಎಲ್) ನ ದೀಪಂಕರ್ ಭಟ್ಟಾಚಾರ್ಯ ಮತ್ತು ವಿಐಪಿಯ ಮುಖೇಶ್ ಸೈನಿ ಇದ್ದರು.

ಇದಕ್ಕೂ ಮೊದಲು ಅರಾರಿಯಾದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿದ ಮೋದಿ ಸರ್ಕಾರ, ಈಗ ಚುನಾವಣಾ ಆಯೋಗದ ಸಹಾಯದಿಂದ ಎಸ್‌ಐಆರ್ ಮೂಲಕ ಬಡವರ ಮತಗಳನ್ನು ಕದಿಯಲು ಬಯಸುತ್ತಿದೆ. ಇದಕ್ಕೆ ಬಿಹಾರದಲ್ಲಿ ಇಂಡಿಯಾ ಒಕ್ಕೂಟ ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

“ಚುನಾವಣಾ ಆಯೋಗ ತಟಸ್ಥವಾಗಿಲ್ಲ, ಅವರು ಮತಗಳನ್ನು ಕದಿಯುತ್ತಿದ್ದಾರೆ. ಎಸ್‌ಐಆರ್ ಎಂಬುವುದು ಮತಗಳನ್ನು ಕದಿಯಲು ಚುನಾವಣಾ ಆಯೋಗ ಮಾಡಿರುವ ಸಾಂಸ್ಥಿಕ ಪ್ರಯತ್ನವಾಗಿದೆ. ಪ್ರತಿಪಕ್ಷಗಳು ಮತದಾರರನ್ನು ಕೈಬಿಟ್ಟ ಬಗ್ಗೆ ದೂರು ನೀಡುತ್ತಿವೆ. ಆದರೆ, ಬಿಜೆಪಿ ಯಾವುದೇ ದೂರು ನೀಡುತ್ತಿಲ್ಲ. ಅದೇಕೆ ಹೀಗೆ? ಏಕೆಂದರೆ, ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಮತ್ತು ಬಿಜೆಪಿ ನಡುವೆ ಒಪ್ಪಂದ ಇದೆ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

“ಸರಿಯಾದ’ ಮತದಾರರ ಪಟ್ಟಿಯನ್ನು ಒದಗಿಸುವುದು ಚುನಾವಣಾ ಆಯೋಗದ ಕೆಲಸ. ಆದರೆ, ಅವರು ಮಹಾರಾಷ್ಟ್ರ, ಹರಿಯಾಣ ಮತ್ತು ಕರ್ನಾಟಕದಲ್ಲಿ ಆ ಕೆಲಸ ಮಾಡಿಲ್ಲ” ಎಂದು ಒತ್ತಿ ಹೇಳಿದ ರಾಹುಲ್ ಗಾಂಧಿ, “ಚುನಾವಣಾ ಆಯೋಗ ತನ್ನ ನಡವಳಿಕೆಯನ್ನು ಬದಲಾಯಿಸಿರುವುದನ್ನು ಸಾಬೀತುಪಡಿಸುವುದು ನಮ್ಮ ಪ್ರಯತ್ನವಾಗಿದೆ” ಎಂದು ಹೇಳಿದ್ದಾರೆ.

ಚುನಾವಣಾ ಆಯೋಗವು ‘ಗೋದಿ ಆಯೋಗ’ವಾಗಿ ಮಾರ್ಪಟ್ಟಿದೆ. ಚುನಾವಣಾ ಸಂಸ್ಥೆಯ ವಿಶ್ವಾಸಾರ್ಹತೆ ತಳಮಟ್ಟಕ್ಕೆ ಕುಸಿದಿದೆ ಎಂದು ತೇಜಸ್ವಿ ಯಾದವ್ ಆರೋಪಿಸಿದ್ದಾರೆ. ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ. ಅಕ್ರಮ ಮತದಾರರನ್ನು ಪತ್ತೆ ಮಾಡಲು ಎಸ್‌ಐಆರ್ ಮಾಡಲಾಗುತ್ತದೆ ಎಂದು ಪ್ರಧಾನಿ ಹೇಳಿಕೊಂಡಿದ್ದಾರೆ ಆದರೆ, ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಚುನಾವಣಾ ಆಯೋಗವು ಹಾಗೆ ಉಲ್ಲೇಖಿಸಿಲ್ಲ” ಎಂದಿದ್ದಾರೆ.

“ತನ್ನ ವರ್ಚಸ್ಸು ನಷ್ಟಕ್ಕೆ ಚುನಾವಣಾ ಆಯೋಗವನ್ನೇ ದೂಷಿಸಬೇಕು” ಎಂದು ಭಟ್ಟಾಚಾರ್ಯ ಹೇಳಿದ್ದು, “ಇದು ಚುನಾವಣಾ ಆಯೋಗವಲ್ಲ, ಬದಲಾಗಿ ಭಾರತದ ಚುನಾವಣಾ ಲೋಪ” (It is not the Election Commission, but the Election Omission of India) ಎಂದು ಕರೆದಿದ್ದಾರೆ.

‘ಬಿಜೆಪಿ ಗೆಲ್ಲಬೇಕೆಂದು ಬಯಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳಿಂದ ಜನರನ್ನು ಕರೆ ತರಲಿದೆ’: ಚರ್ಚೆಗೆ ಕಾರಣವಾದ ಕೇರಳ ಬಿಜೆಪಿ ನಾಯಕನ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...