HomeಅಂಕಣಗಳುKarnataka against SIRSIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

sir-karnataka-government-issues-important-orders-countering-central-governments-sir

- Advertisement -
- Advertisement -

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌ SIR ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗುತ್ತಿದೆ.

ಕರ್ನಾಟಕದಲ್ಲಿ ಒಬ್ಬ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ರಕ್ಷಿಸಿಕೊಳ್ಳಲು ಕರ್ನಾಟಕ ಸರ್ಕಾರವು ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು SIR ವಿರೋಧಿ ಕರ್ನಾಟಕ, ಎದ್ದೇಳು ಕರ್ನಾಟಕ ಸೇರಿದಂತೆ ಹಲವು ಜನಪರ ಸಂಘಟನೆಗಳು ನಿರಂತರವಾಗಿ ಒತ್ತಾಯಿಸುತ್ತಿದ್ದವು.

ಕೇಂದ್ರ ಚುನಾವಣಾ ಆಯೋಗವು 11 ದಾಖಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅವುಗಳನ್ನು BLO ಗಳಿಗೆ ಒದಗಿಸಿದರೆ ತಮ್ಮ ಮತವನ್ನು ರಕ್ಷಿಸಿಕೊಳ್ಳಬಹುದು ಎಂದು ಹೇಳಿತ್ತು. ಆ ಪಟ್ಟಿಯಲ್ಲಿ ಶಾಶ್ವತ ಶಾಶ್ವತ ನಿವಾಸ ಪ್ರಮಾಣ ಪತ್ರವೂ ಒಂದಾಗಿತ್ತು. ಕರ್ನಾಟಕವು ಪ್ರಮುಖ ಆದೇಶವನ್ನು ಮಾಡುವ ಮೂಲಕ ಅರ್ಹ ಮತದಾರರನ್ನು SIR ಪ್ರಕ್ರಿಯಲ್ಲಿನ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮವಹಿಸಲು ಮುಂದಾಗಿದೆ. ಇದರ ಮೂಲಕ ಕರ್ನಾಟಕ ಸರ್ಕಾರವು ನಾಗರಿಕ ಸಂಘಟನೆಗಳ ನಿರಂತರ ಒತ್ತಾಯಕ್ಕೆ ಮನ್ನಣೆ ನೀಡಿ ಆದೇಶ ಹೊರಡಿಸಿದೆ.

ಆದೇಶ

ಗ್ರಾಮಪಂಚಾಯಿತಿಗಳಲ್ಲಿ ವಾಸಸ್ಥಳ ದೃಢೀಕರಣ ಪತ್ರಕ್ಕೆ ಅರ್ಜಿ ಸಲ್ಲಿಸಲು ಅವಕಾಶ

ಅಟಲ್‌ ಜನಸ್ನೇಹಿ ಕೇಂದ್ರ, ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಗಳ ಮೂಲಕ ಇಷ್ಟು ದಿನ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ಪಡೆಯಬಹುದಿತ್ತು. ತಹಸೀಲ್ದಾರ್‌ ಈ ಪ್ರಮಾಣಪತ್ರವನ್ನು ನೀಡುವ ಅಧಿಕಾರವನ್ನು ಹೊಂದಿದ್ದರು. ಇದೀಗ ಕರ್ನಾಟಕ ಸರ್ಕಾರದ ಹೊಸ ಆದೇಶದಂತೆ ಗ್ರಾಮಪಂಚಾಯಿತಿಗಳಲ್ಲೂ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ನೀಡುವಂತೆ ಆದೇಶ ಹೊರಡಿಸಿದೆ. ತಹಸೀಲ್ದಾರ್‌ ಹಾಗೂ ಉಪ ತಹಸೀಲ್ದಾರ್‌ ಈ ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹ ವ್ಯಕ್ತಿಗಳಿಗೆ ಪ್ರಮಾಣ ಪತ್ರವನ್ನು ನೀಡಲು ಅವಕಾಶ ನೀಡಲಾಗಿದೆ. ಇದರ ಮೂಲಕ ಕರ್ನಾಟಕದ ಯಾವುದೇ ಒಬ್ಬ ವ್ಯಕ್ತ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ರಕ್ಕಣೆ ಪಡೆಯಲು ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬಹುದು.

ಈ ಅದೇಶದಂತೆ ಇಂದಿನಿಂದ 7 ದಿನಗಳ ಒಳಗೆ ಕರ್ನಾಟಕದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯ ಸೌಕರ್ಯಗಳನ್ನೊಳಗೊಂಡ ಕೇಂದ್ರಗಳನ್ನುಸ್ಥಾಪಿಸಲು ಆದೇಶಿಸಲಾಗಿದೆ. ಅರ್ಜಿಗಳನ್ನು ಶೀಫ್ರವಾಗಿ ವಿಲೇವಾರಿ ಮಾಡುವಂತೆಯೂ ಆದೇಶಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ SIR ವಿರೋಧಿ ಕರ್ನಾಟಕದ ಮುಖಂಡರಾದ ನೂರ್‌ ಶ್ರೀಧರ್‌ ರವರು, “ಇದು ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ಒಳ್ಳೆಯ ನಿರ್ಧಾರ. ಕರ್ನಾಟಕದ ಯಾವುದೇ ಒಬ್ಬ ಅರ್ಹ ಮತದಾರರು ದಾಖಲೆ ಇಲ್ಲವೆಂದ ಮಾತ್ರಕ್ಕೆ ಮತದಾರ ಪಟ್ಟಿಯಿಂದ ಹೊರಗುಳಿಯಬಾರದು. ಸರ್ಕಾರದ ಈ ಆದೇಶವನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿ ಮಾಡಲು ನಾಗರಿಕ ಸಂಘಟನೆಗಳು ನಿರಂತರವಾಗಿ ಮೇಲ್ವಿಚಾರಣೆ ನಡೆಸುತ್ತೇವೆ. ಒಂದು ವೇಳೆ ಅಧಿಕಾರಿಗಳು ಜಾರಿ ಮಾಡಲು ಮೀನಾಮೇಶ ಎಣಿಸುತ್ತಿದ್ದರೆ ಕೂಡಲೇ ಅದನ್ನು ಪ್ರತಿಭಟಿಸುತ್ತೇವೆ” ಎಂದರು.

ಶಾಶ್ವತ ನಿವಾಸ ಪ್ರಮಾಣ ಪತ್ರ ನೀಡಲು ಅರ್ಹತೆ

  1. ಪ್ರಮಾಣ ಪತ್ರ ನೀಡುವ ಪ್ರಾಧಿಕಾರವು ಅಗತ್ಯ ವಿಚಾರಣೆ ಹಾಗೂ ಪರಿಶೀಲನೆಯ ನಂತರ ಅರ್ಜಿದಾರರು ಕರ್ನಾಟಕ ರಾಜ್ಯದ ನಿಜವಾದ ಮತ್ತು ಶಾಶ್ವತ ನಿವಾಸಿಯಾಗಿದ್ದಾರೆ ಎಂಬ ಬಗ್ಗೆ, ಖಚಿತಪಡಿಸಿಕೊಂಡು ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ನೀಡಬಹುದು.
  2. ಮೇಲ್ಕಂಡಂತೆ ಖಚಿತಗೊಳಿಸಿಕೊಳ್ಳುವ ಸಂದರ್ಭದಲ್ಲಿ ಪ್ರಮಾಣ ಪತ್ರ ನೀಡುವ ಪ್ರಾಧಿಕಾರವು ಈ ಕೆಳಕಂಡ ಒಂದು ಅಥವಾ ಹೆಚ್ಚಿನ ಅಂಶಗಳನ್ನು ಪರಿಗಣಿಸಬಹುದು:

ಇತರೆ ಪುರಾವೆಗಳು ಕರ್ನಾಟಕವೇ ಅರ್ಜಿದಾರರ ಪ್ರಮುಖ ಹಾಗೂ ಶಾಶ್ವತ ವಾಸಸ್ಥಳವಾಗಿದೆ ಎಂಬುದನ್ನು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ದಾಖಲಾತಿ, ವಿದ್ಯುನ್ಮಾನ ಅಥವಾ ಮೌಖಿಕ ಸಾಕ್ಷ

  • ಕರ್ನಾಟಕದಲ್ಲಿ ಜನನ- ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಜನಿಸಿರಬೇಕು.
  • ಸಾಮಾನ್ಯ ವಾಸಸ್ಥಳ ಅರ್ಜಿದಾರರು ಅಥವಾ ಅವರ ತಂದೆ/ತಾಯಿ ಅಥವಾ ಕಾನೂನುಬದ್ಧ ಪಾಲಕರು ಕರ್ನಾಟಕ ರಾಜ್ಯದಲ್ಲಿ ಸತತವಾಗಿ ಕನಿಷ್ಠ ಹತ್ತು (10) ವರ್ಷಗಳ ಕಾಲ ಸಾಮಾನ್ಯವಾಗಿ ವಾಸವಾಗಿರಬೇಕು.
  • ಶಿಕ್ಷಣ ಅರ್ಜಿದಾರರು ಕರ್ನಾಟಕದಲ್ಲಿನ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿತೀಯ ಪಿಯುಸಿ / 12ನೇ ತರಗತಿ ಅಥವಾ ತತ್ಸಮಾನ ಹಂತದವರೆಗೆ ಕನಿಷ್ಠ ಹತ್ತು (10) ಶೈಕ್ಷಣಿಕ ವರ್ಷಗಳ ಕಾಲ ವ್ಯಾಸಂಗ ಮಾಡಿರಬೇಕು.
  • ಪೋಷಕರು ಅಥವಾ ಸಂಗಾತಿಯ ವಾಸಸ್ಥಳ ಅರ್ಜಿದಾರರ ತಂದೆ, ತಾಯಿ, ಕಾನೂನುಬದ್ಧ ಪಾಲಕರು ಅಥವಾ ಪತಿ/ಪತ್ನಿಯು ಕರ್ನಾಟಕದಲ್ಲಿ ಸಾಮಾನ್ಯ ಹಾಗೂ ಶಾಶ್ವತ ನಿವಾಸಿಯಾಗಿರಬೇಕು.
  • ವಸತಿ ಆಸ್ತಿ ಅಥವಾ ಅರ್ಜಿದಾರರು ಅಥವಾ ಅವರ ಕುಟುಂಬವು ಕರ್ನಾಟಕದಲ್ಲಿ ವಸತಿ ಇತರೆ ಸ್ಥಿರಾಸ್ತಿಯ ಮಾಲೀಕತ್ವವನ್ನು ಹೊಂದಿರಬೇಕು ಕಾನೂನುಬದ್ಧವಾದ ವಾರಸುದಾರರಾಗಿರಬೇಕು ಅಥವಾ ಬಳಸುತ್ತಿರಬೇಕು.
  • ಸರ್ಕಾರಿ ದಾಖಲೆಗಳು ಮತದಾರರ ಪಟ್ಟಿ, ಆಧಾರ್, ಪಡಿತರ ಚೀಟಿ, ಕಂದಾಯ ದಾಖಲೆಗಳು ಅಥವಾ ಇತರೆ ಸರ್ಕಾರಿ ದಾಖಲೆಗಳಲ್ಲಿ ಅರ್ಜಿದಾರರು ಅಥವಾ ಅವರ ಪೋಷಕರ ಹೆಸರು ಸಾಮಾನ್ಯ ನಿವಾಸಿಯಾಗಿ ದಾಖಲಾಗಿರಬೇಕು.
  • ಸರ್ಕಾರಿ / ಸಾರ್ವಜನಿಕ ಸೇವೆ – ಅರ್ಜಿದಾರರು ಅಥವಾ ಅವರ ತಂದೆ/ತಾಯಿಯು ಕರ್ನಾಟಕ ರಾಜ್ಯ ಸರ್ಕಾರ, ಸ್ಥಳೀಯ ಸಂಸ್ಥೆ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಗಣನೀಯ ಅವಧಿಯಸೇವೆ ಸಲ್ಲಿಸಿರಬೇಕು.
  • ವಿವಾಹ – ಅರ್ಜಿದಾರರು ಕರ್ನಾಟಕದಲ್ಲಿ ವಾಸಿಸುವ ವ್ಯಕ್ತಿಯನ್ನು ವಿವಾಹವಾಗಿದ್ದು, ರಾಜ್ಯದಲ್ಲಿ ವಾಸವಿರಬೇಕು.

ಸರ್ಕಾರ ಹೊರಡಿಸಿರುವ ಆದೇಶ ಈ ಕೆಳಗಿದೆ.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...