HomeಅಂಕಣಗಳುKarnataka against SIRSIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

sir-karnataka-government-issues-important-orders-countering-central-governments-sir

- Advertisement -
- Advertisement -

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌ SIR ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗುತ್ತಿದೆ.

ಕರ್ನಾಟಕದಲ್ಲಿ ಒಬ್ಬ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ರಕ್ಷಿಸಿಕೊಳ್ಳಲು ಕರ್ನಾಟಕ ಸರ್ಕಾರವು ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು SIR ವಿರೋಧಿ ಕರ್ನಾಟಕ, ಎದ್ದೇಳು ಕರ್ನಾಟಕ ಸೇರಿದಂತೆ ಹಲವು ಜನಪರ ಸಂಘಟನೆಗಳು ನಿರಂತರವಾಗಿ ಒತ್ತಾಯಿಸುತ್ತಿದ್ದವು.

ಕೇಂದ್ರ ಚುನಾವಣಾ ಆಯೋಗವು 11 ದಾಖಲೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅವುಗಳನ್ನು BLO ಗಳಿಗೆ ಒದಗಿಸಿದರೆ ತಮ್ಮ ಮತವನ್ನು ರಕ್ಷಿಸಿಕೊಳ್ಳಬಹುದು ಎಂದು ಹೇಳಿತ್ತು. ಆ ಪಟ್ಟಿಯಲ್ಲಿ ಶಾಶ್ವತ ಶಾಶ್ವತ ನಿವಾಸ ಪ್ರಮಾಣ ಪತ್ರವೂ ಒಂದಾಗಿತ್ತು. ಕರ್ನಾಟಕವು ಪ್ರಮುಖ ಆದೇಶವನ್ನು ಮಾಡುವ ಮೂಲಕ ಅರ್ಹ ಮತದಾರರನ್ನು SIR ಪ್ರಕ್ರಿಯಲ್ಲಿನ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮವಹಿಸಲು ಮುಂದಾಗಿದೆ. ಇದರ ಮೂಲಕ ಕರ್ನಾಟಕ ಸರ್ಕಾರವು ನಾಗರಿಕ ಸಂಘಟನೆಗಳ ನಿರಂತರ ಒತ್ತಾಯಕ್ಕೆ ಮನ್ನಣೆ ನೀಡಿ ಆದೇಶ ಹೊರಡಿಸಿದೆ.

ಆದೇಶ

ಗ್ರಾಮಪಂಚಾಯಿತಿಗಳಲ್ಲಿ ವಾಸಸ್ಥಳ ದೃಢೀಕರಣ ಪತ್ರಕ್ಕೆ ಅರ್ಜಿ ಸಲ್ಲಿಸಲು ಅವಕಾಶ

ಅಟಲ್‌ ಜನಸ್ನೇಹಿ ಕೇಂದ್ರ, ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಗಳ ಮೂಲಕ ಇಷ್ಟು ದಿನ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ಪಡೆಯಬಹುದಿತ್ತು. ತಹಸೀಲ್ದಾರ್‌ ಈ ಪ್ರಮಾಣಪತ್ರವನ್ನು ನೀಡುವ ಅಧಿಕಾರವನ್ನು ಹೊಂದಿದ್ದರು. ಇದೀಗ ಕರ್ನಾಟಕ ಸರ್ಕಾರದ ಹೊಸ ಆದೇಶದಂತೆ ಗ್ರಾಮಪಂಚಾಯಿತಿಗಳಲ್ಲೂ ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ನೀಡುವಂತೆ ಆದೇಶ ಹೊರಡಿಸಿದೆ. ತಹಸೀಲ್ದಾರ್‌ ಹಾಗೂ ಉಪ ತಹಸೀಲ್ದಾರ್‌ ಈ ಅರ್ಜಿಗಳನ್ನು ಪರಿಶೀಲನೆ ನಡೆಸಿ ಅರ್ಹ ವ್ಯಕ್ತಿಗಳಿಗೆ ಪ್ರಮಾಣ ಪತ್ರವನ್ನು ನೀಡಲು ಅವಕಾಶ ನೀಡಲಾಗಿದೆ. ಇದರ ಮೂಲಕ ಕರ್ನಾಟಕದ ಯಾವುದೇ ಒಬ್ಬ ವ್ಯಕ್ತ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ರಕ್ಕಣೆ ಪಡೆಯಲು ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬಹುದು.

ಈ ಅದೇಶದಂತೆ ಇಂದಿನಿಂದ 7 ದಿನಗಳ ಒಳಗೆ ಕರ್ನಾಟಕದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯ ಸೌಕರ್ಯಗಳನ್ನೊಳಗೊಂಡ ಕೇಂದ್ರಗಳನ್ನುಸ್ಥಾಪಿಸಲು ಆದೇಶಿಸಲಾಗಿದೆ. ಅರ್ಜಿಗಳನ್ನು ಶೀಫ್ರವಾಗಿ ವಿಲೇವಾರಿ ಮಾಡುವಂತೆಯೂ ಆದೇಶಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ SIR ವಿರೋಧಿ ಕರ್ನಾಟಕದ ಮುಖಂಡರಾದ ನೂರ್‌ ಶ್ರೀಧರ್‌ ರವರು, “ಇದು ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ಒಳ್ಳೆಯ ನಿರ್ಧಾರ. ಕರ್ನಾಟಕದ ಯಾವುದೇ ಒಬ್ಬ ಅರ್ಹ ಮತದಾರರು ದಾಖಲೆ ಇಲ್ಲವೆಂದ ಮಾತ್ರಕ್ಕೆ ಮತದಾರ ಪಟ್ಟಿಯಿಂದ ಹೊರಗುಳಿಯಬಾರದು. ಸರ್ಕಾರದ ಈ ಆದೇಶವನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿ ಮಾಡಲು ನಾಗರಿಕ ಸಂಘಟನೆಗಳು ನಿರಂತರವಾಗಿ ಮೇಲ್ವಿಚಾರಣೆ ನಡೆಸುತ್ತೇವೆ. ಒಂದು ವೇಳೆ ಅಧಿಕಾರಿಗಳು ಜಾರಿ ಮಾಡಲು ಮೀನಾಮೇಶ ಎಣಿಸುತ್ತಿದ್ದರೆ ಕೂಡಲೇ ಅದನ್ನು ಪ್ರತಿಭಟಿಸುತ್ತೇವೆ” ಎಂದರು.

ಶಾಶ್ವತ ನಿವಾಸ ಪ್ರಮಾಣ ಪತ್ರ ನೀಡಲು ಅರ್ಹತೆ

  1. ಪ್ರಮಾಣ ಪತ್ರ ನೀಡುವ ಪ್ರಾಧಿಕಾರವು ಅಗತ್ಯ ವಿಚಾರಣೆ ಹಾಗೂ ಪರಿಶೀಲನೆಯ ನಂತರ ಅರ್ಜಿದಾರರು ಕರ್ನಾಟಕ ರಾಜ್ಯದ ನಿಜವಾದ ಮತ್ತು ಶಾಶ್ವತ ನಿವಾಸಿಯಾಗಿದ್ದಾರೆ ಎಂಬ ಬಗ್ಗೆ, ಖಚಿತಪಡಿಸಿಕೊಂಡು ಶಾಶ್ವತ ನಿವಾಸ ಪ್ರಮಾಣ ಪತ್ರವನ್ನು ನೀಡಬಹುದು.
  2. ಮೇಲ್ಕಂಡಂತೆ ಖಚಿತಗೊಳಿಸಿಕೊಳ್ಳುವ ಸಂದರ್ಭದಲ್ಲಿ ಪ್ರಮಾಣ ಪತ್ರ ನೀಡುವ ಪ್ರಾಧಿಕಾರವು ಈ ಕೆಳಕಂಡ ಒಂದು ಅಥವಾ ಹೆಚ್ಚಿನ ಅಂಶಗಳನ್ನು ಪರಿಗಣಿಸಬಹುದು:

ಇತರೆ ಪುರಾವೆಗಳು ಕರ್ನಾಟಕವೇ ಅರ್ಜಿದಾರರ ಪ್ರಮುಖ ಹಾಗೂ ಶಾಶ್ವತ ವಾಸಸ್ಥಳವಾಗಿದೆ ಎಂಬುದನ್ನು ದೃಢೀಕರಿಸುವ ಯಾವುದೇ ವಿಶ್ವಾಸಾರ್ಹ ದಾಖಲಾತಿ, ವಿದ್ಯುನ್ಮಾನ ಅಥವಾ ಮೌಖಿಕ ಸಾಕ್ಷ

  • ಕರ್ನಾಟಕದಲ್ಲಿ ಜನನ- ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಜನಿಸಿರಬೇಕು.
  • ಸಾಮಾನ್ಯ ವಾಸಸ್ಥಳ ಅರ್ಜಿದಾರರು ಅಥವಾ ಅವರ ತಂದೆ/ತಾಯಿ ಅಥವಾ ಕಾನೂನುಬದ್ಧ ಪಾಲಕರು ಕರ್ನಾಟಕ ರಾಜ್ಯದಲ್ಲಿ ಸತತವಾಗಿ ಕನಿಷ್ಠ ಹತ್ತು (10) ವರ್ಷಗಳ ಕಾಲ ಸಾಮಾನ್ಯವಾಗಿ ವಾಸವಾಗಿರಬೇಕು.
  • ಶಿಕ್ಷಣ ಅರ್ಜಿದಾರರು ಕರ್ನಾಟಕದಲ್ಲಿನ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿತೀಯ ಪಿಯುಸಿ / 12ನೇ ತರಗತಿ ಅಥವಾ ತತ್ಸಮಾನ ಹಂತದವರೆಗೆ ಕನಿಷ್ಠ ಹತ್ತು (10) ಶೈಕ್ಷಣಿಕ ವರ್ಷಗಳ ಕಾಲ ವ್ಯಾಸಂಗ ಮಾಡಿರಬೇಕು.
  • ಪೋಷಕರು ಅಥವಾ ಸಂಗಾತಿಯ ವಾಸಸ್ಥಳ ಅರ್ಜಿದಾರರ ತಂದೆ, ತಾಯಿ, ಕಾನೂನುಬದ್ಧ ಪಾಲಕರು ಅಥವಾ ಪತಿ/ಪತ್ನಿಯು ಕರ್ನಾಟಕದಲ್ಲಿ ಸಾಮಾನ್ಯ ಹಾಗೂ ಶಾಶ್ವತ ನಿವಾಸಿಯಾಗಿರಬೇಕು.
  • ವಸತಿ ಆಸ್ತಿ ಅಥವಾ ಅರ್ಜಿದಾರರು ಅಥವಾ ಅವರ ಕುಟುಂಬವು ಕರ್ನಾಟಕದಲ್ಲಿ ವಸತಿ ಇತರೆ ಸ್ಥಿರಾಸ್ತಿಯ ಮಾಲೀಕತ್ವವನ್ನು ಹೊಂದಿರಬೇಕು ಕಾನೂನುಬದ್ಧವಾದ ವಾರಸುದಾರರಾಗಿರಬೇಕು ಅಥವಾ ಬಳಸುತ್ತಿರಬೇಕು.
  • ಸರ್ಕಾರಿ ದಾಖಲೆಗಳು ಮತದಾರರ ಪಟ್ಟಿ, ಆಧಾರ್, ಪಡಿತರ ಚೀಟಿ, ಕಂದಾಯ ದಾಖಲೆಗಳು ಅಥವಾ ಇತರೆ ಸರ್ಕಾರಿ ದಾಖಲೆಗಳಲ್ಲಿ ಅರ್ಜಿದಾರರು ಅಥವಾ ಅವರ ಪೋಷಕರ ಹೆಸರು ಸಾಮಾನ್ಯ ನಿವಾಸಿಯಾಗಿ ದಾಖಲಾಗಿರಬೇಕು.
  • ಸರ್ಕಾರಿ / ಸಾರ್ವಜನಿಕ ಸೇವೆ – ಅರ್ಜಿದಾರರು ಅಥವಾ ಅವರ ತಂದೆ/ತಾಯಿಯು ಕರ್ನಾಟಕ ರಾಜ್ಯ ಸರ್ಕಾರ, ಸ್ಥಳೀಯ ಸಂಸ್ಥೆ ಅಥವಾ ಸಾರ್ವಜನಿಕ ಸಂಸ್ಥೆಗಳಲ್ಲಿ ಗಣನೀಯ ಅವಧಿಯಸೇವೆ ಸಲ್ಲಿಸಿರಬೇಕು.
  • ವಿವಾಹ – ಅರ್ಜಿದಾರರು ಕರ್ನಾಟಕದಲ್ಲಿ ವಾಸಿಸುವ ವ್ಯಕ್ತಿಯನ್ನು ವಿವಾಹವಾಗಿದ್ದು, ರಾಜ್ಯದಲ್ಲಿ ವಾಸವಿರಬೇಕು.

ಸರ್ಕಾರ ಹೊರಡಿಸಿರುವ ಆದೇಶ ಈ ಕೆಳಗಿದೆ.

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...