HomeಅಂಕಣಗಳುKarnataka against SIRSIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

- Advertisement -
- Advertisement -

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್(FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC ಅನ್ನು ಎಸ್‌ಐಆರ್ ಪ್ರಕ್ರಿಯೆಗೆ ‘ಅಸಿಂಧು/ಅಮಾನ್ಯ ಎಂದು ಇಸಿಐ ಸ್ಪಷ್ಟಪಡಿಸಿದೆ. ಇದು ರೇಷನ್ ಕಾರ್ಡ್ ಆಧಾರಿತ ಖಾಸಗಿ ಡೇಟಾಬೇಸ್‌ನಂತೆ ಕಾಣುತ್ತದೆ ಎಂಬುದು ಆಯೋಗದ ವಾದವಾಗಿದೆ.

ಆಯೋಗದ ಈ ನಿರ್ಧಾರದ ವಿರುದ್ಧ ತೆಲಂಗಾಣ ಸರ್ಕಾರ ಕಾನೂನಾತ್ಮಕ ಹೋರಾಟಕ್ಕೆ ಮುಂದಾಗಿದ್ದು, ಅರ್ಹ ಮತದಾರರಿಗೆ, ವಿಶೇಷವಾಗಿ ಬಡ ಹಾಗೂ ಹಿಂದುಳಿದ ವರ್ಗದ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಕಾನೂನು ತಜ್ಞರ ಸಲಹೆ ಪಡೆಯಲು ನಿರ್ಧರಿಸಿದೆ.

ಈ ಕುರಿತು ಗುರುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸರ್ಕಾರದ ಅಲ್ಪಸಂಖ್ಯಾತರ ವ್ಯವಹಾರಗಳ ಸಲಹೆಗಾರ ಮೊಹಮ್ಮದ್ ಅಲಿ ಶಬ್ಬೀರ್, “ನಾವು ಚುನಾವಣಾ ಆಯೋಗದ ಸಾಂವಿಧಾನಿಕ ಅಧಿಕಾರವನ್ನು ಗೌರವಿಸುತ್ತೇವೆ. ಆದರೆ, ‘ಫ್ಯಾಮಿಲಿ ರಿಜಿಸ್ಟರ್’ ಮತ್ತು ‘ರೇಷನ್ ಕಾರ್ಡ್’ ವಿಷಯದಲ್ಲಿ ಆಯೋಗ ನೀಡಿರುವ ವಿವರಣೆ ಹಾಗೂ ನಿಲುವನ್ನು ಕಾನೂನಾತ್ಮಕವಾಗಿ ಪರಿಶೀಲಿಸುವ ಅಗತ್ಯವಿದೆ” ಎಂದು ತಿಳಿಸಿದ್ದಾರೆ.

ರೇಷನ್ ಕಾರ್ಡ್‌ಗಳ ಮಹತ್ವವನ್ನು ಎತ್ತಿಹಿಡಿದ ಶಬ್ಬೀರ್, ಪಡಿತರ ಚೀಟಿಗಳು ಖಾಸಗಿ ಅಥವಾ ಸಾಮಾನ್ಯ ದಾಖಲೆಗಳಲ್ಲ. ಸರ್ಕಾರವೇ ನಿಗದಿತ ಪರಿಶೀಲನಾ ಪ್ರಕ್ರಿಯೆಯ ನಂತರ ಅವುಗಳನ್ನು ಸಾರ್ವಜನಿಕರಿಗೆ ನೀಡುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋಟ್ಯಂತರ ಬಡ ಫಲಾನುಭವಿಗಳಿಗೆ ಆಹಾರ ಭದ್ರತೆ ಯೋಜನೆಯಡಿ ಧಾನ್ಯ ವಿತರಿಸಲು ಇದೇ ರೇಷನ್ ಕಾರ್ಡ್ ವ್ಯವಸ್ಥೆಯನ್ನು ನಂಬಿವೆ. ಹಾಗಿರುವಾಗ, ಅದೇ ಸರ್ಕಾರಿ ದಾಖಲೆಯನ್ನು ಮತದಾರರ ಪರಿಶೀಲನೆಗೆ ಬಳಸಿದಾಗ ಆಯೋಗ ಅನುಮಾನದಿಂದ ನೋಡುವುದು ಸಮಂಜಸವಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ತೆಲಂಗಾಣ ಸರ್ಕಾರವು ಕಟ್ಟುನಿಟ್ಟಿನ ಮತದಾರರ ಪರಿಶೀಲನಾ ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ಸಡಿಲಗೊಳಿಸಲು ಬಯಸುವುದಿಲ್ಲ. ಆದರೆ, ಮತದಾರರ ಪಟ್ಟಿಯ ಪಾವಿತ್ರ್ಯತೆಯನ್ನು ಕಾಯ್ದುಕೊಳ್ಳುವುದರ ಜೊತೆಗೆ ಬಡ ಮತದಾರರು ಅತಿಯಾದ ಅಲೆದಾಟ ಮತ್ತು ಕಿರುಕುಳ ಅನುಭವಿಸುವುದನ್ನು ತಪ್ಪಿಸಲು ಕಾನೂನುಬದ್ಧ ಹಾಗೂ ಖಾಯಂ ಪರಿಹಾರ ಕಂಡುಕೊಳ್ಳುವುದು ನಮ್ಮ ಮುಖ್ಯ ಉದ್ದೇಶ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಿನ್ನೆಲೆ ಏನು?

ಜನರಿಗೆ ಸರ್ಕಾರಿ ಸೇವೆಗಳನ್ನು ತಲುಪಿಸಲು ಹಾಗೂ ಕುಟುಂಬದ ವಿವರಗಳನ್ನು ಏಕರೂಪದಲ್ಲಿ ನಮೂದಿಸಲು ತೆಲಂಗಾಣ ಸರ್ಕಾರವು ಇತ್ತೀಚೆಗೆ ‘ಮೀಸೇವ’ (MeeSeva) ಪೋರ್ಟಲ್ ಮೂಲಕ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ ವಿತರಿಸುವ ಯೋಜನೆಯನ್ನು ಜಾರಿಗೆ ತಂದಿತ್ತು. ಆದರೆ, ಪ್ರಸ್ತುತ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯಲ್ಲಿ ಈ ಪ್ರಮಾಣಪತ್ರವನ್ನು ಯಾವುದೇ ಕಾರಣಕ್ಕೂ ಸಿಂಧು ಅಥವಾ ಅಧಿಕೃತ ಗುರುತಿನ ದಾಖಲೆಯಾಗಿ ಬಳಸಲು ಬರುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗವು ರಾಜ್ಯದ ಮುಖ್ಯ ಚುನಾವಣಾಧಿಕಾರಿ (CEO) ಕಚೇರಿಗೆ ಸ್ಪಷ್ಟಪಡಿಸಿದೆ. ಆಯೋಗದ ಈ ನಡೆ ಇದೀಗ ತೆಲಂಗಾಣ ಸರ್ಕಾರ ಮತ್ತು ಆಯೋಗದ ನಡುವೆ ಹೊಸ ಕಾನೂನು ಸಮರಕ್ಕೆ ದಾರಿ ಮಾಡಿಕೊಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...

ಕರ್ನಾಟಕ ಎಸ್‌ಐಆರ್: ಶಾಶ್ವತ ನಿವಾಸಿ ಪ್ರಮಾಣಪತ್ರಕ್ಕೆ ಬೆಂಗಳೂರು ನಗರದಲ್ಲೇ ಭಾರೀ ಬೇಡಿಕೆ: ಕಂದಾಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಡುವೆಯೇ, ಕಂದಾಯ ಇಲಾಖೆಗೆ ಸಲ್ಲಿಕೆಯಾಗುತ್ತಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ಅರ್ಜಿಗಳ ಸಂಖ್ಯೆಯಲ್ಲಿ ಬೆಂಗಳೂರು ನಗರ ಜಿಲ್ಲೆಯು...

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...