HomeಅಂಕಣಗಳುKarnataka against SIRSIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

- Advertisement -
- Advertisement -

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ ಕೇವಲ ಎರಡರಿಂದ ಮೂರು ದಿನಗಳ ಅವಧಿಯಲ್ಲಿ ಮೂವರು ನೌಕರರು ಜೀವ ಕಳೆದುಕೊಂಡಿರುವುದು ಕಂದಾಯ ಇಲಾಖೆ ಹಾಗೂ ಬಿಎಲ್‌ಓ (BLO) ಸಿಬ್ಬಂದಿ ವಲಯವನ್ನು ತಲ್ಲಣಗೊಳಿಸಿದೆ. ಮೇಲಧಿಕಾರಿಗಳ ಈ ಕಠಿಣ ಧೋರಣೆಯ ವಿರುದ್ಧ ನೌಕರರು ಈಗ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ‘ದಿ ಫೆಡರಲ್ ಕರ್ನಾಟಕ’ ವರದಿ ಮಾಡಿದೆ.

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಎಲ್‌ಓ ಆಗಿ ಕಾರ್ಯನಿರ್ವಹಿಸುತ್ತಿದ್ದ ನಟರಾಜ್ ಇತ್ತೀಚೆಗೆ ಜಾರಿಯಾದ ಕಡ್ಡಾಯ ಎಸ್‌ಐಆರ್ ಪ್ರಕ್ರಿಯೆಯ ಟಾರ್ಗೆಟ್‌ ಮುಗಿಸಲು ಹಗಲಿರುಳು ಶ್ರಮಿಸುತ್ತಿದ್ದರು. ತಡರಾತ್ರಿವರೆಗೂ ನಿಗದಿತ ಕೆಲಸ ಮುಗಿಸಿ ಮನೆಗೆ ಬಂದು ಮಲಗಿದ್ದ ಅವರು, ತೀವ್ರ ಮಾನಸಿಕ ಹಾಗೂ ದೈಹಿಕ ಒತ್ತಡದಿಂದಾಗಿ ರಾತ್ರಿಯೇ ಹೃದಯಾಘಾತಕ್ಕೊಳಗಾಗಿದ್ದು, ಮುಂಜಾನೆ ಎದ್ದೇಳಲೇ ಇಲ್ಲ. ಕರ್ತವ್ಯನಿರತ ಅಧಿಕಾರಿಯ ಈ ದಿಢೀರ್ ಸಾವು ಅವರ ಕುಟುಂಬವನ್ನು ತೀವ್ರ ಆಘಾತಕ್ಕೀಡು ಮಾಡಿದೆ.

ಬೀದರ್‌ನ ಬಿಎಲ್‌ಒ ಸುನೀಲ್‌ ಹಾಗೂ ಬೆಂಗಳೂರು ದಕ್ಷಿಣದ ಬಿಎಲ್‌ಒ ನಟರಾಜು (ಫೋಟೊ ಕೃಪೆ : ದಿ ಫೆಡರಲ್)

ಇದೇ ರೀತಿಯ ಮತ್ತೊಂದು ದಾರುಣ ಘಟನೆ ಬೀದರ್ ಜಿಲ್ಲೆಯ ಅಮಲಾಪುರ ಗ್ರಾಮದಲ್ಲಿ ನಡೆದಿದ್ದು, ಭಾಲ್ಕಿ ತಾಲೂಕಿನ ಮೂಲದ 45 ವರ್ಷದ ಬಿಎಲ್‌ಒ ಸುನೀಲ್, ಕಳೆದ ಹಲವು ದಿನಗಳಿಂದ ಬಿಡುವಿಲ್ಲದೆ ಎಸ್‌ಐಆರ್ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಅಮಲಾಪುರ ಗ್ರಾಮದ 33ನೇ ಬೂತ್‌ನಲ್ಲಿ ಮನೆ ಮನೆಗೆ ತೆರಳಿ ಸರ್ವೆ ನಡೆಸುತ್ತಿದ್ದ ವೇಳೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಸ್ಟಂಟ್ ಅಳವಡಿಸುವ ಪ್ರಯತ್ನ ಮಾಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಇತ್ತೀಚೆಗಷ್ಟೇ ತುಮಕೂರಿನ ಗೂಳೂರು ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಯಾಗಿದ್ದ 26 ವರ್ಷದ ಯುವತಿ ಭುವನಾ, ಶನಿವಾರ ಮುಂಜಾನೆ ಎಸ್‌ಐಆರ್ ಕೆಲಸದ ಗಡಿಬಿಡಿಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದು ದುರ್ಮರಣಕ್ಕೀಡಾಗಿದ್ದರು. ಇಲಾಖೆಯ ಅತಿಯಾದ ಒತ್ತಡವೇ ಈ ಸಾವುಗಳಿಗೂ ಕಾರಣ ಎಂದು ಆಕ್ರೋಶಗೊಂಡಿರುವ ಕಂದಾಯ ಇಲಾಖೆ ನೌಕರರು ಸದ್ಯ ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಹೋರಾತ್ರಿ ಧರಣಿ ಆರಂಭಿಸಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಗ್ರಾಮ ಆಡಳಿತ ಅಧಿಕಾರಿ ಭುವನಾ

ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಈ ಎಸ್‌ಐಆರ್ ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಸಿಂಹಸ್ವಪ್ನವಾಗಿ ಪರಿಣಾಮಿಸಿದೆ ಎಂದು ನೌಕರರ ಸಂಘಟನೆಗಳು ಗಂಭೀರ ಆರೋಪ ಮಾಡಿವೆ. ಈ ಕೆಲಸವನ್ನು ಕಟ್ಟುನಿಟ್ಟಾಗಿ ಮತ್ತು ಅತ್ಯಂತ ವೇಗವಾಗಿ ಮುಗಿಸುವಂತೆ ಉನ್ನತ ಅಧಿಕಾರಿಗಳು ತೀವ್ರ ಒತ್ತಡ ಮತ್ತು ಕಿರುಕುಳ ನೀಡುತ್ತಿರುವುದರಿಂದ ನೌಕರರು ಮಾನಸಿಕ ಸ್ಥಿಮಿತ ಕಳೆದುಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...