Homeಕರ್ನಾಟಕಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ಆಗಸ್ಟ್ 10ರಂದು ಸಚಿವರಾದ ಆರ್.ಅಶೋಕ್, ಆನಂದ್ ಸಿಂಗ್ ಮತ್ತು ಜೆ.ಸಿ.ಮಾಧುಸ್ವಾಮಿ ಶಿರಾಕ್ಕೆ ಭೇಟಿ ನೀಡಿ ಮಿನಿವಿಧಾನಸೌಧ ಮತ್ತು ಅರಣ್ಯ ಇಲಾಖೆಯ ವಸತಿಗೃಹಗಳ ಉದ್ಘಾಟನೆ ನೆರವೇರಿಸಿದ್ದಾರೆ.

- Advertisement -
- Advertisement -

ಶಿರಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಪ್ರಚಾರ ಕಾರ್ಯ ಆರಂಭಿಸಿದೆ. ಬಿಜೆಪಿ ಅಭ್ಯರ್ಥಿ ಹೆಸರು ಅಂತಿಮವಾಗಿ ಘೋಷಿಸಿಲ್ಲವಾದರೂ ಪಕ್ಷದ ಕಾರ್ಯಕರ್ತರನ್ನು ಚುನಾವಣೆಗೆ ಹುರಿದುಂಬಿಸುವ ಕೆಲಸವನ್ನು ಮಾಡಲಾಗುತ್ತಿದೆ. ದೇವಸ್ಥಾನಗಳಿಗೆ ಹಣ ಕೊಡುವ ಹಾಗೂ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವ ವಿಚಾರ ಮುಂದಿಟ್ಟು ಮತಯಾಚನೆಯಲ್ಲಿ ತೊಡಗಿರುವ ಬಿಜೆಪಿ ಕಾರ್ಯಕರ್ತರು ಕ್ಷೇತ್ರದ ಜನರಲ್ಲಿ ಚರ್ಚೆ ಹುಟ್ಟುಹಾಕಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ನೇತೃತ್ವದಲ್ಲಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮದಲೂರು ಕೆರೆಗೆ ನೀರು ಹರಿಸುವಂತೆ ಮನವಿ ಮಾಡಲಾಗಿದೆ. ಮದಲೂರು ಕೆರೆಗೆ ಯಾವುದೇ ಅಲೋಕೇಷನ್ ಇಲ್ಲ. ಆದರೂ ವಿಶೇಷ ಪ್ರಕರಣವೆಂದು ಪರಿಗಣಿಸಿ ಹೇಮಾವತಿ ನೀರು ಹರಿಸುವಂತೆ ಮನವಿ ಸಲ್ಲಿಸಿದ್ದಾರೆ. ಇದುವರೆಗೂ ಮೌನವಾಗಿದ್ದ ಬಿಜೆಪಿ ಮುಖಂಡರು ಉಪಚುನಾವಣೆ ಎದುರಾಗಿರುವಾಗಲೇ ಮದಲೂರು ಕೆರೆಗೆ ನೀರು ಹರಿಸುವ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ.

ದನಕರುಗಳು ನೀರಿಲ್ಲದೆ ಮೇವಿಲ್ಲದೆ ಚಕ್ಕಳೆ ಬಿಟ್ಟುಕೊಂಡಿವೆ ಮತ್ತು ಜನರಿಗೆ ಕುಡಿಯುವ ನೀರಿಲ್ಲ. ಪ್ಲೋರೈಡ್ ನೀರನ್ನೇ ಕುಡಿಯಬೇಕಾದ ಅನಿವಾರ್ಯತೆ ಇದೆ. ಮದಲೂರು ಕೆರೆಗೆ ನೀರು ಹರಿಸಿದರೆ ಈ ಭಾಗದಲ್ಲಿ ಏಳೆಂಟು ವರ್ಷ ಅಂತರ್ಜಲ ಹೆಚ್ಚಳವಾಗುತ್ತದೆ. ಪಶುಪಕ್ಷಿಗಳಿಗೂ ನೀರು ಲಭ್ಯವಾಗುತ್ತದೆ ಎಂದು ಸಿಎಂ. ಬಿ.ಎಸ್.ಯಡಿಯೂರಪ್ಪಅವರಿಗೆ ಭಾವನಾತ್ಮಕವಾಗಿ ಮನವಿ ಪತ್ರ ಸಲ್ಲಿಸಿದ್ದು ಇದು ಮತದಾರರ ಮೇಲೂ ಪರಿಣಾಮ ಬೀರಲಿದೆ. ಮತದಾರರನ್ನು ಭಾವನಾತ್ಮಕ ವಿಚಾರಗಳಿಂದ ಸೆಳೆಯಲು ಇದು ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಶಾಸಕ ಬಿ.ಸತ್ಯನಾರಾಯಣ ಅವರು ಜೀವಂತವಾಗಿರುವವರೆಗೆ ಮೌನವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಬಿ. ಸುರೇಶ್ ಗೌಡ ಅವರು ಶಿರಾದ ಬಿ.ಕೆ.ಮಂಜುನಾಥ್ ಎಸ್.ಆರ್.ಗೌಡರನ್ನು ನಿಯೋಗದಲ್ಲಿ ತೆರಳಿ ನೀರಿನ ಅಲೋಕೇಷನ್ ಇಲ್ಲದ ಮದಲೂರು ಕೆರೆಗೆ ಹೇಮವಾತಿ ನೀರು ಹರಿಸುವ ವಿಫಲ ಯತ್ನಕ್ಕೆ ಕೈಹಾಕಿರುವುದು ರಾಜಕೀಯ ಗಿಮಿಕ್. ಸಧ್ಯಕ್ಕಂತೂ ನೀರು ಹರಿಸಲು ಸಾಧ್ಯವಿಲ್ಲ. ಬಿಜೆಪಿ ಮುಖಂಡರು ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಆಗಸ್ಟ್ 10ರಂದು ಸಚಿವರಾದ ಆರ್.ಅಶೋಕ್, ಆನಂದ್ ಸಿಂಗ್ ಮತ್ತು ಜೆ.ಸಿ.ಮಾಧುಸ್ವಾಮಿ ಶಿರಾಕ್ಕೆ ಭೇಟಿ ನೀಡಿ ಮಿನಿವಿಧಾನಸೌಧ ಮತ್ತು ಅರಣ್ಯ ಇಲಾಖೆಯ ವಸತಿಗೃಹಗಳ ಉದ್ಘಾಟನೆ ನೆರವೇರಿಸಿದರು. ನಂತರ ಕೆಲ ಹೊತ್ತು ಸ್ಥಳೀಯ ಮುಖಂಡರ ಜೊತೆ ಮಾತುಕತೆ ನಡೆಸಿದರು. ಚುನಾವಣೆಯಲ್ಲಿ ಕೈಗೊಳ್ಳಬೇಕಾದ ತಂತ್ರಗಳ ಕುರಿತು ಸಮಾಲೋಚನೆ ಮಾಡಿದರು. ಈ ಮೂಲಕ ಚುನಾವಣೆ ಘೋಷಣೆಗೂ ಮೊದಲೇ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನೆಪದಲ್ಲಿ ಪ್ರಚಾರವೂ ನಡೆದಿದೆ.

ಮಾಜಿ ಸಚಿವ ಟಿ.ಬಿ.ಜಯಚಂದ್ರ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಎಂದು ಆರೋಪ ಮಾಡಿದ್ದು ಈ ಬಗ್ಗೆ ಬಿಜೆಪಿ ಮುಖಂಡರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಬಿಜೆಪಿಯ ಆರ್. ಅಶೋಕ್  ಗಣಿ ಮಾಲಿಕರೂ ಆದ ಸಚಿವ ಆನಂದ ಸಿಂಗ್ ಬಂದು ಹೋಗಿರುವುದು ಕ್ಷೇತ್ರದ ಮತದಾರರಲ್ಲಿ ಕುತೂಹಲವನ್ನು ಹೆಚ್ಚಿಸಿದೆ..

ಚುನಾವಣೆ ಘೋಷಣೆಗೂ ಮುನ್ನವೇ ಶಿರಾ ಕ್ಷೇತ್ರದಲ್ಲಿ ರಾಜಕೀಯ ಕಾವು ತೀವ್ರ ಗತಿಯಲ್ಲಿ ಏರತೊಡಗಿದೆ. ಬಿಜೆಪಿ ಪ್ರಚಾರದಲ್ಲಿ ಮುಂದಿದ್ದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಆಡಳಿತಾರೂಢ ಪಕ್ಷದ ಪಟ್ಟುಗಳಿಗೆ ಪ್ರತಿ ತಂತ್ರಗಳನ್ನು ಹೆಣೆಯುವುದರಲ್ಲಿ ನಿರತವಾಗಿವೆ.


ಇದನ್ನೂ ಓದಿ: ಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....