Homeಕರ್ನಾಟಕಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ಆಗಸ್ಟ್ 10ರಂದು ಸಚಿವರಾದ ಆರ್.ಅಶೋಕ್, ಆನಂದ್ ಸಿಂಗ್ ಮತ್ತು ಜೆ.ಸಿ.ಮಾಧುಸ್ವಾಮಿ ಶಿರಾಕ್ಕೆ ಭೇಟಿ ನೀಡಿ ಮಿನಿವಿಧಾನಸೌಧ ಮತ್ತು ಅರಣ್ಯ ಇಲಾಖೆಯ ವಸತಿಗೃಹಗಳ ಉದ್ಘಾಟನೆ ನೆರವೇರಿಸಿದ್ದಾರೆ.

- Advertisement -
- Advertisement -

ಶಿರಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಪ್ರಚಾರ ಕಾರ್ಯ ಆರಂಭಿಸಿದೆ. ಬಿಜೆಪಿ ಅಭ್ಯರ್ಥಿ ಹೆಸರು ಅಂತಿಮವಾಗಿ ಘೋಷಿಸಿಲ್ಲವಾದರೂ ಪಕ್ಷದ ಕಾರ್ಯಕರ್ತರನ್ನು ಚುನಾವಣೆಗೆ ಹುರಿದುಂಬಿಸುವ ಕೆಲಸವನ್ನು ಮಾಡಲಾಗುತ್ತಿದೆ. ದೇವಸ್ಥಾನಗಳಿಗೆ ಹಣ ಕೊಡುವ ಹಾಗೂ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವ ವಿಚಾರ ಮುಂದಿಟ್ಟು ಮತಯಾಚನೆಯಲ್ಲಿ ತೊಡಗಿರುವ ಬಿಜೆಪಿ ಕಾರ್ಯಕರ್ತರು ಕ್ಷೇತ್ರದ ಜನರಲ್ಲಿ ಚರ್ಚೆ ಹುಟ್ಟುಹಾಕಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ನೇತೃತ್ವದಲ್ಲಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮದಲೂರು ಕೆರೆಗೆ ನೀರು ಹರಿಸುವಂತೆ ಮನವಿ ಮಾಡಲಾಗಿದೆ. ಮದಲೂರು ಕೆರೆಗೆ ಯಾವುದೇ ಅಲೋಕೇಷನ್ ಇಲ್ಲ. ಆದರೂ ವಿಶೇಷ ಪ್ರಕರಣವೆಂದು ಪರಿಗಣಿಸಿ ಹೇಮಾವತಿ ನೀರು ಹರಿಸುವಂತೆ ಮನವಿ ಸಲ್ಲಿಸಿದ್ದಾರೆ. ಇದುವರೆಗೂ ಮೌನವಾಗಿದ್ದ ಬಿಜೆಪಿ ಮುಖಂಡರು ಉಪಚುನಾವಣೆ ಎದುರಾಗಿರುವಾಗಲೇ ಮದಲೂರು ಕೆರೆಗೆ ನೀರು ಹರಿಸುವ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ.

ದನಕರುಗಳು ನೀರಿಲ್ಲದೆ ಮೇವಿಲ್ಲದೆ ಚಕ್ಕಳೆ ಬಿಟ್ಟುಕೊಂಡಿವೆ ಮತ್ತು ಜನರಿಗೆ ಕುಡಿಯುವ ನೀರಿಲ್ಲ. ಪ್ಲೋರೈಡ್ ನೀರನ್ನೇ ಕುಡಿಯಬೇಕಾದ ಅನಿವಾರ್ಯತೆ ಇದೆ. ಮದಲೂರು ಕೆರೆಗೆ ನೀರು ಹರಿಸಿದರೆ ಈ ಭಾಗದಲ್ಲಿ ಏಳೆಂಟು ವರ್ಷ ಅಂತರ್ಜಲ ಹೆಚ್ಚಳವಾಗುತ್ತದೆ. ಪಶುಪಕ್ಷಿಗಳಿಗೂ ನೀರು ಲಭ್ಯವಾಗುತ್ತದೆ ಎಂದು ಸಿಎಂ. ಬಿ.ಎಸ್.ಯಡಿಯೂರಪ್ಪಅವರಿಗೆ ಭಾವನಾತ್ಮಕವಾಗಿ ಮನವಿ ಪತ್ರ ಸಲ್ಲಿಸಿದ್ದು ಇದು ಮತದಾರರ ಮೇಲೂ ಪರಿಣಾಮ ಬೀರಲಿದೆ. ಮತದಾರರನ್ನು ಭಾವನಾತ್ಮಕ ವಿಚಾರಗಳಿಂದ ಸೆಳೆಯಲು ಇದು ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಶಾಸಕ ಬಿ.ಸತ್ಯನಾರಾಯಣ ಅವರು ಜೀವಂತವಾಗಿರುವವರೆಗೆ ಮೌನವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಬಿ. ಸುರೇಶ್ ಗೌಡ ಅವರು ಶಿರಾದ ಬಿ.ಕೆ.ಮಂಜುನಾಥ್ ಎಸ್.ಆರ್.ಗೌಡರನ್ನು ನಿಯೋಗದಲ್ಲಿ ತೆರಳಿ ನೀರಿನ ಅಲೋಕೇಷನ್ ಇಲ್ಲದ ಮದಲೂರು ಕೆರೆಗೆ ಹೇಮವಾತಿ ನೀರು ಹರಿಸುವ ವಿಫಲ ಯತ್ನಕ್ಕೆ ಕೈಹಾಕಿರುವುದು ರಾಜಕೀಯ ಗಿಮಿಕ್. ಸಧ್ಯಕ್ಕಂತೂ ನೀರು ಹರಿಸಲು ಸಾಧ್ಯವಿಲ್ಲ. ಬಿಜೆಪಿ ಮುಖಂಡರು ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಆಗಸ್ಟ್ 10ರಂದು ಸಚಿವರಾದ ಆರ್.ಅಶೋಕ್, ಆನಂದ್ ಸಿಂಗ್ ಮತ್ತು ಜೆ.ಸಿ.ಮಾಧುಸ್ವಾಮಿ ಶಿರಾಕ್ಕೆ ಭೇಟಿ ನೀಡಿ ಮಿನಿವಿಧಾನಸೌಧ ಮತ್ತು ಅರಣ್ಯ ಇಲಾಖೆಯ ವಸತಿಗೃಹಗಳ ಉದ್ಘಾಟನೆ ನೆರವೇರಿಸಿದರು. ನಂತರ ಕೆಲ ಹೊತ್ತು ಸ್ಥಳೀಯ ಮುಖಂಡರ ಜೊತೆ ಮಾತುಕತೆ ನಡೆಸಿದರು. ಚುನಾವಣೆಯಲ್ಲಿ ಕೈಗೊಳ್ಳಬೇಕಾದ ತಂತ್ರಗಳ ಕುರಿತು ಸಮಾಲೋಚನೆ ಮಾಡಿದರು. ಈ ಮೂಲಕ ಚುನಾವಣೆ ಘೋಷಣೆಗೂ ಮೊದಲೇ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನೆಪದಲ್ಲಿ ಪ್ರಚಾರವೂ ನಡೆದಿದೆ.

ಮಾಜಿ ಸಚಿವ ಟಿ.ಬಿ.ಜಯಚಂದ್ರ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಎಂದು ಆರೋಪ ಮಾಡಿದ್ದು ಈ ಬಗ್ಗೆ ಬಿಜೆಪಿ ಮುಖಂಡರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಬಿಜೆಪಿಯ ಆರ್. ಅಶೋಕ್  ಗಣಿ ಮಾಲಿಕರೂ ಆದ ಸಚಿವ ಆನಂದ ಸಿಂಗ್ ಬಂದು ಹೋಗಿರುವುದು ಕ್ಷೇತ್ರದ ಮತದಾರರಲ್ಲಿ ಕುತೂಹಲವನ್ನು ಹೆಚ್ಚಿಸಿದೆ..

ಚುನಾವಣೆ ಘೋಷಣೆಗೂ ಮುನ್ನವೇ ಶಿರಾ ಕ್ಷೇತ್ರದಲ್ಲಿ ರಾಜಕೀಯ ಕಾವು ತೀವ್ರ ಗತಿಯಲ್ಲಿ ಏರತೊಡಗಿದೆ. ಬಿಜೆಪಿ ಪ್ರಚಾರದಲ್ಲಿ ಮುಂದಿದ್ದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಆಡಳಿತಾರೂಢ ಪಕ್ಷದ ಪಟ್ಟುಗಳಿಗೆ ಪ್ರತಿ ತಂತ್ರಗಳನ್ನು ಹೆಣೆಯುವುದರಲ್ಲಿ ನಿರತವಾಗಿವೆ.


ಇದನ್ನೂ ಓದಿ: ಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...