Homeಕರ್ನಾಟಕಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ಆಗಸ್ಟ್ 10ರಂದು ಸಚಿವರಾದ ಆರ್.ಅಶೋಕ್, ಆನಂದ್ ಸಿಂಗ್ ಮತ್ತು ಜೆ.ಸಿ.ಮಾಧುಸ್ವಾಮಿ ಶಿರಾಕ್ಕೆ ಭೇಟಿ ನೀಡಿ ಮಿನಿವಿಧಾನಸೌಧ ಮತ್ತು ಅರಣ್ಯ ಇಲಾಖೆಯ ವಸತಿಗೃಹಗಳ ಉದ್ಘಾಟನೆ ನೆರವೇರಿಸಿದ್ದಾರೆ.

- Advertisement -
- Advertisement -

ಶಿರಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಪ್ರಚಾರ ಕಾರ್ಯ ಆರಂಭಿಸಿದೆ. ಬಿಜೆಪಿ ಅಭ್ಯರ್ಥಿ ಹೆಸರು ಅಂತಿಮವಾಗಿ ಘೋಷಿಸಿಲ್ಲವಾದರೂ ಪಕ್ಷದ ಕಾರ್ಯಕರ್ತರನ್ನು ಚುನಾವಣೆಗೆ ಹುರಿದುಂಬಿಸುವ ಕೆಲಸವನ್ನು ಮಾಡಲಾಗುತ್ತಿದೆ. ದೇವಸ್ಥಾನಗಳಿಗೆ ಹಣ ಕೊಡುವ ಹಾಗೂ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವ ವಿಚಾರ ಮುಂದಿಟ್ಟು ಮತಯಾಚನೆಯಲ್ಲಿ ತೊಡಗಿರುವ ಬಿಜೆಪಿ ಕಾರ್ಯಕರ್ತರು ಕ್ಷೇತ್ರದ ಜನರಲ್ಲಿ ಚರ್ಚೆ ಹುಟ್ಟುಹಾಕಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ನೇತೃತ್ವದಲ್ಲಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮದಲೂರು ಕೆರೆಗೆ ನೀರು ಹರಿಸುವಂತೆ ಮನವಿ ಮಾಡಲಾಗಿದೆ. ಮದಲೂರು ಕೆರೆಗೆ ಯಾವುದೇ ಅಲೋಕೇಷನ್ ಇಲ್ಲ. ಆದರೂ ವಿಶೇಷ ಪ್ರಕರಣವೆಂದು ಪರಿಗಣಿಸಿ ಹೇಮಾವತಿ ನೀರು ಹರಿಸುವಂತೆ ಮನವಿ ಸಲ್ಲಿಸಿದ್ದಾರೆ. ಇದುವರೆಗೂ ಮೌನವಾಗಿದ್ದ ಬಿಜೆಪಿ ಮುಖಂಡರು ಉಪಚುನಾವಣೆ ಎದುರಾಗಿರುವಾಗಲೇ ಮದಲೂರು ಕೆರೆಗೆ ನೀರು ಹರಿಸುವ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ.

ದನಕರುಗಳು ನೀರಿಲ್ಲದೆ ಮೇವಿಲ್ಲದೆ ಚಕ್ಕಳೆ ಬಿಟ್ಟುಕೊಂಡಿವೆ ಮತ್ತು ಜನರಿಗೆ ಕುಡಿಯುವ ನೀರಿಲ್ಲ. ಪ್ಲೋರೈಡ್ ನೀರನ್ನೇ ಕುಡಿಯಬೇಕಾದ ಅನಿವಾರ್ಯತೆ ಇದೆ. ಮದಲೂರು ಕೆರೆಗೆ ನೀರು ಹರಿಸಿದರೆ ಈ ಭಾಗದಲ್ಲಿ ಏಳೆಂಟು ವರ್ಷ ಅಂತರ್ಜಲ ಹೆಚ್ಚಳವಾಗುತ್ತದೆ. ಪಶುಪಕ್ಷಿಗಳಿಗೂ ನೀರು ಲಭ್ಯವಾಗುತ್ತದೆ ಎಂದು ಸಿಎಂ. ಬಿ.ಎಸ್.ಯಡಿಯೂರಪ್ಪಅವರಿಗೆ ಭಾವನಾತ್ಮಕವಾಗಿ ಮನವಿ ಪತ್ರ ಸಲ್ಲಿಸಿದ್ದು ಇದು ಮತದಾರರ ಮೇಲೂ ಪರಿಣಾಮ ಬೀರಲಿದೆ. ಮತದಾರರನ್ನು ಭಾವನಾತ್ಮಕ ವಿಚಾರಗಳಿಂದ ಸೆಳೆಯಲು ಇದು ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಶಾಸಕ ಬಿ.ಸತ್ಯನಾರಾಯಣ ಅವರು ಜೀವಂತವಾಗಿರುವವರೆಗೆ ಮೌನವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಬಿ. ಸುರೇಶ್ ಗೌಡ ಅವರು ಶಿರಾದ ಬಿ.ಕೆ.ಮಂಜುನಾಥ್ ಎಸ್.ಆರ್.ಗೌಡರನ್ನು ನಿಯೋಗದಲ್ಲಿ ತೆರಳಿ ನೀರಿನ ಅಲೋಕೇಷನ್ ಇಲ್ಲದ ಮದಲೂರು ಕೆರೆಗೆ ಹೇಮವಾತಿ ನೀರು ಹರಿಸುವ ವಿಫಲ ಯತ್ನಕ್ಕೆ ಕೈಹಾಕಿರುವುದು ರಾಜಕೀಯ ಗಿಮಿಕ್. ಸಧ್ಯಕ್ಕಂತೂ ನೀರು ಹರಿಸಲು ಸಾಧ್ಯವಿಲ್ಲ. ಬಿಜೆಪಿ ಮುಖಂಡರು ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಆಗಸ್ಟ್ 10ರಂದು ಸಚಿವರಾದ ಆರ್.ಅಶೋಕ್, ಆನಂದ್ ಸಿಂಗ್ ಮತ್ತು ಜೆ.ಸಿ.ಮಾಧುಸ್ವಾಮಿ ಶಿರಾಕ್ಕೆ ಭೇಟಿ ನೀಡಿ ಮಿನಿವಿಧಾನಸೌಧ ಮತ್ತು ಅರಣ್ಯ ಇಲಾಖೆಯ ವಸತಿಗೃಹಗಳ ಉದ್ಘಾಟನೆ ನೆರವೇರಿಸಿದರು. ನಂತರ ಕೆಲ ಹೊತ್ತು ಸ್ಥಳೀಯ ಮುಖಂಡರ ಜೊತೆ ಮಾತುಕತೆ ನಡೆಸಿದರು. ಚುನಾವಣೆಯಲ್ಲಿ ಕೈಗೊಳ್ಳಬೇಕಾದ ತಂತ್ರಗಳ ಕುರಿತು ಸಮಾಲೋಚನೆ ಮಾಡಿದರು. ಈ ಮೂಲಕ ಚುನಾವಣೆ ಘೋಷಣೆಗೂ ಮೊದಲೇ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನೆಪದಲ್ಲಿ ಪ್ರಚಾರವೂ ನಡೆದಿದೆ.

ಮಾಜಿ ಸಚಿವ ಟಿ.ಬಿ.ಜಯಚಂದ್ರ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಎಂದು ಆರೋಪ ಮಾಡಿದ್ದು ಈ ಬಗ್ಗೆ ಬಿಜೆಪಿ ಮುಖಂಡರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಬಿಜೆಪಿಯ ಆರ್. ಅಶೋಕ್  ಗಣಿ ಮಾಲಿಕರೂ ಆದ ಸಚಿವ ಆನಂದ ಸಿಂಗ್ ಬಂದು ಹೋಗಿರುವುದು ಕ್ಷೇತ್ರದ ಮತದಾರರಲ್ಲಿ ಕುತೂಹಲವನ್ನು ಹೆಚ್ಚಿಸಿದೆ..

ಚುನಾವಣೆ ಘೋಷಣೆಗೂ ಮುನ್ನವೇ ಶಿರಾ ಕ್ಷೇತ್ರದಲ್ಲಿ ರಾಜಕೀಯ ಕಾವು ತೀವ್ರ ಗತಿಯಲ್ಲಿ ಏರತೊಡಗಿದೆ. ಬಿಜೆಪಿ ಪ್ರಚಾರದಲ್ಲಿ ಮುಂದಿದ್ದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಆಡಳಿತಾರೂಢ ಪಕ್ಷದ ಪಟ್ಟುಗಳಿಗೆ ಪ್ರತಿ ತಂತ್ರಗಳನ್ನು ಹೆಣೆಯುವುದರಲ್ಲಿ ನಿರತವಾಗಿವೆ.


ಇದನ್ನೂ ಓದಿ: ಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...