Homeಕರ್ನಾಟಕಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ಶಿರಾ ಉಪಚುನಾವಣೆ: ಉದ್ಘಾಟನೆ ಹೆಸರಲ್ಲಿ ಬಿಜೆಪಿ ಪ್ರಚಾರ ಶುರು

ಆಗಸ್ಟ್ 10ರಂದು ಸಚಿವರಾದ ಆರ್.ಅಶೋಕ್, ಆನಂದ್ ಸಿಂಗ್ ಮತ್ತು ಜೆ.ಸಿ.ಮಾಧುಸ್ವಾಮಿ ಶಿರಾಕ್ಕೆ ಭೇಟಿ ನೀಡಿ ಮಿನಿವಿಧಾನಸೌಧ ಮತ್ತು ಅರಣ್ಯ ಇಲಾಖೆಯ ವಸತಿಗೃಹಗಳ ಉದ್ಘಾಟನೆ ನೆರವೇರಿಸಿದ್ದಾರೆ.

- Advertisement -
- Advertisement -

ಶಿರಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಪ್ರಚಾರ ಕಾರ್ಯ ಆರಂಭಿಸಿದೆ. ಬಿಜೆಪಿ ಅಭ್ಯರ್ಥಿ ಹೆಸರು ಅಂತಿಮವಾಗಿ ಘೋಷಿಸಿಲ್ಲವಾದರೂ ಪಕ್ಷದ ಕಾರ್ಯಕರ್ತರನ್ನು ಚುನಾವಣೆಗೆ ಹುರಿದುಂಬಿಸುವ ಕೆಲಸವನ್ನು ಮಾಡಲಾಗುತ್ತಿದೆ. ದೇವಸ್ಥಾನಗಳಿಗೆ ಹಣ ಕೊಡುವ ಹಾಗೂ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವ ವಿಚಾರ ಮುಂದಿಟ್ಟು ಮತಯಾಚನೆಯಲ್ಲಿ ತೊಡಗಿರುವ ಬಿಜೆಪಿ ಕಾರ್ಯಕರ್ತರು ಕ್ಷೇತ್ರದ ಜನರಲ್ಲಿ ಚರ್ಚೆ ಹುಟ್ಟುಹಾಕಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ನೇತೃತ್ವದಲ್ಲಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮದಲೂರು ಕೆರೆಗೆ ನೀರು ಹರಿಸುವಂತೆ ಮನವಿ ಮಾಡಲಾಗಿದೆ. ಮದಲೂರು ಕೆರೆಗೆ ಯಾವುದೇ ಅಲೋಕೇಷನ್ ಇಲ್ಲ. ಆದರೂ ವಿಶೇಷ ಪ್ರಕರಣವೆಂದು ಪರಿಗಣಿಸಿ ಹೇಮಾವತಿ ನೀರು ಹರಿಸುವಂತೆ ಮನವಿ ಸಲ್ಲಿಸಿದ್ದಾರೆ. ಇದುವರೆಗೂ ಮೌನವಾಗಿದ್ದ ಬಿಜೆಪಿ ಮುಖಂಡರು ಉಪಚುನಾವಣೆ ಎದುರಾಗಿರುವಾಗಲೇ ಮದಲೂರು ಕೆರೆಗೆ ನೀರು ಹರಿಸುವ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ.

ದನಕರುಗಳು ನೀರಿಲ್ಲದೆ ಮೇವಿಲ್ಲದೆ ಚಕ್ಕಳೆ ಬಿಟ್ಟುಕೊಂಡಿವೆ ಮತ್ತು ಜನರಿಗೆ ಕುಡಿಯುವ ನೀರಿಲ್ಲ. ಪ್ಲೋರೈಡ್ ನೀರನ್ನೇ ಕುಡಿಯಬೇಕಾದ ಅನಿವಾರ್ಯತೆ ಇದೆ. ಮದಲೂರು ಕೆರೆಗೆ ನೀರು ಹರಿಸಿದರೆ ಈ ಭಾಗದಲ್ಲಿ ಏಳೆಂಟು ವರ್ಷ ಅಂತರ್ಜಲ ಹೆಚ್ಚಳವಾಗುತ್ತದೆ. ಪಶುಪಕ್ಷಿಗಳಿಗೂ ನೀರು ಲಭ್ಯವಾಗುತ್ತದೆ ಎಂದು ಸಿಎಂ. ಬಿ.ಎಸ್.ಯಡಿಯೂರಪ್ಪಅವರಿಗೆ ಭಾವನಾತ್ಮಕವಾಗಿ ಮನವಿ ಪತ್ರ ಸಲ್ಲಿಸಿದ್ದು ಇದು ಮತದಾರರ ಮೇಲೂ ಪರಿಣಾಮ ಬೀರಲಿದೆ. ಮತದಾರರನ್ನು ಭಾವನಾತ್ಮಕ ವಿಚಾರಗಳಿಂದ ಸೆಳೆಯಲು ಇದು ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಶಾಸಕ ಬಿ.ಸತ್ಯನಾರಾಯಣ ಅವರು ಜೀವಂತವಾಗಿರುವವರೆಗೆ ಮೌನವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಬಿ. ಸುರೇಶ್ ಗೌಡ ಅವರು ಶಿರಾದ ಬಿ.ಕೆ.ಮಂಜುನಾಥ್ ಎಸ್.ಆರ್.ಗೌಡರನ್ನು ನಿಯೋಗದಲ್ಲಿ ತೆರಳಿ ನೀರಿನ ಅಲೋಕೇಷನ್ ಇಲ್ಲದ ಮದಲೂರು ಕೆರೆಗೆ ಹೇಮವಾತಿ ನೀರು ಹರಿಸುವ ವಿಫಲ ಯತ್ನಕ್ಕೆ ಕೈಹಾಕಿರುವುದು ರಾಜಕೀಯ ಗಿಮಿಕ್. ಸಧ್ಯಕ್ಕಂತೂ ನೀರು ಹರಿಸಲು ಸಾಧ್ಯವಿಲ್ಲ. ಬಿಜೆಪಿ ಮುಖಂಡರು ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಆಗಸ್ಟ್ 10ರಂದು ಸಚಿವರಾದ ಆರ್.ಅಶೋಕ್, ಆನಂದ್ ಸಿಂಗ್ ಮತ್ತು ಜೆ.ಸಿ.ಮಾಧುಸ್ವಾಮಿ ಶಿರಾಕ್ಕೆ ಭೇಟಿ ನೀಡಿ ಮಿನಿವಿಧಾನಸೌಧ ಮತ್ತು ಅರಣ್ಯ ಇಲಾಖೆಯ ವಸತಿಗೃಹಗಳ ಉದ್ಘಾಟನೆ ನೆರವೇರಿಸಿದರು. ನಂತರ ಕೆಲ ಹೊತ್ತು ಸ್ಥಳೀಯ ಮುಖಂಡರ ಜೊತೆ ಮಾತುಕತೆ ನಡೆಸಿದರು. ಚುನಾವಣೆಯಲ್ಲಿ ಕೈಗೊಳ್ಳಬೇಕಾದ ತಂತ್ರಗಳ ಕುರಿತು ಸಮಾಲೋಚನೆ ಮಾಡಿದರು. ಈ ಮೂಲಕ ಚುನಾವಣೆ ಘೋಷಣೆಗೂ ಮೊದಲೇ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನೆಪದಲ್ಲಿ ಪ್ರಚಾರವೂ ನಡೆದಿದೆ.

ಮಾಜಿ ಸಚಿವ ಟಿ.ಬಿ.ಜಯಚಂದ್ರ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಎಂದು ಆರೋಪ ಮಾಡಿದ್ದು ಈ ಬಗ್ಗೆ ಬಿಜೆಪಿ ಮುಖಂಡರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಬಿಜೆಪಿಯ ಆರ್. ಅಶೋಕ್  ಗಣಿ ಮಾಲಿಕರೂ ಆದ ಸಚಿವ ಆನಂದ ಸಿಂಗ್ ಬಂದು ಹೋಗಿರುವುದು ಕ್ಷೇತ್ರದ ಮತದಾರರಲ್ಲಿ ಕುತೂಹಲವನ್ನು ಹೆಚ್ಚಿಸಿದೆ..

ಚುನಾವಣೆ ಘೋಷಣೆಗೂ ಮುನ್ನವೇ ಶಿರಾ ಕ್ಷೇತ್ರದಲ್ಲಿ ರಾಜಕೀಯ ಕಾವು ತೀವ್ರ ಗತಿಯಲ್ಲಿ ಏರತೊಡಗಿದೆ. ಬಿಜೆಪಿ ಪ್ರಚಾರದಲ್ಲಿ ಮುಂದಿದ್ದರೆ ಜೆಡಿಎಸ್ ಮತ್ತು ಕಾಂಗ್ರೆಸ್ ಆಡಳಿತಾರೂಢ ಪಕ್ಷದ ಪಟ್ಟುಗಳಿಗೆ ಪ್ರತಿ ತಂತ್ರಗಳನ್ನು ಹೆಣೆಯುವುದರಲ್ಲಿ ನಿರತವಾಗಿವೆ.


ಇದನ್ನೂ ಓದಿ: ಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...