Homeಕರ್ನಾಟಕಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ.

- Advertisement -
- Advertisement -

ಕಡಲೆಗಿಡ ಕೀಳಲು ಕೂಲಿ ಆಳುಗಳು ಸಿಗುತ್ತಿಲ್ಲ. ಯಾರನ್ನು ಕೇಳಿದರೂ ಬರುವುದಿಲ್ಲ ಎಂದು ಹೇಳುವವರೇ ಹೆಚ್ಚು. ಕೈಯಲ್ಲಿ ಕಾಸು ನಾಟ್ಯವಾಡಬೇಕಾದರೆ ಯಾರಿಗೆ ಬೇಕು ಸಣ್ಣ ಮೊತ್ತದ ಕೂಲಿ. ಬರದ ನಾಡೆಂದು ಹೆಸರಾದ ಶಿರಾ ಕ್ಷೇತ್ರದಲ್ಲಿ ಈಗ ಚುನಾವಣೆಯ ಸಮಯ ಆಗಿರುವುದರಿಂದ ಹಣ ಮಾಡುವವರ ಚಿತ್ತ ಎಲ್ಲ ಪಕ್ಷಗಳತ್ತ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಮಾಡದೆಯೇ ಕೈತುಂಬ ಹಣ ಸಿಗುವಾಗ ಕೂಲಿಯ ಹಣ ಬೇಕೇನು? ಬೆಳಗ್ಗೆಯಿಂದ ಸಂಜೆವರೆಗೆ ದುಡಿದರೂ ಸಿಗುವ ಕೂಲಿ ಅಷ್ಟಕ್ಕೇ ಇದೆ. ಓಡಾಡಿಕೊಂಡು ಜೈಕಾರ ಹಾಕುತ್ತ ಕೈತುಂಬ ಗರಿಗರಿ ನೋಟುಗಳನ್ನು ಎಣಿಸಬಹುದೆಂಬ ಅವಕಾಶವನ್ನು ಕಸುಬುದಾರರು ಕಲಿತುಕೊಂಡಿದ್ದಾರೆ.

ಶಿರಾ ಕ್ಷೇತ್ರದ ಮತದಾನಕ್ಕೆ 12 ದಿನ ಬಾಕಿ ಇದೆ. ಮೂರು ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ಮಗ್ನವಾಗಿವೆ. ಗೆಲ್ಲಬೇಕೆಂಬ ಹಟಕ್ಕೆ ಬಿದ್ದಂತಿರುವ ಅಭ್ಯರ್ಥಿಗಳು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎನ್ನುತ್ತಾರೆ ಮತದಾರ. ಒಮ್ಮೆ ಬಿಸಿಲು, ಮತ್ತೊಮ್ಮೆ ಮೋಡಗಳ ರಾಶಿ. ಇದರಿಂದ ನೆರಳು, ಇನ್ನೊಂದು ಕಡೆ ಸೋನೆ ಮಳೆ, ಮಳೆ ಬೀಳುವಂತಹ ವಾತಾವರಣದಲ್ಲಿ ನಾಯಕರಷ್ಟೇ ಅಲ್ಲದೇ ಬೆಂಬಲಿಗರೂ ಬೆವರು ಹರಿಸುತ್ತಿದ್ದಾರೆ. ಇದಕ್ಕಾಗಿ ಕೈತುಂಬ ಹಣವು, ಮೂರು ಹೊತ್ತು ಊಟವೂ, ಜೊತೆಗಿಷ್ಟು ಎಣ್ಣೆಯ ನೈವೇದ್ಯವೂ ಆಗುತ್ತದೆ. ಇಷ್ಟಾದ ಮೇಲೆ ಯಾರ ಉಸಾಬರಿಯೂ ಬೇಡ. ಹಣ-ಹೆಂಡದ ಅಮಲಿನಲ್ಲಿ ತೇಲುವಂತಹ ಸನ್ನಿವೇಶಗಳು ಸೃಷ್ಟಿಯಾಗಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಹೌದು, ಹಣದ ಹರಿವು ಜೋರಾಗಿದೆ. ಸಾಮರ್ಥ್ಯಕ್ಕೆ ತಕ್ಕ ಹಾಗೆ ಹಣ ಖರ್ಚು ಮಾಡುತ್ತಿದ್ದಾರೆ. ಒಂದು ಪಕ್ಷ ಮತದಾರರಿಗೆ 1000 ರೂ. ನೀಡಿದರೆ, ಮತ್ತೊಂದು ಪಕ್ಷ 500 ರೂ. ಕೊಡುತ್ತಿದೆ. ಮೂರನೇ ಪಕ್ಷ 300 ರೂ. ನೀಡುತ್ತಿದೆ. ದುಡ್ಡು ಹೆಚ್ಚು ಕೊಡುವವರ ಪರವಾಗಿ ಹೆಚ್ಚು ಮಂದಿ ಕಾರ್ಯಕರ್ತರು ಕಂಡು ಬರುತ್ತಾರೆ. ಹಣ ಪಡೆದುಕೊಂಡರೂ ಓಟು ಯಾರಿಗೆ ಎಂಬುದನ್ನು ನಿಶ್ಚಯ ಮಾಡಿಕೊಂಡಿದ್ದಾರೆ. ಆದರೆ ಹಣ ಮಾಡುವುದಷ್ಟೇ ಪ್ರಚಾರಕರ ಉದ್ದೇಶ ಎನ್ನುತ್ತವೆ ಹಣ ಹಂಚುತ್ತಿರುವುದನ್ನು ಪ್ರತ್ಯಕ್ಷವಾಗಿ ನೋಡಿದ ಮೂಲಗಳು.

ದೇವಾಲಯಗಳಿಗೆ ಹಣ ಹಂಚಿದ್ದು ಇತಿಹಾಸದ ಪುಟಗಳನ್ನು ಸೇರಿದೆ. ಈಗ ನೇರ ಮತದಾರರ ಕೈಗೆ ಹಣ ತಲುಪುತ್ತಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ಮತ್ತು ಚುನಾವಣೆಯ ಉಸ್ತುವಾರಿ ವಹಿಸಿಕೊಂಡವರು ಬೆಂಬಲಿಗರಿಗೆ ಮತ್ತು ಪ್ರಚಾರ ಕೈಗೊಳ್ಳುವ ಮತದಾರ ತಂಡಗಳಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಕುರಿತು ಕ್ಷೇತ್ರದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ದುಡ್ಡು ಮಾಡಲು ಹೋದವರು ಮೂರು ಪಕ್ಷಗಳಿಂದಲೂ ಹಣ ತೆಗೆದುಕೊಳ್ಳುತ್ತಾರೆ. ಆದರೆ ತಮ್ಮ ಮತ ಯಾರಿಗೆ ಎಂಬುದನ್ನು ಗೌಪ್ಯವಾಗಿಯೇ ಇಟ್ಟಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ಕಮಲ ಕೈಯಲ್ಲಿ ಹಿಡಿದವರೂ ಇದ್ದಾರೆ. ಕೈಯಲ್ಲಿ ಕಮಲವೂ ರಾರಾಜಿಸುತ್ತಿದೆ. ತೆನೆಯಲ್ಲಿ ಕಮಲ, ತೆನೆಯನ್ನು ಕೈಯಲ್ಲಿ ಹಿಡಿದವರೂ ಕಂಡುಬರುತ್ತಿದ್ದಾರೆ. ಇಲ್ಲಿ ಕೆಲಸ ಮಾಡುವವರು ಬೇರೆ ಪಕ್ಷದಲ್ಲಿಯೂ ಇರುತ್ತಾರೆ. ಹಾಗಾಗಿ ಯಾರು ಯಾವ ಪಕ್ಷಕ್ಕೆ ಮತ ಹಾಕುತ್ತಾರೆನ್ನುವುದು ನಿಗೂಢವಾಗಿಯೇ ಉಳಿದಿದೆ. ಆದರೆ ಮೂರು ಪಕ್ಷಗಳಿಂದಲೂ ಹಣ ಪಡೆಯುವವರು ಮಾತ್ರ ಗೆಲುವಾಗಿಯೇ ಓಡಾಡುತ್ತಾರೆ. ಇದರಿಂದ ಕಡಲೆಗಿಡಗಳನ್ನು ಕೀಳುವ ಕೆಲಸಕ್ಕೆ ಕೂಲಿ ಆಳುಗಳು ಸಿಗುತ್ತಿಲ್ಲ ಎನ್ನುತ್ತಾರೆ ರೈತರು.

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ. ನೆಲೆ ಇಲ್ಲದ, ಬಲವಿಲ್ಲದ, ಒಲವಿಲ್ಲದ ಕುರಿತು ಚರ್ಚೆ ನಡೆಯುತ್ತಿದ್ದರೂ ನೆಲೆ-ಬಲ-ಒಲವುಗಳಲ್ಲಿ ಒಂದನ್ನು ಆಯ್ಕೆ ಮಾಡುವುದು ಮತದಾರರಿಗೆ ಅನಿವಾರ್ಯವಾಗಿದೆ. ನೆಲೆ ಇಲ್ಲದವರು 1000, ಒಲವಿಲ್ಲದವರು 300 ಮತ್ತು ಬಲವಿಲ್ಲದವರು 500 ರೂಗಳು ಮಾತ್ರ ಮತದಾರರ ಜೇಬುಗಳನ್ನು ಸೇರುತ್ತಿವೆ.


ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...