Homeಕರ್ನಾಟಕಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ.

- Advertisement -
- Advertisement -

ಕಡಲೆಗಿಡ ಕೀಳಲು ಕೂಲಿ ಆಳುಗಳು ಸಿಗುತ್ತಿಲ್ಲ. ಯಾರನ್ನು ಕೇಳಿದರೂ ಬರುವುದಿಲ್ಲ ಎಂದು ಹೇಳುವವರೇ ಹೆಚ್ಚು. ಕೈಯಲ್ಲಿ ಕಾಸು ನಾಟ್ಯವಾಡಬೇಕಾದರೆ ಯಾರಿಗೆ ಬೇಕು ಸಣ್ಣ ಮೊತ್ತದ ಕೂಲಿ. ಬರದ ನಾಡೆಂದು ಹೆಸರಾದ ಶಿರಾ ಕ್ಷೇತ್ರದಲ್ಲಿ ಈಗ ಚುನಾವಣೆಯ ಸಮಯ ಆಗಿರುವುದರಿಂದ ಹಣ ಮಾಡುವವರ ಚಿತ್ತ ಎಲ್ಲ ಪಕ್ಷಗಳತ್ತ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಮಾಡದೆಯೇ ಕೈತುಂಬ ಹಣ ಸಿಗುವಾಗ ಕೂಲಿಯ ಹಣ ಬೇಕೇನು? ಬೆಳಗ್ಗೆಯಿಂದ ಸಂಜೆವರೆಗೆ ದುಡಿದರೂ ಸಿಗುವ ಕೂಲಿ ಅಷ್ಟಕ್ಕೇ ಇದೆ. ಓಡಾಡಿಕೊಂಡು ಜೈಕಾರ ಹಾಕುತ್ತ ಕೈತುಂಬ ಗರಿಗರಿ ನೋಟುಗಳನ್ನು ಎಣಿಸಬಹುದೆಂಬ ಅವಕಾಶವನ್ನು ಕಸುಬುದಾರರು ಕಲಿತುಕೊಂಡಿದ್ದಾರೆ.

ಶಿರಾ ಕ್ಷೇತ್ರದ ಮತದಾನಕ್ಕೆ 12 ದಿನ ಬಾಕಿ ಇದೆ. ಮೂರು ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ಮಗ್ನವಾಗಿವೆ. ಗೆಲ್ಲಬೇಕೆಂಬ ಹಟಕ್ಕೆ ಬಿದ್ದಂತಿರುವ ಅಭ್ಯರ್ಥಿಗಳು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎನ್ನುತ್ತಾರೆ ಮತದಾರ. ಒಮ್ಮೆ ಬಿಸಿಲು, ಮತ್ತೊಮ್ಮೆ ಮೋಡಗಳ ರಾಶಿ. ಇದರಿಂದ ನೆರಳು, ಇನ್ನೊಂದು ಕಡೆ ಸೋನೆ ಮಳೆ, ಮಳೆ ಬೀಳುವಂತಹ ವಾತಾವರಣದಲ್ಲಿ ನಾಯಕರಷ್ಟೇ ಅಲ್ಲದೇ ಬೆಂಬಲಿಗರೂ ಬೆವರು ಹರಿಸುತ್ತಿದ್ದಾರೆ. ಇದಕ್ಕಾಗಿ ಕೈತುಂಬ ಹಣವು, ಮೂರು ಹೊತ್ತು ಊಟವೂ, ಜೊತೆಗಿಷ್ಟು ಎಣ್ಣೆಯ ನೈವೇದ್ಯವೂ ಆಗುತ್ತದೆ. ಇಷ್ಟಾದ ಮೇಲೆ ಯಾರ ಉಸಾಬರಿಯೂ ಬೇಡ. ಹಣ-ಹೆಂಡದ ಅಮಲಿನಲ್ಲಿ ತೇಲುವಂತಹ ಸನ್ನಿವೇಶಗಳು ಸೃಷ್ಟಿಯಾಗಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಹೌದು, ಹಣದ ಹರಿವು ಜೋರಾಗಿದೆ. ಸಾಮರ್ಥ್ಯಕ್ಕೆ ತಕ್ಕ ಹಾಗೆ ಹಣ ಖರ್ಚು ಮಾಡುತ್ತಿದ್ದಾರೆ. ಒಂದು ಪಕ್ಷ ಮತದಾರರಿಗೆ 1000 ರೂ. ನೀಡಿದರೆ, ಮತ್ತೊಂದು ಪಕ್ಷ 500 ರೂ. ಕೊಡುತ್ತಿದೆ. ಮೂರನೇ ಪಕ್ಷ 300 ರೂ. ನೀಡುತ್ತಿದೆ. ದುಡ್ಡು ಹೆಚ್ಚು ಕೊಡುವವರ ಪರವಾಗಿ ಹೆಚ್ಚು ಮಂದಿ ಕಾರ್ಯಕರ್ತರು ಕಂಡು ಬರುತ್ತಾರೆ. ಹಣ ಪಡೆದುಕೊಂಡರೂ ಓಟು ಯಾರಿಗೆ ಎಂಬುದನ್ನು ನಿಶ್ಚಯ ಮಾಡಿಕೊಂಡಿದ್ದಾರೆ. ಆದರೆ ಹಣ ಮಾಡುವುದಷ್ಟೇ ಪ್ರಚಾರಕರ ಉದ್ದೇಶ ಎನ್ನುತ್ತವೆ ಹಣ ಹಂಚುತ್ತಿರುವುದನ್ನು ಪ್ರತ್ಯಕ್ಷವಾಗಿ ನೋಡಿದ ಮೂಲಗಳು.

ದೇವಾಲಯಗಳಿಗೆ ಹಣ ಹಂಚಿದ್ದು ಇತಿಹಾಸದ ಪುಟಗಳನ್ನು ಸೇರಿದೆ. ಈಗ ನೇರ ಮತದಾರರ ಕೈಗೆ ಹಣ ತಲುಪುತ್ತಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ಮತ್ತು ಚುನಾವಣೆಯ ಉಸ್ತುವಾರಿ ವಹಿಸಿಕೊಂಡವರು ಬೆಂಬಲಿಗರಿಗೆ ಮತ್ತು ಪ್ರಚಾರ ಕೈಗೊಳ್ಳುವ ಮತದಾರ ತಂಡಗಳಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಕುರಿತು ಕ್ಷೇತ್ರದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ದುಡ್ಡು ಮಾಡಲು ಹೋದವರು ಮೂರು ಪಕ್ಷಗಳಿಂದಲೂ ಹಣ ತೆಗೆದುಕೊಳ್ಳುತ್ತಾರೆ. ಆದರೆ ತಮ್ಮ ಮತ ಯಾರಿಗೆ ಎಂಬುದನ್ನು ಗೌಪ್ಯವಾಗಿಯೇ ಇಟ್ಟಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ಕಮಲ ಕೈಯಲ್ಲಿ ಹಿಡಿದವರೂ ಇದ್ದಾರೆ. ಕೈಯಲ್ಲಿ ಕಮಲವೂ ರಾರಾಜಿಸುತ್ತಿದೆ. ತೆನೆಯಲ್ಲಿ ಕಮಲ, ತೆನೆಯನ್ನು ಕೈಯಲ್ಲಿ ಹಿಡಿದವರೂ ಕಂಡುಬರುತ್ತಿದ್ದಾರೆ. ಇಲ್ಲಿ ಕೆಲಸ ಮಾಡುವವರು ಬೇರೆ ಪಕ್ಷದಲ್ಲಿಯೂ ಇರುತ್ತಾರೆ. ಹಾಗಾಗಿ ಯಾರು ಯಾವ ಪಕ್ಷಕ್ಕೆ ಮತ ಹಾಕುತ್ತಾರೆನ್ನುವುದು ನಿಗೂಢವಾಗಿಯೇ ಉಳಿದಿದೆ. ಆದರೆ ಮೂರು ಪಕ್ಷಗಳಿಂದಲೂ ಹಣ ಪಡೆಯುವವರು ಮಾತ್ರ ಗೆಲುವಾಗಿಯೇ ಓಡಾಡುತ್ತಾರೆ. ಇದರಿಂದ ಕಡಲೆಗಿಡಗಳನ್ನು ಕೀಳುವ ಕೆಲಸಕ್ಕೆ ಕೂಲಿ ಆಳುಗಳು ಸಿಗುತ್ತಿಲ್ಲ ಎನ್ನುತ್ತಾರೆ ರೈತರು.

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ. ನೆಲೆ ಇಲ್ಲದ, ಬಲವಿಲ್ಲದ, ಒಲವಿಲ್ಲದ ಕುರಿತು ಚರ್ಚೆ ನಡೆಯುತ್ತಿದ್ದರೂ ನೆಲೆ-ಬಲ-ಒಲವುಗಳಲ್ಲಿ ಒಂದನ್ನು ಆಯ್ಕೆ ಮಾಡುವುದು ಮತದಾರರಿಗೆ ಅನಿವಾರ್ಯವಾಗಿದೆ. ನೆಲೆ ಇಲ್ಲದವರು 1000, ಒಲವಿಲ್ಲದವರು 300 ಮತ್ತು ಬಲವಿಲ್ಲದವರು 500 ರೂಗಳು ಮಾತ್ರ ಮತದಾರರ ಜೇಬುಗಳನ್ನು ಸೇರುತ್ತಿವೆ.


ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...