Homeಕರ್ನಾಟಕಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ.

- Advertisement -
- Advertisement -

ಕಡಲೆಗಿಡ ಕೀಳಲು ಕೂಲಿ ಆಳುಗಳು ಸಿಗುತ್ತಿಲ್ಲ. ಯಾರನ್ನು ಕೇಳಿದರೂ ಬರುವುದಿಲ್ಲ ಎಂದು ಹೇಳುವವರೇ ಹೆಚ್ಚು. ಕೈಯಲ್ಲಿ ಕಾಸು ನಾಟ್ಯವಾಡಬೇಕಾದರೆ ಯಾರಿಗೆ ಬೇಕು ಸಣ್ಣ ಮೊತ್ತದ ಕೂಲಿ. ಬರದ ನಾಡೆಂದು ಹೆಸರಾದ ಶಿರಾ ಕ್ಷೇತ್ರದಲ್ಲಿ ಈಗ ಚುನಾವಣೆಯ ಸಮಯ ಆಗಿರುವುದರಿಂದ ಹಣ ಮಾಡುವವರ ಚಿತ್ತ ಎಲ್ಲ ಪಕ್ಷಗಳತ್ತ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಮಾಡದೆಯೇ ಕೈತುಂಬ ಹಣ ಸಿಗುವಾಗ ಕೂಲಿಯ ಹಣ ಬೇಕೇನು? ಬೆಳಗ್ಗೆಯಿಂದ ಸಂಜೆವರೆಗೆ ದುಡಿದರೂ ಸಿಗುವ ಕೂಲಿ ಅಷ್ಟಕ್ಕೇ ಇದೆ. ಓಡಾಡಿಕೊಂಡು ಜೈಕಾರ ಹಾಕುತ್ತ ಕೈತುಂಬ ಗರಿಗರಿ ನೋಟುಗಳನ್ನು ಎಣಿಸಬಹುದೆಂಬ ಅವಕಾಶವನ್ನು ಕಸುಬುದಾರರು ಕಲಿತುಕೊಂಡಿದ್ದಾರೆ.

ಶಿರಾ ಕ್ಷೇತ್ರದ ಮತದಾನಕ್ಕೆ 12 ದಿನ ಬಾಕಿ ಇದೆ. ಮೂರು ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ಮಗ್ನವಾಗಿವೆ. ಗೆಲ್ಲಬೇಕೆಂಬ ಹಟಕ್ಕೆ ಬಿದ್ದಂತಿರುವ ಅಭ್ಯರ್ಥಿಗಳು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎನ್ನುತ್ತಾರೆ ಮತದಾರ. ಒಮ್ಮೆ ಬಿಸಿಲು, ಮತ್ತೊಮ್ಮೆ ಮೋಡಗಳ ರಾಶಿ. ಇದರಿಂದ ನೆರಳು, ಇನ್ನೊಂದು ಕಡೆ ಸೋನೆ ಮಳೆ, ಮಳೆ ಬೀಳುವಂತಹ ವಾತಾವರಣದಲ್ಲಿ ನಾಯಕರಷ್ಟೇ ಅಲ್ಲದೇ ಬೆಂಬಲಿಗರೂ ಬೆವರು ಹರಿಸುತ್ತಿದ್ದಾರೆ. ಇದಕ್ಕಾಗಿ ಕೈತುಂಬ ಹಣವು, ಮೂರು ಹೊತ್ತು ಊಟವೂ, ಜೊತೆಗಿಷ್ಟು ಎಣ್ಣೆಯ ನೈವೇದ್ಯವೂ ಆಗುತ್ತದೆ. ಇಷ್ಟಾದ ಮೇಲೆ ಯಾರ ಉಸಾಬರಿಯೂ ಬೇಡ. ಹಣ-ಹೆಂಡದ ಅಮಲಿನಲ್ಲಿ ತೇಲುವಂತಹ ಸನ್ನಿವೇಶಗಳು ಸೃಷ್ಟಿಯಾಗಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಹೌದು, ಹಣದ ಹರಿವು ಜೋರಾಗಿದೆ. ಸಾಮರ್ಥ್ಯಕ್ಕೆ ತಕ್ಕ ಹಾಗೆ ಹಣ ಖರ್ಚು ಮಾಡುತ್ತಿದ್ದಾರೆ. ಒಂದು ಪಕ್ಷ ಮತದಾರರಿಗೆ 1000 ರೂ. ನೀಡಿದರೆ, ಮತ್ತೊಂದು ಪಕ್ಷ 500 ರೂ. ಕೊಡುತ್ತಿದೆ. ಮೂರನೇ ಪಕ್ಷ 300 ರೂ. ನೀಡುತ್ತಿದೆ. ದುಡ್ಡು ಹೆಚ್ಚು ಕೊಡುವವರ ಪರವಾಗಿ ಹೆಚ್ಚು ಮಂದಿ ಕಾರ್ಯಕರ್ತರು ಕಂಡು ಬರುತ್ತಾರೆ. ಹಣ ಪಡೆದುಕೊಂಡರೂ ಓಟು ಯಾರಿಗೆ ಎಂಬುದನ್ನು ನಿಶ್ಚಯ ಮಾಡಿಕೊಂಡಿದ್ದಾರೆ. ಆದರೆ ಹಣ ಮಾಡುವುದಷ್ಟೇ ಪ್ರಚಾರಕರ ಉದ್ದೇಶ ಎನ್ನುತ್ತವೆ ಹಣ ಹಂಚುತ್ತಿರುವುದನ್ನು ಪ್ರತ್ಯಕ್ಷವಾಗಿ ನೋಡಿದ ಮೂಲಗಳು.

ದೇವಾಲಯಗಳಿಗೆ ಹಣ ಹಂಚಿದ್ದು ಇತಿಹಾಸದ ಪುಟಗಳನ್ನು ಸೇರಿದೆ. ಈಗ ನೇರ ಮತದಾರರ ಕೈಗೆ ಹಣ ತಲುಪುತ್ತಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ಮತ್ತು ಚುನಾವಣೆಯ ಉಸ್ತುವಾರಿ ವಹಿಸಿಕೊಂಡವರು ಬೆಂಬಲಿಗರಿಗೆ ಮತ್ತು ಪ್ರಚಾರ ಕೈಗೊಳ್ಳುವ ಮತದಾರ ತಂಡಗಳಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಕುರಿತು ಕ್ಷೇತ್ರದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ದುಡ್ಡು ಮಾಡಲು ಹೋದವರು ಮೂರು ಪಕ್ಷಗಳಿಂದಲೂ ಹಣ ತೆಗೆದುಕೊಳ್ಳುತ್ತಾರೆ. ಆದರೆ ತಮ್ಮ ಮತ ಯಾರಿಗೆ ಎಂಬುದನ್ನು ಗೌಪ್ಯವಾಗಿಯೇ ಇಟ್ಟಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ಕಮಲ ಕೈಯಲ್ಲಿ ಹಿಡಿದವರೂ ಇದ್ದಾರೆ. ಕೈಯಲ್ಲಿ ಕಮಲವೂ ರಾರಾಜಿಸುತ್ತಿದೆ. ತೆನೆಯಲ್ಲಿ ಕಮಲ, ತೆನೆಯನ್ನು ಕೈಯಲ್ಲಿ ಹಿಡಿದವರೂ ಕಂಡುಬರುತ್ತಿದ್ದಾರೆ. ಇಲ್ಲಿ ಕೆಲಸ ಮಾಡುವವರು ಬೇರೆ ಪಕ್ಷದಲ್ಲಿಯೂ ಇರುತ್ತಾರೆ. ಹಾಗಾಗಿ ಯಾರು ಯಾವ ಪಕ್ಷಕ್ಕೆ ಮತ ಹಾಕುತ್ತಾರೆನ್ನುವುದು ನಿಗೂಢವಾಗಿಯೇ ಉಳಿದಿದೆ. ಆದರೆ ಮೂರು ಪಕ್ಷಗಳಿಂದಲೂ ಹಣ ಪಡೆಯುವವರು ಮಾತ್ರ ಗೆಲುವಾಗಿಯೇ ಓಡಾಡುತ್ತಾರೆ. ಇದರಿಂದ ಕಡಲೆಗಿಡಗಳನ್ನು ಕೀಳುವ ಕೆಲಸಕ್ಕೆ ಕೂಲಿ ಆಳುಗಳು ಸಿಗುತ್ತಿಲ್ಲ ಎನ್ನುತ್ತಾರೆ ರೈತರು.

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ. ನೆಲೆ ಇಲ್ಲದ, ಬಲವಿಲ್ಲದ, ಒಲವಿಲ್ಲದ ಕುರಿತು ಚರ್ಚೆ ನಡೆಯುತ್ತಿದ್ದರೂ ನೆಲೆ-ಬಲ-ಒಲವುಗಳಲ್ಲಿ ಒಂದನ್ನು ಆಯ್ಕೆ ಮಾಡುವುದು ಮತದಾರರಿಗೆ ಅನಿವಾರ್ಯವಾಗಿದೆ. ನೆಲೆ ಇಲ್ಲದವರು 1000, ಒಲವಿಲ್ಲದವರು 300 ಮತ್ತು ಬಲವಿಲ್ಲದವರು 500 ರೂಗಳು ಮಾತ್ರ ಮತದಾರರ ಜೇಬುಗಳನ್ನು ಸೇರುತ್ತಿವೆ.


ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...