Homeಕರ್ನಾಟಕಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ.

- Advertisement -
- Advertisement -

ಕಡಲೆಗಿಡ ಕೀಳಲು ಕೂಲಿ ಆಳುಗಳು ಸಿಗುತ್ತಿಲ್ಲ. ಯಾರನ್ನು ಕೇಳಿದರೂ ಬರುವುದಿಲ್ಲ ಎಂದು ಹೇಳುವವರೇ ಹೆಚ್ಚು. ಕೈಯಲ್ಲಿ ಕಾಸು ನಾಟ್ಯವಾಡಬೇಕಾದರೆ ಯಾರಿಗೆ ಬೇಕು ಸಣ್ಣ ಮೊತ್ತದ ಕೂಲಿ. ಬರದ ನಾಡೆಂದು ಹೆಸರಾದ ಶಿರಾ ಕ್ಷೇತ್ರದಲ್ಲಿ ಈಗ ಚುನಾವಣೆಯ ಸಮಯ ಆಗಿರುವುದರಿಂದ ಹಣ ಮಾಡುವವರ ಚಿತ್ತ ಎಲ್ಲ ಪಕ್ಷಗಳತ್ತ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಮಾಡದೆಯೇ ಕೈತುಂಬ ಹಣ ಸಿಗುವಾಗ ಕೂಲಿಯ ಹಣ ಬೇಕೇನು? ಬೆಳಗ್ಗೆಯಿಂದ ಸಂಜೆವರೆಗೆ ದುಡಿದರೂ ಸಿಗುವ ಕೂಲಿ ಅಷ್ಟಕ್ಕೇ ಇದೆ. ಓಡಾಡಿಕೊಂಡು ಜೈಕಾರ ಹಾಕುತ್ತ ಕೈತುಂಬ ಗರಿಗರಿ ನೋಟುಗಳನ್ನು ಎಣಿಸಬಹುದೆಂಬ ಅವಕಾಶವನ್ನು ಕಸುಬುದಾರರು ಕಲಿತುಕೊಂಡಿದ್ದಾರೆ.

ಶಿರಾ ಕ್ಷೇತ್ರದ ಮತದಾನಕ್ಕೆ 12 ದಿನ ಬಾಕಿ ಇದೆ. ಮೂರು ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ಮಗ್ನವಾಗಿವೆ. ಗೆಲ್ಲಬೇಕೆಂಬ ಹಟಕ್ಕೆ ಬಿದ್ದಂತಿರುವ ಅಭ್ಯರ್ಥಿಗಳು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎನ್ನುತ್ತಾರೆ ಮತದಾರ. ಒಮ್ಮೆ ಬಿಸಿಲು, ಮತ್ತೊಮ್ಮೆ ಮೋಡಗಳ ರಾಶಿ. ಇದರಿಂದ ನೆರಳು, ಇನ್ನೊಂದು ಕಡೆ ಸೋನೆ ಮಳೆ, ಮಳೆ ಬೀಳುವಂತಹ ವಾತಾವರಣದಲ್ಲಿ ನಾಯಕರಷ್ಟೇ ಅಲ್ಲದೇ ಬೆಂಬಲಿಗರೂ ಬೆವರು ಹರಿಸುತ್ತಿದ್ದಾರೆ. ಇದಕ್ಕಾಗಿ ಕೈತುಂಬ ಹಣವು, ಮೂರು ಹೊತ್ತು ಊಟವೂ, ಜೊತೆಗಿಷ್ಟು ಎಣ್ಣೆಯ ನೈವೇದ್ಯವೂ ಆಗುತ್ತದೆ. ಇಷ್ಟಾದ ಮೇಲೆ ಯಾರ ಉಸಾಬರಿಯೂ ಬೇಡ. ಹಣ-ಹೆಂಡದ ಅಮಲಿನಲ್ಲಿ ತೇಲುವಂತಹ ಸನ್ನಿವೇಶಗಳು ಸೃಷ್ಟಿಯಾಗಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಹೌದು, ಹಣದ ಹರಿವು ಜೋರಾಗಿದೆ. ಸಾಮರ್ಥ್ಯಕ್ಕೆ ತಕ್ಕ ಹಾಗೆ ಹಣ ಖರ್ಚು ಮಾಡುತ್ತಿದ್ದಾರೆ. ಒಂದು ಪಕ್ಷ ಮತದಾರರಿಗೆ 1000 ರೂ. ನೀಡಿದರೆ, ಮತ್ತೊಂದು ಪಕ್ಷ 500 ರೂ. ಕೊಡುತ್ತಿದೆ. ಮೂರನೇ ಪಕ್ಷ 300 ರೂ. ನೀಡುತ್ತಿದೆ. ದುಡ್ಡು ಹೆಚ್ಚು ಕೊಡುವವರ ಪರವಾಗಿ ಹೆಚ್ಚು ಮಂದಿ ಕಾರ್ಯಕರ್ತರು ಕಂಡು ಬರುತ್ತಾರೆ. ಹಣ ಪಡೆದುಕೊಂಡರೂ ಓಟು ಯಾರಿಗೆ ಎಂಬುದನ್ನು ನಿಶ್ಚಯ ಮಾಡಿಕೊಂಡಿದ್ದಾರೆ. ಆದರೆ ಹಣ ಮಾಡುವುದಷ್ಟೇ ಪ್ರಚಾರಕರ ಉದ್ದೇಶ ಎನ್ನುತ್ತವೆ ಹಣ ಹಂಚುತ್ತಿರುವುದನ್ನು ಪ್ರತ್ಯಕ್ಷವಾಗಿ ನೋಡಿದ ಮೂಲಗಳು.

ದೇವಾಲಯಗಳಿಗೆ ಹಣ ಹಂಚಿದ್ದು ಇತಿಹಾಸದ ಪುಟಗಳನ್ನು ಸೇರಿದೆ. ಈಗ ನೇರ ಮತದಾರರ ಕೈಗೆ ಹಣ ತಲುಪುತ್ತಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ಮತ್ತು ಚುನಾವಣೆಯ ಉಸ್ತುವಾರಿ ವಹಿಸಿಕೊಂಡವರು ಬೆಂಬಲಿಗರಿಗೆ ಮತ್ತು ಪ್ರಚಾರ ಕೈಗೊಳ್ಳುವ ಮತದಾರ ತಂಡಗಳಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಕುರಿತು ಕ್ಷೇತ್ರದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ದುಡ್ಡು ಮಾಡಲು ಹೋದವರು ಮೂರು ಪಕ್ಷಗಳಿಂದಲೂ ಹಣ ತೆಗೆದುಕೊಳ್ಳುತ್ತಾರೆ. ಆದರೆ ತಮ್ಮ ಮತ ಯಾರಿಗೆ ಎಂಬುದನ್ನು ಗೌಪ್ಯವಾಗಿಯೇ ಇಟ್ಟಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ಕಮಲ ಕೈಯಲ್ಲಿ ಹಿಡಿದವರೂ ಇದ್ದಾರೆ. ಕೈಯಲ್ಲಿ ಕಮಲವೂ ರಾರಾಜಿಸುತ್ತಿದೆ. ತೆನೆಯಲ್ಲಿ ಕಮಲ, ತೆನೆಯನ್ನು ಕೈಯಲ್ಲಿ ಹಿಡಿದವರೂ ಕಂಡುಬರುತ್ತಿದ್ದಾರೆ. ಇಲ್ಲಿ ಕೆಲಸ ಮಾಡುವವರು ಬೇರೆ ಪಕ್ಷದಲ್ಲಿಯೂ ಇರುತ್ತಾರೆ. ಹಾಗಾಗಿ ಯಾರು ಯಾವ ಪಕ್ಷಕ್ಕೆ ಮತ ಹಾಕುತ್ತಾರೆನ್ನುವುದು ನಿಗೂಢವಾಗಿಯೇ ಉಳಿದಿದೆ. ಆದರೆ ಮೂರು ಪಕ್ಷಗಳಿಂದಲೂ ಹಣ ಪಡೆಯುವವರು ಮಾತ್ರ ಗೆಲುವಾಗಿಯೇ ಓಡಾಡುತ್ತಾರೆ. ಇದರಿಂದ ಕಡಲೆಗಿಡಗಳನ್ನು ಕೀಳುವ ಕೆಲಸಕ್ಕೆ ಕೂಲಿ ಆಳುಗಳು ಸಿಗುತ್ತಿಲ್ಲ ಎನ್ನುತ್ತಾರೆ ರೈತರು.

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ. ನೆಲೆ ಇಲ್ಲದ, ಬಲವಿಲ್ಲದ, ಒಲವಿಲ್ಲದ ಕುರಿತು ಚರ್ಚೆ ನಡೆಯುತ್ತಿದ್ದರೂ ನೆಲೆ-ಬಲ-ಒಲವುಗಳಲ್ಲಿ ಒಂದನ್ನು ಆಯ್ಕೆ ಮಾಡುವುದು ಮತದಾರರಿಗೆ ಅನಿವಾರ್ಯವಾಗಿದೆ. ನೆಲೆ ಇಲ್ಲದವರು 1000, ಒಲವಿಲ್ಲದವರು 300 ಮತ್ತು ಬಲವಿಲ್ಲದವರು 500 ರೂಗಳು ಮಾತ್ರ ಮತದಾರರ ಜೇಬುಗಳನ್ನು ಸೇರುತ್ತಿವೆ.


ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...