Homeಕರ್ನಾಟಕಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ.

- Advertisement -
- Advertisement -

ಕಡಲೆಗಿಡ ಕೀಳಲು ಕೂಲಿ ಆಳುಗಳು ಸಿಗುತ್ತಿಲ್ಲ. ಯಾರನ್ನು ಕೇಳಿದರೂ ಬರುವುದಿಲ್ಲ ಎಂದು ಹೇಳುವವರೇ ಹೆಚ್ಚು. ಕೈಯಲ್ಲಿ ಕಾಸು ನಾಟ್ಯವಾಡಬೇಕಾದರೆ ಯಾರಿಗೆ ಬೇಕು ಸಣ್ಣ ಮೊತ್ತದ ಕೂಲಿ. ಬರದ ನಾಡೆಂದು ಹೆಸರಾದ ಶಿರಾ ಕ್ಷೇತ್ರದಲ್ಲಿ ಈಗ ಚುನಾವಣೆಯ ಸಮಯ ಆಗಿರುವುದರಿಂದ ಹಣ ಮಾಡುವವರ ಚಿತ್ತ ಎಲ್ಲ ಪಕ್ಷಗಳತ್ತ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಮಾಡದೆಯೇ ಕೈತುಂಬ ಹಣ ಸಿಗುವಾಗ ಕೂಲಿಯ ಹಣ ಬೇಕೇನು? ಬೆಳಗ್ಗೆಯಿಂದ ಸಂಜೆವರೆಗೆ ದುಡಿದರೂ ಸಿಗುವ ಕೂಲಿ ಅಷ್ಟಕ್ಕೇ ಇದೆ. ಓಡಾಡಿಕೊಂಡು ಜೈಕಾರ ಹಾಕುತ್ತ ಕೈತುಂಬ ಗರಿಗರಿ ನೋಟುಗಳನ್ನು ಎಣಿಸಬಹುದೆಂಬ ಅವಕಾಶವನ್ನು ಕಸುಬುದಾರರು ಕಲಿತುಕೊಂಡಿದ್ದಾರೆ.

ಶಿರಾ ಕ್ಷೇತ್ರದ ಮತದಾನಕ್ಕೆ 12 ದಿನ ಬಾಕಿ ಇದೆ. ಮೂರು ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ಮಗ್ನವಾಗಿವೆ. ಗೆಲ್ಲಬೇಕೆಂಬ ಹಟಕ್ಕೆ ಬಿದ್ದಂತಿರುವ ಅಭ್ಯರ್ಥಿಗಳು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎನ್ನುತ್ತಾರೆ ಮತದಾರ. ಒಮ್ಮೆ ಬಿಸಿಲು, ಮತ್ತೊಮ್ಮೆ ಮೋಡಗಳ ರಾಶಿ. ಇದರಿಂದ ನೆರಳು, ಇನ್ನೊಂದು ಕಡೆ ಸೋನೆ ಮಳೆ, ಮಳೆ ಬೀಳುವಂತಹ ವಾತಾವರಣದಲ್ಲಿ ನಾಯಕರಷ್ಟೇ ಅಲ್ಲದೇ ಬೆಂಬಲಿಗರೂ ಬೆವರು ಹರಿಸುತ್ತಿದ್ದಾರೆ. ಇದಕ್ಕಾಗಿ ಕೈತುಂಬ ಹಣವು, ಮೂರು ಹೊತ್ತು ಊಟವೂ, ಜೊತೆಗಿಷ್ಟು ಎಣ್ಣೆಯ ನೈವೇದ್ಯವೂ ಆಗುತ್ತದೆ. ಇಷ್ಟಾದ ಮೇಲೆ ಯಾರ ಉಸಾಬರಿಯೂ ಬೇಡ. ಹಣ-ಹೆಂಡದ ಅಮಲಿನಲ್ಲಿ ತೇಲುವಂತಹ ಸನ್ನಿವೇಶಗಳು ಸೃಷ್ಟಿಯಾಗಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಹೌದು, ಹಣದ ಹರಿವು ಜೋರಾಗಿದೆ. ಸಾಮರ್ಥ್ಯಕ್ಕೆ ತಕ್ಕ ಹಾಗೆ ಹಣ ಖರ್ಚು ಮಾಡುತ್ತಿದ್ದಾರೆ. ಒಂದು ಪಕ್ಷ ಮತದಾರರಿಗೆ 1000 ರೂ. ನೀಡಿದರೆ, ಮತ್ತೊಂದು ಪಕ್ಷ 500 ರೂ. ಕೊಡುತ್ತಿದೆ. ಮೂರನೇ ಪಕ್ಷ 300 ರೂ. ನೀಡುತ್ತಿದೆ. ದುಡ್ಡು ಹೆಚ್ಚು ಕೊಡುವವರ ಪರವಾಗಿ ಹೆಚ್ಚು ಮಂದಿ ಕಾರ್ಯಕರ್ತರು ಕಂಡು ಬರುತ್ತಾರೆ. ಹಣ ಪಡೆದುಕೊಂಡರೂ ಓಟು ಯಾರಿಗೆ ಎಂಬುದನ್ನು ನಿಶ್ಚಯ ಮಾಡಿಕೊಂಡಿದ್ದಾರೆ. ಆದರೆ ಹಣ ಮಾಡುವುದಷ್ಟೇ ಪ್ರಚಾರಕರ ಉದ್ದೇಶ ಎನ್ನುತ್ತವೆ ಹಣ ಹಂಚುತ್ತಿರುವುದನ್ನು ಪ್ರತ್ಯಕ್ಷವಾಗಿ ನೋಡಿದ ಮೂಲಗಳು.

ದೇವಾಲಯಗಳಿಗೆ ಹಣ ಹಂಚಿದ್ದು ಇತಿಹಾಸದ ಪುಟಗಳನ್ನು ಸೇರಿದೆ. ಈಗ ನೇರ ಮತದಾರರ ಕೈಗೆ ಹಣ ತಲುಪುತ್ತಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ಮತ್ತು ಚುನಾವಣೆಯ ಉಸ್ತುವಾರಿ ವಹಿಸಿಕೊಂಡವರು ಬೆಂಬಲಿಗರಿಗೆ ಮತ್ತು ಪ್ರಚಾರ ಕೈಗೊಳ್ಳುವ ಮತದಾರ ತಂಡಗಳಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಕುರಿತು ಕ್ಷೇತ್ರದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ದುಡ್ಡು ಮಾಡಲು ಹೋದವರು ಮೂರು ಪಕ್ಷಗಳಿಂದಲೂ ಹಣ ತೆಗೆದುಕೊಳ್ಳುತ್ತಾರೆ. ಆದರೆ ತಮ್ಮ ಮತ ಯಾರಿಗೆ ಎಂಬುದನ್ನು ಗೌಪ್ಯವಾಗಿಯೇ ಇಟ್ಟಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ಕಮಲ ಕೈಯಲ್ಲಿ ಹಿಡಿದವರೂ ಇದ್ದಾರೆ. ಕೈಯಲ್ಲಿ ಕಮಲವೂ ರಾರಾಜಿಸುತ್ತಿದೆ. ತೆನೆಯಲ್ಲಿ ಕಮಲ, ತೆನೆಯನ್ನು ಕೈಯಲ್ಲಿ ಹಿಡಿದವರೂ ಕಂಡುಬರುತ್ತಿದ್ದಾರೆ. ಇಲ್ಲಿ ಕೆಲಸ ಮಾಡುವವರು ಬೇರೆ ಪಕ್ಷದಲ್ಲಿಯೂ ಇರುತ್ತಾರೆ. ಹಾಗಾಗಿ ಯಾರು ಯಾವ ಪಕ್ಷಕ್ಕೆ ಮತ ಹಾಕುತ್ತಾರೆನ್ನುವುದು ನಿಗೂಢವಾಗಿಯೇ ಉಳಿದಿದೆ. ಆದರೆ ಮೂರು ಪಕ್ಷಗಳಿಂದಲೂ ಹಣ ಪಡೆಯುವವರು ಮಾತ್ರ ಗೆಲುವಾಗಿಯೇ ಓಡಾಡುತ್ತಾರೆ. ಇದರಿಂದ ಕಡಲೆಗಿಡಗಳನ್ನು ಕೀಳುವ ಕೆಲಸಕ್ಕೆ ಕೂಲಿ ಆಳುಗಳು ಸಿಗುತ್ತಿಲ್ಲ ಎನ್ನುತ್ತಾರೆ ರೈತರು.

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ. ನೆಲೆ ಇಲ್ಲದ, ಬಲವಿಲ್ಲದ, ಒಲವಿಲ್ಲದ ಕುರಿತು ಚರ್ಚೆ ನಡೆಯುತ್ತಿದ್ದರೂ ನೆಲೆ-ಬಲ-ಒಲವುಗಳಲ್ಲಿ ಒಂದನ್ನು ಆಯ್ಕೆ ಮಾಡುವುದು ಮತದಾರರಿಗೆ ಅನಿವಾರ್ಯವಾಗಿದೆ. ನೆಲೆ ಇಲ್ಲದವರು 1000, ಒಲವಿಲ್ಲದವರು 300 ಮತ್ತು ಬಲವಿಲ್ಲದವರು 500 ರೂಗಳು ಮಾತ್ರ ಮತದಾರರ ಜೇಬುಗಳನ್ನು ಸೇರುತ್ತಿವೆ.


ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...