Homeಕರ್ನಾಟಕಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ.

- Advertisement -
- Advertisement -

ಕಡಲೆಗಿಡ ಕೀಳಲು ಕೂಲಿ ಆಳುಗಳು ಸಿಗುತ್ತಿಲ್ಲ. ಯಾರನ್ನು ಕೇಳಿದರೂ ಬರುವುದಿಲ್ಲ ಎಂದು ಹೇಳುವವರೇ ಹೆಚ್ಚು. ಕೈಯಲ್ಲಿ ಕಾಸು ನಾಟ್ಯವಾಡಬೇಕಾದರೆ ಯಾರಿಗೆ ಬೇಕು ಸಣ್ಣ ಮೊತ್ತದ ಕೂಲಿ. ಬರದ ನಾಡೆಂದು ಹೆಸರಾದ ಶಿರಾ ಕ್ಷೇತ್ರದಲ್ಲಿ ಈಗ ಚುನಾವಣೆಯ ಸಮಯ ಆಗಿರುವುದರಿಂದ ಹಣ ಮಾಡುವವರ ಚಿತ್ತ ಎಲ್ಲ ಪಕ್ಷಗಳತ್ತ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಮಾಡದೆಯೇ ಕೈತುಂಬ ಹಣ ಸಿಗುವಾಗ ಕೂಲಿಯ ಹಣ ಬೇಕೇನು? ಬೆಳಗ್ಗೆಯಿಂದ ಸಂಜೆವರೆಗೆ ದುಡಿದರೂ ಸಿಗುವ ಕೂಲಿ ಅಷ್ಟಕ್ಕೇ ಇದೆ. ಓಡಾಡಿಕೊಂಡು ಜೈಕಾರ ಹಾಕುತ್ತ ಕೈತುಂಬ ಗರಿಗರಿ ನೋಟುಗಳನ್ನು ಎಣಿಸಬಹುದೆಂಬ ಅವಕಾಶವನ್ನು ಕಸುಬುದಾರರು ಕಲಿತುಕೊಂಡಿದ್ದಾರೆ.

ಶಿರಾ ಕ್ಷೇತ್ರದ ಮತದಾನಕ್ಕೆ 12 ದಿನ ಬಾಕಿ ಇದೆ. ಮೂರು ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ಮಗ್ನವಾಗಿವೆ. ಗೆಲ್ಲಬೇಕೆಂಬ ಹಟಕ್ಕೆ ಬಿದ್ದಂತಿರುವ ಅಭ್ಯರ್ಥಿಗಳು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎನ್ನುತ್ತಾರೆ ಮತದಾರ. ಒಮ್ಮೆ ಬಿಸಿಲು, ಮತ್ತೊಮ್ಮೆ ಮೋಡಗಳ ರಾಶಿ. ಇದರಿಂದ ನೆರಳು, ಇನ್ನೊಂದು ಕಡೆ ಸೋನೆ ಮಳೆ, ಮಳೆ ಬೀಳುವಂತಹ ವಾತಾವರಣದಲ್ಲಿ ನಾಯಕರಷ್ಟೇ ಅಲ್ಲದೇ ಬೆಂಬಲಿಗರೂ ಬೆವರು ಹರಿಸುತ್ತಿದ್ದಾರೆ. ಇದಕ್ಕಾಗಿ ಕೈತುಂಬ ಹಣವು, ಮೂರು ಹೊತ್ತು ಊಟವೂ, ಜೊತೆಗಿಷ್ಟು ಎಣ್ಣೆಯ ನೈವೇದ್ಯವೂ ಆಗುತ್ತದೆ. ಇಷ್ಟಾದ ಮೇಲೆ ಯಾರ ಉಸಾಬರಿಯೂ ಬೇಡ. ಹಣ-ಹೆಂಡದ ಅಮಲಿನಲ್ಲಿ ತೇಲುವಂತಹ ಸನ್ನಿವೇಶಗಳು ಸೃಷ್ಟಿಯಾಗಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಹೌದು, ಹಣದ ಹರಿವು ಜೋರಾಗಿದೆ. ಸಾಮರ್ಥ್ಯಕ್ಕೆ ತಕ್ಕ ಹಾಗೆ ಹಣ ಖರ್ಚು ಮಾಡುತ್ತಿದ್ದಾರೆ. ಒಂದು ಪಕ್ಷ ಮತದಾರರಿಗೆ 1000 ರೂ. ನೀಡಿದರೆ, ಮತ್ತೊಂದು ಪಕ್ಷ 500 ರೂ. ಕೊಡುತ್ತಿದೆ. ಮೂರನೇ ಪಕ್ಷ 300 ರೂ. ನೀಡುತ್ತಿದೆ. ದುಡ್ಡು ಹೆಚ್ಚು ಕೊಡುವವರ ಪರವಾಗಿ ಹೆಚ್ಚು ಮಂದಿ ಕಾರ್ಯಕರ್ತರು ಕಂಡು ಬರುತ್ತಾರೆ. ಹಣ ಪಡೆದುಕೊಂಡರೂ ಓಟು ಯಾರಿಗೆ ಎಂಬುದನ್ನು ನಿಶ್ಚಯ ಮಾಡಿಕೊಂಡಿದ್ದಾರೆ. ಆದರೆ ಹಣ ಮಾಡುವುದಷ್ಟೇ ಪ್ರಚಾರಕರ ಉದ್ದೇಶ ಎನ್ನುತ್ತವೆ ಹಣ ಹಂಚುತ್ತಿರುವುದನ್ನು ಪ್ರತ್ಯಕ್ಷವಾಗಿ ನೋಡಿದ ಮೂಲಗಳು.

ದೇವಾಲಯಗಳಿಗೆ ಹಣ ಹಂಚಿದ್ದು ಇತಿಹಾಸದ ಪುಟಗಳನ್ನು ಸೇರಿದೆ. ಈಗ ನೇರ ಮತದಾರರ ಕೈಗೆ ಹಣ ತಲುಪುತ್ತಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ಮತ್ತು ಚುನಾವಣೆಯ ಉಸ್ತುವಾರಿ ವಹಿಸಿಕೊಂಡವರು ಬೆಂಬಲಿಗರಿಗೆ ಮತ್ತು ಪ್ರಚಾರ ಕೈಗೊಳ್ಳುವ ಮತದಾರ ತಂಡಗಳಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಕುರಿತು ಕ್ಷೇತ್ರದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ದುಡ್ಡು ಮಾಡಲು ಹೋದವರು ಮೂರು ಪಕ್ಷಗಳಿಂದಲೂ ಹಣ ತೆಗೆದುಕೊಳ್ಳುತ್ತಾರೆ. ಆದರೆ ತಮ್ಮ ಮತ ಯಾರಿಗೆ ಎಂಬುದನ್ನು ಗೌಪ್ಯವಾಗಿಯೇ ಇಟ್ಟಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ಕಮಲ ಕೈಯಲ್ಲಿ ಹಿಡಿದವರೂ ಇದ್ದಾರೆ. ಕೈಯಲ್ಲಿ ಕಮಲವೂ ರಾರಾಜಿಸುತ್ತಿದೆ. ತೆನೆಯಲ್ಲಿ ಕಮಲ, ತೆನೆಯನ್ನು ಕೈಯಲ್ಲಿ ಹಿಡಿದವರೂ ಕಂಡುಬರುತ್ತಿದ್ದಾರೆ. ಇಲ್ಲಿ ಕೆಲಸ ಮಾಡುವವರು ಬೇರೆ ಪಕ್ಷದಲ್ಲಿಯೂ ಇರುತ್ತಾರೆ. ಹಾಗಾಗಿ ಯಾರು ಯಾವ ಪಕ್ಷಕ್ಕೆ ಮತ ಹಾಕುತ್ತಾರೆನ್ನುವುದು ನಿಗೂಢವಾಗಿಯೇ ಉಳಿದಿದೆ. ಆದರೆ ಮೂರು ಪಕ್ಷಗಳಿಂದಲೂ ಹಣ ಪಡೆಯುವವರು ಮಾತ್ರ ಗೆಲುವಾಗಿಯೇ ಓಡಾಡುತ್ತಾರೆ. ಇದರಿಂದ ಕಡಲೆಗಿಡಗಳನ್ನು ಕೀಳುವ ಕೆಲಸಕ್ಕೆ ಕೂಲಿ ಆಳುಗಳು ಸಿಗುತ್ತಿಲ್ಲ ಎನ್ನುತ್ತಾರೆ ರೈತರು.

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ. ನೆಲೆ ಇಲ್ಲದ, ಬಲವಿಲ್ಲದ, ಒಲವಿಲ್ಲದ ಕುರಿತು ಚರ್ಚೆ ನಡೆಯುತ್ತಿದ್ದರೂ ನೆಲೆ-ಬಲ-ಒಲವುಗಳಲ್ಲಿ ಒಂದನ್ನು ಆಯ್ಕೆ ಮಾಡುವುದು ಮತದಾರರಿಗೆ ಅನಿವಾರ್ಯವಾಗಿದೆ. ನೆಲೆ ಇಲ್ಲದವರು 1000, ಒಲವಿಲ್ಲದವರು 300 ಮತ್ತು ಬಲವಿಲ್ಲದವರು 500 ರೂಗಳು ಮಾತ್ರ ಮತದಾರರ ಜೇಬುಗಳನ್ನು ಸೇರುತ್ತಿವೆ.


ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...