Homeಕರ್ನಾಟಕಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ.

- Advertisement -
- Advertisement -

ಕಡಲೆಗಿಡ ಕೀಳಲು ಕೂಲಿ ಆಳುಗಳು ಸಿಗುತ್ತಿಲ್ಲ. ಯಾರನ್ನು ಕೇಳಿದರೂ ಬರುವುದಿಲ್ಲ ಎಂದು ಹೇಳುವವರೇ ಹೆಚ್ಚು. ಕೈಯಲ್ಲಿ ಕಾಸು ನಾಟ್ಯವಾಡಬೇಕಾದರೆ ಯಾರಿಗೆ ಬೇಕು ಸಣ್ಣ ಮೊತ್ತದ ಕೂಲಿ. ಬರದ ನಾಡೆಂದು ಹೆಸರಾದ ಶಿರಾ ಕ್ಷೇತ್ರದಲ್ಲಿ ಈಗ ಚುನಾವಣೆಯ ಸಮಯ ಆಗಿರುವುದರಿಂದ ಹಣ ಮಾಡುವವರ ಚಿತ್ತ ಎಲ್ಲ ಪಕ್ಷಗಳತ್ತ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಮಾಡದೆಯೇ ಕೈತುಂಬ ಹಣ ಸಿಗುವಾಗ ಕೂಲಿಯ ಹಣ ಬೇಕೇನು? ಬೆಳಗ್ಗೆಯಿಂದ ಸಂಜೆವರೆಗೆ ದುಡಿದರೂ ಸಿಗುವ ಕೂಲಿ ಅಷ್ಟಕ್ಕೇ ಇದೆ. ಓಡಾಡಿಕೊಂಡು ಜೈಕಾರ ಹಾಕುತ್ತ ಕೈತುಂಬ ಗರಿಗರಿ ನೋಟುಗಳನ್ನು ಎಣಿಸಬಹುದೆಂಬ ಅವಕಾಶವನ್ನು ಕಸುಬುದಾರರು ಕಲಿತುಕೊಂಡಿದ್ದಾರೆ.

ಶಿರಾ ಕ್ಷೇತ್ರದ ಮತದಾನಕ್ಕೆ 12 ದಿನ ಬಾಕಿ ಇದೆ. ಮೂರು ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ಮಗ್ನವಾಗಿವೆ. ಗೆಲ್ಲಬೇಕೆಂಬ ಹಟಕ್ಕೆ ಬಿದ್ದಂತಿರುವ ಅಭ್ಯರ್ಥಿಗಳು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎನ್ನುತ್ತಾರೆ ಮತದಾರ. ಒಮ್ಮೆ ಬಿಸಿಲು, ಮತ್ತೊಮ್ಮೆ ಮೋಡಗಳ ರಾಶಿ. ಇದರಿಂದ ನೆರಳು, ಇನ್ನೊಂದು ಕಡೆ ಸೋನೆ ಮಳೆ, ಮಳೆ ಬೀಳುವಂತಹ ವಾತಾವರಣದಲ್ಲಿ ನಾಯಕರಷ್ಟೇ ಅಲ್ಲದೇ ಬೆಂಬಲಿಗರೂ ಬೆವರು ಹರಿಸುತ್ತಿದ್ದಾರೆ. ಇದಕ್ಕಾಗಿ ಕೈತುಂಬ ಹಣವು, ಮೂರು ಹೊತ್ತು ಊಟವೂ, ಜೊತೆಗಿಷ್ಟು ಎಣ್ಣೆಯ ನೈವೇದ್ಯವೂ ಆಗುತ್ತದೆ. ಇಷ್ಟಾದ ಮೇಲೆ ಯಾರ ಉಸಾಬರಿಯೂ ಬೇಡ. ಹಣ-ಹೆಂಡದ ಅಮಲಿನಲ್ಲಿ ತೇಲುವಂತಹ ಸನ್ನಿವೇಶಗಳು ಸೃಷ್ಟಿಯಾಗಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಹೌದು, ಹಣದ ಹರಿವು ಜೋರಾಗಿದೆ. ಸಾಮರ್ಥ್ಯಕ್ಕೆ ತಕ್ಕ ಹಾಗೆ ಹಣ ಖರ್ಚು ಮಾಡುತ್ತಿದ್ದಾರೆ. ಒಂದು ಪಕ್ಷ ಮತದಾರರಿಗೆ 1000 ರೂ. ನೀಡಿದರೆ, ಮತ್ತೊಂದು ಪಕ್ಷ 500 ರೂ. ಕೊಡುತ್ತಿದೆ. ಮೂರನೇ ಪಕ್ಷ 300 ರೂ. ನೀಡುತ್ತಿದೆ. ದುಡ್ಡು ಹೆಚ್ಚು ಕೊಡುವವರ ಪರವಾಗಿ ಹೆಚ್ಚು ಮಂದಿ ಕಾರ್ಯಕರ್ತರು ಕಂಡು ಬರುತ್ತಾರೆ. ಹಣ ಪಡೆದುಕೊಂಡರೂ ಓಟು ಯಾರಿಗೆ ಎಂಬುದನ್ನು ನಿಶ್ಚಯ ಮಾಡಿಕೊಂಡಿದ್ದಾರೆ. ಆದರೆ ಹಣ ಮಾಡುವುದಷ್ಟೇ ಪ್ರಚಾರಕರ ಉದ್ದೇಶ ಎನ್ನುತ್ತವೆ ಹಣ ಹಂಚುತ್ತಿರುವುದನ್ನು ಪ್ರತ್ಯಕ್ಷವಾಗಿ ನೋಡಿದ ಮೂಲಗಳು.

ದೇವಾಲಯಗಳಿಗೆ ಹಣ ಹಂಚಿದ್ದು ಇತಿಹಾಸದ ಪುಟಗಳನ್ನು ಸೇರಿದೆ. ಈಗ ನೇರ ಮತದಾರರ ಕೈಗೆ ಹಣ ತಲುಪುತ್ತಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ಮತ್ತು ಚುನಾವಣೆಯ ಉಸ್ತುವಾರಿ ವಹಿಸಿಕೊಂಡವರು ಬೆಂಬಲಿಗರಿಗೆ ಮತ್ತು ಪ್ರಚಾರ ಕೈಗೊಳ್ಳುವ ಮತದಾರ ತಂಡಗಳಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಕುರಿತು ಕ್ಷೇತ್ರದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ದುಡ್ಡು ಮಾಡಲು ಹೋದವರು ಮೂರು ಪಕ್ಷಗಳಿಂದಲೂ ಹಣ ತೆಗೆದುಕೊಳ್ಳುತ್ತಾರೆ. ಆದರೆ ತಮ್ಮ ಮತ ಯಾರಿಗೆ ಎಂಬುದನ್ನು ಗೌಪ್ಯವಾಗಿಯೇ ಇಟ್ಟಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ಕಮಲ ಕೈಯಲ್ಲಿ ಹಿಡಿದವರೂ ಇದ್ದಾರೆ. ಕೈಯಲ್ಲಿ ಕಮಲವೂ ರಾರಾಜಿಸುತ್ತಿದೆ. ತೆನೆಯಲ್ಲಿ ಕಮಲ, ತೆನೆಯನ್ನು ಕೈಯಲ್ಲಿ ಹಿಡಿದವರೂ ಕಂಡುಬರುತ್ತಿದ್ದಾರೆ. ಇಲ್ಲಿ ಕೆಲಸ ಮಾಡುವವರು ಬೇರೆ ಪಕ್ಷದಲ್ಲಿಯೂ ಇರುತ್ತಾರೆ. ಹಾಗಾಗಿ ಯಾರು ಯಾವ ಪಕ್ಷಕ್ಕೆ ಮತ ಹಾಕುತ್ತಾರೆನ್ನುವುದು ನಿಗೂಢವಾಗಿಯೇ ಉಳಿದಿದೆ. ಆದರೆ ಮೂರು ಪಕ್ಷಗಳಿಂದಲೂ ಹಣ ಪಡೆಯುವವರು ಮಾತ್ರ ಗೆಲುವಾಗಿಯೇ ಓಡಾಡುತ್ತಾರೆ. ಇದರಿಂದ ಕಡಲೆಗಿಡಗಳನ್ನು ಕೀಳುವ ಕೆಲಸಕ್ಕೆ ಕೂಲಿ ಆಳುಗಳು ಸಿಗುತ್ತಿಲ್ಲ ಎನ್ನುತ್ತಾರೆ ರೈತರು.

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ. ನೆಲೆ ಇಲ್ಲದ, ಬಲವಿಲ್ಲದ, ಒಲವಿಲ್ಲದ ಕುರಿತು ಚರ್ಚೆ ನಡೆಯುತ್ತಿದ್ದರೂ ನೆಲೆ-ಬಲ-ಒಲವುಗಳಲ್ಲಿ ಒಂದನ್ನು ಆಯ್ಕೆ ಮಾಡುವುದು ಮತದಾರರಿಗೆ ಅನಿವಾರ್ಯವಾಗಿದೆ. ನೆಲೆ ಇಲ್ಲದವರು 1000, ಒಲವಿಲ್ಲದವರು 300 ಮತ್ತು ಬಲವಿಲ್ಲದವರು 500 ರೂಗಳು ಮಾತ್ರ ಮತದಾರರ ಜೇಬುಗಳನ್ನು ಸೇರುತ್ತಿವೆ.


ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...