Homeಕರ್ನಾಟಕಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ 'ಒಳೇಟು' ನೀಡುವರೇ ಕೆಎನ್ಆರ್?

ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಜೆಡಿಎಸ್ ನಲ್ಲಿ ಬಿ.ಸತ್ಯನಾರಾಯಣ ಕುಟುಂಬದ ಹೊರತಾಗಿ ಟಿಕೆಟ್ ನೀಡಬೇಕೆಂಬ ಕೂಗು ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿರುದ್ದ ಕೆ.ಎನ್ ರಾಜಣ್ಣ ತೊಡೆ ತಟ್ಟುತ್ತಿದ್ದಾರೆ.

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಮಾಡುವ ಮೊದಲೇ ರಾಜಕೀಯ ಚರ್ಚೆ ಜೋರಾಗಿದೆ.. ಉಪಚುನಾವಣೆ ಘೋಷಣೆಗೆ ಇನ್ನು ಮೂರು ತಿಂಗಳು ಕಾಯಬೇಕು. ಆದರೂ ಸ್ಪರ್ಧಾಳುಗಳ ನಡುವೆ ಪೈಪೋಟಿ ಬಿರುಸುಗೊಂಡಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ಒಬ್ಬರನ್ನೊಬ್ಬರು ಕಾಲೆಳೆಯುವ ಆಟ ಶುರುವಾಗಿದೆ.

ಜೆಡಿಎಸ್ ನಲ್ಲಿ ಬಿ.ಸತ್ಯನಾರಾಯಣ ಕುಟುಂಬದ ಹೊರತಾಗಿ ಟಿಕೆಟ್ ನೀಡಬೇಕೆಂಬ ಕೂಗು ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿರುದ್ದ ಕೆ.ಎನ್ ರಾಜಣ್ಣ ತೊಡೆ ತಟ್ಟುತ್ತಿದ್ದಾರೆ. ಹಾಗಾಗಿ ಈ ಬಾರಿ ಜೆಡಿಎಸ್ V/s ಜೆಡಿಎಸ್, ಕಾಂಗ್ರೆಸ್ V/s ಕಾಂಗ್ರೆಸ್ ನಡುವೆಯೇ ಸಮರ ನಡೆಯತೊಡಗಿದೆ. ಇದು ಆರಂಭದಲ್ಲೇ ಉಭಯ ಪಕ್ಷದ ವರಿಷ್ಠರಿಗೆ ತಲೆಬಿಸಿ ತಂದಿಟ್ಟಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಮಧುಗಿರಿಯಲ್ಲಿ ಕೆ.ಎನ್ ರಾಜಣ್ಣ ಸೋಲು ಕಂಡಿದ್ದರು. ಇದರಿಂದ ಗೆದ್ದೇ ಗೆಲ್ಲುವೆ ಎನ್ನುವ ರಾಜಣ್ಣನವರ ಅತೀವ ವಿಶ್ವಾಸಕ್ಕೆ ತೀವ್ರ ಪಟ್ಟು ಬಿದ್ದಿತ್ತು. 19 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಇಂತಹ ಹೀನಾಯ ಸೋಲಿಗೆ ಟಿ.ಬಿ.ಜಯಚಂದ್ರ ಕೊಡುಗೆಯೂ ಇತ್ತು ಎಂಬ ಆರೋಪವಿದೆ. ಇದರ ಸುಳಿವು ಅರಿತಿರುವ ಕೆ.ಎನ್ ರಾಜಣ್ಣ ಶಿರಾದಲ್ಲಿ ಸ್ಪರ್ಧಿಸುವ ಮಾತುಗಳನ್ನು ಆಡುತ್ತಿದ್ದಾರೆ.

ಈಗಾಗಲೇ ಎರಡು ಬಾರಿ ಪತ್ರಿಕಾಗೋಷ್ಠಿ ನಡೆಸಿ ಉಪಚುನಾವಣೆಗೆ ತಾನೂ ಕೂಡ ಅಭ್ಯರ್ಥಿ ಆಕಾಂಕ್ಷಿ ಎಂದಿದ್ದಾರೆ. ಹೀಗೆ ಹೇಳುವ ಮೂಲಕ ಟಿ.ಬಿ.ಜಯಚಂದ್ರ ಬಂಡಾಯವೇಳುವಂತೆ ಮಾಡುತ್ತಿದ್ದಾರೆ. ತನ್ನ ಸೋಲಿಗೆ ಕಾರಣರಾದ ಟಿ.ಬಿ.ಜಯಚಂದ್ರ ಅವರಿಗೆ ‘ಒಳಏಟು’ ನೀಡಲು ರಾಜಣ್ಣ ತೀರ್ಮಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಶಿರಾ ಶಾಸಕ, ಮಾಜಿ ಸಚಿವ ಬಿ.ಸತ್ಯನಾರಾಯಣ್ ನಿಧನ

ಶಿರಾದಲ್ಲಿ ರಾಜಣ್ಣ ಸರ್ಧೆಗೆ ರಾಜ್ಯ ವರಿಷ್ಠರು ಒಪ್ಪುವುದಿಲ್ಲ. ಟಿ.ಬಿ ಜಯಚಂದ್ರ ಅವರಿಗೆ ಟಿಕೆಟ್ ಖಚಿತ. ಇದು ರಾಜಣ್ಣ ಅವರಿಗೂ ಗೊತ್ತು. ಆದರೆ ತನ್ನನ್ನು ಸೋಲಿಸಿದ ವ್ಯಕ್ತಿಯ ವಿರುದ್ಧ ದಾಳ ಉರುಳಿಸುವ ಪ್ರಯತ್ನವನ್ನು ರಾಜಣ್ಣ ಬಿಟ್ಟುಕೊಡುವುದಿಲ್ಲವೆಂಬುದು ಗ್ಯಾರೆಂಟಿ. ಅದೇ ಕಾರಣಕ್ಕೆ ಶಿರಾ ಕ್ಷೇತ್ರದಲ್ಲೂ ತನ್ನ ಪ್ರಾಬಲ್ಯವಿದೆ. ತನ್ನ ಸಮುದಾಯದ ಮತಗಳು, ಹಿಂದುಳಿದ ವರ್ಗದ ಮತಗಳು ತನ್ನ ಬುಟ್ಟಿಯಲ್ಲಿವೆ ಎಂಬುದನ್ನು ರಾಜಣ್ಣ ಅವರು ಪಕ್ಷಕ್ಕೆ, ಜಯಚಂದ್ರರವರಿಗೆ ನೆನಪಿಸುತ್ತಿದ್ದಾರೆ. ತನ್ನ ಬೆಂಬಲವಿಲ್ಲದೇ ಗೆಲುವು ಅಷ್ಟು ಸುಲಭವಲ್ಲ ಎಂಬ ಸಂದೇಶವನ್ನು ಹರಿಬಿಡುತ್ತಿದ್ದಾರೆ.

ಕೆ.ಎನ್.ಆರ್ ‘ಮಾತಿನ ಗುಮ್ಮ’ನಿಗೆ ಟಿ.ಬಿ.ಜಯಚಂದ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಅಳುಕು ಇಲ್ಲದಿಲ್ಲ. ಯಾಕೆಂದರೆ ಕೆ.ಎನ್.ರಾಜಣ್ಣ ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷರು. ಡಿಸಿಸಿ ಬ್ಯಾಂಕ್ ಮೂಲಕ ರೈತರಿಗೆ ಸಾಲ ನೀಡಿ ಜನಮನ್ನಣೆ ಗಳಿಸಿದ್ದಾರೆ. ಇದರ ಮಹತ್ವವನ್ನು ಅರಿತಿರುವ ಟಿಬಿಜೆ ರಾಜಣ್ಣ ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ. ಮೌನವಾಗಿಯೇ ಎಲ್ಲವನ್ನೂ ಗಮನಿಸುತ್ತಲೇ ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಟಿ.ಬಿ.ಜೆ ನೆಚ್ಚಿಕೊಂಡಿರುವುದು ಗೊಲ್ಲರು, ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗದ ಮತಗಳನ್ನು. ಒಕ್ಕಲಿಗ ಮತಗಳು ಮೂರು ಪಕ್ಷಗಳಲ್ಲಿ ಹಂಚಿಕೆಯಾದರೂ ದಲಿತರು ಮತ್ತು ಹಿಂದುಳಿದ ವರ್ಗದ ಮತಗಳು ಗ್ಯಾರೆಂಟಿ ಬರಲಿವೆ ಎಂದು ಜಯಚಂದ್ರ ಅರಿತಿದ್ದಾರೆ. ಆದರೆ ನಾಯಕ ಸಮುದಾಯದ ಮತಗಳು 9 ಸಾವಿರ, ದಲಿತ ಮತಗಳು 56 ಸಾವಿರ, ಗೊಲ್ಲರ ಮತಗಳು 46 ಸಾವಿರ, ಮುಸ್ಲೀಂ ಮತಗಳು 12 ಸಾವಿರ, ಒಕ್ಕಲಿಗ ಮತಗಳು 41 ಸಾವಿರ, ಕುರುಬರ ಮತಗಳು 9 ಸಾವಿರ ಹೀಗೆ ಎಲ್ಲ ಜಾತಿಯ ಮತದಾರರು ರಾಜಣ್ಣನವರ ಮಾತುಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾರರು.

ಇದೇ ಕಾರಣಕ್ಕೆ ಕೆಎನ್ಆರ್ ತನ್ನ ಬುಟ್ಟಿಯಲ್ಲಿ ಸಾಕಷ್ಟು ಮತಗಳು ಇವೆ. ಅವು ‘ನಿಮಗೆ’ ಧಕ್ಕವುದಿಲ್ಲ ಎಂಬ ಸಂದೇಶವನ್ನು ಟಿಬಿಜೆಗೆ ರವಾನಿಸುತ್ತಿದ್ದಾರೆ. ಕೆಎನ್.ಆರ್ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಹಾಗಾಗಿ ಇಲ್ಲಿ ಜಯಚಂದ್ರ ಅವರಿಗೆ ಹೊಡೆತ ಬೀಳುವುದು ಗ್ಯಾರೆಂಟಿ. ಶತ್ರು ಜೊತೆ ಕೈ ಜೋಡಿಸಿದರೆ ಗೆಲುವು ಯಾರದ್ದು ಇದೇ ಕುತೂಹಲ.

ಜೆಡಿಎಸ್ ನಲ್ಲಿ ಸಾಕಷ್ಟು ಆಕಾಂಕ್ಷಿಗಳ ಪಟ್ಟಿಯೇ ಇದೆ. ವಂಶಪಾರಂಪರ್ಯವನ್ನು ವಿರೋಧಿಸುವ ಗುಂಪು ಉಲ್ಟಾ ಹೊಡೆದರೆ ಅದು ಯಾರಿಗೆ ವರದಾನವಾಗಬಹುದು ಎಂಬ ಚರ್ಚೆ ನಡೆಯುತ್ತಲೇ ಇದೆ.


ಇದನ್ನೂ ಓದಿ: ಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...