Homeಕರ್ನಾಟಕಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ 'ಒಳೇಟು' ನೀಡುವರೇ ಕೆಎನ್ಆರ್?

ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಜೆಡಿಎಸ್ ನಲ್ಲಿ ಬಿ.ಸತ್ಯನಾರಾಯಣ ಕುಟುಂಬದ ಹೊರತಾಗಿ ಟಿಕೆಟ್ ನೀಡಬೇಕೆಂಬ ಕೂಗು ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿರುದ್ದ ಕೆ.ಎನ್ ರಾಜಣ್ಣ ತೊಡೆ ತಟ್ಟುತ್ತಿದ್ದಾರೆ.

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಮಾಡುವ ಮೊದಲೇ ರಾಜಕೀಯ ಚರ್ಚೆ ಜೋರಾಗಿದೆ.. ಉಪಚುನಾವಣೆ ಘೋಷಣೆಗೆ ಇನ್ನು ಮೂರು ತಿಂಗಳು ಕಾಯಬೇಕು. ಆದರೂ ಸ್ಪರ್ಧಾಳುಗಳ ನಡುವೆ ಪೈಪೋಟಿ ಬಿರುಸುಗೊಂಡಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ಒಬ್ಬರನ್ನೊಬ್ಬರು ಕಾಲೆಳೆಯುವ ಆಟ ಶುರುವಾಗಿದೆ.

ಜೆಡಿಎಸ್ ನಲ್ಲಿ ಬಿ.ಸತ್ಯನಾರಾಯಣ ಕುಟುಂಬದ ಹೊರತಾಗಿ ಟಿಕೆಟ್ ನೀಡಬೇಕೆಂಬ ಕೂಗು ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿರುದ್ದ ಕೆ.ಎನ್ ರಾಜಣ್ಣ ತೊಡೆ ತಟ್ಟುತ್ತಿದ್ದಾರೆ. ಹಾಗಾಗಿ ಈ ಬಾರಿ ಜೆಡಿಎಸ್ V/s ಜೆಡಿಎಸ್, ಕಾಂಗ್ರೆಸ್ V/s ಕಾಂಗ್ರೆಸ್ ನಡುವೆಯೇ ಸಮರ ನಡೆಯತೊಡಗಿದೆ. ಇದು ಆರಂಭದಲ್ಲೇ ಉಭಯ ಪಕ್ಷದ ವರಿಷ್ಠರಿಗೆ ತಲೆಬಿಸಿ ತಂದಿಟ್ಟಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಮಧುಗಿರಿಯಲ್ಲಿ ಕೆ.ಎನ್ ರಾಜಣ್ಣ ಸೋಲು ಕಂಡಿದ್ದರು. ಇದರಿಂದ ಗೆದ್ದೇ ಗೆಲ್ಲುವೆ ಎನ್ನುವ ರಾಜಣ್ಣನವರ ಅತೀವ ವಿಶ್ವಾಸಕ್ಕೆ ತೀವ್ರ ಪಟ್ಟು ಬಿದ್ದಿತ್ತು. 19 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಇಂತಹ ಹೀನಾಯ ಸೋಲಿಗೆ ಟಿ.ಬಿ.ಜಯಚಂದ್ರ ಕೊಡುಗೆಯೂ ಇತ್ತು ಎಂಬ ಆರೋಪವಿದೆ. ಇದರ ಸುಳಿವು ಅರಿತಿರುವ ಕೆ.ಎನ್ ರಾಜಣ್ಣ ಶಿರಾದಲ್ಲಿ ಸ್ಪರ್ಧಿಸುವ ಮಾತುಗಳನ್ನು ಆಡುತ್ತಿದ್ದಾರೆ.

ಈಗಾಗಲೇ ಎರಡು ಬಾರಿ ಪತ್ರಿಕಾಗೋಷ್ಠಿ ನಡೆಸಿ ಉಪಚುನಾವಣೆಗೆ ತಾನೂ ಕೂಡ ಅಭ್ಯರ್ಥಿ ಆಕಾಂಕ್ಷಿ ಎಂದಿದ್ದಾರೆ. ಹೀಗೆ ಹೇಳುವ ಮೂಲಕ ಟಿ.ಬಿ.ಜಯಚಂದ್ರ ಬಂಡಾಯವೇಳುವಂತೆ ಮಾಡುತ್ತಿದ್ದಾರೆ. ತನ್ನ ಸೋಲಿಗೆ ಕಾರಣರಾದ ಟಿ.ಬಿ.ಜಯಚಂದ್ರ ಅವರಿಗೆ ‘ಒಳಏಟು’ ನೀಡಲು ರಾಜಣ್ಣ ತೀರ್ಮಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಶಿರಾ ಶಾಸಕ, ಮಾಜಿ ಸಚಿವ ಬಿ.ಸತ್ಯನಾರಾಯಣ್ ನಿಧನ

ಶಿರಾದಲ್ಲಿ ರಾಜಣ್ಣ ಸರ್ಧೆಗೆ ರಾಜ್ಯ ವರಿಷ್ಠರು ಒಪ್ಪುವುದಿಲ್ಲ. ಟಿ.ಬಿ ಜಯಚಂದ್ರ ಅವರಿಗೆ ಟಿಕೆಟ್ ಖಚಿತ. ಇದು ರಾಜಣ್ಣ ಅವರಿಗೂ ಗೊತ್ತು. ಆದರೆ ತನ್ನನ್ನು ಸೋಲಿಸಿದ ವ್ಯಕ್ತಿಯ ವಿರುದ್ಧ ದಾಳ ಉರುಳಿಸುವ ಪ್ರಯತ್ನವನ್ನು ರಾಜಣ್ಣ ಬಿಟ್ಟುಕೊಡುವುದಿಲ್ಲವೆಂಬುದು ಗ್ಯಾರೆಂಟಿ. ಅದೇ ಕಾರಣಕ್ಕೆ ಶಿರಾ ಕ್ಷೇತ್ರದಲ್ಲೂ ತನ್ನ ಪ್ರಾಬಲ್ಯವಿದೆ. ತನ್ನ ಸಮುದಾಯದ ಮತಗಳು, ಹಿಂದುಳಿದ ವರ್ಗದ ಮತಗಳು ತನ್ನ ಬುಟ್ಟಿಯಲ್ಲಿವೆ ಎಂಬುದನ್ನು ರಾಜಣ್ಣ ಅವರು ಪಕ್ಷಕ್ಕೆ, ಜಯಚಂದ್ರರವರಿಗೆ ನೆನಪಿಸುತ್ತಿದ್ದಾರೆ. ತನ್ನ ಬೆಂಬಲವಿಲ್ಲದೇ ಗೆಲುವು ಅಷ್ಟು ಸುಲಭವಲ್ಲ ಎಂಬ ಸಂದೇಶವನ್ನು ಹರಿಬಿಡುತ್ತಿದ್ದಾರೆ.

ಕೆ.ಎನ್.ಆರ್ ‘ಮಾತಿನ ಗುಮ್ಮ’ನಿಗೆ ಟಿ.ಬಿ.ಜಯಚಂದ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಅಳುಕು ಇಲ್ಲದಿಲ್ಲ. ಯಾಕೆಂದರೆ ಕೆ.ಎನ್.ರಾಜಣ್ಣ ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷರು. ಡಿಸಿಸಿ ಬ್ಯಾಂಕ್ ಮೂಲಕ ರೈತರಿಗೆ ಸಾಲ ನೀಡಿ ಜನಮನ್ನಣೆ ಗಳಿಸಿದ್ದಾರೆ. ಇದರ ಮಹತ್ವವನ್ನು ಅರಿತಿರುವ ಟಿಬಿಜೆ ರಾಜಣ್ಣ ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ. ಮೌನವಾಗಿಯೇ ಎಲ್ಲವನ್ನೂ ಗಮನಿಸುತ್ತಲೇ ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಟಿ.ಬಿ.ಜೆ ನೆಚ್ಚಿಕೊಂಡಿರುವುದು ಗೊಲ್ಲರು, ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗದ ಮತಗಳನ್ನು. ಒಕ್ಕಲಿಗ ಮತಗಳು ಮೂರು ಪಕ್ಷಗಳಲ್ಲಿ ಹಂಚಿಕೆಯಾದರೂ ದಲಿತರು ಮತ್ತು ಹಿಂದುಳಿದ ವರ್ಗದ ಮತಗಳು ಗ್ಯಾರೆಂಟಿ ಬರಲಿವೆ ಎಂದು ಜಯಚಂದ್ರ ಅರಿತಿದ್ದಾರೆ. ಆದರೆ ನಾಯಕ ಸಮುದಾಯದ ಮತಗಳು 9 ಸಾವಿರ, ದಲಿತ ಮತಗಳು 56 ಸಾವಿರ, ಗೊಲ್ಲರ ಮತಗಳು 46 ಸಾವಿರ, ಮುಸ್ಲೀಂ ಮತಗಳು 12 ಸಾವಿರ, ಒಕ್ಕಲಿಗ ಮತಗಳು 41 ಸಾವಿರ, ಕುರುಬರ ಮತಗಳು 9 ಸಾವಿರ ಹೀಗೆ ಎಲ್ಲ ಜಾತಿಯ ಮತದಾರರು ರಾಜಣ್ಣನವರ ಮಾತುಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾರರು.

ಇದೇ ಕಾರಣಕ್ಕೆ ಕೆಎನ್ಆರ್ ತನ್ನ ಬುಟ್ಟಿಯಲ್ಲಿ ಸಾಕಷ್ಟು ಮತಗಳು ಇವೆ. ಅವು ‘ನಿಮಗೆ’ ಧಕ್ಕವುದಿಲ್ಲ ಎಂಬ ಸಂದೇಶವನ್ನು ಟಿಬಿಜೆಗೆ ರವಾನಿಸುತ್ತಿದ್ದಾರೆ. ಕೆಎನ್.ಆರ್ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಹಾಗಾಗಿ ಇಲ್ಲಿ ಜಯಚಂದ್ರ ಅವರಿಗೆ ಹೊಡೆತ ಬೀಳುವುದು ಗ್ಯಾರೆಂಟಿ. ಶತ್ರು ಜೊತೆ ಕೈ ಜೋಡಿಸಿದರೆ ಗೆಲುವು ಯಾರದ್ದು ಇದೇ ಕುತೂಹಲ.

ಜೆಡಿಎಸ್ ನಲ್ಲಿ ಸಾಕಷ್ಟು ಆಕಾಂಕ್ಷಿಗಳ ಪಟ್ಟಿಯೇ ಇದೆ. ವಂಶಪಾರಂಪರ್ಯವನ್ನು ವಿರೋಧಿಸುವ ಗುಂಪು ಉಲ್ಟಾ ಹೊಡೆದರೆ ಅದು ಯಾರಿಗೆ ವರದಾನವಾಗಬಹುದು ಎಂಬ ಚರ್ಚೆ ನಡೆಯುತ್ತಲೇ ಇದೆ.


ಇದನ್ನೂ ಓದಿ: ಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...