Homeಕರ್ನಾಟಕಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ 'ಒಳೇಟು' ನೀಡುವರೇ ಕೆಎನ್ಆರ್?

ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಜೆಡಿಎಸ್ ನಲ್ಲಿ ಬಿ.ಸತ್ಯನಾರಾಯಣ ಕುಟುಂಬದ ಹೊರತಾಗಿ ಟಿಕೆಟ್ ನೀಡಬೇಕೆಂಬ ಕೂಗು ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿರುದ್ದ ಕೆ.ಎನ್ ರಾಜಣ್ಣ ತೊಡೆ ತಟ್ಟುತ್ತಿದ್ದಾರೆ.

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಮಾಡುವ ಮೊದಲೇ ರಾಜಕೀಯ ಚರ್ಚೆ ಜೋರಾಗಿದೆ.. ಉಪಚುನಾವಣೆ ಘೋಷಣೆಗೆ ಇನ್ನು ಮೂರು ತಿಂಗಳು ಕಾಯಬೇಕು. ಆದರೂ ಸ್ಪರ್ಧಾಳುಗಳ ನಡುವೆ ಪೈಪೋಟಿ ಬಿರುಸುಗೊಂಡಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ಒಬ್ಬರನ್ನೊಬ್ಬರು ಕಾಲೆಳೆಯುವ ಆಟ ಶುರುವಾಗಿದೆ.

ಜೆಡಿಎಸ್ ನಲ್ಲಿ ಬಿ.ಸತ್ಯನಾರಾಯಣ ಕುಟುಂಬದ ಹೊರತಾಗಿ ಟಿಕೆಟ್ ನೀಡಬೇಕೆಂಬ ಕೂಗು ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿರುದ್ದ ಕೆ.ಎನ್ ರಾಜಣ್ಣ ತೊಡೆ ತಟ್ಟುತ್ತಿದ್ದಾರೆ. ಹಾಗಾಗಿ ಈ ಬಾರಿ ಜೆಡಿಎಸ್ V/s ಜೆಡಿಎಸ್, ಕಾಂಗ್ರೆಸ್ V/s ಕಾಂಗ್ರೆಸ್ ನಡುವೆಯೇ ಸಮರ ನಡೆಯತೊಡಗಿದೆ. ಇದು ಆರಂಭದಲ್ಲೇ ಉಭಯ ಪಕ್ಷದ ವರಿಷ್ಠರಿಗೆ ತಲೆಬಿಸಿ ತಂದಿಟ್ಟಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಮಧುಗಿರಿಯಲ್ಲಿ ಕೆ.ಎನ್ ರಾಜಣ್ಣ ಸೋಲು ಕಂಡಿದ್ದರು. ಇದರಿಂದ ಗೆದ್ದೇ ಗೆಲ್ಲುವೆ ಎನ್ನುವ ರಾಜಣ್ಣನವರ ಅತೀವ ವಿಶ್ವಾಸಕ್ಕೆ ತೀವ್ರ ಪಟ್ಟು ಬಿದ್ದಿತ್ತು. 19 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಇಂತಹ ಹೀನಾಯ ಸೋಲಿಗೆ ಟಿ.ಬಿ.ಜಯಚಂದ್ರ ಕೊಡುಗೆಯೂ ಇತ್ತು ಎಂಬ ಆರೋಪವಿದೆ. ಇದರ ಸುಳಿವು ಅರಿತಿರುವ ಕೆ.ಎನ್ ರಾಜಣ್ಣ ಶಿರಾದಲ್ಲಿ ಸ್ಪರ್ಧಿಸುವ ಮಾತುಗಳನ್ನು ಆಡುತ್ತಿದ್ದಾರೆ.

ಈಗಾಗಲೇ ಎರಡು ಬಾರಿ ಪತ್ರಿಕಾಗೋಷ್ಠಿ ನಡೆಸಿ ಉಪಚುನಾವಣೆಗೆ ತಾನೂ ಕೂಡ ಅಭ್ಯರ್ಥಿ ಆಕಾಂಕ್ಷಿ ಎಂದಿದ್ದಾರೆ. ಹೀಗೆ ಹೇಳುವ ಮೂಲಕ ಟಿ.ಬಿ.ಜಯಚಂದ್ರ ಬಂಡಾಯವೇಳುವಂತೆ ಮಾಡುತ್ತಿದ್ದಾರೆ. ತನ್ನ ಸೋಲಿಗೆ ಕಾರಣರಾದ ಟಿ.ಬಿ.ಜಯಚಂದ್ರ ಅವರಿಗೆ ‘ಒಳಏಟು’ ನೀಡಲು ರಾಜಣ್ಣ ತೀರ್ಮಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಶಿರಾ ಶಾಸಕ, ಮಾಜಿ ಸಚಿವ ಬಿ.ಸತ್ಯನಾರಾಯಣ್ ನಿಧನ

ಶಿರಾದಲ್ಲಿ ರಾಜಣ್ಣ ಸರ್ಧೆಗೆ ರಾಜ್ಯ ವರಿಷ್ಠರು ಒಪ್ಪುವುದಿಲ್ಲ. ಟಿ.ಬಿ ಜಯಚಂದ್ರ ಅವರಿಗೆ ಟಿಕೆಟ್ ಖಚಿತ. ಇದು ರಾಜಣ್ಣ ಅವರಿಗೂ ಗೊತ್ತು. ಆದರೆ ತನ್ನನ್ನು ಸೋಲಿಸಿದ ವ್ಯಕ್ತಿಯ ವಿರುದ್ಧ ದಾಳ ಉರುಳಿಸುವ ಪ್ರಯತ್ನವನ್ನು ರಾಜಣ್ಣ ಬಿಟ್ಟುಕೊಡುವುದಿಲ್ಲವೆಂಬುದು ಗ್ಯಾರೆಂಟಿ. ಅದೇ ಕಾರಣಕ್ಕೆ ಶಿರಾ ಕ್ಷೇತ್ರದಲ್ಲೂ ತನ್ನ ಪ್ರಾಬಲ್ಯವಿದೆ. ತನ್ನ ಸಮುದಾಯದ ಮತಗಳು, ಹಿಂದುಳಿದ ವರ್ಗದ ಮತಗಳು ತನ್ನ ಬುಟ್ಟಿಯಲ್ಲಿವೆ ಎಂಬುದನ್ನು ರಾಜಣ್ಣ ಅವರು ಪಕ್ಷಕ್ಕೆ, ಜಯಚಂದ್ರರವರಿಗೆ ನೆನಪಿಸುತ್ತಿದ್ದಾರೆ. ತನ್ನ ಬೆಂಬಲವಿಲ್ಲದೇ ಗೆಲುವು ಅಷ್ಟು ಸುಲಭವಲ್ಲ ಎಂಬ ಸಂದೇಶವನ್ನು ಹರಿಬಿಡುತ್ತಿದ್ದಾರೆ.

ಕೆ.ಎನ್.ಆರ್ ‘ಮಾತಿನ ಗುಮ್ಮ’ನಿಗೆ ಟಿ.ಬಿ.ಜಯಚಂದ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಅಳುಕು ಇಲ್ಲದಿಲ್ಲ. ಯಾಕೆಂದರೆ ಕೆ.ಎನ್.ರಾಜಣ್ಣ ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷರು. ಡಿಸಿಸಿ ಬ್ಯಾಂಕ್ ಮೂಲಕ ರೈತರಿಗೆ ಸಾಲ ನೀಡಿ ಜನಮನ್ನಣೆ ಗಳಿಸಿದ್ದಾರೆ. ಇದರ ಮಹತ್ವವನ್ನು ಅರಿತಿರುವ ಟಿಬಿಜೆ ರಾಜಣ್ಣ ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ. ಮೌನವಾಗಿಯೇ ಎಲ್ಲವನ್ನೂ ಗಮನಿಸುತ್ತಲೇ ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಟಿ.ಬಿ.ಜೆ ನೆಚ್ಚಿಕೊಂಡಿರುವುದು ಗೊಲ್ಲರು, ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗದ ಮತಗಳನ್ನು. ಒಕ್ಕಲಿಗ ಮತಗಳು ಮೂರು ಪಕ್ಷಗಳಲ್ಲಿ ಹಂಚಿಕೆಯಾದರೂ ದಲಿತರು ಮತ್ತು ಹಿಂದುಳಿದ ವರ್ಗದ ಮತಗಳು ಗ್ಯಾರೆಂಟಿ ಬರಲಿವೆ ಎಂದು ಜಯಚಂದ್ರ ಅರಿತಿದ್ದಾರೆ. ಆದರೆ ನಾಯಕ ಸಮುದಾಯದ ಮತಗಳು 9 ಸಾವಿರ, ದಲಿತ ಮತಗಳು 56 ಸಾವಿರ, ಗೊಲ್ಲರ ಮತಗಳು 46 ಸಾವಿರ, ಮುಸ್ಲೀಂ ಮತಗಳು 12 ಸಾವಿರ, ಒಕ್ಕಲಿಗ ಮತಗಳು 41 ಸಾವಿರ, ಕುರುಬರ ಮತಗಳು 9 ಸಾವಿರ ಹೀಗೆ ಎಲ್ಲ ಜಾತಿಯ ಮತದಾರರು ರಾಜಣ್ಣನವರ ಮಾತುಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾರರು.

ಇದೇ ಕಾರಣಕ್ಕೆ ಕೆಎನ್ಆರ್ ತನ್ನ ಬುಟ್ಟಿಯಲ್ಲಿ ಸಾಕಷ್ಟು ಮತಗಳು ಇವೆ. ಅವು ‘ನಿಮಗೆ’ ಧಕ್ಕವುದಿಲ್ಲ ಎಂಬ ಸಂದೇಶವನ್ನು ಟಿಬಿಜೆಗೆ ರವಾನಿಸುತ್ತಿದ್ದಾರೆ. ಕೆಎನ್.ಆರ್ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಹಾಗಾಗಿ ಇಲ್ಲಿ ಜಯಚಂದ್ರ ಅವರಿಗೆ ಹೊಡೆತ ಬೀಳುವುದು ಗ್ಯಾರೆಂಟಿ. ಶತ್ರು ಜೊತೆ ಕೈ ಜೋಡಿಸಿದರೆ ಗೆಲುವು ಯಾರದ್ದು ಇದೇ ಕುತೂಹಲ.

ಜೆಡಿಎಸ್ ನಲ್ಲಿ ಸಾಕಷ್ಟು ಆಕಾಂಕ್ಷಿಗಳ ಪಟ್ಟಿಯೇ ಇದೆ. ವಂಶಪಾರಂಪರ್ಯವನ್ನು ವಿರೋಧಿಸುವ ಗುಂಪು ಉಲ್ಟಾ ಹೊಡೆದರೆ ಅದು ಯಾರಿಗೆ ವರದಾನವಾಗಬಹುದು ಎಂಬ ಚರ್ಚೆ ನಡೆಯುತ್ತಲೇ ಇದೆ.


ಇದನ್ನೂ ಓದಿ: ಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....