Homeಕರ್ನಾಟಕಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ 'ಒಳೇಟು' ನೀಡುವರೇ ಕೆಎನ್ಆರ್?

ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಜೆಡಿಎಸ್ ನಲ್ಲಿ ಬಿ.ಸತ್ಯನಾರಾಯಣ ಕುಟುಂಬದ ಹೊರತಾಗಿ ಟಿಕೆಟ್ ನೀಡಬೇಕೆಂಬ ಕೂಗು ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿರುದ್ದ ಕೆ.ಎನ್ ರಾಜಣ್ಣ ತೊಡೆ ತಟ್ಟುತ್ತಿದ್ದಾರೆ.

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಮಾಡುವ ಮೊದಲೇ ರಾಜಕೀಯ ಚರ್ಚೆ ಜೋರಾಗಿದೆ.. ಉಪಚುನಾವಣೆ ಘೋಷಣೆಗೆ ಇನ್ನು ಮೂರು ತಿಂಗಳು ಕಾಯಬೇಕು. ಆದರೂ ಸ್ಪರ್ಧಾಳುಗಳ ನಡುವೆ ಪೈಪೋಟಿ ಬಿರುಸುಗೊಂಡಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ಒಬ್ಬರನ್ನೊಬ್ಬರು ಕಾಲೆಳೆಯುವ ಆಟ ಶುರುವಾಗಿದೆ.

ಜೆಡಿಎಸ್ ನಲ್ಲಿ ಬಿ.ಸತ್ಯನಾರಾಯಣ ಕುಟುಂಬದ ಹೊರತಾಗಿ ಟಿಕೆಟ್ ನೀಡಬೇಕೆಂಬ ಕೂಗು ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿರುದ್ದ ಕೆ.ಎನ್ ರಾಜಣ್ಣ ತೊಡೆ ತಟ್ಟುತ್ತಿದ್ದಾರೆ. ಹಾಗಾಗಿ ಈ ಬಾರಿ ಜೆಡಿಎಸ್ V/s ಜೆಡಿಎಸ್, ಕಾಂಗ್ರೆಸ್ V/s ಕಾಂಗ್ರೆಸ್ ನಡುವೆಯೇ ಸಮರ ನಡೆಯತೊಡಗಿದೆ. ಇದು ಆರಂಭದಲ್ಲೇ ಉಭಯ ಪಕ್ಷದ ವರಿಷ್ಠರಿಗೆ ತಲೆಬಿಸಿ ತಂದಿಟ್ಟಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಮಧುಗಿರಿಯಲ್ಲಿ ಕೆ.ಎನ್ ರಾಜಣ್ಣ ಸೋಲು ಕಂಡಿದ್ದರು. ಇದರಿಂದ ಗೆದ್ದೇ ಗೆಲ್ಲುವೆ ಎನ್ನುವ ರಾಜಣ್ಣನವರ ಅತೀವ ವಿಶ್ವಾಸಕ್ಕೆ ತೀವ್ರ ಪಟ್ಟು ಬಿದ್ದಿತ್ತು. 19 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಇಂತಹ ಹೀನಾಯ ಸೋಲಿಗೆ ಟಿ.ಬಿ.ಜಯಚಂದ್ರ ಕೊಡುಗೆಯೂ ಇತ್ತು ಎಂಬ ಆರೋಪವಿದೆ. ಇದರ ಸುಳಿವು ಅರಿತಿರುವ ಕೆ.ಎನ್ ರಾಜಣ್ಣ ಶಿರಾದಲ್ಲಿ ಸ್ಪರ್ಧಿಸುವ ಮಾತುಗಳನ್ನು ಆಡುತ್ತಿದ್ದಾರೆ.

ಈಗಾಗಲೇ ಎರಡು ಬಾರಿ ಪತ್ರಿಕಾಗೋಷ್ಠಿ ನಡೆಸಿ ಉಪಚುನಾವಣೆಗೆ ತಾನೂ ಕೂಡ ಅಭ್ಯರ್ಥಿ ಆಕಾಂಕ್ಷಿ ಎಂದಿದ್ದಾರೆ. ಹೀಗೆ ಹೇಳುವ ಮೂಲಕ ಟಿ.ಬಿ.ಜಯಚಂದ್ರ ಬಂಡಾಯವೇಳುವಂತೆ ಮಾಡುತ್ತಿದ್ದಾರೆ. ತನ್ನ ಸೋಲಿಗೆ ಕಾರಣರಾದ ಟಿ.ಬಿ.ಜಯಚಂದ್ರ ಅವರಿಗೆ ‘ಒಳಏಟು’ ನೀಡಲು ರಾಜಣ್ಣ ತೀರ್ಮಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಶಿರಾ ಶಾಸಕ, ಮಾಜಿ ಸಚಿವ ಬಿ.ಸತ್ಯನಾರಾಯಣ್ ನಿಧನ

ಶಿರಾದಲ್ಲಿ ರಾಜಣ್ಣ ಸರ್ಧೆಗೆ ರಾಜ್ಯ ವರಿಷ್ಠರು ಒಪ್ಪುವುದಿಲ್ಲ. ಟಿ.ಬಿ ಜಯಚಂದ್ರ ಅವರಿಗೆ ಟಿಕೆಟ್ ಖಚಿತ. ಇದು ರಾಜಣ್ಣ ಅವರಿಗೂ ಗೊತ್ತು. ಆದರೆ ತನ್ನನ್ನು ಸೋಲಿಸಿದ ವ್ಯಕ್ತಿಯ ವಿರುದ್ಧ ದಾಳ ಉರುಳಿಸುವ ಪ್ರಯತ್ನವನ್ನು ರಾಜಣ್ಣ ಬಿಟ್ಟುಕೊಡುವುದಿಲ್ಲವೆಂಬುದು ಗ್ಯಾರೆಂಟಿ. ಅದೇ ಕಾರಣಕ್ಕೆ ಶಿರಾ ಕ್ಷೇತ್ರದಲ್ಲೂ ತನ್ನ ಪ್ರಾಬಲ್ಯವಿದೆ. ತನ್ನ ಸಮುದಾಯದ ಮತಗಳು, ಹಿಂದುಳಿದ ವರ್ಗದ ಮತಗಳು ತನ್ನ ಬುಟ್ಟಿಯಲ್ಲಿವೆ ಎಂಬುದನ್ನು ರಾಜಣ್ಣ ಅವರು ಪಕ್ಷಕ್ಕೆ, ಜಯಚಂದ್ರರವರಿಗೆ ನೆನಪಿಸುತ್ತಿದ್ದಾರೆ. ತನ್ನ ಬೆಂಬಲವಿಲ್ಲದೇ ಗೆಲುವು ಅಷ್ಟು ಸುಲಭವಲ್ಲ ಎಂಬ ಸಂದೇಶವನ್ನು ಹರಿಬಿಡುತ್ತಿದ್ದಾರೆ.

ಕೆ.ಎನ್.ಆರ್ ‘ಮಾತಿನ ಗುಮ್ಮ’ನಿಗೆ ಟಿ.ಬಿ.ಜಯಚಂದ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಅಳುಕು ಇಲ್ಲದಿಲ್ಲ. ಯಾಕೆಂದರೆ ಕೆ.ಎನ್.ರಾಜಣ್ಣ ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷರು. ಡಿಸಿಸಿ ಬ್ಯಾಂಕ್ ಮೂಲಕ ರೈತರಿಗೆ ಸಾಲ ನೀಡಿ ಜನಮನ್ನಣೆ ಗಳಿಸಿದ್ದಾರೆ. ಇದರ ಮಹತ್ವವನ್ನು ಅರಿತಿರುವ ಟಿಬಿಜೆ ರಾಜಣ್ಣ ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ. ಮೌನವಾಗಿಯೇ ಎಲ್ಲವನ್ನೂ ಗಮನಿಸುತ್ತಲೇ ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಟಿ.ಬಿ.ಜೆ ನೆಚ್ಚಿಕೊಂಡಿರುವುದು ಗೊಲ್ಲರು, ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗದ ಮತಗಳನ್ನು. ಒಕ್ಕಲಿಗ ಮತಗಳು ಮೂರು ಪಕ್ಷಗಳಲ್ಲಿ ಹಂಚಿಕೆಯಾದರೂ ದಲಿತರು ಮತ್ತು ಹಿಂದುಳಿದ ವರ್ಗದ ಮತಗಳು ಗ್ಯಾರೆಂಟಿ ಬರಲಿವೆ ಎಂದು ಜಯಚಂದ್ರ ಅರಿತಿದ್ದಾರೆ. ಆದರೆ ನಾಯಕ ಸಮುದಾಯದ ಮತಗಳು 9 ಸಾವಿರ, ದಲಿತ ಮತಗಳು 56 ಸಾವಿರ, ಗೊಲ್ಲರ ಮತಗಳು 46 ಸಾವಿರ, ಮುಸ್ಲೀಂ ಮತಗಳು 12 ಸಾವಿರ, ಒಕ್ಕಲಿಗ ಮತಗಳು 41 ಸಾವಿರ, ಕುರುಬರ ಮತಗಳು 9 ಸಾವಿರ ಹೀಗೆ ಎಲ್ಲ ಜಾತಿಯ ಮತದಾರರು ರಾಜಣ್ಣನವರ ಮಾತುಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾರರು.

ಇದೇ ಕಾರಣಕ್ಕೆ ಕೆಎನ್ಆರ್ ತನ್ನ ಬುಟ್ಟಿಯಲ್ಲಿ ಸಾಕಷ್ಟು ಮತಗಳು ಇವೆ. ಅವು ‘ನಿಮಗೆ’ ಧಕ್ಕವುದಿಲ್ಲ ಎಂಬ ಸಂದೇಶವನ್ನು ಟಿಬಿಜೆಗೆ ರವಾನಿಸುತ್ತಿದ್ದಾರೆ. ಕೆಎನ್.ಆರ್ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಹಾಗಾಗಿ ಇಲ್ಲಿ ಜಯಚಂದ್ರ ಅವರಿಗೆ ಹೊಡೆತ ಬೀಳುವುದು ಗ್ಯಾರೆಂಟಿ. ಶತ್ರು ಜೊತೆ ಕೈ ಜೋಡಿಸಿದರೆ ಗೆಲುವು ಯಾರದ್ದು ಇದೇ ಕುತೂಹಲ.

ಜೆಡಿಎಸ್ ನಲ್ಲಿ ಸಾಕಷ್ಟು ಆಕಾಂಕ್ಷಿಗಳ ಪಟ್ಟಿಯೇ ಇದೆ. ವಂಶಪಾರಂಪರ್ಯವನ್ನು ವಿರೋಧಿಸುವ ಗುಂಪು ಉಲ್ಟಾ ಹೊಡೆದರೆ ಅದು ಯಾರಿಗೆ ವರದಾನವಾಗಬಹುದು ಎಂಬ ಚರ್ಚೆ ನಡೆಯುತ್ತಲೇ ಇದೆ.


ಇದನ್ನೂ ಓದಿ: ಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...