Homeಕರ್ನಾಟಕಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ 'ಒಳೇಟು' ನೀಡುವರೇ ಕೆಎನ್ಆರ್?

ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಜೆಡಿಎಸ್ ನಲ್ಲಿ ಬಿ.ಸತ್ಯನಾರಾಯಣ ಕುಟುಂಬದ ಹೊರತಾಗಿ ಟಿಕೆಟ್ ನೀಡಬೇಕೆಂಬ ಕೂಗು ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿರುದ್ದ ಕೆ.ಎನ್ ರಾಜಣ್ಣ ತೊಡೆ ತಟ್ಟುತ್ತಿದ್ದಾರೆ.

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಮಾಡುವ ಮೊದಲೇ ರಾಜಕೀಯ ಚರ್ಚೆ ಜೋರಾಗಿದೆ.. ಉಪಚುನಾವಣೆ ಘೋಷಣೆಗೆ ಇನ್ನು ಮೂರು ತಿಂಗಳು ಕಾಯಬೇಕು. ಆದರೂ ಸ್ಪರ್ಧಾಳುಗಳ ನಡುವೆ ಪೈಪೋಟಿ ಬಿರುಸುಗೊಂಡಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ಒಬ್ಬರನ್ನೊಬ್ಬರು ಕಾಲೆಳೆಯುವ ಆಟ ಶುರುವಾಗಿದೆ.

ಜೆಡಿಎಸ್ ನಲ್ಲಿ ಬಿ.ಸತ್ಯನಾರಾಯಣ ಕುಟುಂಬದ ಹೊರತಾಗಿ ಟಿಕೆಟ್ ನೀಡಬೇಕೆಂಬ ಕೂಗು ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿರುದ್ದ ಕೆ.ಎನ್ ರಾಜಣ್ಣ ತೊಡೆ ತಟ್ಟುತ್ತಿದ್ದಾರೆ. ಹಾಗಾಗಿ ಈ ಬಾರಿ ಜೆಡಿಎಸ್ V/s ಜೆಡಿಎಸ್, ಕಾಂಗ್ರೆಸ್ V/s ಕಾಂಗ್ರೆಸ್ ನಡುವೆಯೇ ಸಮರ ನಡೆಯತೊಡಗಿದೆ. ಇದು ಆರಂಭದಲ್ಲೇ ಉಭಯ ಪಕ್ಷದ ವರಿಷ್ಠರಿಗೆ ತಲೆಬಿಸಿ ತಂದಿಟ್ಟಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಮಧುಗಿರಿಯಲ್ಲಿ ಕೆ.ಎನ್ ರಾಜಣ್ಣ ಸೋಲು ಕಂಡಿದ್ದರು. ಇದರಿಂದ ಗೆದ್ದೇ ಗೆಲ್ಲುವೆ ಎನ್ನುವ ರಾಜಣ್ಣನವರ ಅತೀವ ವಿಶ್ವಾಸಕ್ಕೆ ತೀವ್ರ ಪಟ್ಟು ಬಿದ್ದಿತ್ತು. 19 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಇಂತಹ ಹೀನಾಯ ಸೋಲಿಗೆ ಟಿ.ಬಿ.ಜಯಚಂದ್ರ ಕೊಡುಗೆಯೂ ಇತ್ತು ಎಂಬ ಆರೋಪವಿದೆ. ಇದರ ಸುಳಿವು ಅರಿತಿರುವ ಕೆ.ಎನ್ ರಾಜಣ್ಣ ಶಿರಾದಲ್ಲಿ ಸ್ಪರ್ಧಿಸುವ ಮಾತುಗಳನ್ನು ಆಡುತ್ತಿದ್ದಾರೆ.

ಈಗಾಗಲೇ ಎರಡು ಬಾರಿ ಪತ್ರಿಕಾಗೋಷ್ಠಿ ನಡೆಸಿ ಉಪಚುನಾವಣೆಗೆ ತಾನೂ ಕೂಡ ಅಭ್ಯರ್ಥಿ ಆಕಾಂಕ್ಷಿ ಎಂದಿದ್ದಾರೆ. ಹೀಗೆ ಹೇಳುವ ಮೂಲಕ ಟಿ.ಬಿ.ಜಯಚಂದ್ರ ಬಂಡಾಯವೇಳುವಂತೆ ಮಾಡುತ್ತಿದ್ದಾರೆ. ತನ್ನ ಸೋಲಿಗೆ ಕಾರಣರಾದ ಟಿ.ಬಿ.ಜಯಚಂದ್ರ ಅವರಿಗೆ ‘ಒಳಏಟು’ ನೀಡಲು ರಾಜಣ್ಣ ತೀರ್ಮಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಶಿರಾ ಶಾಸಕ, ಮಾಜಿ ಸಚಿವ ಬಿ.ಸತ್ಯನಾರಾಯಣ್ ನಿಧನ

ಶಿರಾದಲ್ಲಿ ರಾಜಣ್ಣ ಸರ್ಧೆಗೆ ರಾಜ್ಯ ವರಿಷ್ಠರು ಒಪ್ಪುವುದಿಲ್ಲ. ಟಿ.ಬಿ ಜಯಚಂದ್ರ ಅವರಿಗೆ ಟಿಕೆಟ್ ಖಚಿತ. ಇದು ರಾಜಣ್ಣ ಅವರಿಗೂ ಗೊತ್ತು. ಆದರೆ ತನ್ನನ್ನು ಸೋಲಿಸಿದ ವ್ಯಕ್ತಿಯ ವಿರುದ್ಧ ದಾಳ ಉರುಳಿಸುವ ಪ್ರಯತ್ನವನ್ನು ರಾಜಣ್ಣ ಬಿಟ್ಟುಕೊಡುವುದಿಲ್ಲವೆಂಬುದು ಗ್ಯಾರೆಂಟಿ. ಅದೇ ಕಾರಣಕ್ಕೆ ಶಿರಾ ಕ್ಷೇತ್ರದಲ್ಲೂ ತನ್ನ ಪ್ರಾಬಲ್ಯವಿದೆ. ತನ್ನ ಸಮುದಾಯದ ಮತಗಳು, ಹಿಂದುಳಿದ ವರ್ಗದ ಮತಗಳು ತನ್ನ ಬುಟ್ಟಿಯಲ್ಲಿವೆ ಎಂಬುದನ್ನು ರಾಜಣ್ಣ ಅವರು ಪಕ್ಷಕ್ಕೆ, ಜಯಚಂದ್ರರವರಿಗೆ ನೆನಪಿಸುತ್ತಿದ್ದಾರೆ. ತನ್ನ ಬೆಂಬಲವಿಲ್ಲದೇ ಗೆಲುವು ಅಷ್ಟು ಸುಲಭವಲ್ಲ ಎಂಬ ಸಂದೇಶವನ್ನು ಹರಿಬಿಡುತ್ತಿದ್ದಾರೆ.

ಕೆ.ಎನ್.ಆರ್ ‘ಮಾತಿನ ಗುಮ್ಮ’ನಿಗೆ ಟಿ.ಬಿ.ಜಯಚಂದ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಅಳುಕು ಇಲ್ಲದಿಲ್ಲ. ಯಾಕೆಂದರೆ ಕೆ.ಎನ್.ರಾಜಣ್ಣ ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷರು. ಡಿಸಿಸಿ ಬ್ಯಾಂಕ್ ಮೂಲಕ ರೈತರಿಗೆ ಸಾಲ ನೀಡಿ ಜನಮನ್ನಣೆ ಗಳಿಸಿದ್ದಾರೆ. ಇದರ ಮಹತ್ವವನ್ನು ಅರಿತಿರುವ ಟಿಬಿಜೆ ರಾಜಣ್ಣ ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ. ಮೌನವಾಗಿಯೇ ಎಲ್ಲವನ್ನೂ ಗಮನಿಸುತ್ತಲೇ ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಟಿ.ಬಿ.ಜೆ ನೆಚ್ಚಿಕೊಂಡಿರುವುದು ಗೊಲ್ಲರು, ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗದ ಮತಗಳನ್ನು. ಒಕ್ಕಲಿಗ ಮತಗಳು ಮೂರು ಪಕ್ಷಗಳಲ್ಲಿ ಹಂಚಿಕೆಯಾದರೂ ದಲಿತರು ಮತ್ತು ಹಿಂದುಳಿದ ವರ್ಗದ ಮತಗಳು ಗ್ಯಾರೆಂಟಿ ಬರಲಿವೆ ಎಂದು ಜಯಚಂದ್ರ ಅರಿತಿದ್ದಾರೆ. ಆದರೆ ನಾಯಕ ಸಮುದಾಯದ ಮತಗಳು 9 ಸಾವಿರ, ದಲಿತ ಮತಗಳು 56 ಸಾವಿರ, ಗೊಲ್ಲರ ಮತಗಳು 46 ಸಾವಿರ, ಮುಸ್ಲೀಂ ಮತಗಳು 12 ಸಾವಿರ, ಒಕ್ಕಲಿಗ ಮತಗಳು 41 ಸಾವಿರ, ಕುರುಬರ ಮತಗಳು 9 ಸಾವಿರ ಹೀಗೆ ಎಲ್ಲ ಜಾತಿಯ ಮತದಾರರು ರಾಜಣ್ಣನವರ ಮಾತುಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾರರು.

ಇದೇ ಕಾರಣಕ್ಕೆ ಕೆಎನ್ಆರ್ ತನ್ನ ಬುಟ್ಟಿಯಲ್ಲಿ ಸಾಕಷ್ಟು ಮತಗಳು ಇವೆ. ಅವು ‘ನಿಮಗೆ’ ಧಕ್ಕವುದಿಲ್ಲ ಎಂಬ ಸಂದೇಶವನ್ನು ಟಿಬಿಜೆಗೆ ರವಾನಿಸುತ್ತಿದ್ದಾರೆ. ಕೆಎನ್.ಆರ್ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಹಾಗಾಗಿ ಇಲ್ಲಿ ಜಯಚಂದ್ರ ಅವರಿಗೆ ಹೊಡೆತ ಬೀಳುವುದು ಗ್ಯಾರೆಂಟಿ. ಶತ್ರು ಜೊತೆ ಕೈ ಜೋಡಿಸಿದರೆ ಗೆಲುವು ಯಾರದ್ದು ಇದೇ ಕುತೂಹಲ.

ಜೆಡಿಎಸ್ ನಲ್ಲಿ ಸಾಕಷ್ಟು ಆಕಾಂಕ್ಷಿಗಳ ಪಟ್ಟಿಯೇ ಇದೆ. ವಂಶಪಾರಂಪರ್ಯವನ್ನು ವಿರೋಧಿಸುವ ಗುಂಪು ಉಲ್ಟಾ ಹೊಡೆದರೆ ಅದು ಯಾರಿಗೆ ವರದಾನವಾಗಬಹುದು ಎಂಬ ಚರ್ಚೆ ನಡೆಯುತ್ತಲೇ ಇದೆ.


ಇದನ್ನೂ ಓದಿ: ಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...