Homeಕರ್ನಾಟಕಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ 'ಒಳೇಟು' ನೀಡುವರೇ ಕೆಎನ್ಆರ್?

ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಜೆಡಿಎಸ್ ನಲ್ಲಿ ಬಿ.ಸತ್ಯನಾರಾಯಣ ಕುಟುಂಬದ ಹೊರತಾಗಿ ಟಿಕೆಟ್ ನೀಡಬೇಕೆಂಬ ಕೂಗು ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿರುದ್ದ ಕೆ.ಎನ್ ರಾಜಣ್ಣ ತೊಡೆ ತಟ್ಟುತ್ತಿದ್ದಾರೆ.

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಮಾಡುವ ಮೊದಲೇ ರಾಜಕೀಯ ಚರ್ಚೆ ಜೋರಾಗಿದೆ.. ಉಪಚುನಾವಣೆ ಘೋಷಣೆಗೆ ಇನ್ನು ಮೂರು ತಿಂಗಳು ಕಾಯಬೇಕು. ಆದರೂ ಸ್ಪರ್ಧಾಳುಗಳ ನಡುವೆ ಪೈಪೋಟಿ ಬಿರುಸುಗೊಂಡಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ಒಬ್ಬರನ್ನೊಬ್ಬರು ಕಾಲೆಳೆಯುವ ಆಟ ಶುರುವಾಗಿದೆ.

ಜೆಡಿಎಸ್ ನಲ್ಲಿ ಬಿ.ಸತ್ಯನಾರಾಯಣ ಕುಟುಂಬದ ಹೊರತಾಗಿ ಟಿಕೆಟ್ ನೀಡಬೇಕೆಂಬ ಕೂಗು ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿರುದ್ದ ಕೆ.ಎನ್ ರಾಜಣ್ಣ ತೊಡೆ ತಟ್ಟುತ್ತಿದ್ದಾರೆ. ಹಾಗಾಗಿ ಈ ಬಾರಿ ಜೆಡಿಎಸ್ V/s ಜೆಡಿಎಸ್, ಕಾಂಗ್ರೆಸ್ V/s ಕಾಂಗ್ರೆಸ್ ನಡುವೆಯೇ ಸಮರ ನಡೆಯತೊಡಗಿದೆ. ಇದು ಆರಂಭದಲ್ಲೇ ಉಭಯ ಪಕ್ಷದ ವರಿಷ್ಠರಿಗೆ ತಲೆಬಿಸಿ ತಂದಿಟ್ಟಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಮಧುಗಿರಿಯಲ್ಲಿ ಕೆ.ಎನ್ ರಾಜಣ್ಣ ಸೋಲು ಕಂಡಿದ್ದರು. ಇದರಿಂದ ಗೆದ್ದೇ ಗೆಲ್ಲುವೆ ಎನ್ನುವ ರಾಜಣ್ಣನವರ ಅತೀವ ವಿಶ್ವಾಸಕ್ಕೆ ತೀವ್ರ ಪಟ್ಟು ಬಿದ್ದಿತ್ತು. 19 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಇಂತಹ ಹೀನಾಯ ಸೋಲಿಗೆ ಟಿ.ಬಿ.ಜಯಚಂದ್ರ ಕೊಡುಗೆಯೂ ಇತ್ತು ಎಂಬ ಆರೋಪವಿದೆ. ಇದರ ಸುಳಿವು ಅರಿತಿರುವ ಕೆ.ಎನ್ ರಾಜಣ್ಣ ಶಿರಾದಲ್ಲಿ ಸ್ಪರ್ಧಿಸುವ ಮಾತುಗಳನ್ನು ಆಡುತ್ತಿದ್ದಾರೆ.

ಈಗಾಗಲೇ ಎರಡು ಬಾರಿ ಪತ್ರಿಕಾಗೋಷ್ಠಿ ನಡೆಸಿ ಉಪಚುನಾವಣೆಗೆ ತಾನೂ ಕೂಡ ಅಭ್ಯರ್ಥಿ ಆಕಾಂಕ್ಷಿ ಎಂದಿದ್ದಾರೆ. ಹೀಗೆ ಹೇಳುವ ಮೂಲಕ ಟಿ.ಬಿ.ಜಯಚಂದ್ರ ಬಂಡಾಯವೇಳುವಂತೆ ಮಾಡುತ್ತಿದ್ದಾರೆ. ತನ್ನ ಸೋಲಿಗೆ ಕಾರಣರಾದ ಟಿ.ಬಿ.ಜಯಚಂದ್ರ ಅವರಿಗೆ ‘ಒಳಏಟು’ ನೀಡಲು ರಾಜಣ್ಣ ತೀರ್ಮಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಶಿರಾ ಶಾಸಕ, ಮಾಜಿ ಸಚಿವ ಬಿ.ಸತ್ಯನಾರಾಯಣ್ ನಿಧನ

ಶಿರಾದಲ್ಲಿ ರಾಜಣ್ಣ ಸರ್ಧೆಗೆ ರಾಜ್ಯ ವರಿಷ್ಠರು ಒಪ್ಪುವುದಿಲ್ಲ. ಟಿ.ಬಿ ಜಯಚಂದ್ರ ಅವರಿಗೆ ಟಿಕೆಟ್ ಖಚಿತ. ಇದು ರಾಜಣ್ಣ ಅವರಿಗೂ ಗೊತ್ತು. ಆದರೆ ತನ್ನನ್ನು ಸೋಲಿಸಿದ ವ್ಯಕ್ತಿಯ ವಿರುದ್ಧ ದಾಳ ಉರುಳಿಸುವ ಪ್ರಯತ್ನವನ್ನು ರಾಜಣ್ಣ ಬಿಟ್ಟುಕೊಡುವುದಿಲ್ಲವೆಂಬುದು ಗ್ಯಾರೆಂಟಿ. ಅದೇ ಕಾರಣಕ್ಕೆ ಶಿರಾ ಕ್ಷೇತ್ರದಲ್ಲೂ ತನ್ನ ಪ್ರಾಬಲ್ಯವಿದೆ. ತನ್ನ ಸಮುದಾಯದ ಮತಗಳು, ಹಿಂದುಳಿದ ವರ್ಗದ ಮತಗಳು ತನ್ನ ಬುಟ್ಟಿಯಲ್ಲಿವೆ ಎಂಬುದನ್ನು ರಾಜಣ್ಣ ಅವರು ಪಕ್ಷಕ್ಕೆ, ಜಯಚಂದ್ರರವರಿಗೆ ನೆನಪಿಸುತ್ತಿದ್ದಾರೆ. ತನ್ನ ಬೆಂಬಲವಿಲ್ಲದೇ ಗೆಲುವು ಅಷ್ಟು ಸುಲಭವಲ್ಲ ಎಂಬ ಸಂದೇಶವನ್ನು ಹರಿಬಿಡುತ್ತಿದ್ದಾರೆ.

ಕೆ.ಎನ್.ಆರ್ ‘ಮಾತಿನ ಗುಮ್ಮ’ನಿಗೆ ಟಿ.ಬಿ.ಜಯಚಂದ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಅಳುಕು ಇಲ್ಲದಿಲ್ಲ. ಯಾಕೆಂದರೆ ಕೆ.ಎನ್.ರಾಜಣ್ಣ ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷರು. ಡಿಸಿಸಿ ಬ್ಯಾಂಕ್ ಮೂಲಕ ರೈತರಿಗೆ ಸಾಲ ನೀಡಿ ಜನಮನ್ನಣೆ ಗಳಿಸಿದ್ದಾರೆ. ಇದರ ಮಹತ್ವವನ್ನು ಅರಿತಿರುವ ಟಿಬಿಜೆ ರಾಜಣ್ಣ ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ. ಮೌನವಾಗಿಯೇ ಎಲ್ಲವನ್ನೂ ಗಮನಿಸುತ್ತಲೇ ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಟಿ.ಬಿ.ಜೆ ನೆಚ್ಚಿಕೊಂಡಿರುವುದು ಗೊಲ್ಲರು, ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗದ ಮತಗಳನ್ನು. ಒಕ್ಕಲಿಗ ಮತಗಳು ಮೂರು ಪಕ್ಷಗಳಲ್ಲಿ ಹಂಚಿಕೆಯಾದರೂ ದಲಿತರು ಮತ್ತು ಹಿಂದುಳಿದ ವರ್ಗದ ಮತಗಳು ಗ್ಯಾರೆಂಟಿ ಬರಲಿವೆ ಎಂದು ಜಯಚಂದ್ರ ಅರಿತಿದ್ದಾರೆ. ಆದರೆ ನಾಯಕ ಸಮುದಾಯದ ಮತಗಳು 9 ಸಾವಿರ, ದಲಿತ ಮತಗಳು 56 ಸಾವಿರ, ಗೊಲ್ಲರ ಮತಗಳು 46 ಸಾವಿರ, ಮುಸ್ಲೀಂ ಮತಗಳು 12 ಸಾವಿರ, ಒಕ್ಕಲಿಗ ಮತಗಳು 41 ಸಾವಿರ, ಕುರುಬರ ಮತಗಳು 9 ಸಾವಿರ ಹೀಗೆ ಎಲ್ಲ ಜಾತಿಯ ಮತದಾರರು ರಾಜಣ್ಣನವರ ಮಾತುಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾರರು.

ಇದೇ ಕಾರಣಕ್ಕೆ ಕೆಎನ್ಆರ್ ತನ್ನ ಬುಟ್ಟಿಯಲ್ಲಿ ಸಾಕಷ್ಟು ಮತಗಳು ಇವೆ. ಅವು ‘ನಿಮಗೆ’ ಧಕ್ಕವುದಿಲ್ಲ ಎಂಬ ಸಂದೇಶವನ್ನು ಟಿಬಿಜೆಗೆ ರವಾನಿಸುತ್ತಿದ್ದಾರೆ. ಕೆಎನ್.ಆರ್ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಹಾಗಾಗಿ ಇಲ್ಲಿ ಜಯಚಂದ್ರ ಅವರಿಗೆ ಹೊಡೆತ ಬೀಳುವುದು ಗ್ಯಾರೆಂಟಿ. ಶತ್ರು ಜೊತೆ ಕೈ ಜೋಡಿಸಿದರೆ ಗೆಲುವು ಯಾರದ್ದು ಇದೇ ಕುತೂಹಲ.

ಜೆಡಿಎಸ್ ನಲ್ಲಿ ಸಾಕಷ್ಟು ಆಕಾಂಕ್ಷಿಗಳ ಪಟ್ಟಿಯೇ ಇದೆ. ವಂಶಪಾರಂಪರ್ಯವನ್ನು ವಿರೋಧಿಸುವ ಗುಂಪು ಉಲ್ಟಾ ಹೊಡೆದರೆ ಅದು ಯಾರಿಗೆ ವರದಾನವಾಗಬಹುದು ಎಂಬ ಚರ್ಚೆ ನಡೆಯುತ್ತಲೇ ಇದೆ.


ಇದನ್ನೂ ಓದಿ: ಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...