Homeಕರ್ನಾಟಕಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ 'ಒಳೇಟು' ನೀಡುವರೇ ಕೆಎನ್ಆರ್?

ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಜೆಡಿಎಸ್ ನಲ್ಲಿ ಬಿ.ಸತ್ಯನಾರಾಯಣ ಕುಟುಂಬದ ಹೊರತಾಗಿ ಟಿಕೆಟ್ ನೀಡಬೇಕೆಂಬ ಕೂಗು ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿರುದ್ದ ಕೆ.ಎನ್ ರಾಜಣ್ಣ ತೊಡೆ ತಟ್ಟುತ್ತಿದ್ದಾರೆ.

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆ ಮಾಡುವ ಮೊದಲೇ ರಾಜಕೀಯ ಚರ್ಚೆ ಜೋರಾಗಿದೆ.. ಉಪಚುನಾವಣೆ ಘೋಷಣೆಗೆ ಇನ್ನು ಮೂರು ತಿಂಗಳು ಕಾಯಬೇಕು. ಆದರೂ ಸ್ಪರ್ಧಾಳುಗಳ ನಡುವೆ ಪೈಪೋಟಿ ಬಿರುಸುಗೊಂಡಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ಒಬ್ಬರನ್ನೊಬ್ಬರು ಕಾಲೆಳೆಯುವ ಆಟ ಶುರುವಾಗಿದೆ.

ಜೆಡಿಎಸ್ ನಲ್ಲಿ ಬಿ.ಸತ್ಯನಾರಾಯಣ ಕುಟುಂಬದ ಹೊರತಾಗಿ ಟಿಕೆಟ್ ನೀಡಬೇಕೆಂಬ ಕೂಗು ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ವಿರುದ್ದ ಕೆ.ಎನ್ ರಾಜಣ್ಣ ತೊಡೆ ತಟ್ಟುತ್ತಿದ್ದಾರೆ. ಹಾಗಾಗಿ ಈ ಬಾರಿ ಜೆಡಿಎಸ್ V/s ಜೆಡಿಎಸ್, ಕಾಂಗ್ರೆಸ್ V/s ಕಾಂಗ್ರೆಸ್ ನಡುವೆಯೇ ಸಮರ ನಡೆಯತೊಡಗಿದೆ. ಇದು ಆರಂಭದಲ್ಲೇ ಉಭಯ ಪಕ್ಷದ ವರಿಷ್ಠರಿಗೆ ತಲೆಬಿಸಿ ತಂದಿಟ್ಟಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಮಧುಗಿರಿಯಲ್ಲಿ ಕೆ.ಎನ್ ರಾಜಣ್ಣ ಸೋಲು ಕಂಡಿದ್ದರು. ಇದರಿಂದ ಗೆದ್ದೇ ಗೆಲ್ಲುವೆ ಎನ್ನುವ ರಾಜಣ್ಣನವರ ಅತೀವ ವಿಶ್ವಾಸಕ್ಕೆ ತೀವ್ರ ಪಟ್ಟು ಬಿದ್ದಿತ್ತು. 19 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಇಂತಹ ಹೀನಾಯ ಸೋಲಿಗೆ ಟಿ.ಬಿ.ಜಯಚಂದ್ರ ಕೊಡುಗೆಯೂ ಇತ್ತು ಎಂಬ ಆರೋಪವಿದೆ. ಇದರ ಸುಳಿವು ಅರಿತಿರುವ ಕೆ.ಎನ್ ರಾಜಣ್ಣ ಶಿರಾದಲ್ಲಿ ಸ್ಪರ್ಧಿಸುವ ಮಾತುಗಳನ್ನು ಆಡುತ್ತಿದ್ದಾರೆ.

ಈಗಾಗಲೇ ಎರಡು ಬಾರಿ ಪತ್ರಿಕಾಗೋಷ್ಠಿ ನಡೆಸಿ ಉಪಚುನಾವಣೆಗೆ ತಾನೂ ಕೂಡ ಅಭ್ಯರ್ಥಿ ಆಕಾಂಕ್ಷಿ ಎಂದಿದ್ದಾರೆ. ಹೀಗೆ ಹೇಳುವ ಮೂಲಕ ಟಿ.ಬಿ.ಜಯಚಂದ್ರ ಬಂಡಾಯವೇಳುವಂತೆ ಮಾಡುತ್ತಿದ್ದಾರೆ. ತನ್ನ ಸೋಲಿಗೆ ಕಾರಣರಾದ ಟಿ.ಬಿ.ಜಯಚಂದ್ರ ಅವರಿಗೆ ‘ಒಳಏಟು’ ನೀಡಲು ರಾಜಣ್ಣ ತೀರ್ಮಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಶಿರಾ ಶಾಸಕ, ಮಾಜಿ ಸಚಿವ ಬಿ.ಸತ್ಯನಾರಾಯಣ್ ನಿಧನ

ಶಿರಾದಲ್ಲಿ ರಾಜಣ್ಣ ಸರ್ಧೆಗೆ ರಾಜ್ಯ ವರಿಷ್ಠರು ಒಪ್ಪುವುದಿಲ್ಲ. ಟಿ.ಬಿ ಜಯಚಂದ್ರ ಅವರಿಗೆ ಟಿಕೆಟ್ ಖಚಿತ. ಇದು ರಾಜಣ್ಣ ಅವರಿಗೂ ಗೊತ್ತು. ಆದರೆ ತನ್ನನ್ನು ಸೋಲಿಸಿದ ವ್ಯಕ್ತಿಯ ವಿರುದ್ಧ ದಾಳ ಉರುಳಿಸುವ ಪ್ರಯತ್ನವನ್ನು ರಾಜಣ್ಣ ಬಿಟ್ಟುಕೊಡುವುದಿಲ್ಲವೆಂಬುದು ಗ್ಯಾರೆಂಟಿ. ಅದೇ ಕಾರಣಕ್ಕೆ ಶಿರಾ ಕ್ಷೇತ್ರದಲ್ಲೂ ತನ್ನ ಪ್ರಾಬಲ್ಯವಿದೆ. ತನ್ನ ಸಮುದಾಯದ ಮತಗಳು, ಹಿಂದುಳಿದ ವರ್ಗದ ಮತಗಳು ತನ್ನ ಬುಟ್ಟಿಯಲ್ಲಿವೆ ಎಂಬುದನ್ನು ರಾಜಣ್ಣ ಅವರು ಪಕ್ಷಕ್ಕೆ, ಜಯಚಂದ್ರರವರಿಗೆ ನೆನಪಿಸುತ್ತಿದ್ದಾರೆ. ತನ್ನ ಬೆಂಬಲವಿಲ್ಲದೇ ಗೆಲುವು ಅಷ್ಟು ಸುಲಭವಲ್ಲ ಎಂಬ ಸಂದೇಶವನ್ನು ಹರಿಬಿಡುತ್ತಿದ್ದಾರೆ.

ಕೆ.ಎನ್.ಆರ್ ‘ಮಾತಿನ ಗುಮ್ಮ’ನಿಗೆ ಟಿ.ಬಿ.ಜಯಚಂದ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಅಳುಕು ಇಲ್ಲದಿಲ್ಲ. ಯಾಕೆಂದರೆ ಕೆ.ಎನ್.ರಾಜಣ್ಣ ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷರು. ಡಿಸಿಸಿ ಬ್ಯಾಂಕ್ ಮೂಲಕ ರೈತರಿಗೆ ಸಾಲ ನೀಡಿ ಜನಮನ್ನಣೆ ಗಳಿಸಿದ್ದಾರೆ. ಇದರ ಮಹತ್ವವನ್ನು ಅರಿತಿರುವ ಟಿಬಿಜೆ ರಾಜಣ್ಣ ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ. ಮೌನವಾಗಿಯೇ ಎಲ್ಲವನ್ನೂ ಗಮನಿಸುತ್ತಲೇ ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಟಿ.ಬಿ.ಜೆ ನೆಚ್ಚಿಕೊಂಡಿರುವುದು ಗೊಲ್ಲರು, ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ವರ್ಗದ ಮತಗಳನ್ನು. ಒಕ್ಕಲಿಗ ಮತಗಳು ಮೂರು ಪಕ್ಷಗಳಲ್ಲಿ ಹಂಚಿಕೆಯಾದರೂ ದಲಿತರು ಮತ್ತು ಹಿಂದುಳಿದ ವರ್ಗದ ಮತಗಳು ಗ್ಯಾರೆಂಟಿ ಬರಲಿವೆ ಎಂದು ಜಯಚಂದ್ರ ಅರಿತಿದ್ದಾರೆ. ಆದರೆ ನಾಯಕ ಸಮುದಾಯದ ಮತಗಳು 9 ಸಾವಿರ, ದಲಿತ ಮತಗಳು 56 ಸಾವಿರ, ಗೊಲ್ಲರ ಮತಗಳು 46 ಸಾವಿರ, ಮುಸ್ಲೀಂ ಮತಗಳು 12 ಸಾವಿರ, ಒಕ್ಕಲಿಗ ಮತಗಳು 41 ಸಾವಿರ, ಕುರುಬರ ಮತಗಳು 9 ಸಾವಿರ ಹೀಗೆ ಎಲ್ಲ ಜಾತಿಯ ಮತದಾರರು ರಾಜಣ್ಣನವರ ಮಾತುಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾರರು.

ಇದೇ ಕಾರಣಕ್ಕೆ ಕೆಎನ್ಆರ್ ತನ್ನ ಬುಟ್ಟಿಯಲ್ಲಿ ಸಾಕಷ್ಟು ಮತಗಳು ಇವೆ. ಅವು ‘ನಿಮಗೆ’ ಧಕ್ಕವುದಿಲ್ಲ ಎಂಬ ಸಂದೇಶವನ್ನು ಟಿಬಿಜೆಗೆ ರವಾನಿಸುತ್ತಿದ್ದಾರೆ. ಕೆಎನ್.ಆರ್ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಹಾಗಾಗಿ ಇಲ್ಲಿ ಜಯಚಂದ್ರ ಅವರಿಗೆ ಹೊಡೆತ ಬೀಳುವುದು ಗ್ಯಾರೆಂಟಿ. ಶತ್ರು ಜೊತೆ ಕೈ ಜೋಡಿಸಿದರೆ ಗೆಲುವು ಯಾರದ್ದು ಇದೇ ಕುತೂಹಲ.

ಜೆಡಿಎಸ್ ನಲ್ಲಿ ಸಾಕಷ್ಟು ಆಕಾಂಕ್ಷಿಗಳ ಪಟ್ಟಿಯೇ ಇದೆ. ವಂಶಪಾರಂಪರ್ಯವನ್ನು ವಿರೋಧಿಸುವ ಗುಂಪು ಉಲ್ಟಾ ಹೊಡೆದರೆ ಅದು ಯಾರಿಗೆ ವರದಾನವಾಗಬಹುದು ಎಂಬ ಚರ್ಚೆ ನಡೆಯುತ್ತಲೇ ಇದೆ.


ಇದನ್ನೂ ಓದಿ: ಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...