Homeಮುಖಪುಟಶಿರಾ ಉಪಚುನಾವಣೆ: ಅಭಿವೃದ್ದಿ ಮಂತ್ರ ಜಪಿಸಿದ ಕಾಂಗ್ರೆಸ್

ಶಿರಾ ಉಪಚುನಾವಣೆ: ಅಭಿವೃದ್ದಿ ಮಂತ್ರ ಜಪಿಸಿದ ಕಾಂಗ್ರೆಸ್

ವೇದಿಕೆಯಲ್ಲಿ ಮಾತನಾಡಿದ ಬಹುತೇಕ ಮುಖಂಡರು ಉಪಚುನಾವಣೆಯನ್ನು ನಿರ್ಲಕ್ಷಿಸುವಂತಿಲ್ಲ, ಇದು ಕಾಂಗ್ರೆಸ್ ಪಕ್ಷದ ಅಳಿವು-ಉಳಿವಿನ ಪ್ರಶ್ನೆ. ಇಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲೇಬೇಕು ಎಂದರು.

- Advertisement -
- Advertisement -

ಶಿರಾ ಉಪಚುನಾವಣೆಯ ಪ್ರಚಾರ ದಿನದಿಂದ ದಿನಕ್ಕೆ ಕಾವೇರತೊಡಗಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರು ಪಕ್ಷಗಳು ಸಾಮಾಜಿಕ ಮಾಧ್ಯಮದಲ್ಲಿ ಜೋರಾಗಿ ಸದ್ದು ಮಾಡತೊಡಗಿವೆ. ದೇವಾಲಯಗಳಿಗೆ ಹಣ, ಮದಲೂರು ಕೆರೆಗೆ ನೀರು ಹರಿಸುವುದು, ಕ್ಷೇತ್ರದ ಅಭಿವೃದ್ಧಿ ವಿಷಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿವೆ.

ಬಿಜೆಪಿ ಮಿನಿವಿಧಾನಸೌಧ ಉದ್ಘಾಟಿಸಿ ಪ್ರಚಾರಕ್ಕೆ ನಾಂದಿ ಹಾಡಿದ್ದರೆ, ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಸಭೆ ನಡೆಸಿ ಪಕ್ಷ ಸಂಘಟನೆಗೆ ಮುಂದಾಗಿದೆ. ಜೆಡಿಎಸ್ ಬೆಂಗಳೂರಿನಲ್ಲಿ ಕಾರ್ಯಕರ್ತರ ಸಭೆ ನಡೆಸಿದೆ. ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮೂರು ಪಕ್ಷಗಳು ಇನ್ನಿಲ್ಲದ ತಂತ್ರಗಳನ್ನು ಹೆಣೆಯುತ್ತಿವೆ.

ಶಿರಾ ನಗರದ ಕಲ್ಯಾಣ ಮಂಟಪವೊಂದರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆದಿದೆ. ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಆ ಮೂಲಕ ಮತದಾರರನ್ನು ನೇರವಾಗಿ ತಲುಪುವ ಕಾರ್ಯಕ್ಕೆ ಕಾಂಗ್ರೆಸ್ ತಯಾರಿ ನಡೆಸಿದೆ. ಕಾರ್ಯಕರ್ತರ ಸಭೆಯಲ್ಲಿ ಮುಖಂಡರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಕಾರ್ಯಕರ್ತರು ಪಕ್ಷದ ಗೆಲುವಿಗೆ ಶ್ರಮವಹಿಸಬೇಕು. ಸರ್ಕಾರದ ಲೋಪದೋಷಗಳು, ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಂದೇಶ ರವಾನಿಸಲಾಗಿದೆ.

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮಾತನಾಡಿ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆಯಿತು. ಯಾವುದೇ ಅಭಿವೃದ್ಧಿ ಆಗಿಲ್ಲ. ಜನರಲ್ಲಿ ಗೊಂದಲಗಳನ್ನು ಸೃಷ್ಟಿ ಮಾಡುತ್ತಿದೆ. ಕೊರೊನ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿದೆ. ನಮಗೆ ಅಧಿಕಾರ ಕೊಡಿ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ. ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದೇ ವಿಷಯವನ್ನು ಚುನಾವಣೆಯಲ್ಲಿ ಜನರಿಗೆ ತಿಳಿಸಬೇಕು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳು, ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಮತ ಯಾಚನೆ ಮಾಡಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ನಾನು ಸಚಿವ, ಶಾಸಕನಾಗಿದ್ದ ಸಂದರ್ಭದಲ್ಲಿ ಶಿರಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಚೆಕ್ ಡ್ಯಾಂಗಳನ್ನು ನಿರ್ಮಿಸಿದ್ದೇನೆ. ಹೇಮಾವತಿ ನೀರನ್ನು ಶಿರಾದ ಕೆರೆಗಳಿಗೆ ಹರಿಸಿದ್ದೇನೆ. ಮದಲೂರು ಕೆರೆಗೂ 42 ದಿನ ನೀರು ಹರಿಸಲಾಗಿದೆ. ಕ್ಷೇತ್ರದಲ್ಲಿ ನಾನು ಸಾಕಷ್ಟು ಅಬಿವೃದ್ಧಿ ಮಾಡಿದ್ದೇನೆ. ನನಗೆ ಜನರೇ ದೇವರು. ನೀವು ನನಗೆ ಶಕ್ತಿ ನೀಡಿ. ಜನರ ಸೇವೆಯನ್ನು ಮಾಡುತ್ತೇನೆ. ಋಣ ತೀರಿಸುತ್ತೇನೆ ಎಂದು ಹೇಳಿದರು.

ವೇದಿಕೆಯಲ್ಲಿ ಮಾತನಾಡಿದ ಬಹುತೇಕ ಮುಖಂಡರು ಉಪಚುನಾವಣೆಯನ್ನು ನಿರ್ಲಕ್ಷಿಸುವಂತಿಲ್ಲ, ಇದು ಕಾಂಗ್ರೆಸ್ ಪಕ್ಷದ ಅಳಿವು-ಉಳಿವಿನ ಪ್ರಶ್ನೆ. ಇಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲೇಬೇಕು ಎಂದರು. ಬಿಜೆಪಿ ಭಾವನಾತ್ಮಕ ವಿಷಯಗಳನ್ನು ಎತ್ತಿದರೆ, ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳನ್ನು ಮುಂದಿಡುತ್ತಿದೆ. ಜೆಡಿಎಸ್ ಅನುಕಂಪದ ಅಲೆಯಲ್ಲೇ ಮುಳುಗಿದೆ ಎಂದು ಟೀಕಾಪ್ರಹಾರ ನಡೆಸಿದರು.


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...