Homeಮುಖಪುಟಶಿರಾ ಉಪಚುನಾವಣೆ: ಅಭಿವೃದ್ದಿ ಮಂತ್ರ ಜಪಿಸಿದ ಕಾಂಗ್ರೆಸ್

ಶಿರಾ ಉಪಚುನಾವಣೆ: ಅಭಿವೃದ್ದಿ ಮಂತ್ರ ಜಪಿಸಿದ ಕಾಂಗ್ರೆಸ್

ವೇದಿಕೆಯಲ್ಲಿ ಮಾತನಾಡಿದ ಬಹುತೇಕ ಮುಖಂಡರು ಉಪಚುನಾವಣೆಯನ್ನು ನಿರ್ಲಕ್ಷಿಸುವಂತಿಲ್ಲ, ಇದು ಕಾಂಗ್ರೆಸ್ ಪಕ್ಷದ ಅಳಿವು-ಉಳಿವಿನ ಪ್ರಶ್ನೆ. ಇಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲೇಬೇಕು ಎಂದರು.

- Advertisement -
- Advertisement -

ಶಿರಾ ಉಪಚುನಾವಣೆಯ ಪ್ರಚಾರ ದಿನದಿಂದ ದಿನಕ್ಕೆ ಕಾವೇರತೊಡಗಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರು ಪಕ್ಷಗಳು ಸಾಮಾಜಿಕ ಮಾಧ್ಯಮದಲ್ಲಿ ಜೋರಾಗಿ ಸದ್ದು ಮಾಡತೊಡಗಿವೆ. ದೇವಾಲಯಗಳಿಗೆ ಹಣ, ಮದಲೂರು ಕೆರೆಗೆ ನೀರು ಹರಿಸುವುದು, ಕ್ಷೇತ್ರದ ಅಭಿವೃದ್ಧಿ ವಿಷಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿವೆ.

ಬಿಜೆಪಿ ಮಿನಿವಿಧಾನಸೌಧ ಉದ್ಘಾಟಿಸಿ ಪ್ರಚಾರಕ್ಕೆ ನಾಂದಿ ಹಾಡಿದ್ದರೆ, ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಸಭೆ ನಡೆಸಿ ಪಕ್ಷ ಸಂಘಟನೆಗೆ ಮುಂದಾಗಿದೆ. ಜೆಡಿಎಸ್ ಬೆಂಗಳೂರಿನಲ್ಲಿ ಕಾರ್ಯಕರ್ತರ ಸಭೆ ನಡೆಸಿದೆ. ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮೂರು ಪಕ್ಷಗಳು ಇನ್ನಿಲ್ಲದ ತಂತ್ರಗಳನ್ನು ಹೆಣೆಯುತ್ತಿವೆ.

ಶಿರಾ ನಗರದ ಕಲ್ಯಾಣ ಮಂಟಪವೊಂದರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆದಿದೆ. ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಆ ಮೂಲಕ ಮತದಾರರನ್ನು ನೇರವಾಗಿ ತಲುಪುವ ಕಾರ್ಯಕ್ಕೆ ಕಾಂಗ್ರೆಸ್ ತಯಾರಿ ನಡೆಸಿದೆ. ಕಾರ್ಯಕರ್ತರ ಸಭೆಯಲ್ಲಿ ಮುಖಂಡರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಕಾರ್ಯಕರ್ತರು ಪಕ್ಷದ ಗೆಲುವಿಗೆ ಶ್ರಮವಹಿಸಬೇಕು. ಸರ್ಕಾರದ ಲೋಪದೋಷಗಳು, ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಂದೇಶ ರವಾನಿಸಲಾಗಿದೆ.

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮಾತನಾಡಿ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆಯಿತು. ಯಾವುದೇ ಅಭಿವೃದ್ಧಿ ಆಗಿಲ್ಲ. ಜನರಲ್ಲಿ ಗೊಂದಲಗಳನ್ನು ಸೃಷ್ಟಿ ಮಾಡುತ್ತಿದೆ. ಕೊರೊನ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿದೆ. ನಮಗೆ ಅಧಿಕಾರ ಕೊಡಿ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ. ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದೇ ವಿಷಯವನ್ನು ಚುನಾವಣೆಯಲ್ಲಿ ಜನರಿಗೆ ತಿಳಿಸಬೇಕು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳು, ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಮತ ಯಾಚನೆ ಮಾಡಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ನಾನು ಸಚಿವ, ಶಾಸಕನಾಗಿದ್ದ ಸಂದರ್ಭದಲ್ಲಿ ಶಿರಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಚೆಕ್ ಡ್ಯಾಂಗಳನ್ನು ನಿರ್ಮಿಸಿದ್ದೇನೆ. ಹೇಮಾವತಿ ನೀರನ್ನು ಶಿರಾದ ಕೆರೆಗಳಿಗೆ ಹರಿಸಿದ್ದೇನೆ. ಮದಲೂರು ಕೆರೆಗೂ 42 ದಿನ ನೀರು ಹರಿಸಲಾಗಿದೆ. ಕ್ಷೇತ್ರದಲ್ಲಿ ನಾನು ಸಾಕಷ್ಟು ಅಬಿವೃದ್ಧಿ ಮಾಡಿದ್ದೇನೆ. ನನಗೆ ಜನರೇ ದೇವರು. ನೀವು ನನಗೆ ಶಕ್ತಿ ನೀಡಿ. ಜನರ ಸೇವೆಯನ್ನು ಮಾಡುತ್ತೇನೆ. ಋಣ ತೀರಿಸುತ್ತೇನೆ ಎಂದು ಹೇಳಿದರು.

ವೇದಿಕೆಯಲ್ಲಿ ಮಾತನಾಡಿದ ಬಹುತೇಕ ಮುಖಂಡರು ಉಪಚುನಾವಣೆಯನ್ನು ನಿರ್ಲಕ್ಷಿಸುವಂತಿಲ್ಲ, ಇದು ಕಾಂಗ್ರೆಸ್ ಪಕ್ಷದ ಅಳಿವು-ಉಳಿವಿನ ಪ್ರಶ್ನೆ. ಇಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲೇಬೇಕು ಎಂದರು. ಬಿಜೆಪಿ ಭಾವನಾತ್ಮಕ ವಿಷಯಗಳನ್ನು ಎತ್ತಿದರೆ, ಕಾಂಗ್ರೆಸ್ ಅಭಿವೃದ್ಧಿ ಕಾರ್ಯಗಳನ್ನು ಮುಂದಿಡುತ್ತಿದೆ. ಜೆಡಿಎಸ್ ಅನುಕಂಪದ ಅಲೆಯಲ್ಲೇ ಮುಳುಗಿದೆ ಎಂದು ಟೀಕಾಪ್ರಹಾರ ನಡೆಸಿದರು.


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...