Homeಕರ್ನಾಟಕಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ನೋಡಿ ಸ್ವಾಮಿ, ಶಿರಾ ಕ್ಷೇತ್ರದಲ್ಲಿ ಹಳೆ ಹುಲಿಗಳು ಇದ್ದರೆ ಮಾತ್ರ ಮತಗಳು ಬೀಳುತ್ತವೆ. ಇಲ್ಲಿ ಹೊಸಬರು ಮತ್ತು ಹೊಸ ನಾಣ್ಯಗಳು ಚಲಾವಣೆಯಾಗುವುದಿಲ್ಲ. ಕ್ಷೇತ್ರದ ಜನ ನಾಮಪತ್ರ ಸಲ್ಲಿಸುವವರೆಗೂ ಸುಮ್ಮನೆ ಲೆಕ್ಕಾಚಾರ ಮಾಡುತ್ತಾರೆ.

- Advertisement -
- Advertisement -

ಶಿರಾ ಕ್ಷೇತ್ರದ ಉಪಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇವೆ. ಬಹುತೇಕ ಮುಂದಿನ ವಾರದೊಳಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ. ಶಾಸಕ ಸತ್ಯನಾರಾಯಣ ನಿಧನದಿಂದ ತೆರವಾಗಿರುವ ಈ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳಲು ಮೂರೂ ಪಕ್ಷಗಳು ತೀವ್ರ ಕಸರತ್ತು ನಡೆಸಿವೆ. ಈ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಪ್ರಚಾರ ಬಿರುಸಾಗಿಯೇ ಸಾಗಿದೆ. ಮೂರು ಪಕ್ಷಗಳ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಗುಂಪು ಚರ್ಚೆಗೂ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗಿದೆ. ಆದರೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷದಿಂದ ಯಾರು ಸ್ಪರ್ಧಿಸುತ್ತಾರೆಂಬ ಸ್ಪಷ್ಟ ಚಿತ್ರಣ ಇದುವರೆಗೂ ಗೋಚರಿಸಿಲ್ಲ. ಹೀಗಾಗಿ ಈ ಎರಡೂ ಪಕ್ಷಗಳಿಗೆ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಿನ ವಿಷಯವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ದಿನಕ್ಕೊಬ್ಬ ಆಕಾಂಕ್ಷಿಗಳ ಹೆಸರು ಚಾಲ್ತಿಗೆ ಬರುತ್ತಲೇ ಇವೆ.

ಬಿಜೆಪಿ ಶಿರಾದ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವ ವಿಷಯವನ್ನು ಮುನ್ನೆಲೆಗೆ ತಂದಿತು. ಅದು ಉರುಳಿಸಿದ ದಾಳ ಬಿಜೆಪಿಗೆ ಮುಳುವಾಯಿತು. ಕ್ಷೇತ್ರದ ಮತದಾರರ ಆಕ್ರೋಶಕ್ಕೆ ಗುರಿಯಾಗಬೇಕಾಯಿತು. ಇದು ಜನರಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಅದೇ ಕಾರಣಕ್ಕಾಗಿಯೇ ಕ್ಷೇತ್ರದ ಜನ ಮೊದಲು ಮದಲೂರು ಕೆರೆಗೆ ನೀರು ಹರಿಸಿ, ಬಳಿಕ ಮತ ಕೇಳಲು ಬನ್ನಿ ಎಂದು ಅಭ್ಯರ್ಥಿಗಳಿಗೆ ಸವಾಲು ಹಾಕಿದ್ದಾರೆ. ಜನರ ಈ ಸವಾಲನ್ನು ಸ್ವೀಕರಿಸಲು ಯಾವ ಅಭ್ಯರ್ಥಿಯೂ ಮುಂದೆ ಬಂದಿಲ್ಲ. ಕೇವಲ ಮತಕ್ಕಾಗಿ ಮದಲೂರು ಕೆರೆಗೆ ನೀರು ಹರಿಸುವ ವಿಷಯವನ್ನು ಪ್ರಸ್ತಾಪಿಸಿದರೆ ಜನ ಕಣ್ಣು ಮುಚ್ಚಿ ಓಟು ಹಾಕುತ್ತಾರೆಂಬ ಭ್ರಮೆಯನ್ನು ಬಿಡಬೇಕು ಎನ್ನುತ್ತಾರೆ ಕ್ಷೇತ್ರದ ಮತದಾರರು.

ಇದನ್ನೂ ಓದಿ: ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಸ್ಥಳೀಯ ಮುಖಂಡ ರಾಚಪ್ಪ ನಾನುಗೌರಿ.ಕಾಂ ಜೊತೆ ವಸ್ತುಸ್ಥಿತಿಯನ್ನು ಹಂಚಿಕೊಂಡರು.”ಬಿಜೆಪಿ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಸಮಸ್ಯೆ-ನೋವು ಆಲಿಸುತ್ತಿಲ್ಲ. ನದಿ ಜೋಡಣೆ, ಕಪ್ಪುಹಣ, ಭ್ರಷ್ಟಾಚಾರ ನಿರ್ಮೂಲನೆ ಮೊದಲಾದ ವಿಷಯಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ಗೆ 60 ವರ್ಷ ಆಳ್ವಿಕೆಗೆ ಅವಕಾಶ ಕೊಟ್ಟಿದ್ದೀರಿ. ನಮಗೆ 6 ವರ್ಷ ಕೊಡಿ ಎಂದು ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂತು. ಮೋದಿ ಪ್ರಧಾನಿ ಆದರು. ಜನರ ಪರವಾದ ಯೋಜನೆಗಳನ್ನೇ ಜಾರಿಗೊಳಿಸಲಿಲ್ಲ. ಅವರು ಕೊಟ್ಟ ಭರವಸೆಗಳು ನನ್ನ ಕಿವಿಯಲ್ಲಿ ಗುಯ್ ಗುಡುತ್ತಿವೆ. ಏನೂ ಕೆಲಸ ಆಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಶಿರಾ ಕ್ಷೇತ್ರಕ್ಕೆ ಬಿಜೆಪಿ ಏನು ಮಾಡಿದೆ. ಕಳೆದ ಒಂದು ವರ್ಷದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಭಿವೃದ್ಧಿ ಕೆಲಸಗಳನ್ನೇ ಮಾಡಿಲ್ಲ. ಶಾಸಕ ಬಿ.ಸತ್ಯನಾರಾಯಣ್ ಅವರಿದ್ದಾಗ ಜನರ ಸಮಸ್ಯೆಗಳಿಗೆ ಸ್ಪಂದಿಸಿದರು. ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಹಂಚಿಕೆ ಮಾಡಿದರು. ಬಡವರ ನೋವಿಗೆ ಮರುಗುತ್ತಿದ್ದರು. ಕೆಲಸ ಮಾಡಿಕೊಡುತ್ತಿದ್ದರು. ಮಾಜಿ ಸಚಿವ ಟಿ.ಬಿ.ಜಯಚಂದ್ರ ಕೂಡ ಸಾಕಷ್ಟು ಕೆಲಸ ಮಾಡಿದ್ದಾರೆ. ನೀರಾವರಿ ಯೋಜನೆಗಳನ್ನು ಶಿರಾಕ್ಕೆ ತಂದಿದ್ದಾರೆ. ಈಗ ಬಿಜೆಪಿ ಸರ್ಕಾರ ಇದೆ  ನಿಜ. ಹಾಗೆಂದು ಎಸ್.ಆರ್. ಗೌಡಗೆ ಟಿಕೆಟ್ ನೀಡಿದರೆ ಏನು ಕೆಲಸ ಮಾಡಬಲ್ಲ? ಅವರು ಕೇವಲ ಕಳ್ಳಂಬೆಳ್ಳ ಹೋಬಳಿಗೆ ಮಾತ್ರ ಸೀಮಿತರಾಗಿದ್ದಾರೆ” ಎನ್ನುತ್ತಾರೆ ರಾಚಪ್ಪ.

ಇದನ್ನೂ ಓದಿ: ಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ಬಿಜೆಪಿ, ಜೆಡಿಎಸ್ ಪಕ್ಷಗಳು ದೇವಾಲಯಗಳಿಗೆ ಹಣ ನೀಡುತ್ತಿವೆ. ಗೌಡಗೆರೆ ಹೋಬಳಿಯಲ್ಲಿ ಜೆಡಿಎಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷೆಯ ಪತಿ ಕಲ್ಕೆರೆ ರವಿ ಕುಮಾರ್ ಸುಮಾರು 25 ದೇವಾಲಯಗಳ ಗೋಪುರ ನಿರ್ಮಾಣ, ಪ್ರಾಂಗಣ ನಿರ್ಮಾಣ ಮಾಡಿಸಿಕೊಟ್ಟಿದ್ದಾರೆ. ಜನರ ಒಲವು ಅವರ ಪರವಾಗಿದೆ. ಈಗ ಬಿಜೆಪಿ ದೇವಾಲಯಗಳಿಗೆ ಹಣ ಹಂಚಿಕೆ ಮಾಡುತ್ತಿದೆ ಎಂಬ ಮಾತುಗಳು ಚರ್ಚೆಯಾಗುತ್ತಿವೆ ಎನ್ನುತ್ತಾರೆ ಕ್ಷೇತ್ರದ ಜನ.

“ನೋಡಿ ಸ್ವಾಮಿ, ಶಿರಾ ಕ್ಷೇತ್ರದಲ್ಲಿ ಹಳೆ ಹುಲಿಗಳು ಇದ್ದರೆ ಮಾತ್ರ ಮತಗಳು ಬೀಳುತ್ತವೆ. ಇಲ್ಲಿ ಹೊಸಬರು ಮತ್ತು ಹೊಸ ನಾಣ್ಯಗಳು ಚಲಾವಣೆಯಾಗುವುದಿಲ್ಲ. ಕ್ಷೇತ್ರದ ಜನ ನಾಮಪತ್ರ ಸಲ್ಲಿಸುವವರೆಗೂ ಸುಮ್ಮನೆ ಲೆಕ್ಕಾಚಾರ ಮಾಡುತ್ತಾರೆ. ಆನಂತರವೇ ಯಾರು ಸಮರ್ಥರು ಎಂಬುದನ್ನು ತೀರ್ಮಾನಿಸಿ ಒಮ್ಮತಕ್ಕೆ ಬಂದು ಮತ ಚಲಾಯಿಸುತ್ತಾರೆ. ತಕ್ಷಣವೇ ಈ ಕ್ಷೇತ್ರದ ಜನ ಗುಟ್ಟು ಬಿಟ್ಟುಕೊಡುವುದಿಲ್ಲ. ಬಿಜೆಪಿ ಹೊಸಬರನ್ನು ತಂದು ನಿಲ್ಲಿಸಿದರೆ ಬೀಳುವ ಮತಗಳು ಮತ್ತೊಂದು ಕಡೆ ಚಲಾವಣೆಗೊಳ್ಳುತ್ತವೆ” ಇವು ಕ್ಷೇತ್ರದ ಮತದಾರರ ಆಂತರ್ಯದ ಮಾತುಗಳು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ, ಕಾರ್ಮಿಕ ವಿರೋಧಿ ತಿದ್ದುಪಡಿ ಕಾಯ್ದೆಗಳು ಮತ್ತು ಸುಗ್ರೀವಾಜ್ಞೆಗಳನ್ನು ಅಂಗೀಕರಿಸಿವೆ. ರೈತ, ಕಾರ್ಮಿಕ, ದಲಿತ ಸಂಘಟನೆಗಳು ರೈತ ಕಾರ್ಮಿಕ ಮಸೂದೆಗಳನ್ನು ವಾಪಸ್ ಪಡೆಯುವಂತೆ ಹೋರಾಟ ಮಾಡುತ್ತಿವೆ. ಇದು ಜನರ ಮೇಲೆ ಪರಿಣಾಮ ಬೀರಿದ್ದು ಮತಗಳು ಕೂಡ ಆಡಳಿತ ಪಕ್ಷಕ್ಕೆ ವ್ಯತಿರಿಕ್ತವಾಗಿ ಬೀಳಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಪಕ್ಷಕ್ಕೆ ಸತ್ವಪರೀಕ್ಷೆಯಾಗಿದ್ದು, ಚುನಾವಣೆ ಗೆಲ್ಲಲೇಬೇಕು -ಎಚ್.ಡಿ.ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....