Homeಕರ್ನಾಟಕಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ನೋಡಿ ಸ್ವಾಮಿ, ಶಿರಾ ಕ್ಷೇತ್ರದಲ್ಲಿ ಹಳೆ ಹುಲಿಗಳು ಇದ್ದರೆ ಮಾತ್ರ ಮತಗಳು ಬೀಳುತ್ತವೆ. ಇಲ್ಲಿ ಹೊಸಬರು ಮತ್ತು ಹೊಸ ನಾಣ್ಯಗಳು ಚಲಾವಣೆಯಾಗುವುದಿಲ್ಲ. ಕ್ಷೇತ್ರದ ಜನ ನಾಮಪತ್ರ ಸಲ್ಲಿಸುವವರೆಗೂ ಸುಮ್ಮನೆ ಲೆಕ್ಕಾಚಾರ ಮಾಡುತ್ತಾರೆ.

- Advertisement -
- Advertisement -

ಶಿರಾ ಕ್ಷೇತ್ರದ ಉಪಚುನಾವಣೆ ಘೋಷಣೆಗೆ ಕೆಲವೇ ದಿನಗಳು ಬಾಕಿ ಇವೆ. ಬಹುತೇಕ ಮುಂದಿನ ವಾರದೊಳಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ. ಶಾಸಕ ಸತ್ಯನಾರಾಯಣ ನಿಧನದಿಂದ ತೆರವಾಗಿರುವ ಈ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳಲು ಮೂರೂ ಪಕ್ಷಗಳು ತೀವ್ರ ಕಸರತ್ತು ನಡೆಸಿವೆ. ಈ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆಗೂ ಮುನ್ನವೇ ಪ್ರಚಾರ ಬಿರುಸಾಗಿಯೇ ಸಾಗಿದೆ. ಮೂರು ಪಕ್ಷಗಳ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದ್ದು, ಗುಂಪು ಚರ್ಚೆಗೂ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಘೋಷಣೆಯಾಗಿದೆ. ಆದರೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷದಿಂದ ಯಾರು ಸ್ಪರ್ಧಿಸುತ್ತಾರೆಂಬ ಸ್ಪಷ್ಟ ಚಿತ್ರಣ ಇದುವರೆಗೂ ಗೋಚರಿಸಿಲ್ಲ. ಹೀಗಾಗಿ ಈ ಎರಡೂ ಪಕ್ಷಗಳಿಗೆ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಿನ ವಿಷಯವಾಗಿದೆ. ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ದಿನಕ್ಕೊಬ್ಬ ಆಕಾಂಕ್ಷಿಗಳ ಹೆಸರು ಚಾಲ್ತಿಗೆ ಬರುತ್ತಲೇ ಇವೆ.

ಬಿಜೆಪಿ ಶಿರಾದ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವ ವಿಷಯವನ್ನು ಮುನ್ನೆಲೆಗೆ ತಂದಿತು. ಅದು ಉರುಳಿಸಿದ ದಾಳ ಬಿಜೆಪಿಗೆ ಮುಳುವಾಯಿತು. ಕ್ಷೇತ್ರದ ಮತದಾರರ ಆಕ್ರೋಶಕ್ಕೆ ಗುರಿಯಾಗಬೇಕಾಯಿತು. ಇದು ಜನರಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಅದೇ ಕಾರಣಕ್ಕಾಗಿಯೇ ಕ್ಷೇತ್ರದ ಜನ ಮೊದಲು ಮದಲೂರು ಕೆರೆಗೆ ನೀರು ಹರಿಸಿ, ಬಳಿಕ ಮತ ಕೇಳಲು ಬನ್ನಿ ಎಂದು ಅಭ್ಯರ್ಥಿಗಳಿಗೆ ಸವಾಲು ಹಾಕಿದ್ದಾರೆ. ಜನರ ಈ ಸವಾಲನ್ನು ಸ್ವೀಕರಿಸಲು ಯಾವ ಅಭ್ಯರ್ಥಿಯೂ ಮುಂದೆ ಬಂದಿಲ್ಲ. ಕೇವಲ ಮತಕ್ಕಾಗಿ ಮದಲೂರು ಕೆರೆಗೆ ನೀರು ಹರಿಸುವ ವಿಷಯವನ್ನು ಪ್ರಸ್ತಾಪಿಸಿದರೆ ಜನ ಕಣ್ಣು ಮುಚ್ಚಿ ಓಟು ಹಾಕುತ್ತಾರೆಂಬ ಭ್ರಮೆಯನ್ನು ಬಿಡಬೇಕು ಎನ್ನುತ್ತಾರೆ ಕ್ಷೇತ್ರದ ಮತದಾರರು.

ಇದನ್ನೂ ಓದಿ: ಶಿರಾದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಸುರೇಶ್ ಗೌಡ ಹೇಳಿಕೆಗೆ ವ್ಯಾಪಕ ವಿರೋಧ

ಸ್ಥಳೀಯ ಮುಖಂಡ ರಾಚಪ್ಪ ನಾನುಗೌರಿ.ಕಾಂ ಜೊತೆ ವಸ್ತುಸ್ಥಿತಿಯನ್ನು ಹಂಚಿಕೊಂಡರು.”ಬಿಜೆಪಿ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಸಮಸ್ಯೆ-ನೋವು ಆಲಿಸುತ್ತಿಲ್ಲ. ನದಿ ಜೋಡಣೆ, ಕಪ್ಪುಹಣ, ಭ್ರಷ್ಟಾಚಾರ ನಿರ್ಮೂಲನೆ ಮೊದಲಾದ ವಿಷಯಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ಗೆ 60 ವರ್ಷ ಆಳ್ವಿಕೆಗೆ ಅವಕಾಶ ಕೊಟ್ಟಿದ್ದೀರಿ. ನಮಗೆ 6 ವರ್ಷ ಕೊಡಿ ಎಂದು ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂತು. ಮೋದಿ ಪ್ರಧಾನಿ ಆದರು. ಜನರ ಪರವಾದ ಯೋಜನೆಗಳನ್ನೇ ಜಾರಿಗೊಳಿಸಲಿಲ್ಲ. ಅವರು ಕೊಟ್ಟ ಭರವಸೆಗಳು ನನ್ನ ಕಿವಿಯಲ್ಲಿ ಗುಯ್ ಗುಡುತ್ತಿವೆ. ಏನೂ ಕೆಲಸ ಆಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಶಿರಾ ಕ್ಷೇತ್ರಕ್ಕೆ ಬಿಜೆಪಿ ಏನು ಮಾಡಿದೆ. ಕಳೆದ ಒಂದು ವರ್ಷದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಭಿವೃದ್ಧಿ ಕೆಲಸಗಳನ್ನೇ ಮಾಡಿಲ್ಲ. ಶಾಸಕ ಬಿ.ಸತ್ಯನಾರಾಯಣ್ ಅವರಿದ್ದಾಗ ಜನರ ಸಮಸ್ಯೆಗಳಿಗೆ ಸ್ಪಂದಿಸಿದರು. ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಹಂಚಿಕೆ ಮಾಡಿದರು. ಬಡವರ ನೋವಿಗೆ ಮರುಗುತ್ತಿದ್ದರು. ಕೆಲಸ ಮಾಡಿಕೊಡುತ್ತಿದ್ದರು. ಮಾಜಿ ಸಚಿವ ಟಿ.ಬಿ.ಜಯಚಂದ್ರ ಕೂಡ ಸಾಕಷ್ಟು ಕೆಲಸ ಮಾಡಿದ್ದಾರೆ. ನೀರಾವರಿ ಯೋಜನೆಗಳನ್ನು ಶಿರಾಕ್ಕೆ ತಂದಿದ್ದಾರೆ. ಈಗ ಬಿಜೆಪಿ ಸರ್ಕಾರ ಇದೆ  ನಿಜ. ಹಾಗೆಂದು ಎಸ್.ಆರ್. ಗೌಡಗೆ ಟಿಕೆಟ್ ನೀಡಿದರೆ ಏನು ಕೆಲಸ ಮಾಡಬಲ್ಲ? ಅವರು ಕೇವಲ ಕಳ್ಳಂಬೆಳ್ಳ ಹೋಬಳಿಗೆ ಮಾತ್ರ ಸೀಮಿತರಾಗಿದ್ದಾರೆ” ಎನ್ನುತ್ತಾರೆ ರಾಚಪ್ಪ.

ಇದನ್ನೂ ಓದಿ: ಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ಬಿಜೆಪಿ, ಜೆಡಿಎಸ್ ಪಕ್ಷಗಳು ದೇವಾಲಯಗಳಿಗೆ ಹಣ ನೀಡುತ್ತಿವೆ. ಗೌಡಗೆರೆ ಹೋಬಳಿಯಲ್ಲಿ ಜೆಡಿಎಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಅಧ್ಯಕ್ಷೆಯ ಪತಿ ಕಲ್ಕೆರೆ ರವಿ ಕುಮಾರ್ ಸುಮಾರು 25 ದೇವಾಲಯಗಳ ಗೋಪುರ ನಿರ್ಮಾಣ, ಪ್ರಾಂಗಣ ನಿರ್ಮಾಣ ಮಾಡಿಸಿಕೊಟ್ಟಿದ್ದಾರೆ. ಜನರ ಒಲವು ಅವರ ಪರವಾಗಿದೆ. ಈಗ ಬಿಜೆಪಿ ದೇವಾಲಯಗಳಿಗೆ ಹಣ ಹಂಚಿಕೆ ಮಾಡುತ್ತಿದೆ ಎಂಬ ಮಾತುಗಳು ಚರ್ಚೆಯಾಗುತ್ತಿವೆ ಎನ್ನುತ್ತಾರೆ ಕ್ಷೇತ್ರದ ಜನ.

“ನೋಡಿ ಸ್ವಾಮಿ, ಶಿರಾ ಕ್ಷೇತ್ರದಲ್ಲಿ ಹಳೆ ಹುಲಿಗಳು ಇದ್ದರೆ ಮಾತ್ರ ಮತಗಳು ಬೀಳುತ್ತವೆ. ಇಲ್ಲಿ ಹೊಸಬರು ಮತ್ತು ಹೊಸ ನಾಣ್ಯಗಳು ಚಲಾವಣೆಯಾಗುವುದಿಲ್ಲ. ಕ್ಷೇತ್ರದ ಜನ ನಾಮಪತ್ರ ಸಲ್ಲಿಸುವವರೆಗೂ ಸುಮ್ಮನೆ ಲೆಕ್ಕಾಚಾರ ಮಾಡುತ್ತಾರೆ. ಆನಂತರವೇ ಯಾರು ಸಮರ್ಥರು ಎಂಬುದನ್ನು ತೀರ್ಮಾನಿಸಿ ಒಮ್ಮತಕ್ಕೆ ಬಂದು ಮತ ಚಲಾಯಿಸುತ್ತಾರೆ. ತಕ್ಷಣವೇ ಈ ಕ್ಷೇತ್ರದ ಜನ ಗುಟ್ಟು ಬಿಟ್ಟುಕೊಡುವುದಿಲ್ಲ. ಬಿಜೆಪಿ ಹೊಸಬರನ್ನು ತಂದು ನಿಲ್ಲಿಸಿದರೆ ಬೀಳುವ ಮತಗಳು ಮತ್ತೊಂದು ಕಡೆ ಚಲಾವಣೆಗೊಳ್ಳುತ್ತವೆ” ಇವು ಕ್ಷೇತ್ರದ ಮತದಾರರ ಆಂತರ್ಯದ ಮಾತುಗಳು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ, ಕಾರ್ಮಿಕ ವಿರೋಧಿ ತಿದ್ದುಪಡಿ ಕಾಯ್ದೆಗಳು ಮತ್ತು ಸುಗ್ರೀವಾಜ್ಞೆಗಳನ್ನು ಅಂಗೀಕರಿಸಿವೆ. ರೈತ, ಕಾರ್ಮಿಕ, ದಲಿತ ಸಂಘಟನೆಗಳು ರೈತ ಕಾರ್ಮಿಕ ಮಸೂದೆಗಳನ್ನು ವಾಪಸ್ ಪಡೆಯುವಂತೆ ಹೋರಾಟ ಮಾಡುತ್ತಿವೆ. ಇದು ಜನರ ಮೇಲೆ ಪರಿಣಾಮ ಬೀರಿದ್ದು ಮತಗಳು ಕೂಡ ಆಡಳಿತ ಪಕ್ಷಕ್ಕೆ ವ್ಯತಿರಿಕ್ತವಾಗಿ ಬೀಳಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಪಕ್ಷಕ್ಕೆ ಸತ್ವಪರೀಕ್ಷೆಯಾಗಿದ್ದು, ಚುನಾವಣೆ ಗೆಲ್ಲಲೇಬೇಕು -ಎಚ್.ಡಿ.ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...