Homeಕರ್ನಾಟಕಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ಕಳೆದ 9 ತಿಂಗಳಿಂದ ಪಿಂಚಣಿ ಬಂದಿಲ್ಲ. ವಿಧವೆಯರು, ವೃದ್ಧರು, ವಿಶೇಷಚೇತನರು ಹೀಗೆ ಯಾರಿಗೂ ಕೂಡ ಸರ್ಕಾರ ಸಹಾಯಧನ ನೀಡಿಲ್ಲ. ಆದರೆ ಉಪಚುನಾವಣೆ ಕಾರಣಕ್ಕೆ ಬಿಜೆಪಿ ದೇವಾಲಯಗಳಿಗೆ ಹಣ ಸುರಿಯುತ್ತಿದೆ- ಟಿ.ಬಿ.ಜಯಚಂದ್ರ

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗದಿದ್ದರೂ ಸ್ಪರ್ಧಿ ಅಭ್ಯರ್ಥಿಗಳ ಕುರಿತು ಕ್ಷೇತ್ರದ ಮತದಾರರಲ್ಲಿ ಕುತೂಹಲ ಹೆಚ್ಚುತ್ತಲೇ ಇದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್ ಆಗಿದ್ದು ಬಿಜೆಪಿ ಅಭ್ಯರ್ಥಿ ಯಾರೆಂಬುದು ಅಂತಿಮಗೊಂಡಿಲ್ಲ.

ಸ್ಥಳೀಯ ಅಭ್ಯರ್ಥಿಯಾದರೆ ಸುಲಭವಾಗಿ ‘ಬುಕ್’ ಆಗಿ ಬಿಡುತ್ತಾರೆ. ‘ಮೇಲಿನ’ ಅಭ್ಯರ್ಥಿಯಾದರೆ ಒಗ್ಗಟ್ಟಿನ ಮಂತ್ರ ಜಪಿಸುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ಶಿರಾ ಕ್ಷೇತ್ರದ ಅಚ್ಚರಿ ಅಭ್ಯರ್ಥಿಯಾಗಿದ್ದಾರೆ ಎಂಬ ಮಾತುಗಳು ಕ್ಷೇತ್ರಾದ್ಯಂತ ಈಗ ಜೋರುದನಿಯಲ್ಲಿ ಕೇಳಿಬರತೊಡಗಿವೆ.

ಹೌದು, ಇದು ಅಚ್ಚರಿಯಾದರೂ ಕ್ಷೇತ್ರದ ಜನರಲ್ಲಿ ಬಿಜೆಪಿ ಹರಿಯಬಿಟ್ಟಿರುವ ಹೆಸರು. ಬಿ.ಸುರೇಶ್ ಗೌಡ ಈಗ ಬಿಜೆಪಿ ಜಿಲ್ಲಾಧ್ಯಕ್ಷ. ಮಾಜಿ ಶಾಸಕ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ವಿರುದ್ದ ಸೋಲನ್ನು ಕಂಡವರು. ಮುಂದಿನ ಚುನಾವಣೆಗೆ ಸ್ಪರ್ಧಿಸಲು ಇನ್ನೂ ಎರಡೂವರೆ ವರ್ಷ ಕಾಯಬೇಕು. ಅಲ್ಲಿವರೆಗೂ ಏನು ಮಾಡುವುದು? ಹಾಗಾಗಿ ಶಿರಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಯನ್ನಾಗಿ ಮಾಡಿ ಗೆಲ್ಲಿಸಿಕೊಳ್ಳುವುದು. ಆ ಮೂಲಕ ಒಂದು ಸ್ಥಾನ ಹೆಚ್ಚಿಸಿಕೊಳ್ಳುವುದು ಬಿಜೆಪಿಯ ಚಿಂತನೆಯಾಗಿದೆ ಎನ್ನಲಾಗುತ್ತಿದೆ.

ಬಿಜೆಪಿಗೆ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಗಳು ಯಾರೂ ಇಲ್ಲ. ಹಣವನ್ನು ಖರ್ಚು ಮಾಡುವವರು ಬೇಕು. ಅಂಥ ಕುಳಗಳು ಇಲ್ಲವೆಂಬುದು ಬಿಜೆಪಿಗೆ ಗೊತ್ತು. ಕಳೆದ ಚುನಾವಣೆಯಲ್ಲಿ ಬೇವಿನಹಳ್ಳಿ ಕೆ.ಮಂಜುನಾಥ್ ಅವರಿಗೆ ಬಿ.ಫಾರಂ ನೀಡಿದರೂ ತಾನು ನಿಲ್ಲುವುದಿಲ್ಲ ಎಂದು ಹೇಳಿದರು. ಹಾಗಾಗಿ ಎಸ್.ಆರ್. ಗೌಡ ಅವರಿಗೆ ಟಿಕೆಟ್ ನೀಡಲಾಯಿತು.

ಚುನಾವಣೆಯಲ್ಲಿ ಸೋತರೂ ಕೂಡ. ಬಿ.ಕೆ.ಮಂಜುನಾಥ್ ಸಮರ್ಥ ಅಭ್ಯರ್ಥಿಯಲ್ಲ. ಎಸ್. ಆರ್. ಗೌಡರಿಗೆ ಟಿಕೆಟ್ ನೀಡಿದರೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಅವರಿಬ್ಬರ ಪರವಾಗಿ ಕೆಸಲ ಮಾಡಲ್ಲ. ಇದು ಈಗ ಬಿಜೆಪಿ ರಾಜ್ಯ ವರಿಷ್ಠರಿಗೆ ತಲೆನೋವಾಗಿ ಪರಿಣಿಸಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಇದೇ ಕಾರಣಕ್ಕಾಗಿಯೇ ಹೊಸ ಮತ್ತು ಅಚ್ಚರಿಯ ಅಭ್ಯರ್ಥಿಯ ಹುಡುಕಾಟದಲ್ಲಿದ್ದ ಬಿಜೆಪಿ ಸುರೇಗೌಡ ಟ್ರಂಪ್ ಕಾರ್ಟ್ ಮುಂದಿಟ್ಟಿದೆ. ಹೇಗೋ ಬಿಜೆಪಿ ಅಧ್ಯಕ್ಷರು. ಕ್ಷೇತ್ರದ ಬಿಜೆಪಿಯ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಾಗಿ ಸುರೇಶ್ ಗೌಡ ಗೆಲುವಿಗೆ ಶ್ರಮಿಸುತ್ತಾರೆ. ಸುರೇಶ್ ಗೌಡ ಮುಖ್ಯಮಂತ್ರಿಗೂ ಆಪ್ತ. ಹಣವನ್ನೂ ಖರ್ಚು ಮಾಡಬಲ್ಲರು. ಚುನಾವಣೆಯಲ್ಲಿ ಸ್ಪರ್ಧಿಸಿ ತಂತ್ರಗಳನ್ನು ರಾಜಕೀಯ ಪಟ್ಟುಗಳನ್ನು ಹಾಕಿದ ಅನುಭವವೂ ಇದೆ. ಇದು ಬಿಜೆಪಿ ಕ್ಷೇತ್ರದಲ್ಲಿ ಅಡಿಪಾಯ ಹಾಕಲಿಕ್ಕೆ ಅವಕಾಶ ಕೊಡುತ್ತದೆ ಎನ್ನುತ್ತದೆ ಬಿಜೆಪಿ ಆಪ್ತ ವಲಯ.

ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ 1 ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಬಿಜೆಪಿ ಮುಖಂಡರು ದೇವಾಲಯಗಳಿಗೆ ಲಕ್ಷಲಕ್ಷ ರೂಪಾಯಿ ನೀಡುತ್ತಿದ್ದಾರೆ. ಎಲ್ಲಾ ದೇವಾಲಯಗಳಿಗೂ ಹಣ ಕೊಡಲಾಗುತ್ತಿದೆ. ಜನರಿಗೆ ಆಮಿಷವೊಡ್ಡುತ್ತಿದೆ. ಮತದಾರರನ್ನು ಸೆಳೆಯಲು ಬಿಜೆಪಿ ತಂತ್ರ ಹೆಣೆಯುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ.

ಇಂತಹ ಆರೋಪಗಳ ನಡುವೆಯೇ ಮಾಜಿ ಸಚಿವ ಟಿ.ಬಿ.ಜಯಚಂದ್ರ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಮೊದಲ ಬಾರಿಗೆ ಫೇಸ್ ಬುಕ್ ಲೈವ್ ನಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಆಮಿಷವೊಡ್ಡುತ್ತಿರುವ ಬಗ್ಗೆ ಖಂಡಿಸಿದ್ದಾರೆ. ”ನಾನು ಕೂಡ ದೇವಾಲಯಗಳಿಗೆ 20 ಕೋಟಿ ರೂಪಾಯಿ ನೀಡಿದ್ದೇನೆ. ಸಮುದಾಯ ಭವನ ಗಳನ್ನು ನಿರ್ಮಿಸಿದ್ದೇನೆ. ಶಿರಾಕ್ಕೆ ಹೇಮಾವತಿ ನೀರನ್ನು ತಂದಿದ್ದೇನೆ. ಅಭಿವೃದ್ಧಿ ಅಂದರೆ ಕ್ಷೇತ್ರದ ಜನರಿಗೆ ಗೊತ್ತು. ಬಿಜೆಪಿ ಮುಖಂಡರು ಇಲ್ಲಿಯವರೆಗೆ ಎಲ್ಲಿ ಹೋಗಿದ್ದರು” ಎಂದು ಹರಿಹಾಯ್ದಿದ್ದಾರೆ.

“ಬಿಜೆಪಿ ದೇವಾಲಯಗಳಿಗೆ ಹಣ ಹಂಚುವ ಮೂಲಕ ಚುನಾವಣೆ ಗಿಮಿಕ್ ಮಾಡುತ್ತಿದೆ. ಚುನಾವಣೆಯಲ್ಲಿ ವಾಮ ಮಾರ್ಗದಲ್ಲಿ ಗೆಲ್ಲಲು ಕೋಟಿಕೋಟಿ ಹಣ ಸುರಿಯುತ್ತಿದೆ. ಈ ದುಡ್ಡು ಎಲ್ಲಿಂದ ಬರುತ್ತಿದೆ. ಕಳೆದ 9 ತಿಂಗಳಿಂದ ಪಿಂಚಣಿ ಬಂದಿಲ್ಲ. ವಿಧವೆಯರು, ವೃದ್ಧರು, ವಿಶೇಷಚೇತನರು ಹೀಗೆ ಯಾರಿಗೂ ಕೂಡ ಸರ್ಕಾರ ಸಹಾಯಧನ ನೀಡಿಲ್ಲ. ಆದರೆ ಉಪಚುನಾವಣೆ ಕಾರಣಕ್ಕೆ ಬಿಜೆಪಿ ದೇವಾಲಯಗಳಿಗೆ ಹಣ ಸುರಿಯುತ್ತಿದೆ” ಎಂದು ಕೆಂಡಾಮಂಡಲವಾಗಿದ್ದಾರೆ.

ಸ್ಥಳೀಯ ಅಭ್ಯರ್ಥಿ ಬಗ್ಗೆ ನಂಬಿಕೆ ಇಲ್ಲದ ಬಿಜೆಪಿ ಹೊರಗಿನಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಿದೆ. ಕ್ಷೇತ್ರದ ಮತದಾರರಿಗೂ ಅವಮಾನ ಮಾಡುತ್ತಿದೆ ಎಂಬ ಟೀಕೆಗಳು ಕ್ಷೇತ್ರದ ಜನರಿಂದ ವ್ಯಕ್ತವಾಗುತ್ತಿವೆ.

ಸುರೇಶ್ ಗೌಡ ಅಭ್ಯರ್ಥಿ ಆಗುವುದರಿಂದ ಮೂರು ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ. ಜಿದ್ದಾಜಿದ್ದಿ ಕಣವಾಗಿ ಮಾರ್ಪಡಲಿದೆ. ಆರೋಪ-ಪ್ರತ್ಯಾರೋಪಕ್ಕೆ ಕ್ಷೇತ್ರ ವೇದಿಕೆಯಾಗಲಿದೆ.  ಉಪ ಚುನಾವಣೆ ಎಂಥೆಂಥ ಒಳಪೆಟ್ಟುಗಳಿಗೆ ಸಾಕ್ಷಿಯಾಗಲಿದೆ ನೋಡಬೇಕು.


ಇದನ್ನೂ ಓದಿ: ಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...