Homeಕರ್ನಾಟಕಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ಕಳೆದ 9 ತಿಂಗಳಿಂದ ಪಿಂಚಣಿ ಬಂದಿಲ್ಲ. ವಿಧವೆಯರು, ವೃದ್ಧರು, ವಿಶೇಷಚೇತನರು ಹೀಗೆ ಯಾರಿಗೂ ಕೂಡ ಸರ್ಕಾರ ಸಹಾಯಧನ ನೀಡಿಲ್ಲ. ಆದರೆ ಉಪಚುನಾವಣೆ ಕಾರಣಕ್ಕೆ ಬಿಜೆಪಿ ದೇವಾಲಯಗಳಿಗೆ ಹಣ ಸುರಿಯುತ್ತಿದೆ- ಟಿ.ಬಿ.ಜಯಚಂದ್ರ

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗದಿದ್ದರೂ ಸ್ಪರ್ಧಿ ಅಭ್ಯರ್ಥಿಗಳ ಕುರಿತು ಕ್ಷೇತ್ರದ ಮತದಾರರಲ್ಲಿ ಕುತೂಹಲ ಹೆಚ್ಚುತ್ತಲೇ ಇದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್ ಆಗಿದ್ದು ಬಿಜೆಪಿ ಅಭ್ಯರ್ಥಿ ಯಾರೆಂಬುದು ಅಂತಿಮಗೊಂಡಿಲ್ಲ.

ಸ್ಥಳೀಯ ಅಭ್ಯರ್ಥಿಯಾದರೆ ಸುಲಭವಾಗಿ ‘ಬುಕ್’ ಆಗಿ ಬಿಡುತ್ತಾರೆ. ‘ಮೇಲಿನ’ ಅಭ್ಯರ್ಥಿಯಾದರೆ ಒಗ್ಗಟ್ಟಿನ ಮಂತ್ರ ಜಪಿಸುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ಶಿರಾ ಕ್ಷೇತ್ರದ ಅಚ್ಚರಿ ಅಭ್ಯರ್ಥಿಯಾಗಿದ್ದಾರೆ ಎಂಬ ಮಾತುಗಳು ಕ್ಷೇತ್ರಾದ್ಯಂತ ಈಗ ಜೋರುದನಿಯಲ್ಲಿ ಕೇಳಿಬರತೊಡಗಿವೆ.

ಹೌದು, ಇದು ಅಚ್ಚರಿಯಾದರೂ ಕ್ಷೇತ್ರದ ಜನರಲ್ಲಿ ಬಿಜೆಪಿ ಹರಿಯಬಿಟ್ಟಿರುವ ಹೆಸರು. ಬಿ.ಸುರೇಶ್ ಗೌಡ ಈಗ ಬಿಜೆಪಿ ಜಿಲ್ಲಾಧ್ಯಕ್ಷ. ಮಾಜಿ ಶಾಸಕ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ವಿರುದ್ದ ಸೋಲನ್ನು ಕಂಡವರು. ಮುಂದಿನ ಚುನಾವಣೆಗೆ ಸ್ಪರ್ಧಿಸಲು ಇನ್ನೂ ಎರಡೂವರೆ ವರ್ಷ ಕಾಯಬೇಕು. ಅಲ್ಲಿವರೆಗೂ ಏನು ಮಾಡುವುದು? ಹಾಗಾಗಿ ಶಿರಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಯನ್ನಾಗಿ ಮಾಡಿ ಗೆಲ್ಲಿಸಿಕೊಳ್ಳುವುದು. ಆ ಮೂಲಕ ಒಂದು ಸ್ಥಾನ ಹೆಚ್ಚಿಸಿಕೊಳ್ಳುವುದು ಬಿಜೆಪಿಯ ಚಿಂತನೆಯಾಗಿದೆ ಎನ್ನಲಾಗುತ್ತಿದೆ.

ಬಿಜೆಪಿಗೆ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಗಳು ಯಾರೂ ಇಲ್ಲ. ಹಣವನ್ನು ಖರ್ಚು ಮಾಡುವವರು ಬೇಕು. ಅಂಥ ಕುಳಗಳು ಇಲ್ಲವೆಂಬುದು ಬಿಜೆಪಿಗೆ ಗೊತ್ತು. ಕಳೆದ ಚುನಾವಣೆಯಲ್ಲಿ ಬೇವಿನಹಳ್ಳಿ ಕೆ.ಮಂಜುನಾಥ್ ಅವರಿಗೆ ಬಿ.ಫಾರಂ ನೀಡಿದರೂ ತಾನು ನಿಲ್ಲುವುದಿಲ್ಲ ಎಂದು ಹೇಳಿದರು. ಹಾಗಾಗಿ ಎಸ್.ಆರ್. ಗೌಡ ಅವರಿಗೆ ಟಿಕೆಟ್ ನೀಡಲಾಯಿತು.

ಚುನಾವಣೆಯಲ್ಲಿ ಸೋತರೂ ಕೂಡ. ಬಿ.ಕೆ.ಮಂಜುನಾಥ್ ಸಮರ್ಥ ಅಭ್ಯರ್ಥಿಯಲ್ಲ. ಎಸ್. ಆರ್. ಗೌಡರಿಗೆ ಟಿಕೆಟ್ ನೀಡಿದರೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಅವರಿಬ್ಬರ ಪರವಾಗಿ ಕೆಸಲ ಮಾಡಲ್ಲ. ಇದು ಈಗ ಬಿಜೆಪಿ ರಾಜ್ಯ ವರಿಷ್ಠರಿಗೆ ತಲೆನೋವಾಗಿ ಪರಿಣಿಸಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಇದೇ ಕಾರಣಕ್ಕಾಗಿಯೇ ಹೊಸ ಮತ್ತು ಅಚ್ಚರಿಯ ಅಭ್ಯರ್ಥಿಯ ಹುಡುಕಾಟದಲ್ಲಿದ್ದ ಬಿಜೆಪಿ ಸುರೇಗೌಡ ಟ್ರಂಪ್ ಕಾರ್ಟ್ ಮುಂದಿಟ್ಟಿದೆ. ಹೇಗೋ ಬಿಜೆಪಿ ಅಧ್ಯಕ್ಷರು. ಕ್ಷೇತ್ರದ ಬಿಜೆಪಿಯ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಾಗಿ ಸುರೇಶ್ ಗೌಡ ಗೆಲುವಿಗೆ ಶ್ರಮಿಸುತ್ತಾರೆ. ಸುರೇಶ್ ಗೌಡ ಮುಖ್ಯಮಂತ್ರಿಗೂ ಆಪ್ತ. ಹಣವನ್ನೂ ಖರ್ಚು ಮಾಡಬಲ್ಲರು. ಚುನಾವಣೆಯಲ್ಲಿ ಸ್ಪರ್ಧಿಸಿ ತಂತ್ರಗಳನ್ನು ರಾಜಕೀಯ ಪಟ್ಟುಗಳನ್ನು ಹಾಕಿದ ಅನುಭವವೂ ಇದೆ. ಇದು ಬಿಜೆಪಿ ಕ್ಷೇತ್ರದಲ್ಲಿ ಅಡಿಪಾಯ ಹಾಕಲಿಕ್ಕೆ ಅವಕಾಶ ಕೊಡುತ್ತದೆ ಎನ್ನುತ್ತದೆ ಬಿಜೆಪಿ ಆಪ್ತ ವಲಯ.

ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ 1 ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಬಿಜೆಪಿ ಮುಖಂಡರು ದೇವಾಲಯಗಳಿಗೆ ಲಕ್ಷಲಕ್ಷ ರೂಪಾಯಿ ನೀಡುತ್ತಿದ್ದಾರೆ. ಎಲ್ಲಾ ದೇವಾಲಯಗಳಿಗೂ ಹಣ ಕೊಡಲಾಗುತ್ತಿದೆ. ಜನರಿಗೆ ಆಮಿಷವೊಡ್ಡುತ್ತಿದೆ. ಮತದಾರರನ್ನು ಸೆಳೆಯಲು ಬಿಜೆಪಿ ತಂತ್ರ ಹೆಣೆಯುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ.

ಇಂತಹ ಆರೋಪಗಳ ನಡುವೆಯೇ ಮಾಜಿ ಸಚಿವ ಟಿ.ಬಿ.ಜಯಚಂದ್ರ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಮೊದಲ ಬಾರಿಗೆ ಫೇಸ್ ಬುಕ್ ಲೈವ್ ನಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಆಮಿಷವೊಡ್ಡುತ್ತಿರುವ ಬಗ್ಗೆ ಖಂಡಿಸಿದ್ದಾರೆ. ”ನಾನು ಕೂಡ ದೇವಾಲಯಗಳಿಗೆ 20 ಕೋಟಿ ರೂಪಾಯಿ ನೀಡಿದ್ದೇನೆ. ಸಮುದಾಯ ಭವನ ಗಳನ್ನು ನಿರ್ಮಿಸಿದ್ದೇನೆ. ಶಿರಾಕ್ಕೆ ಹೇಮಾವತಿ ನೀರನ್ನು ತಂದಿದ್ದೇನೆ. ಅಭಿವೃದ್ಧಿ ಅಂದರೆ ಕ್ಷೇತ್ರದ ಜನರಿಗೆ ಗೊತ್ತು. ಬಿಜೆಪಿ ಮುಖಂಡರು ಇಲ್ಲಿಯವರೆಗೆ ಎಲ್ಲಿ ಹೋಗಿದ್ದರು” ಎಂದು ಹರಿಹಾಯ್ದಿದ್ದಾರೆ.

“ಬಿಜೆಪಿ ದೇವಾಲಯಗಳಿಗೆ ಹಣ ಹಂಚುವ ಮೂಲಕ ಚುನಾವಣೆ ಗಿಮಿಕ್ ಮಾಡುತ್ತಿದೆ. ಚುನಾವಣೆಯಲ್ಲಿ ವಾಮ ಮಾರ್ಗದಲ್ಲಿ ಗೆಲ್ಲಲು ಕೋಟಿಕೋಟಿ ಹಣ ಸುರಿಯುತ್ತಿದೆ. ಈ ದುಡ್ಡು ಎಲ್ಲಿಂದ ಬರುತ್ತಿದೆ. ಕಳೆದ 9 ತಿಂಗಳಿಂದ ಪಿಂಚಣಿ ಬಂದಿಲ್ಲ. ವಿಧವೆಯರು, ವೃದ್ಧರು, ವಿಶೇಷಚೇತನರು ಹೀಗೆ ಯಾರಿಗೂ ಕೂಡ ಸರ್ಕಾರ ಸಹಾಯಧನ ನೀಡಿಲ್ಲ. ಆದರೆ ಉಪಚುನಾವಣೆ ಕಾರಣಕ್ಕೆ ಬಿಜೆಪಿ ದೇವಾಲಯಗಳಿಗೆ ಹಣ ಸುರಿಯುತ್ತಿದೆ” ಎಂದು ಕೆಂಡಾಮಂಡಲವಾಗಿದ್ದಾರೆ.

ಸ್ಥಳೀಯ ಅಭ್ಯರ್ಥಿ ಬಗ್ಗೆ ನಂಬಿಕೆ ಇಲ್ಲದ ಬಿಜೆಪಿ ಹೊರಗಿನಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಿದೆ. ಕ್ಷೇತ್ರದ ಮತದಾರರಿಗೂ ಅವಮಾನ ಮಾಡುತ್ತಿದೆ ಎಂಬ ಟೀಕೆಗಳು ಕ್ಷೇತ್ರದ ಜನರಿಂದ ವ್ಯಕ್ತವಾಗುತ್ತಿವೆ.

ಸುರೇಶ್ ಗೌಡ ಅಭ್ಯರ್ಥಿ ಆಗುವುದರಿಂದ ಮೂರು ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ. ಜಿದ್ದಾಜಿದ್ದಿ ಕಣವಾಗಿ ಮಾರ್ಪಡಲಿದೆ. ಆರೋಪ-ಪ್ರತ್ಯಾರೋಪಕ್ಕೆ ಕ್ಷೇತ್ರ ವೇದಿಕೆಯಾಗಲಿದೆ.  ಉಪ ಚುನಾವಣೆ ಎಂಥೆಂಥ ಒಳಪೆಟ್ಟುಗಳಿಗೆ ಸಾಕ್ಷಿಯಾಗಲಿದೆ ನೋಡಬೇಕು.


ಇದನ್ನೂ ಓದಿ: ಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...