Homeಕರ್ನಾಟಕಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ಕಳೆದ 9 ತಿಂಗಳಿಂದ ಪಿಂಚಣಿ ಬಂದಿಲ್ಲ. ವಿಧವೆಯರು, ವೃದ್ಧರು, ವಿಶೇಷಚೇತನರು ಹೀಗೆ ಯಾರಿಗೂ ಕೂಡ ಸರ್ಕಾರ ಸಹಾಯಧನ ನೀಡಿಲ್ಲ. ಆದರೆ ಉಪಚುನಾವಣೆ ಕಾರಣಕ್ಕೆ ಬಿಜೆಪಿ ದೇವಾಲಯಗಳಿಗೆ ಹಣ ಸುರಿಯುತ್ತಿದೆ- ಟಿ.ಬಿ.ಜಯಚಂದ್ರ

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗದಿದ್ದರೂ ಸ್ಪರ್ಧಿ ಅಭ್ಯರ್ಥಿಗಳ ಕುರಿತು ಕ್ಷೇತ್ರದ ಮತದಾರರಲ್ಲಿ ಕುತೂಹಲ ಹೆಚ್ಚುತ್ತಲೇ ಇದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್ ಆಗಿದ್ದು ಬಿಜೆಪಿ ಅಭ್ಯರ್ಥಿ ಯಾರೆಂಬುದು ಅಂತಿಮಗೊಂಡಿಲ್ಲ.

ಸ್ಥಳೀಯ ಅಭ್ಯರ್ಥಿಯಾದರೆ ಸುಲಭವಾಗಿ ‘ಬುಕ್’ ಆಗಿ ಬಿಡುತ್ತಾರೆ. ‘ಮೇಲಿನ’ ಅಭ್ಯರ್ಥಿಯಾದರೆ ಒಗ್ಗಟ್ಟಿನ ಮಂತ್ರ ಜಪಿಸುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ಶಿರಾ ಕ್ಷೇತ್ರದ ಅಚ್ಚರಿ ಅಭ್ಯರ್ಥಿಯಾಗಿದ್ದಾರೆ ಎಂಬ ಮಾತುಗಳು ಕ್ಷೇತ್ರಾದ್ಯಂತ ಈಗ ಜೋರುದನಿಯಲ್ಲಿ ಕೇಳಿಬರತೊಡಗಿವೆ.

ಹೌದು, ಇದು ಅಚ್ಚರಿಯಾದರೂ ಕ್ಷೇತ್ರದ ಜನರಲ್ಲಿ ಬಿಜೆಪಿ ಹರಿಯಬಿಟ್ಟಿರುವ ಹೆಸರು. ಬಿ.ಸುರೇಶ್ ಗೌಡ ಈಗ ಬಿಜೆಪಿ ಜಿಲ್ಲಾಧ್ಯಕ್ಷ. ಮಾಜಿ ಶಾಸಕ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ವಿರುದ್ದ ಸೋಲನ್ನು ಕಂಡವರು. ಮುಂದಿನ ಚುನಾವಣೆಗೆ ಸ್ಪರ್ಧಿಸಲು ಇನ್ನೂ ಎರಡೂವರೆ ವರ್ಷ ಕಾಯಬೇಕು. ಅಲ್ಲಿವರೆಗೂ ಏನು ಮಾಡುವುದು? ಹಾಗಾಗಿ ಶಿರಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಯನ್ನಾಗಿ ಮಾಡಿ ಗೆಲ್ಲಿಸಿಕೊಳ್ಳುವುದು. ಆ ಮೂಲಕ ಒಂದು ಸ್ಥಾನ ಹೆಚ್ಚಿಸಿಕೊಳ್ಳುವುದು ಬಿಜೆಪಿಯ ಚಿಂತನೆಯಾಗಿದೆ ಎನ್ನಲಾಗುತ್ತಿದೆ.

ಬಿಜೆಪಿಗೆ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಗಳು ಯಾರೂ ಇಲ್ಲ. ಹಣವನ್ನು ಖರ್ಚು ಮಾಡುವವರು ಬೇಕು. ಅಂಥ ಕುಳಗಳು ಇಲ್ಲವೆಂಬುದು ಬಿಜೆಪಿಗೆ ಗೊತ್ತು. ಕಳೆದ ಚುನಾವಣೆಯಲ್ಲಿ ಬೇವಿನಹಳ್ಳಿ ಕೆ.ಮಂಜುನಾಥ್ ಅವರಿಗೆ ಬಿ.ಫಾರಂ ನೀಡಿದರೂ ತಾನು ನಿಲ್ಲುವುದಿಲ್ಲ ಎಂದು ಹೇಳಿದರು. ಹಾಗಾಗಿ ಎಸ್.ಆರ್. ಗೌಡ ಅವರಿಗೆ ಟಿಕೆಟ್ ನೀಡಲಾಯಿತು.

ಚುನಾವಣೆಯಲ್ಲಿ ಸೋತರೂ ಕೂಡ. ಬಿ.ಕೆ.ಮಂಜುನಾಥ್ ಸಮರ್ಥ ಅಭ್ಯರ್ಥಿಯಲ್ಲ. ಎಸ್. ಆರ್. ಗೌಡರಿಗೆ ಟಿಕೆಟ್ ನೀಡಿದರೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಅವರಿಬ್ಬರ ಪರವಾಗಿ ಕೆಸಲ ಮಾಡಲ್ಲ. ಇದು ಈಗ ಬಿಜೆಪಿ ರಾಜ್ಯ ವರಿಷ್ಠರಿಗೆ ತಲೆನೋವಾಗಿ ಪರಿಣಿಸಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಇದೇ ಕಾರಣಕ್ಕಾಗಿಯೇ ಹೊಸ ಮತ್ತು ಅಚ್ಚರಿಯ ಅಭ್ಯರ್ಥಿಯ ಹುಡುಕಾಟದಲ್ಲಿದ್ದ ಬಿಜೆಪಿ ಸುರೇಗೌಡ ಟ್ರಂಪ್ ಕಾರ್ಟ್ ಮುಂದಿಟ್ಟಿದೆ. ಹೇಗೋ ಬಿಜೆಪಿ ಅಧ್ಯಕ್ಷರು. ಕ್ಷೇತ್ರದ ಬಿಜೆಪಿಯ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಾಗಿ ಸುರೇಶ್ ಗೌಡ ಗೆಲುವಿಗೆ ಶ್ರಮಿಸುತ್ತಾರೆ. ಸುರೇಶ್ ಗೌಡ ಮುಖ್ಯಮಂತ್ರಿಗೂ ಆಪ್ತ. ಹಣವನ್ನೂ ಖರ್ಚು ಮಾಡಬಲ್ಲರು. ಚುನಾವಣೆಯಲ್ಲಿ ಸ್ಪರ್ಧಿಸಿ ತಂತ್ರಗಳನ್ನು ರಾಜಕೀಯ ಪಟ್ಟುಗಳನ್ನು ಹಾಕಿದ ಅನುಭವವೂ ಇದೆ. ಇದು ಬಿಜೆಪಿ ಕ್ಷೇತ್ರದಲ್ಲಿ ಅಡಿಪಾಯ ಹಾಕಲಿಕ್ಕೆ ಅವಕಾಶ ಕೊಡುತ್ತದೆ ಎನ್ನುತ್ತದೆ ಬಿಜೆಪಿ ಆಪ್ತ ವಲಯ.

ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ 1 ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಬಿಜೆಪಿ ಮುಖಂಡರು ದೇವಾಲಯಗಳಿಗೆ ಲಕ್ಷಲಕ್ಷ ರೂಪಾಯಿ ನೀಡುತ್ತಿದ್ದಾರೆ. ಎಲ್ಲಾ ದೇವಾಲಯಗಳಿಗೂ ಹಣ ಕೊಡಲಾಗುತ್ತಿದೆ. ಜನರಿಗೆ ಆಮಿಷವೊಡ್ಡುತ್ತಿದೆ. ಮತದಾರರನ್ನು ಸೆಳೆಯಲು ಬಿಜೆಪಿ ತಂತ್ರ ಹೆಣೆಯುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ.

ಇಂತಹ ಆರೋಪಗಳ ನಡುವೆಯೇ ಮಾಜಿ ಸಚಿವ ಟಿ.ಬಿ.ಜಯಚಂದ್ರ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಮೊದಲ ಬಾರಿಗೆ ಫೇಸ್ ಬುಕ್ ಲೈವ್ ನಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಆಮಿಷವೊಡ್ಡುತ್ತಿರುವ ಬಗ್ಗೆ ಖಂಡಿಸಿದ್ದಾರೆ. ”ನಾನು ಕೂಡ ದೇವಾಲಯಗಳಿಗೆ 20 ಕೋಟಿ ರೂಪಾಯಿ ನೀಡಿದ್ದೇನೆ. ಸಮುದಾಯ ಭವನ ಗಳನ್ನು ನಿರ್ಮಿಸಿದ್ದೇನೆ. ಶಿರಾಕ್ಕೆ ಹೇಮಾವತಿ ನೀರನ್ನು ತಂದಿದ್ದೇನೆ. ಅಭಿವೃದ್ಧಿ ಅಂದರೆ ಕ್ಷೇತ್ರದ ಜನರಿಗೆ ಗೊತ್ತು. ಬಿಜೆಪಿ ಮುಖಂಡರು ಇಲ್ಲಿಯವರೆಗೆ ಎಲ್ಲಿ ಹೋಗಿದ್ದರು” ಎಂದು ಹರಿಹಾಯ್ದಿದ್ದಾರೆ.

“ಬಿಜೆಪಿ ದೇವಾಲಯಗಳಿಗೆ ಹಣ ಹಂಚುವ ಮೂಲಕ ಚುನಾವಣೆ ಗಿಮಿಕ್ ಮಾಡುತ್ತಿದೆ. ಚುನಾವಣೆಯಲ್ಲಿ ವಾಮ ಮಾರ್ಗದಲ್ಲಿ ಗೆಲ್ಲಲು ಕೋಟಿಕೋಟಿ ಹಣ ಸುರಿಯುತ್ತಿದೆ. ಈ ದುಡ್ಡು ಎಲ್ಲಿಂದ ಬರುತ್ತಿದೆ. ಕಳೆದ 9 ತಿಂಗಳಿಂದ ಪಿಂಚಣಿ ಬಂದಿಲ್ಲ. ವಿಧವೆಯರು, ವೃದ್ಧರು, ವಿಶೇಷಚೇತನರು ಹೀಗೆ ಯಾರಿಗೂ ಕೂಡ ಸರ್ಕಾರ ಸಹಾಯಧನ ನೀಡಿಲ್ಲ. ಆದರೆ ಉಪಚುನಾವಣೆ ಕಾರಣಕ್ಕೆ ಬಿಜೆಪಿ ದೇವಾಲಯಗಳಿಗೆ ಹಣ ಸುರಿಯುತ್ತಿದೆ” ಎಂದು ಕೆಂಡಾಮಂಡಲವಾಗಿದ್ದಾರೆ.

ಸ್ಥಳೀಯ ಅಭ್ಯರ್ಥಿ ಬಗ್ಗೆ ನಂಬಿಕೆ ಇಲ್ಲದ ಬಿಜೆಪಿ ಹೊರಗಿನಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಿದೆ. ಕ್ಷೇತ್ರದ ಮತದಾರರಿಗೂ ಅವಮಾನ ಮಾಡುತ್ತಿದೆ ಎಂಬ ಟೀಕೆಗಳು ಕ್ಷೇತ್ರದ ಜನರಿಂದ ವ್ಯಕ್ತವಾಗುತ್ತಿವೆ.

ಸುರೇಶ್ ಗೌಡ ಅಭ್ಯರ್ಥಿ ಆಗುವುದರಿಂದ ಮೂರು ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ. ಜಿದ್ದಾಜಿದ್ದಿ ಕಣವಾಗಿ ಮಾರ್ಪಡಲಿದೆ. ಆರೋಪ-ಪ್ರತ್ಯಾರೋಪಕ್ಕೆ ಕ್ಷೇತ್ರ ವೇದಿಕೆಯಾಗಲಿದೆ.  ಉಪ ಚುನಾವಣೆ ಎಂಥೆಂಥ ಒಳಪೆಟ್ಟುಗಳಿಗೆ ಸಾಕ್ಷಿಯಾಗಲಿದೆ ನೋಡಬೇಕು.


ಇದನ್ನೂ ಓದಿ: ಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...