Homeಕರ್ನಾಟಕಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ಶಿರಾ ಉಪ ಚುನಾವಣೆ: ಶಿರಾ ಕ್ಷೇತ್ರದಿಂದ ಬಿ.ಸುರೇಶ್ ಗೌಡ ಕಣಕ್ಕೆ!

ಕಳೆದ 9 ತಿಂಗಳಿಂದ ಪಿಂಚಣಿ ಬಂದಿಲ್ಲ. ವಿಧವೆಯರು, ವೃದ್ಧರು, ವಿಶೇಷಚೇತನರು ಹೀಗೆ ಯಾರಿಗೂ ಕೂಡ ಸರ್ಕಾರ ಸಹಾಯಧನ ನೀಡಿಲ್ಲ. ಆದರೆ ಉಪಚುನಾವಣೆ ಕಾರಣಕ್ಕೆ ಬಿಜೆಪಿ ದೇವಾಲಯಗಳಿಗೆ ಹಣ ಸುರಿಯುತ್ತಿದೆ- ಟಿ.ಬಿ.ಜಯಚಂದ್ರ

- Advertisement -
- Advertisement -

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗದಿದ್ದರೂ ಸ್ಪರ್ಧಿ ಅಭ್ಯರ್ಥಿಗಳ ಕುರಿತು ಕ್ಷೇತ್ರದ ಮತದಾರರಲ್ಲಿ ಕುತೂಹಲ ಹೆಚ್ಚುತ್ತಲೇ ಇದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್ ಆಗಿದ್ದು ಬಿಜೆಪಿ ಅಭ್ಯರ್ಥಿ ಯಾರೆಂಬುದು ಅಂತಿಮಗೊಂಡಿಲ್ಲ.

ಸ್ಥಳೀಯ ಅಭ್ಯರ್ಥಿಯಾದರೆ ಸುಲಭವಾಗಿ ‘ಬುಕ್’ ಆಗಿ ಬಿಡುತ್ತಾರೆ. ‘ಮೇಲಿನ’ ಅಭ್ಯರ್ಥಿಯಾದರೆ ಒಗ್ಗಟ್ಟಿನ ಮಂತ್ರ ಜಪಿಸುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ ಶಿರಾ ಕ್ಷೇತ್ರದ ಅಚ್ಚರಿ ಅಭ್ಯರ್ಥಿಯಾಗಿದ್ದಾರೆ ಎಂಬ ಮಾತುಗಳು ಕ್ಷೇತ್ರಾದ್ಯಂತ ಈಗ ಜೋರುದನಿಯಲ್ಲಿ ಕೇಳಿಬರತೊಡಗಿವೆ.

ಹೌದು, ಇದು ಅಚ್ಚರಿಯಾದರೂ ಕ್ಷೇತ್ರದ ಜನರಲ್ಲಿ ಬಿಜೆಪಿ ಹರಿಯಬಿಟ್ಟಿರುವ ಹೆಸರು. ಬಿ.ಸುರೇಶ್ ಗೌಡ ಈಗ ಬಿಜೆಪಿ ಜಿಲ್ಲಾಧ್ಯಕ್ಷ. ಮಾಜಿ ಶಾಸಕ. ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ವಿರುದ್ದ ಸೋಲನ್ನು ಕಂಡವರು. ಮುಂದಿನ ಚುನಾವಣೆಗೆ ಸ್ಪರ್ಧಿಸಲು ಇನ್ನೂ ಎರಡೂವರೆ ವರ್ಷ ಕಾಯಬೇಕು. ಅಲ್ಲಿವರೆಗೂ ಏನು ಮಾಡುವುದು? ಹಾಗಾಗಿ ಶಿರಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಯನ್ನಾಗಿ ಮಾಡಿ ಗೆಲ್ಲಿಸಿಕೊಳ್ಳುವುದು. ಆ ಮೂಲಕ ಒಂದು ಸ್ಥಾನ ಹೆಚ್ಚಿಸಿಕೊಳ್ಳುವುದು ಬಿಜೆಪಿಯ ಚಿಂತನೆಯಾಗಿದೆ ಎನ್ನಲಾಗುತ್ತಿದೆ.

ಬಿಜೆಪಿಗೆ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಗಳು ಯಾರೂ ಇಲ್ಲ. ಹಣವನ್ನು ಖರ್ಚು ಮಾಡುವವರು ಬೇಕು. ಅಂಥ ಕುಳಗಳು ಇಲ್ಲವೆಂಬುದು ಬಿಜೆಪಿಗೆ ಗೊತ್ತು. ಕಳೆದ ಚುನಾವಣೆಯಲ್ಲಿ ಬೇವಿನಹಳ್ಳಿ ಕೆ.ಮಂಜುನಾಥ್ ಅವರಿಗೆ ಬಿ.ಫಾರಂ ನೀಡಿದರೂ ತಾನು ನಿಲ್ಲುವುದಿಲ್ಲ ಎಂದು ಹೇಳಿದರು. ಹಾಗಾಗಿ ಎಸ್.ಆರ್. ಗೌಡ ಅವರಿಗೆ ಟಿಕೆಟ್ ನೀಡಲಾಯಿತು.

ಚುನಾವಣೆಯಲ್ಲಿ ಸೋತರೂ ಕೂಡ. ಬಿ.ಕೆ.ಮಂಜುನಾಥ್ ಸಮರ್ಥ ಅಭ್ಯರ್ಥಿಯಲ್ಲ. ಎಸ್. ಆರ್. ಗೌಡರಿಗೆ ಟಿಕೆಟ್ ನೀಡಿದರೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಅವರಿಬ್ಬರ ಪರವಾಗಿ ಕೆಸಲ ಮಾಡಲ್ಲ. ಇದು ಈಗ ಬಿಜೆಪಿ ರಾಜ್ಯ ವರಿಷ್ಠರಿಗೆ ತಲೆನೋವಾಗಿ ಪರಿಣಿಸಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜಯಚಂದ್ರ ಅವರಿಗೆ ‘ಒಳೇಟು’ ನೀಡುವರೇ ಕೆಎನ್ಆರ್?

ಇದೇ ಕಾರಣಕ್ಕಾಗಿಯೇ ಹೊಸ ಮತ್ತು ಅಚ್ಚರಿಯ ಅಭ್ಯರ್ಥಿಯ ಹುಡುಕಾಟದಲ್ಲಿದ್ದ ಬಿಜೆಪಿ ಸುರೇಗೌಡ ಟ್ರಂಪ್ ಕಾರ್ಟ್ ಮುಂದಿಟ್ಟಿದೆ. ಹೇಗೋ ಬಿಜೆಪಿ ಅಧ್ಯಕ್ಷರು. ಕ್ಷೇತ್ರದ ಬಿಜೆಪಿಯ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಾಗಿ ಸುರೇಶ್ ಗೌಡ ಗೆಲುವಿಗೆ ಶ್ರಮಿಸುತ್ತಾರೆ. ಸುರೇಶ್ ಗೌಡ ಮುಖ್ಯಮಂತ್ರಿಗೂ ಆಪ್ತ. ಹಣವನ್ನೂ ಖರ್ಚು ಮಾಡಬಲ್ಲರು. ಚುನಾವಣೆಯಲ್ಲಿ ಸ್ಪರ್ಧಿಸಿ ತಂತ್ರಗಳನ್ನು ರಾಜಕೀಯ ಪಟ್ಟುಗಳನ್ನು ಹಾಕಿದ ಅನುಭವವೂ ಇದೆ. ಇದು ಬಿಜೆಪಿ ಕ್ಷೇತ್ರದಲ್ಲಿ ಅಡಿಪಾಯ ಹಾಕಲಿಕ್ಕೆ ಅವಕಾಶ ಕೊಡುತ್ತದೆ ಎನ್ನುತ್ತದೆ ಬಿಜೆಪಿ ಆಪ್ತ ವಲಯ.

ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ 1 ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ. ಬಿಜೆಪಿ ಮುಖಂಡರು ದೇವಾಲಯಗಳಿಗೆ ಲಕ್ಷಲಕ್ಷ ರೂಪಾಯಿ ನೀಡುತ್ತಿದ್ದಾರೆ. ಎಲ್ಲಾ ದೇವಾಲಯಗಳಿಗೂ ಹಣ ಕೊಡಲಾಗುತ್ತಿದೆ. ಜನರಿಗೆ ಆಮಿಷವೊಡ್ಡುತ್ತಿದೆ. ಮತದಾರರನ್ನು ಸೆಳೆಯಲು ಬಿಜೆಪಿ ತಂತ್ರ ಹೆಣೆಯುತ್ತಿದೆ ಎಂಬ ಆರೋಪಗಳು ಕೇಳಿ ಬಂದಿದೆ.

ಇಂತಹ ಆರೋಪಗಳ ನಡುವೆಯೇ ಮಾಜಿ ಸಚಿವ ಟಿ.ಬಿ.ಜಯಚಂದ್ರ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಮೊದಲ ಬಾರಿಗೆ ಫೇಸ್ ಬುಕ್ ಲೈವ್ ನಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಆಮಿಷವೊಡ್ಡುತ್ತಿರುವ ಬಗ್ಗೆ ಖಂಡಿಸಿದ್ದಾರೆ. ”ನಾನು ಕೂಡ ದೇವಾಲಯಗಳಿಗೆ 20 ಕೋಟಿ ರೂಪಾಯಿ ನೀಡಿದ್ದೇನೆ. ಸಮುದಾಯ ಭವನ ಗಳನ್ನು ನಿರ್ಮಿಸಿದ್ದೇನೆ. ಶಿರಾಕ್ಕೆ ಹೇಮಾವತಿ ನೀರನ್ನು ತಂದಿದ್ದೇನೆ. ಅಭಿವೃದ್ಧಿ ಅಂದರೆ ಕ್ಷೇತ್ರದ ಜನರಿಗೆ ಗೊತ್ತು. ಬಿಜೆಪಿ ಮುಖಂಡರು ಇಲ್ಲಿಯವರೆಗೆ ಎಲ್ಲಿ ಹೋಗಿದ್ದರು” ಎಂದು ಹರಿಹಾಯ್ದಿದ್ದಾರೆ.

“ಬಿಜೆಪಿ ದೇವಾಲಯಗಳಿಗೆ ಹಣ ಹಂಚುವ ಮೂಲಕ ಚುನಾವಣೆ ಗಿಮಿಕ್ ಮಾಡುತ್ತಿದೆ. ಚುನಾವಣೆಯಲ್ಲಿ ವಾಮ ಮಾರ್ಗದಲ್ಲಿ ಗೆಲ್ಲಲು ಕೋಟಿಕೋಟಿ ಹಣ ಸುರಿಯುತ್ತಿದೆ. ಈ ದುಡ್ಡು ಎಲ್ಲಿಂದ ಬರುತ್ತಿದೆ. ಕಳೆದ 9 ತಿಂಗಳಿಂದ ಪಿಂಚಣಿ ಬಂದಿಲ್ಲ. ವಿಧವೆಯರು, ವೃದ್ಧರು, ವಿಶೇಷಚೇತನರು ಹೀಗೆ ಯಾರಿಗೂ ಕೂಡ ಸರ್ಕಾರ ಸಹಾಯಧನ ನೀಡಿಲ್ಲ. ಆದರೆ ಉಪಚುನಾವಣೆ ಕಾರಣಕ್ಕೆ ಬಿಜೆಪಿ ದೇವಾಲಯಗಳಿಗೆ ಹಣ ಸುರಿಯುತ್ತಿದೆ” ಎಂದು ಕೆಂಡಾಮಂಡಲವಾಗಿದ್ದಾರೆ.

ಸ್ಥಳೀಯ ಅಭ್ಯರ್ಥಿ ಬಗ್ಗೆ ನಂಬಿಕೆ ಇಲ್ಲದ ಬಿಜೆಪಿ ಹೊರಗಿನಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತಿದೆ. ಕ್ಷೇತ್ರದ ಮತದಾರರಿಗೂ ಅವಮಾನ ಮಾಡುತ್ತಿದೆ ಎಂಬ ಟೀಕೆಗಳು ಕ್ಷೇತ್ರದ ಜನರಿಂದ ವ್ಯಕ್ತವಾಗುತ್ತಿವೆ.

ಸುರೇಶ್ ಗೌಡ ಅಭ್ಯರ್ಥಿ ಆಗುವುದರಿಂದ ಮೂರು ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ. ಜಿದ್ದಾಜಿದ್ದಿ ಕಣವಾಗಿ ಮಾರ್ಪಡಲಿದೆ. ಆರೋಪ-ಪ್ರತ್ಯಾರೋಪಕ್ಕೆ ಕ್ಷೇತ್ರ ವೇದಿಕೆಯಾಗಲಿದೆ.  ಉಪ ಚುನಾವಣೆ ಎಂಥೆಂಥ ಒಳಪೆಟ್ಟುಗಳಿಗೆ ಸಾಕ್ಷಿಯಾಗಲಿದೆ ನೋಡಬೇಕು.


ಇದನ್ನೂ ಓದಿ: ಟಿಕೆಟ್ ಯಾರಿಗೆ?: ಶಿರಾ ಉಪಚುನಾವಣೆ ಘೋಷಣೆಯಾಗದಿದ್ದರೂ ಚರ್ಚೆ ಜೋರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...