Homeಕರ್ನಾಟಕಶಿರಾ ಉಪಚುನಾವಣೆ: ಹಿರಿಯರು, ವಿಶೇಷಚೇತನರಿಗೆ ಹಣ ಹಂಚಿಕೆ ಆರೋಪ

ಶಿರಾ ಉಪಚುನಾವಣೆ: ಹಿರಿಯರು, ವಿಶೇಷಚೇತನರಿಗೆ ಹಣ ಹಂಚಿಕೆ ಆರೋಪ

ಬಿಜೆಪಿ ಕಾರ್ಯಕರ್ತರಾದ ಸುರೇಶ, ರಮೇಶ್ ಸೇರಿದಂತೆ ಎಂಟು ಹತ್ತು ಮಂದಿ ನನಗೆ ಹಣ ಕೊಡಲು ಬಂದರು. ನಾನು ಉಗಿದು ಅಟ್ಟಿದೆ...

- Advertisement -
- Advertisement -

ಶಿರಾ ಉಪಚುನಾವಣೆಯು ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವು ಖಚಿತ ಎಂದು ಹೇಳುತ್ತಿದ್ದಾರೆ. ರಾಜ್ಯಮಟ್ಟದ ನಾಯಕರು ಬಂದು ಪ್ರಚಾರದಲ್ಲಿ ತೊಡಗಿದ್ದಾರೆ. ಕೆಲ ಮುಖಂಡರು ಕ್ಷೇತ್ರದಲ್ಲೇ ಬೀಡುಬಿಟ್ಟು ಜನರ ನಾಡಿಮಿಡಿತ ಅರಿಯುವ ಪ್ರಯತ್ನಗಳನ್ನು ಮುಂದುವರಿಸಿದ್ದಾರೆ. ಬೇರೆ ಜಿಲ್ಲೆಗಳ ಮುಖಂಡರು ಪ್ರಚಾರ ನಡೆಸುತ್ತಿದ್ದಾರೆ. ಪ್ರತಿ ಹೋಬಳಿಗೆ ಒಬ್ಬ ಮುಖಂಡರನ್ನು ನೇಮಕ ಮಾಡಿ ಅವರೇ ಖರ್ಚುವೆಚ್ಚ ನೋಡಿಕೊಳ್ಳುವಂತೆ ಜವಾಬ್ದಾರಿ ವಹಿಸಲಾಗಿದೆ.

ಬಿಜೆಪಿ ಪರವಾಗಿ ಪ್ರಚಾರ ನಡೆಸಲು ಮಂಡ್ಯ ಮತ್ತು ಹಾಸನ ಜಿಲ್ಲೆಗಳಿಂದ ಕಾರ್ಯಕರ್ತರು ಬಂದಿದ್ದಾರೆ. ಹಾಸನ ಜಿಲ್ಲೆಯ ಬಿಜೆಪಿ ಶಾಸಕ ಪ್ರೀತಂ ಗೌಡ ಅವರಿಗೆ ಹುಲಿಕುಂಟೆ ಹೋಬಳಿ ಜವಾಬ್ದಾರಿ ನೀಡಿದ್ದು ಆ ಹೋಬಳಿಯಲ್ಲಿ ಪ್ರಚಾರದ ನೇತೃತ್ವ ವಹಿಸಿದ್ದಾರೆ. ಹುಲಿಕುಂಟೆ ಹೋಬಳಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರ ಹುಟ್ಟೂರು. ವಿಶೇಷವಾಗಿ ಯುವ ಮತದಾರರನ್ನು ಸೆಳೆಯಲು ಯುವ ಶಾಸಕ ಪ್ರೀತಂಗೌಡ ಅವರಿಗೆ ಈ ಹೋಬಳಿಯ ಜವಾಬ್ದಾರಿ ನೀಡಲಾಗಿದೆ.

ಇದರ ನಡುವೆ ಕ್ಷೇತ್ರದಲ್ಲಿ ಹಣದ ಹರಿವು ಜೋರಾಗಿದೆ. ಹಿರಿಯರು ಮತ್ತು ವಿಶೇಷಚೇತನರಿಗೆ ಹಣ ಹಂಚಿಕೆ ಮಾಡಿರುವ ಸಂಬಂಧ ಆಡಿಯೋಗಳು ಸದ್ದುಮಾಡುತ್ತಿವೆ. ದ್ವಾರಾಳು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಹಿರಿಯ ನಾಗರಿಕರು ಮತ್ತು ವಿಶೇಷಚೇತನರಿಗೆ ಪ್ರತಿ ಮತಕ್ಕೆ 2 ರಿಂದ 3 ಸಾವಿರ ರೂಪಾಯಿ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹಿರಿಯರೊಬ್ಬರು ಬಿಜೆಪಿ ಕಾರ್ಯಕರ್ತರಿಗೆ ತರಾಟೆಗೆ ತೆಗೆದುಕೊಂಡಿರುವ ಬಗೆಗಿನ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಸುಮಾರು 8 ನಿಮಿಷದಷ್ಟು ಇರುವ ಆಡಿಯೋದಲ್ಲಿ ದ್ವಾರಾಳು ಗ್ರಾಮದ ಹಿರಿಯರಾದ ನರಸಿಂಹಯ್ಯ ಎಂಬ ಹೆಸರಿನವರು “ಬಿಜೆಪಿ ಕಾರ್ಯಕರ್ತರಾದ ಸುರೇಶ, ರಮೇಶ್ ಸೇರಿದಂತೆ ಎಂಟು ಹತ್ತು ಮಂದಿ ನನಗೆ ಹಣ ಕೊಡಲು ಬಂದರು. ನಾನು ಉಗಿದು ಅಟ್ಟಿದೆ. ನಾನು ಹಿಂದಿನಿಂದಲೂ ಹಣ ಪಡೆದು ಓಟು ಹಾಕಿಲ್ಲ. ಲಂಚ ಪಡೆದು ಓಟು ಹಾಕಬೇಕೇ? ಹಣ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದೆ. ಚನ್ನಾಗಿ ಬೈದೆ. 500 ರೂ ನ ಆರು ನೋಟುಗಳನ್ನು ಎಣಿಸಿದರು. ನಾನು ಬೈದ ಮೇಲೆ ಹಣವನ್ನು ಜೋಬಿಗೆ ಇಟ್ಟುಕೊಂಡು ಹೋದರು. ಊರಲ್ಲಿ ಹಲವರಿಗೆ ಹಣ ಹಂಚಿಕೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಈ ಗುಂಪಿನಲ್ಲಿ ಮಂಡ್ಯದಿಂದ ಬಂದವರು ಇದ್ದರು. ಇವರು ಯಾರು ಅಂತ ಕೇಳಿದೆ. ಆತ ನಾನು ಮಂಡ್ಯ ದಿಂದ ಬಂದಿದ್ದೇನೆ. ಬಿಜೆಪಿಯ ರಾಜೇಶ್ ಗೌಡರ ಪರವಾಗಿ ಪ್ರಚಾರ ಮಾಡುತ್ತಿದ್ದೇನೆ ಎಂದು ಹೇಳಿದ. ಗ್ರಾಮದ ಕೆಲವರ ಜೊತೆ ಮಂಡ್ಯದಿಂದ ಬಂದವರು ಇದ್ದರು. ಅವರಿಂದ ತಿಳಿದುಕೊಂಡ ಮೇಲೆ ಅವರು ಮಂಡ್ಯದವರು ಎಂದು ಗೊತ್ತಾಯಿತು” ಎನ್ನುತ್ತಾರೆ ಹಿರಿಯರಾದ ನರಸಿಂಹಯ್ಯ.

ಮತ್ತೊಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರ ಇಡೀ ಕುಟುಂಬವೇ ಪ್ರಚಾರದಲ್ಲಿ ನಿರತವಾಗಿ ಇರುವುದು ಇಲ್ಲಿನ ವಿಶೇಷ. ಪತ್ನಿ, ಪುತ್ರ ಸಂತೋಷ್ ಜಯಚಂದ್ರ, ಸೊಸೆಯಾದಿಯಾಗಿ ಎಲ್ಲರೂ ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡ ಮತದಾರರ ಮನವೊಲಿಸುವ ಪ್ರಯತ್ನ ಮುಂದುವರಿಸಿದ್ದಾರೆ. ಇದು ಶಿರಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ನಡುವಿನ ಪೈಪೋಟಿಯ ತೀವ್ರತೆಯನ್ನು ತೋರಿಸುತ್ತದೆ.

ಪರಸ್ಪರ ಕೆಸರೆರೆಚಾಟವೂ ಜೋರಾಗಿದೆ. ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಪರಸ್ಪರ ದೂರಿಕೊಳ್ಳುವುದು ಸಾಮಾನ್ಯವಾಗಿದೆ. ಕಾಂಗ್ರೆಸ್ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದ ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆ ಮಾಡಿರುವುದನ್ನು ಪ್ರಚಾರದಲ್ಲಿ ಮತದಾರರಿಗೆ ನೆನಪಿಸುತ್ತಿದೆ. ಜೆಡಿಎಸ್ ತನ್ನ ಆಡಳಿತದ ಅವಧಿಯ ಸಾಧನೆಗಳನ್ನು ಬೊಟ್ಟುಮಾಡಿ ತೋರಿಸುತ್ತಿದೆ. ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಹೇಳುತ್ತಿದೆ. ಮತದಾರರು ಎಲ್ಲವನ್ನೂ ಗಮನಿಸುತ್ತ ಕೇಳಿಸಿಕೊಳ್ಳುತ್ತಿದ್ದಾರೆ. ಜಣಜಣಜಣ ಕಾಂಚಣದಲ್ಲಿ ಮೂರು ಪಕ್ಷಗಳ ಲಾಂಚನದಲ್ಲಿ ಎಲ್ಲಾ ಮಾಯ ಎನ್ನುವಂತಹ ಪರಿಸ್ಥಿತಿ ಇದೆ.

  • ಸಿದ್ದಯ್ಯ ಕೆ.ಈ

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...