Homeಕರ್ನಾಟಕಶಿರಾ ಉಪಚುನಾವಣೆ: ಹಿರಿಯರು, ವಿಶೇಷಚೇತನರಿಗೆ ಹಣ ಹಂಚಿಕೆ ಆರೋಪ

ಶಿರಾ ಉಪಚುನಾವಣೆ: ಹಿರಿಯರು, ವಿಶೇಷಚೇತನರಿಗೆ ಹಣ ಹಂಚಿಕೆ ಆರೋಪ

ಬಿಜೆಪಿ ಕಾರ್ಯಕರ್ತರಾದ ಸುರೇಶ, ರಮೇಶ್ ಸೇರಿದಂತೆ ಎಂಟು ಹತ್ತು ಮಂದಿ ನನಗೆ ಹಣ ಕೊಡಲು ಬಂದರು. ನಾನು ಉಗಿದು ಅಟ್ಟಿದೆ...

- Advertisement -
- Advertisement -

ಶಿರಾ ಉಪಚುನಾವಣೆಯು ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವು ಖಚಿತ ಎಂದು ಹೇಳುತ್ತಿದ್ದಾರೆ. ರಾಜ್ಯಮಟ್ಟದ ನಾಯಕರು ಬಂದು ಪ್ರಚಾರದಲ್ಲಿ ತೊಡಗಿದ್ದಾರೆ. ಕೆಲ ಮುಖಂಡರು ಕ್ಷೇತ್ರದಲ್ಲೇ ಬೀಡುಬಿಟ್ಟು ಜನರ ನಾಡಿಮಿಡಿತ ಅರಿಯುವ ಪ್ರಯತ್ನಗಳನ್ನು ಮುಂದುವರಿಸಿದ್ದಾರೆ. ಬೇರೆ ಜಿಲ್ಲೆಗಳ ಮುಖಂಡರು ಪ್ರಚಾರ ನಡೆಸುತ್ತಿದ್ದಾರೆ. ಪ್ರತಿ ಹೋಬಳಿಗೆ ಒಬ್ಬ ಮುಖಂಡರನ್ನು ನೇಮಕ ಮಾಡಿ ಅವರೇ ಖರ್ಚುವೆಚ್ಚ ನೋಡಿಕೊಳ್ಳುವಂತೆ ಜವಾಬ್ದಾರಿ ವಹಿಸಲಾಗಿದೆ.

ಬಿಜೆಪಿ ಪರವಾಗಿ ಪ್ರಚಾರ ನಡೆಸಲು ಮಂಡ್ಯ ಮತ್ತು ಹಾಸನ ಜಿಲ್ಲೆಗಳಿಂದ ಕಾರ್ಯಕರ್ತರು ಬಂದಿದ್ದಾರೆ. ಹಾಸನ ಜಿಲ್ಲೆಯ ಬಿಜೆಪಿ ಶಾಸಕ ಪ್ರೀತಂ ಗೌಡ ಅವರಿಗೆ ಹುಲಿಕುಂಟೆ ಹೋಬಳಿ ಜವಾಬ್ದಾರಿ ನೀಡಿದ್ದು ಆ ಹೋಬಳಿಯಲ್ಲಿ ಪ್ರಚಾರದ ನೇತೃತ್ವ ವಹಿಸಿದ್ದಾರೆ. ಹುಲಿಕುಂಟೆ ಹೋಬಳಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರ ಹುಟ್ಟೂರು. ವಿಶೇಷವಾಗಿ ಯುವ ಮತದಾರರನ್ನು ಸೆಳೆಯಲು ಯುವ ಶಾಸಕ ಪ್ರೀತಂಗೌಡ ಅವರಿಗೆ ಈ ಹೋಬಳಿಯ ಜವಾಬ್ದಾರಿ ನೀಡಲಾಗಿದೆ.

ಇದರ ನಡುವೆ ಕ್ಷೇತ್ರದಲ್ಲಿ ಹಣದ ಹರಿವು ಜೋರಾಗಿದೆ. ಹಿರಿಯರು ಮತ್ತು ವಿಶೇಷಚೇತನರಿಗೆ ಹಣ ಹಂಚಿಕೆ ಮಾಡಿರುವ ಸಂಬಂಧ ಆಡಿಯೋಗಳು ಸದ್ದುಮಾಡುತ್ತಿವೆ. ದ್ವಾರಾಳು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಹಿರಿಯ ನಾಗರಿಕರು ಮತ್ತು ವಿಶೇಷಚೇತನರಿಗೆ ಪ್ರತಿ ಮತಕ್ಕೆ 2 ರಿಂದ 3 ಸಾವಿರ ರೂಪಾಯಿ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹಿರಿಯರೊಬ್ಬರು ಬಿಜೆಪಿ ಕಾರ್ಯಕರ್ತರಿಗೆ ತರಾಟೆಗೆ ತೆಗೆದುಕೊಂಡಿರುವ ಬಗೆಗಿನ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಸುಮಾರು 8 ನಿಮಿಷದಷ್ಟು ಇರುವ ಆಡಿಯೋದಲ್ಲಿ ದ್ವಾರಾಳು ಗ್ರಾಮದ ಹಿರಿಯರಾದ ನರಸಿಂಹಯ್ಯ ಎಂಬ ಹೆಸರಿನವರು “ಬಿಜೆಪಿ ಕಾರ್ಯಕರ್ತರಾದ ಸುರೇಶ, ರಮೇಶ್ ಸೇರಿದಂತೆ ಎಂಟು ಹತ್ತು ಮಂದಿ ನನಗೆ ಹಣ ಕೊಡಲು ಬಂದರು. ನಾನು ಉಗಿದು ಅಟ್ಟಿದೆ. ನಾನು ಹಿಂದಿನಿಂದಲೂ ಹಣ ಪಡೆದು ಓಟು ಹಾಕಿಲ್ಲ. ಲಂಚ ಪಡೆದು ಓಟು ಹಾಕಬೇಕೇ? ಹಣ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದೆ. ಚನ್ನಾಗಿ ಬೈದೆ. 500 ರೂ ನ ಆರು ನೋಟುಗಳನ್ನು ಎಣಿಸಿದರು. ನಾನು ಬೈದ ಮೇಲೆ ಹಣವನ್ನು ಜೋಬಿಗೆ ಇಟ್ಟುಕೊಂಡು ಹೋದರು. ಊರಲ್ಲಿ ಹಲವರಿಗೆ ಹಣ ಹಂಚಿಕೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಈ ಗುಂಪಿನಲ್ಲಿ ಮಂಡ್ಯದಿಂದ ಬಂದವರು ಇದ್ದರು. ಇವರು ಯಾರು ಅಂತ ಕೇಳಿದೆ. ಆತ ನಾನು ಮಂಡ್ಯ ದಿಂದ ಬಂದಿದ್ದೇನೆ. ಬಿಜೆಪಿಯ ರಾಜೇಶ್ ಗೌಡರ ಪರವಾಗಿ ಪ್ರಚಾರ ಮಾಡುತ್ತಿದ್ದೇನೆ ಎಂದು ಹೇಳಿದ. ಗ್ರಾಮದ ಕೆಲವರ ಜೊತೆ ಮಂಡ್ಯದಿಂದ ಬಂದವರು ಇದ್ದರು. ಅವರಿಂದ ತಿಳಿದುಕೊಂಡ ಮೇಲೆ ಅವರು ಮಂಡ್ಯದವರು ಎಂದು ಗೊತ್ತಾಯಿತು” ಎನ್ನುತ್ತಾರೆ ಹಿರಿಯರಾದ ನರಸಿಂಹಯ್ಯ.

ಮತ್ತೊಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರ ಇಡೀ ಕುಟುಂಬವೇ ಪ್ರಚಾರದಲ್ಲಿ ನಿರತವಾಗಿ ಇರುವುದು ಇಲ್ಲಿನ ವಿಶೇಷ. ಪತ್ನಿ, ಪುತ್ರ ಸಂತೋಷ್ ಜಯಚಂದ್ರ, ಸೊಸೆಯಾದಿಯಾಗಿ ಎಲ್ಲರೂ ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡ ಮತದಾರರ ಮನವೊಲಿಸುವ ಪ್ರಯತ್ನ ಮುಂದುವರಿಸಿದ್ದಾರೆ. ಇದು ಶಿರಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ನಡುವಿನ ಪೈಪೋಟಿಯ ತೀವ್ರತೆಯನ್ನು ತೋರಿಸುತ್ತದೆ.

ಪರಸ್ಪರ ಕೆಸರೆರೆಚಾಟವೂ ಜೋರಾಗಿದೆ. ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಪರಸ್ಪರ ದೂರಿಕೊಳ್ಳುವುದು ಸಾಮಾನ್ಯವಾಗಿದೆ. ಕಾಂಗ್ರೆಸ್ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದ ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆ ಮಾಡಿರುವುದನ್ನು ಪ್ರಚಾರದಲ್ಲಿ ಮತದಾರರಿಗೆ ನೆನಪಿಸುತ್ತಿದೆ. ಜೆಡಿಎಸ್ ತನ್ನ ಆಡಳಿತದ ಅವಧಿಯ ಸಾಧನೆಗಳನ್ನು ಬೊಟ್ಟುಮಾಡಿ ತೋರಿಸುತ್ತಿದೆ. ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಹೇಳುತ್ತಿದೆ. ಮತದಾರರು ಎಲ್ಲವನ್ನೂ ಗಮನಿಸುತ್ತ ಕೇಳಿಸಿಕೊಳ್ಳುತ್ತಿದ್ದಾರೆ. ಜಣಜಣಜಣ ಕಾಂಚಣದಲ್ಲಿ ಮೂರು ಪಕ್ಷಗಳ ಲಾಂಚನದಲ್ಲಿ ಎಲ್ಲಾ ಮಾಯ ಎನ್ನುವಂತಹ ಪರಿಸ್ಥಿತಿ ಇದೆ.

  • ಸಿದ್ದಯ್ಯ ಕೆ.ಈ

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...