Homeಕರ್ನಾಟಕಶಿರಾ ಉಪಚುನಾವಣೆ: ಹಿರಿಯರು, ವಿಶೇಷಚೇತನರಿಗೆ ಹಣ ಹಂಚಿಕೆ ಆರೋಪ

ಶಿರಾ ಉಪಚುನಾವಣೆ: ಹಿರಿಯರು, ವಿಶೇಷಚೇತನರಿಗೆ ಹಣ ಹಂಚಿಕೆ ಆರೋಪ

ಬಿಜೆಪಿ ಕಾರ್ಯಕರ್ತರಾದ ಸುರೇಶ, ರಮೇಶ್ ಸೇರಿದಂತೆ ಎಂಟು ಹತ್ತು ಮಂದಿ ನನಗೆ ಹಣ ಕೊಡಲು ಬಂದರು. ನಾನು ಉಗಿದು ಅಟ್ಟಿದೆ...

- Advertisement -
- Advertisement -

ಶಿರಾ ಉಪಚುನಾವಣೆಯು ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವು ಖಚಿತ ಎಂದು ಹೇಳುತ್ತಿದ್ದಾರೆ. ರಾಜ್ಯಮಟ್ಟದ ನಾಯಕರು ಬಂದು ಪ್ರಚಾರದಲ್ಲಿ ತೊಡಗಿದ್ದಾರೆ. ಕೆಲ ಮುಖಂಡರು ಕ್ಷೇತ್ರದಲ್ಲೇ ಬೀಡುಬಿಟ್ಟು ಜನರ ನಾಡಿಮಿಡಿತ ಅರಿಯುವ ಪ್ರಯತ್ನಗಳನ್ನು ಮುಂದುವರಿಸಿದ್ದಾರೆ. ಬೇರೆ ಜಿಲ್ಲೆಗಳ ಮುಖಂಡರು ಪ್ರಚಾರ ನಡೆಸುತ್ತಿದ್ದಾರೆ. ಪ್ರತಿ ಹೋಬಳಿಗೆ ಒಬ್ಬ ಮುಖಂಡರನ್ನು ನೇಮಕ ಮಾಡಿ ಅವರೇ ಖರ್ಚುವೆಚ್ಚ ನೋಡಿಕೊಳ್ಳುವಂತೆ ಜವಾಬ್ದಾರಿ ವಹಿಸಲಾಗಿದೆ.

ಬಿಜೆಪಿ ಪರವಾಗಿ ಪ್ರಚಾರ ನಡೆಸಲು ಮಂಡ್ಯ ಮತ್ತು ಹಾಸನ ಜಿಲ್ಲೆಗಳಿಂದ ಕಾರ್ಯಕರ್ತರು ಬಂದಿದ್ದಾರೆ. ಹಾಸನ ಜಿಲ್ಲೆಯ ಬಿಜೆಪಿ ಶಾಸಕ ಪ್ರೀತಂ ಗೌಡ ಅವರಿಗೆ ಹುಲಿಕುಂಟೆ ಹೋಬಳಿ ಜವಾಬ್ದಾರಿ ನೀಡಿದ್ದು ಆ ಹೋಬಳಿಯಲ್ಲಿ ಪ್ರಚಾರದ ನೇತೃತ್ವ ವಹಿಸಿದ್ದಾರೆ. ಹುಲಿಕುಂಟೆ ಹೋಬಳಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರ ಹುಟ್ಟೂರು. ವಿಶೇಷವಾಗಿ ಯುವ ಮತದಾರರನ್ನು ಸೆಳೆಯಲು ಯುವ ಶಾಸಕ ಪ್ರೀತಂಗೌಡ ಅವರಿಗೆ ಈ ಹೋಬಳಿಯ ಜವಾಬ್ದಾರಿ ನೀಡಲಾಗಿದೆ.

ಇದರ ನಡುವೆ ಕ್ಷೇತ್ರದಲ್ಲಿ ಹಣದ ಹರಿವು ಜೋರಾಗಿದೆ. ಹಿರಿಯರು ಮತ್ತು ವಿಶೇಷಚೇತನರಿಗೆ ಹಣ ಹಂಚಿಕೆ ಮಾಡಿರುವ ಸಂಬಂಧ ಆಡಿಯೋಗಳು ಸದ್ದುಮಾಡುತ್ತಿವೆ. ದ್ವಾರಾಳು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಹಿರಿಯ ನಾಗರಿಕರು ಮತ್ತು ವಿಶೇಷಚೇತನರಿಗೆ ಪ್ರತಿ ಮತಕ್ಕೆ 2 ರಿಂದ 3 ಸಾವಿರ ರೂಪಾಯಿ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಹಿರಿಯರೊಬ್ಬರು ಬಿಜೆಪಿ ಕಾರ್ಯಕರ್ತರಿಗೆ ತರಾಟೆಗೆ ತೆಗೆದುಕೊಂಡಿರುವ ಬಗೆಗಿನ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಸುಮಾರು 8 ನಿಮಿಷದಷ್ಟು ಇರುವ ಆಡಿಯೋದಲ್ಲಿ ದ್ವಾರಾಳು ಗ್ರಾಮದ ಹಿರಿಯರಾದ ನರಸಿಂಹಯ್ಯ ಎಂಬ ಹೆಸರಿನವರು “ಬಿಜೆಪಿ ಕಾರ್ಯಕರ್ತರಾದ ಸುರೇಶ, ರಮೇಶ್ ಸೇರಿದಂತೆ ಎಂಟು ಹತ್ತು ಮಂದಿ ನನಗೆ ಹಣ ಕೊಡಲು ಬಂದರು. ನಾನು ಉಗಿದು ಅಟ್ಟಿದೆ. ನಾನು ಹಿಂದಿನಿಂದಲೂ ಹಣ ಪಡೆದು ಓಟು ಹಾಕಿಲ್ಲ. ಲಂಚ ಪಡೆದು ಓಟು ಹಾಕಬೇಕೇ? ಹಣ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದೆ. ಚನ್ನಾಗಿ ಬೈದೆ. 500 ರೂ ನ ಆರು ನೋಟುಗಳನ್ನು ಎಣಿಸಿದರು. ನಾನು ಬೈದ ಮೇಲೆ ಹಣವನ್ನು ಜೋಬಿಗೆ ಇಟ್ಟುಕೊಂಡು ಹೋದರು. ಊರಲ್ಲಿ ಹಲವರಿಗೆ ಹಣ ಹಂಚಿಕೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಈ ಗುಂಪಿನಲ್ಲಿ ಮಂಡ್ಯದಿಂದ ಬಂದವರು ಇದ್ದರು. ಇವರು ಯಾರು ಅಂತ ಕೇಳಿದೆ. ಆತ ನಾನು ಮಂಡ್ಯ ದಿಂದ ಬಂದಿದ್ದೇನೆ. ಬಿಜೆಪಿಯ ರಾಜೇಶ್ ಗೌಡರ ಪರವಾಗಿ ಪ್ರಚಾರ ಮಾಡುತ್ತಿದ್ದೇನೆ ಎಂದು ಹೇಳಿದ. ಗ್ರಾಮದ ಕೆಲವರ ಜೊತೆ ಮಂಡ್ಯದಿಂದ ಬಂದವರು ಇದ್ದರು. ಅವರಿಂದ ತಿಳಿದುಕೊಂಡ ಮೇಲೆ ಅವರು ಮಂಡ್ಯದವರು ಎಂದು ಗೊತ್ತಾಯಿತು” ಎನ್ನುತ್ತಾರೆ ಹಿರಿಯರಾದ ನರಸಿಂಹಯ್ಯ.

ಮತ್ತೊಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರ ಇಡೀ ಕುಟುಂಬವೇ ಪ್ರಚಾರದಲ್ಲಿ ನಿರತವಾಗಿ ಇರುವುದು ಇಲ್ಲಿನ ವಿಶೇಷ. ಪತ್ನಿ, ಪುತ್ರ ಸಂತೋಷ್ ಜಯಚಂದ್ರ, ಸೊಸೆಯಾದಿಯಾಗಿ ಎಲ್ಲರೂ ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡ ಮತದಾರರ ಮನವೊಲಿಸುವ ಪ್ರಯತ್ನ ಮುಂದುವರಿಸಿದ್ದಾರೆ. ಇದು ಶಿರಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ನಡುವಿನ ಪೈಪೋಟಿಯ ತೀವ್ರತೆಯನ್ನು ತೋರಿಸುತ್ತದೆ.

ಪರಸ್ಪರ ಕೆಸರೆರೆಚಾಟವೂ ಜೋರಾಗಿದೆ. ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಪರಸ್ಪರ ದೂರಿಕೊಳ್ಳುವುದು ಸಾಮಾನ್ಯವಾಗಿದೆ. ಕಾಂಗ್ರೆಸ್ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದ ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆ ಮಾಡಿರುವುದನ್ನು ಪ್ರಚಾರದಲ್ಲಿ ಮತದಾರರಿಗೆ ನೆನಪಿಸುತ್ತಿದೆ. ಜೆಡಿಎಸ್ ತನ್ನ ಆಡಳಿತದ ಅವಧಿಯ ಸಾಧನೆಗಳನ್ನು ಬೊಟ್ಟುಮಾಡಿ ತೋರಿಸುತ್ತಿದೆ. ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಹೇಳುತ್ತಿದೆ. ಮತದಾರರು ಎಲ್ಲವನ್ನೂ ಗಮನಿಸುತ್ತ ಕೇಳಿಸಿಕೊಳ್ಳುತ್ತಿದ್ದಾರೆ. ಜಣಜಣಜಣ ಕಾಂಚಣದಲ್ಲಿ ಮೂರು ಪಕ್ಷಗಳ ಲಾಂಚನದಲ್ಲಿ ಎಲ್ಲಾ ಮಾಯ ಎನ್ನುವಂತಹ ಪರಿಸ್ಥಿತಿ ಇದೆ.

  • ಸಿದ್ದಯ್ಯ ಕೆ.ಈ

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...