Homeಕರ್ನಾಟಕಆರು ತಿಂಗಳಲ್ಲಿ ಮದಲೂರು ಕೆರೆಗೆ ಹೇಮಾವತಿ ನೀರು - ಯಡಿಯೂರಪ್ಪ

ಆರು ತಿಂಗಳಲ್ಲಿ ಮದಲೂರು ಕೆರೆಗೆ ಹೇಮಾವತಿ ನೀರು – ಯಡಿಯೂರಪ್ಪ

ಮತದಾನಕ್ಕೆ ಮೂರು ದಿನ ಬಾಕಿ ಇರುವಾಗ ಮುಖ್ಯಮಂತ್ರಿಗಳು ಕ್ಷೇತ್ರದಲ್ಲಿ ಬಂದು ಪ್ರಚಾರ ನಡೆಸಿರುವುದು ಬಿಜೆಪಿ ಅಭ್ಯರ್ಥಿಗೆ ಸ್ವಲ್ಪಮಟ್ಟಿನ ಪ್ಲಸ್ ಪಾಯಿಂಟ್ ಎಂದು ಹೇಳಲಾಗುತ್ತಿದೆ

- Advertisement -
- Advertisement -

ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರನ್ನು ಗೆಲ್ಲಿಸಿದರೆ ಇನ್ನು ಆರು ತಿಂಗಳೊಳಗೆ ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುತ್ತೇನೆ. ಗಂಗಾಪೂಜೆಯನ್ನು ನಾನೇ ನೆರವೇರಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಶಿರಾ ತಾಲೂಕಿನ ಮದಲೂರಿನಹಲ್ಲಿ ಹಮ್ಮಿಕೊಂಡಿದ್ದ ವಿಜಯ ಸಂಕಲ್ಪ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಯಡಿಯೂರಪ್ಪ ಅಭ್ಯರ್ಥಿ ರಾಜೇಶ್ ಗೌಡ ಪರ ಮತಯಾಚಿಸಿದರು. ಮದಲೂರು ಕೆರೆಗೆ ಹೇಮಾವತಿ ನೀರು ಹರಿಸುವುದರಿಂದ ಪ್ರಚಾರ ಕಾರ್ಯ ಆರಂಭಿಸಿದ್ದ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದಲೇ ಹೇಮಾವತಿ ನೀರು ಹರಿಸುವ ಭರವಸೆ ಕೊಡಿಸಿದರು.

“ನಮ್ಮ ಪಕ್ಷದ ಅಭ್ಯರ್ಥಿ ರಾಜೇಶ್ ಗೌಡರನ್ನು ಗೆಲ್ಲಿಸಿ, ಮದಲೂರು ಕೆರೆಗೆ ನೀರು ಹರಿಸುತ್ತೇನೆ. ಕೆರೆ ತುಂಬಿದ ಮೇಲೆ ನಾನೇ ಬಂದು ಗಂಗಾಪೂಜೆಯನ್ನು ಮಾಡುತ್ತೇನೆ” ಎಂದು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನರಿಗೆ ಭರವಸೆ ನೀಡಿದರು.

ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿದ ಕಾಡುಗೊಲ್ಲರಿಗೆ ಇದುವರೆಗೂ ಯಾವ ಸರ್ಕಾರವೂ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿರಲಿಲ್ಲ. ಬಿಜೆಪಿ ಸರ್ಕಾರ ಕಾಡುಗೊಲ್ಲರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದೆ. ನಿಗಮಕ್ಕೆ ಬೇಕಾದ ಹಣವನ್ನು ಒದಗಿಸುತ್ತೇನೆ. ಕಾಡುಗೊಲ್ಲರ ಅಭಿವೃದ್ಧಿಗೆ ಬದ್ದವಾಗಿದ್ದೇನೆ. ಹಾಗಾಗಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಶಿರಾ ಪಟ್ಟಣದಲ್ಲೂ ಸಮಾವೇಶ ನಡೆಸಲಾಯಿತು. ಸಾವಿರಾರು ಮಂದಿ ಸಮಾವೇಶದಲ್ಲಿ ಭಾಗವಹಿಸಿದ್ದರು. ಮತದಾನಕ್ಕೆ ಮೂರು ದಿನ ಬಾಕಿ ಇರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಕ್ಷೇತ್ರದಲ್ಲಿ ಬಂದು ಪ್ರಚಾರ ನಡೆಸಿರುವುದು ಬಿಜೆಪಿ ಅಭ್ಯರ್ಥಿಗೆ ಸ್ವಲ್ಪಮಟ್ಟಿನ ಪ್ಲಸ್ ಪಾಯಿಂಟ್ ಎಂದು ಹೇಳಲಾಗುತ್ತಿದೆ.

ಈ ಹಿಂದೆ ತ್ರಿಕೋನ ಸ್ಪರ್ಧೆ ಕಂಡುಬರುತ್ತಿದ್ದ ಶಿರಾ ಉಪಚುನಾವಣೆಯಲ್ಲಿ ಬಿಜೆಪಿಗೆ ಸ್ವಲ್ಪಮಟ್ಟಿನ ಹಿನ್ನಡೆಯಾಗಿದೆ. ಈಗ ಕಾಂಗ್ರೆಸ್-ಜೆಡಿಎಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇಂದಿ ಮುಖ್ಯಮಂತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಿರುವುದು ಬಿಜೆಪಿ ಅಭ್ಯರ್ಥಿಗೆ ಕೊಂಚ ಬಲ ನೀಡಿದೆ.


ಇದನ್ನೂ ಓದಿ: ಶಿರಾ: ಹಣ ಹಂಚಿದ ಬಿಜೆಪಿ ಅಭ್ಯರ್ಥಿಯನ್ನು ಅನರ್ಹಗೊಳಿಸಿ; ಕಾಂಗ್ರೆಸ್ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...