Homeಚಳವಳಿಶಿರಾ ಉಪಚುನಾವಣೆ: ಜೆಡಿಎಸ್ ತೊರೆದು ’ಕೈ’ ಹಿಡಿದ ಸ್ಥಳೀಯ ಮುಖಂಡರು

ಶಿರಾ ಉಪಚುನಾವಣೆ: ಜೆಡಿಎಸ್ ತೊರೆದು ’ಕೈ’ ಹಿಡಿದ ಸ್ಥಳೀಯ ಮುಖಂಡರು

15ಕ್ಕೂ ಹೆಚ್ಚು ಮಂದಿ ಪ್ರಮುಖರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದು ಕಾಂಗ್ರೆಸ್ ಪಕ್ಷ  ಶಿರಾ ಉಪ ಚುನಾವಣೆಯಲ್ಲಿ ಮತ್ತಷ್ಟು ಬಲಿಷ್ಟಗೊಳ್ಳಲು ಸಹಕಾರಿಯಾಗಿದೆ.

- Advertisement -
- Advertisement -

ಶಿರಾ ಉಪಚುನಾವಣೆ ಘೋಷಣೆಯಾದ ಬಳಿಕ ಪಕ್ಷ ಬಿಟ್ಟು ಪಕ್ಷಕ್ಕೆ ಸೇರ್ಪಡೆಯಾಗುವ ಮುಖಂಡರ ಸಂಖ್ಯೆ ಹೆಚ್ಚತೊಡಗಿದೆ. ಕಳೆದ ಎರಡು ದಿನಗಳಿಂದ ಈ ಬೆಳವಣಿಗಳು ನಡೆಯತೊಡಗಿವೆ. ಇಂದು 15ಕ್ಕೂ ಹೆಚ್ಚು ಮಂದಿ ಪ್ರಮುಖರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದು ಕಾಂಗ್ರೆಸ್ ಪಕ್ಷ  ಶಿರಾದಲ್ಲಿ ಮತ್ತಷ್ಟು ಬಲಿಷ್ಟಗೊಳ್ಳಲು ಸಹಕಾರಿಯಾಗಿದೆ. ಈ ಬೆಳವಣಿಗೆ ಉಪ ಚುನಾವಣೆಯಲ್ಲಿ ಮಹತ್ವದ ಬದಲಾವಣೆಗೂ ಕಾರಣವಾಗಲಿದೆ.

ಮಾಜಿ ಪುರಸಭಾ ಅಧ್ಯಕ್ಷ ಹಾಗೂ ಕುಂಚಿಟಿಗರ ಸಂಘದ ತಾಲೂಕು ಅಧ್ಯಕ್ಷ ತ್ಯಾಗರಾಜು, ಜೆಡಿಎಸ್ ಮುಖಂಡ ರವಿಕುಮಾರ್ ಕಲ್ಕೆರೆ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ವಿನಯ್, ಮಾಗೋಡು ಮತ್ತು ತಾವರೆಕೆರೆ ವಿಎಸ್ಎಸ್ಎನ್ ಅಧ್ಯಕ್ಷರಾದ ಶ್ರೀರಂಗಪ್ಪ, ಕೃಷ್ಣಮೂರ್ತಿ, ಮಾಜಿ ಮಂಡಲ್ ಪಂಚಾಯತ್ ಅಧ್ಯಕ್ಷ ಚಿನ್ನಪ್ಪ, ಶಿರಾ ಬಲಿಜ ಸಂಘದ ಅಧ್ಯಕ್ಷ ಶ್ರೀರಂಗಪ್ಪ, ಯುವ ಬಲಿಜ ಸಂಘದ ಅಧ್ಯಕ್ಷ ವಿನಯ್ (ಕಿಶೋರ್), ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಆದರ್ಶ, ವಕೀಲರ ಸಂಘದ ಮಾಜಿ ಅಧ್ಯಕ್ಷ ಸರ್ವೇಶ್ ನಗರ ಯುವ ಜೆಡಿಎಸ್ ಅಧ್ಯಕ್ಷ ಮಣಿಕಂಠ, ತಾಲೂಕು ಪಂಚಾಯಿತಿ  ಮಾಜಿ ಅಧ್ಯಕ್ಷ ರಾಘವೇಂದ್ರ, ಜೆಡಿಎಸ್ ಮುಖಂಡರಾದ ಡಾಬ ಬಾಬು, ಶರತ್ ಮತ್ತು ರಾಘವೇಂದ್ರ ಕಾಂಗ್ರೆಸ್ ಸೇರ್ಪಡೆಯಾಗಿರುವ ಮುಖಂಡರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ವಿವಿಧ ಜಾತಿಗಳ ಮುಖಂಡರ ಕಾಂಗ್ರೆಸ್ ಸೇರ್ಪಡೆಯಿಂದ ಜೆಡಿಎಸ್‌ಗೆ ತೀವ್ರ ಹಿನ್ನಡೆಯಾದಂತೆ ಆಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ಅವರ ಪತಿ ರವಿಕುಮಾರ್ ಕಾಂಗ್ರೆಸ್ ಸೇರ್ಪಡೆಗೊಂಡು ಜೆಡಿಎಸ್‌ಗೆ ದೊಡ್ಡ ಪೆಟ್ಟನ್ನೇ ನೀಡಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿದ ಮತ್ತು ತಾಲೂಕಿನಲ್ಲಿ ಪ್ರಮುಖ ಮುಖಂಡ ರಾಗಿರುವ ರವಿಕುಮಾರ್ ಗೌಡಗೆರೆ ಹೋಬಳಿಯಲ್ಲಿ ಸಾಕಷ್ಟು ಕೆಲಸ ಮಾಡಿರುವ ಬಗ್ಗೆ ಕ್ಷೇತ್ರದ ಜನರಲ್ಲಿ ಒಳ್ಳೆಯ ಭಾವನೆ ಇದೆ.

ರವಿಕುಮಾರ್ ಶಿರಾ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳಲ್ಲಿ ಕೂಡ ಒಬ್ಬರಾಗಿದ್ದರು. ಜೊತೆಗೆ ಪಕ್ಷದ ವರಿಷ್ಠರೇ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ಅವರನ್ನು ಅಧಿಕಾರದಿಂದ ಇಳಿಸಲು ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕುವಂತೆ ಸದಸ್ಯರಿಗೆ ಒಪ್ಪಿಗೆ ನೀಡಿದ್ದರು. ಇದರಿಂದ ರವಿಕುಮಾರ್ ಅಸಮಾಧಾನ ಹೊರಹಾಕಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಮೃದು ಧೋರಣೆ ಹೊಂದಿದ್ದರಿಂದ ಜೆಡಿಎಸ್ ವರಿಷ್ಠರು ಜಿಪಂ ಅಧ್ಯಕ್ಷರನ್ನು ಅಧಿಕಾರದಿಂದ ಇಳಿಸುವ ತಂತ್ರಕ್ಕೆ ಮುಂದಾಗಿದ್ದರು.

ರವಿಕುಮಾರ್‌ ಕಲ್ಕೆರೆ, ಜೆಡಿಎಸ್ ಮುಖಂಡ

ಈಗ ರವಿಕುಮಾರ್ ಜೆಡಿಎಸ್ ಬಗ್ಗೆ ಅಸಮಾಧಾನ ಹೊರಹಾಕಿ ಕಾಂಗ್ರೆಸ್ ಸೇರ್ಪಡೆಗೊಂಡಿರುವುದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರಿಗೆ ಮತ್ತಷ್ಟು ಬಲ ತಂದುಕೊಟ್ಟಿದೆ. ಕ್ಷೇತ್ರದಲ್ಲಿ ಕುರುಬ ಸಮುದಾಯದ ಮತಗಳು 13 ಸಾವಿರ ಇವೆ. ರವಿಕುಮಾರ್ ಬಗ್ಗೆ ಶಿರಾದಲ್ಲಿ ಒಳ್ಳೆಯ ಹೆಸರು ಕೂಡ ಇದೆ. ಇದು ಕಾಂಗ್ರೆಸ್  ಪಕ್ಷಕ್ಕೆ ವರವಾಗಿ ಪರಿಣಮಿಸಿದೆ.

ಜಿಲ್ಲಾ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಸಭೆಯಲ್ಲಿ ಕಾಂಗ್ರೆಸ್ ಭಾಗವಹಿಸುವುದಿಲ್ಲ. ಹಾಗಾಗಿ ಅವಿಶ್ವಾಸ ಗೊತ್ತುವಳಿ ಪರ ಮತಗಳ ಕೊರತೆಯಾಗಿ ಬಿದ್ದುಹೋಗಲಿದೆ. ಅಧ್ಯಕ್ಷರು ಮುಂದಿನ ಅವಧಿಗೂ ಮುಂದುವರಿಯಲು ಅವಕಾಶ ಸಿಗುತ್ತದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಶಿರಾ ನಗರದಲ್ಲಿ ಬಲಿಜ ಸಮುದಾಯದ ಮತಗಳು ಏಳು ಸಾವಿರದಷ್ಟಿವೆ. ಈ ಸಮುದಾಯದ ಸಂಘದ ಅಧ್ಯಕ್ಷರು, ಯುವಕ ಸಂಘದ ಅಧ್ಯಕ್ಷರೂ ಮತ್ತು ಪ್ರಧಾನ ಕಾರ್ಯದರ್ಶಿಗಳು ಕಾಂಗ್ರೆಸ್ ಸೇರ್ಪಡೆ ಆಗಿರುವುದು ಜಯಚಂದ್ರ ಅವರ ಗೆಲುವಿನ ಹಾದಿಯನ್ನು ಸುಗಮಗೊಳಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮಾಜಿ ಪುರಸಭಾ ಅಧ್ಯಕ್ಷರು ಮತ್ತು ಕುಂಚಿಟಿಗರ ಸಂಘದ ಅಧ್ಯಕ್ಷರು, ವಿಎಸ್ಎಸ್ಎನ್‌ ಅಧ್ಯಕ್ಷರು, ಯುವ ಮುಖಂಡರಿಗೆ ಅವರದೇ ಆದ ಬೆಂಬಲಿಗರ ಮತ್ತು ಅಭಿಮಾನಿಗಳ ಪಡೆ ಇದೆ. ಇದು ಜೆಡಿಎಸ್ ಪಕ್ಷಕ್ಕೆ ಹೊಡೆತ ನೀಡುವುದು ಗ್ಯಾರೆಂಟಿ.

ಇನ್ನು ಮದಲೂರು ಜಿಲ್ಲಾ ಪಂಚಾಯತ್ ಸದಸ್ಯೆ ಪತಿ, ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಶ್ರೀರಂಗ ಯಾದವ್ ನಾದೂರು ಜಿಲ್ಲಾ ಪಂಚಾಯಿತಿ ಸದಸ್ಯೆಯ ಪತಿ, ಜೆಡಿಎಸ್ ಮುಖಂಡ ಶ್ರೀರಂಗ ಯಾದವ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.


ಇದನ್ನೂ ಓದಿ: ಶಿರಾ ಉಪಚುನಾವಣೆ ನವೆಂಬರ್ 3 ಕ್ಕೆ: 56 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...