Homeಚಳವಳಿಶಿರಾ ಉಪಚುನಾವಣೆ: ಜೆಡಿಎಸ್ ತೊರೆದು ’ಕೈ’ ಹಿಡಿದ ಸ್ಥಳೀಯ ಮುಖಂಡರು

ಶಿರಾ ಉಪಚುನಾವಣೆ: ಜೆಡಿಎಸ್ ತೊರೆದು ’ಕೈ’ ಹಿಡಿದ ಸ್ಥಳೀಯ ಮುಖಂಡರು

15ಕ್ಕೂ ಹೆಚ್ಚು ಮಂದಿ ಪ್ರಮುಖರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದು ಕಾಂಗ್ರೆಸ್ ಪಕ್ಷ  ಶಿರಾ ಉಪ ಚುನಾವಣೆಯಲ್ಲಿ ಮತ್ತಷ್ಟು ಬಲಿಷ್ಟಗೊಳ್ಳಲು ಸಹಕಾರಿಯಾಗಿದೆ.

- Advertisement -
- Advertisement -

ಶಿರಾ ಉಪಚುನಾವಣೆ ಘೋಷಣೆಯಾದ ಬಳಿಕ ಪಕ್ಷ ಬಿಟ್ಟು ಪಕ್ಷಕ್ಕೆ ಸೇರ್ಪಡೆಯಾಗುವ ಮುಖಂಡರ ಸಂಖ್ಯೆ ಹೆಚ್ಚತೊಡಗಿದೆ. ಕಳೆದ ಎರಡು ದಿನಗಳಿಂದ ಈ ಬೆಳವಣಿಗಳು ನಡೆಯತೊಡಗಿವೆ. ಇಂದು 15ಕ್ಕೂ ಹೆಚ್ಚು ಮಂದಿ ಪ್ರಮುಖರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದು ಕಾಂಗ್ರೆಸ್ ಪಕ್ಷ  ಶಿರಾದಲ್ಲಿ ಮತ್ತಷ್ಟು ಬಲಿಷ್ಟಗೊಳ್ಳಲು ಸಹಕಾರಿಯಾಗಿದೆ. ಈ ಬೆಳವಣಿಗೆ ಉಪ ಚುನಾವಣೆಯಲ್ಲಿ ಮಹತ್ವದ ಬದಲಾವಣೆಗೂ ಕಾರಣವಾಗಲಿದೆ.

ಮಾಜಿ ಪುರಸಭಾ ಅಧ್ಯಕ್ಷ ಹಾಗೂ ಕುಂಚಿಟಿಗರ ಸಂಘದ ತಾಲೂಕು ಅಧ್ಯಕ್ಷ ತ್ಯಾಗರಾಜು, ಜೆಡಿಎಸ್ ಮುಖಂಡ ರವಿಕುಮಾರ್ ಕಲ್ಕೆರೆ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ವಿನಯ್, ಮಾಗೋಡು ಮತ್ತು ತಾವರೆಕೆರೆ ವಿಎಸ್ಎಸ್ಎನ್ ಅಧ್ಯಕ್ಷರಾದ ಶ್ರೀರಂಗಪ್ಪ, ಕೃಷ್ಣಮೂರ್ತಿ, ಮಾಜಿ ಮಂಡಲ್ ಪಂಚಾಯತ್ ಅಧ್ಯಕ್ಷ ಚಿನ್ನಪ್ಪ, ಶಿರಾ ಬಲಿಜ ಸಂಘದ ಅಧ್ಯಕ್ಷ ಶ್ರೀರಂಗಪ್ಪ, ಯುವ ಬಲಿಜ ಸಂಘದ ಅಧ್ಯಕ್ಷ ವಿನಯ್ (ಕಿಶೋರ್), ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಆದರ್ಶ, ವಕೀಲರ ಸಂಘದ ಮಾಜಿ ಅಧ್ಯಕ್ಷ ಸರ್ವೇಶ್ ನಗರ ಯುವ ಜೆಡಿಎಸ್ ಅಧ್ಯಕ್ಷ ಮಣಿಕಂಠ, ತಾಲೂಕು ಪಂಚಾಯಿತಿ  ಮಾಜಿ ಅಧ್ಯಕ್ಷ ರಾಘವೇಂದ್ರ, ಜೆಡಿಎಸ್ ಮುಖಂಡರಾದ ಡಾಬ ಬಾಬು, ಶರತ್ ಮತ್ತು ರಾಘವೇಂದ್ರ ಕಾಂಗ್ರೆಸ್ ಸೇರ್ಪಡೆಯಾಗಿರುವ ಮುಖಂಡರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ವಿವಿಧ ಜಾತಿಗಳ ಮುಖಂಡರ ಕಾಂಗ್ರೆಸ್ ಸೇರ್ಪಡೆಯಿಂದ ಜೆಡಿಎಸ್‌ಗೆ ತೀವ್ರ ಹಿನ್ನಡೆಯಾದಂತೆ ಆಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ಅವರ ಪತಿ ರವಿಕುಮಾರ್ ಕಾಂಗ್ರೆಸ್ ಸೇರ್ಪಡೆಗೊಂಡು ಜೆಡಿಎಸ್‌ಗೆ ದೊಡ್ಡ ಪೆಟ್ಟನ್ನೇ ನೀಡಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿದ ಮತ್ತು ತಾಲೂಕಿನಲ್ಲಿ ಪ್ರಮುಖ ಮುಖಂಡ ರಾಗಿರುವ ರವಿಕುಮಾರ್ ಗೌಡಗೆರೆ ಹೋಬಳಿಯಲ್ಲಿ ಸಾಕಷ್ಟು ಕೆಲಸ ಮಾಡಿರುವ ಬಗ್ಗೆ ಕ್ಷೇತ್ರದ ಜನರಲ್ಲಿ ಒಳ್ಳೆಯ ಭಾವನೆ ಇದೆ.

ರವಿಕುಮಾರ್ ಶಿರಾ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳಲ್ಲಿ ಕೂಡ ಒಬ್ಬರಾಗಿದ್ದರು. ಜೊತೆಗೆ ಪಕ್ಷದ ವರಿಷ್ಠರೇ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ಅವರನ್ನು ಅಧಿಕಾರದಿಂದ ಇಳಿಸಲು ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕುವಂತೆ ಸದಸ್ಯರಿಗೆ ಒಪ್ಪಿಗೆ ನೀಡಿದ್ದರು. ಇದರಿಂದ ರವಿಕುಮಾರ್ ಅಸಮಾಧಾನ ಹೊರಹಾಕಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಮೃದು ಧೋರಣೆ ಹೊಂದಿದ್ದರಿಂದ ಜೆಡಿಎಸ್ ವರಿಷ್ಠರು ಜಿಪಂ ಅಧ್ಯಕ್ಷರನ್ನು ಅಧಿಕಾರದಿಂದ ಇಳಿಸುವ ತಂತ್ರಕ್ಕೆ ಮುಂದಾಗಿದ್ದರು.

ರವಿಕುಮಾರ್‌ ಕಲ್ಕೆರೆ, ಜೆಡಿಎಸ್ ಮುಖಂಡ

ಈಗ ರವಿಕುಮಾರ್ ಜೆಡಿಎಸ್ ಬಗ್ಗೆ ಅಸಮಾಧಾನ ಹೊರಹಾಕಿ ಕಾಂಗ್ರೆಸ್ ಸೇರ್ಪಡೆಗೊಂಡಿರುವುದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರಿಗೆ ಮತ್ತಷ್ಟು ಬಲ ತಂದುಕೊಟ್ಟಿದೆ. ಕ್ಷೇತ್ರದಲ್ಲಿ ಕುರುಬ ಸಮುದಾಯದ ಮತಗಳು 13 ಸಾವಿರ ಇವೆ. ರವಿಕುಮಾರ್ ಬಗ್ಗೆ ಶಿರಾದಲ್ಲಿ ಒಳ್ಳೆಯ ಹೆಸರು ಕೂಡ ಇದೆ. ಇದು ಕಾಂಗ್ರೆಸ್  ಪಕ್ಷಕ್ಕೆ ವರವಾಗಿ ಪರಿಣಮಿಸಿದೆ.

ಜಿಲ್ಲಾ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಸಭೆಯಲ್ಲಿ ಕಾಂಗ್ರೆಸ್ ಭಾಗವಹಿಸುವುದಿಲ್ಲ. ಹಾಗಾಗಿ ಅವಿಶ್ವಾಸ ಗೊತ್ತುವಳಿ ಪರ ಮತಗಳ ಕೊರತೆಯಾಗಿ ಬಿದ್ದುಹೋಗಲಿದೆ. ಅಧ್ಯಕ್ಷರು ಮುಂದಿನ ಅವಧಿಗೂ ಮುಂದುವರಿಯಲು ಅವಕಾಶ ಸಿಗುತ್ತದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಶಿರಾ ನಗರದಲ್ಲಿ ಬಲಿಜ ಸಮುದಾಯದ ಮತಗಳು ಏಳು ಸಾವಿರದಷ್ಟಿವೆ. ಈ ಸಮುದಾಯದ ಸಂಘದ ಅಧ್ಯಕ್ಷರು, ಯುವಕ ಸಂಘದ ಅಧ್ಯಕ್ಷರೂ ಮತ್ತು ಪ್ರಧಾನ ಕಾರ್ಯದರ್ಶಿಗಳು ಕಾಂಗ್ರೆಸ್ ಸೇರ್ಪಡೆ ಆಗಿರುವುದು ಜಯಚಂದ್ರ ಅವರ ಗೆಲುವಿನ ಹಾದಿಯನ್ನು ಸುಗಮಗೊಳಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮಾಜಿ ಪುರಸಭಾ ಅಧ್ಯಕ್ಷರು ಮತ್ತು ಕುಂಚಿಟಿಗರ ಸಂಘದ ಅಧ್ಯಕ್ಷರು, ವಿಎಸ್ಎಸ್ಎನ್‌ ಅಧ್ಯಕ್ಷರು, ಯುವ ಮುಖಂಡರಿಗೆ ಅವರದೇ ಆದ ಬೆಂಬಲಿಗರ ಮತ್ತು ಅಭಿಮಾನಿಗಳ ಪಡೆ ಇದೆ. ಇದು ಜೆಡಿಎಸ್ ಪಕ್ಷಕ್ಕೆ ಹೊಡೆತ ನೀಡುವುದು ಗ್ಯಾರೆಂಟಿ.

ಇನ್ನು ಮದಲೂರು ಜಿಲ್ಲಾ ಪಂಚಾಯತ್ ಸದಸ್ಯೆ ಪತಿ, ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಶ್ರೀರಂಗ ಯಾದವ್ ನಾದೂರು ಜಿಲ್ಲಾ ಪಂಚಾಯಿತಿ ಸದಸ್ಯೆಯ ಪತಿ, ಜೆಡಿಎಸ್ ಮುಖಂಡ ಶ್ರೀರಂಗ ಯಾದವ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.


ಇದನ್ನೂ ಓದಿ: ಶಿರಾ ಉಪಚುನಾವಣೆ ನವೆಂಬರ್ 3 ಕ್ಕೆ: 56 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...