Homeಚಳವಳಿಶಿರಾ ಉಪಚುನಾವಣೆ: ಜೆಡಿಎಸ್ ತೊರೆದು ’ಕೈ’ ಹಿಡಿದ ಸ್ಥಳೀಯ ಮುಖಂಡರು

ಶಿರಾ ಉಪಚುನಾವಣೆ: ಜೆಡಿಎಸ್ ತೊರೆದು ’ಕೈ’ ಹಿಡಿದ ಸ್ಥಳೀಯ ಮುಖಂಡರು

15ಕ್ಕೂ ಹೆಚ್ಚು ಮಂದಿ ಪ್ರಮುಖರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದು ಕಾಂಗ್ರೆಸ್ ಪಕ್ಷ  ಶಿರಾ ಉಪ ಚುನಾವಣೆಯಲ್ಲಿ ಮತ್ತಷ್ಟು ಬಲಿಷ್ಟಗೊಳ್ಳಲು ಸಹಕಾರಿಯಾಗಿದೆ.

- Advertisement -
- Advertisement -

ಶಿರಾ ಉಪಚುನಾವಣೆ ಘೋಷಣೆಯಾದ ಬಳಿಕ ಪಕ್ಷ ಬಿಟ್ಟು ಪಕ್ಷಕ್ಕೆ ಸೇರ್ಪಡೆಯಾಗುವ ಮುಖಂಡರ ಸಂಖ್ಯೆ ಹೆಚ್ಚತೊಡಗಿದೆ. ಕಳೆದ ಎರಡು ದಿನಗಳಿಂದ ಈ ಬೆಳವಣಿಗಳು ನಡೆಯತೊಡಗಿವೆ. ಇಂದು 15ಕ್ಕೂ ಹೆಚ್ಚು ಮಂದಿ ಪ್ರಮುಖರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದು ಕಾಂಗ್ರೆಸ್ ಪಕ್ಷ  ಶಿರಾದಲ್ಲಿ ಮತ್ತಷ್ಟು ಬಲಿಷ್ಟಗೊಳ್ಳಲು ಸಹಕಾರಿಯಾಗಿದೆ. ಈ ಬೆಳವಣಿಗೆ ಉಪ ಚುನಾವಣೆಯಲ್ಲಿ ಮಹತ್ವದ ಬದಲಾವಣೆಗೂ ಕಾರಣವಾಗಲಿದೆ.

ಮಾಜಿ ಪುರಸಭಾ ಅಧ್ಯಕ್ಷ ಹಾಗೂ ಕುಂಚಿಟಿಗರ ಸಂಘದ ತಾಲೂಕು ಅಧ್ಯಕ್ಷ ತ್ಯಾಗರಾಜು, ಜೆಡಿಎಸ್ ಮುಖಂಡ ರವಿಕುಮಾರ್ ಕಲ್ಕೆರೆ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ವಿನಯ್, ಮಾಗೋಡು ಮತ್ತು ತಾವರೆಕೆರೆ ವಿಎಸ್ಎಸ್ಎನ್ ಅಧ್ಯಕ್ಷರಾದ ಶ್ರೀರಂಗಪ್ಪ, ಕೃಷ್ಣಮೂರ್ತಿ, ಮಾಜಿ ಮಂಡಲ್ ಪಂಚಾಯತ್ ಅಧ್ಯಕ್ಷ ಚಿನ್ನಪ್ಪ, ಶಿರಾ ಬಲಿಜ ಸಂಘದ ಅಧ್ಯಕ್ಷ ಶ್ರೀರಂಗಪ್ಪ, ಯುವ ಬಲಿಜ ಸಂಘದ ಅಧ್ಯಕ್ಷ ವಿನಯ್ (ಕಿಶೋರ್), ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಆದರ್ಶ, ವಕೀಲರ ಸಂಘದ ಮಾಜಿ ಅಧ್ಯಕ್ಷ ಸರ್ವೇಶ್ ನಗರ ಯುವ ಜೆಡಿಎಸ್ ಅಧ್ಯಕ್ಷ ಮಣಿಕಂಠ, ತಾಲೂಕು ಪಂಚಾಯಿತಿ  ಮಾಜಿ ಅಧ್ಯಕ್ಷ ರಾಘವೇಂದ್ರ, ಜೆಡಿಎಸ್ ಮುಖಂಡರಾದ ಡಾಬ ಬಾಬು, ಶರತ್ ಮತ್ತು ರಾಘವೇಂದ್ರ ಕಾಂಗ್ರೆಸ್ ಸೇರ್ಪಡೆಯಾಗಿರುವ ಮುಖಂಡರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ದೇವೇಗೌಡ, ಕುಮಾರಸ್ವಾಮಿ ಸ್ಪರ್ಧಿಸಿದರೂ ಜಯಚಂದ್ರ ಗೆಲುವು ನಿಶ್ಚಿತ- ಕೆ.ಎನ್.ರಾಜಣ್ಣ

ವಿವಿಧ ಜಾತಿಗಳ ಮುಖಂಡರ ಕಾಂಗ್ರೆಸ್ ಸೇರ್ಪಡೆಯಿಂದ ಜೆಡಿಎಸ್‌ಗೆ ತೀವ್ರ ಹಿನ್ನಡೆಯಾದಂತೆ ಆಗಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ಅವರ ಪತಿ ರವಿಕುಮಾರ್ ಕಾಂಗ್ರೆಸ್ ಸೇರ್ಪಡೆಗೊಂಡು ಜೆಡಿಎಸ್‌ಗೆ ದೊಡ್ಡ ಪೆಟ್ಟನ್ನೇ ನೀಡಿದ್ದಾರೆ. ಕುರುಬ ಸಮುದಾಯಕ್ಕೆ ಸೇರಿದ ಮತ್ತು ತಾಲೂಕಿನಲ್ಲಿ ಪ್ರಮುಖ ಮುಖಂಡ ರಾಗಿರುವ ರವಿಕುಮಾರ್ ಗೌಡಗೆರೆ ಹೋಬಳಿಯಲ್ಲಿ ಸಾಕಷ್ಟು ಕೆಲಸ ಮಾಡಿರುವ ಬಗ್ಗೆ ಕ್ಷೇತ್ರದ ಜನರಲ್ಲಿ ಒಳ್ಳೆಯ ಭಾವನೆ ಇದೆ.

ರವಿಕುಮಾರ್ ಶಿರಾ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಆಕಾಂಕ್ಷಿಗಳಲ್ಲಿ ಕೂಡ ಒಬ್ಬರಾಗಿದ್ದರು. ಜೊತೆಗೆ ಪಕ್ಷದ ವರಿಷ್ಠರೇ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ಅವರನ್ನು ಅಧಿಕಾರದಿಂದ ಇಳಿಸಲು ಅವಿಶ್ವಾಸ ನಿರ್ಣಯಕ್ಕೆ ಸಹಿ ಹಾಕುವಂತೆ ಸದಸ್ಯರಿಗೆ ಒಪ್ಪಿಗೆ ನೀಡಿದ್ದರು. ಇದರಿಂದ ರವಿಕುಮಾರ್ ಅಸಮಾಧಾನ ಹೊರಹಾಕಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಮೃದು ಧೋರಣೆ ಹೊಂದಿದ್ದರಿಂದ ಜೆಡಿಎಸ್ ವರಿಷ್ಠರು ಜಿಪಂ ಅಧ್ಯಕ್ಷರನ್ನು ಅಧಿಕಾರದಿಂದ ಇಳಿಸುವ ತಂತ್ರಕ್ಕೆ ಮುಂದಾಗಿದ್ದರು.

ರವಿಕುಮಾರ್‌ ಕಲ್ಕೆರೆ, ಜೆಡಿಎಸ್ ಮುಖಂಡ

ಈಗ ರವಿಕುಮಾರ್ ಜೆಡಿಎಸ್ ಬಗ್ಗೆ ಅಸಮಾಧಾನ ಹೊರಹಾಕಿ ಕಾಂಗ್ರೆಸ್ ಸೇರ್ಪಡೆಗೊಂಡಿರುವುದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರಿಗೆ ಮತ್ತಷ್ಟು ಬಲ ತಂದುಕೊಟ್ಟಿದೆ. ಕ್ಷೇತ್ರದಲ್ಲಿ ಕುರುಬ ಸಮುದಾಯದ ಮತಗಳು 13 ಸಾವಿರ ಇವೆ. ರವಿಕುಮಾರ್ ಬಗ್ಗೆ ಶಿರಾದಲ್ಲಿ ಒಳ್ಳೆಯ ಹೆಸರು ಕೂಡ ಇದೆ. ಇದು ಕಾಂಗ್ರೆಸ್  ಪಕ್ಷಕ್ಕೆ ವರವಾಗಿ ಪರಿಣಮಿಸಿದೆ.

ಜಿಲ್ಲಾ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಸಭೆಯಲ್ಲಿ ಕಾಂಗ್ರೆಸ್ ಭಾಗವಹಿಸುವುದಿಲ್ಲ. ಹಾಗಾಗಿ ಅವಿಶ್ವಾಸ ಗೊತ್ತುವಳಿ ಪರ ಮತಗಳ ಕೊರತೆಯಾಗಿ ಬಿದ್ದುಹೋಗಲಿದೆ. ಅಧ್ಯಕ್ಷರು ಮುಂದಿನ ಅವಧಿಗೂ ಮುಂದುವರಿಯಲು ಅವಕಾಶ ಸಿಗುತ್ತದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಶಿರಾ ನಗರದಲ್ಲಿ ಬಲಿಜ ಸಮುದಾಯದ ಮತಗಳು ಏಳು ಸಾವಿರದಷ್ಟಿವೆ. ಈ ಸಮುದಾಯದ ಸಂಘದ ಅಧ್ಯಕ್ಷರು, ಯುವಕ ಸಂಘದ ಅಧ್ಯಕ್ಷರೂ ಮತ್ತು ಪ್ರಧಾನ ಕಾರ್ಯದರ್ಶಿಗಳು ಕಾಂಗ್ರೆಸ್ ಸೇರ್ಪಡೆ ಆಗಿರುವುದು ಜಯಚಂದ್ರ ಅವರ ಗೆಲುವಿನ ಹಾದಿಯನ್ನು ಸುಗಮಗೊಳಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಮಾಜಿ ಪುರಸಭಾ ಅಧ್ಯಕ್ಷರು ಮತ್ತು ಕುಂಚಿಟಿಗರ ಸಂಘದ ಅಧ್ಯಕ್ಷರು, ವಿಎಸ್ಎಸ್ಎನ್‌ ಅಧ್ಯಕ್ಷರು, ಯುವ ಮುಖಂಡರಿಗೆ ಅವರದೇ ಆದ ಬೆಂಬಲಿಗರ ಮತ್ತು ಅಭಿಮಾನಿಗಳ ಪಡೆ ಇದೆ. ಇದು ಜೆಡಿಎಸ್ ಪಕ್ಷಕ್ಕೆ ಹೊಡೆತ ನೀಡುವುದು ಗ್ಯಾರೆಂಟಿ.

ಇನ್ನು ಮದಲೂರು ಜಿಲ್ಲಾ ಪಂಚಾಯತ್ ಸದಸ್ಯೆ ಪತಿ, ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಶ್ರೀರಂಗ ಯಾದವ್ ನಾದೂರು ಜಿಲ್ಲಾ ಪಂಚಾಯಿತಿ ಸದಸ್ಯೆಯ ಪತಿ, ಜೆಡಿಎಸ್ ಮುಖಂಡ ಶ್ರೀರಂಗ ಯಾದವ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.


ಇದನ್ನೂ ಓದಿ: ಶಿರಾ ಉಪಚುನಾವಣೆ ನವೆಂಬರ್ 3 ಕ್ಕೆ: 56 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...