Homeಮುಖಪುಟಕವಿತೆಯೆಂಬ ಗುಬ್ಬಿಯ ಮೇಲೆ ಪ್ರಭುತ್ವವೆಂಬ ಹದ್ದಿನ ದಾಳಿ..

ಕವಿತೆಯೆಂಬ ಗುಬ್ಬಿಯ ಮೇಲೆ ಪ್ರಭುತ್ವವೆಂಬ ಹದ್ದಿನ ದಾಳಿ..

- Advertisement -
- Advertisement -

ಪ್ರಭುತ್ವ ಮತ್ತು ಮೂಲಭೂತವಾದ ಎರಡೂ ಅಪಾಯಕಾರಿಗಳೇ ಆಗಿವೆ. ಇವು ಒಂದಕ್ಕೊಂದು ಕೈಜೋಡಿಸಿದರೆ, ಪರಸ್ಪರ ಅಪ್ಪಿಕೊಂಡರೆ ಆಗುವ ಅನಾಹುತಗಳಿಗೆ ಕೊನೆಯೇ ಇಲ್ಲ. ಅದೀಗ ಭಾರತದಲ್ಲಿ ಸಂಭವಿಸುತ್ತಿದೆ. ಪ್ರಭುತ್ವ ಹದ್ದಿನಂತೆ, ಮೂಲಭೂತವಾದ ಡ್ಯಾಗನಂತೆ. ಇವೆರಡೂ ಕೂಡ ರಕ್ಕಸನಂತೆ ಎರಗುವ ಗುಣ ಹೊಂದಿವೆ. ಒಂಟಿ ಸಿಗುವ ಅಥವಾ ಗುಂಪಿನಿಂದ ಚೆಲ್ಲಾಪಿಲ್ಲಿಯಾದ ಪ್ರಾಣಿಗಳು ಬಹುಬೇಗ ಬಲಿಯಾಗುತ್ತವೆ.

ಪ್ರಭುತ್ವವೂ ಕೂಡ ಸಾಮಾನ್ಯರ ಮೇಲೆ ಹಾಗೆಯೇ ಎರಗುತ್ತದೆ. ನಿರುಪದ್ರವಿ ಗುಬ್ಬಿಯ ಮೇಲೆ ಹದ್ದು ಬಂದೆರಗುವಂತೆ ಪ್ರಭುತ್ವ ನಿರುಪ್ರದವಿ ಕವಿಗಳ ಮೇಲೆ ಕ್ರೂರ ದೃಷ್ಟಿ ಬೀರಿದೆ. ಕ್ರೌರ್ಯದ ಹಲ್ಲುಗಳಡಿ ಸಿಕ್ಕಿಸಿಕೊಂಡು ಜಗಿಯತೊಡಗಿದೆ. ಯಕಶ್ಚಿತ್ ಕವಿತೆಯೊಂದು ಪ್ರಭುತ್ವ ನಡೆಸುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಪ್ರಶ್ನಿಸಿತು ಎಂಬ ಕಾರಣಕ್ಕೆ ಕವಿಯನ್ನು ದೇಶದ್ರೋಹಿಯಂತೆ ಬಿಂಬಿಸಿ ಕಾರಾಗೃಹಕ್ಕೆ ಅಟ್ಟಿದೆ.

ಪ್ರಭುತ್ವದ ದೌರ್ಜನ್ಯ, ದಬ್ಬಾಳಿಕೆ ಇಂದಿನದೇನೂ ಅಲ್ಲ. ಹಿಂದಿನಿಂದಲೂ ಪ್ರಭುತ್ವವನ್ನು ಪ್ರಶ್ನಿಸುವವರ ಮೇಲೆ ಕತ್ತಿ ಮಸೆಯುತ್ತಲೇ ಬರುತ್ತಿದೆ. ಕರ್ನಾಟಕದಲ್ಲಿ ಸತ್ಯ ಹೇಳಿದ್ದಕ್ಕಾಗಿ ಪ್ರಭುತ್ವಗಳು ಕೃತಿಗಳನ್ನು ಮುಟ್ಟುಗೋಲು ಹಾಕಿಕೊಂಡ ಉದಾಹರಣೆಗಳು ನಮ್ಮ ಕಣ್ಣಮುಂದಿವೆ. ಹಿರಿಯ ಸಂಶೋಧಕರಾಗಿದ್ದ ಎಂ.ಎಂ. ಕಲ್ಬುರ್ಗಿಯವರ ‘ಮಾರ್ಗ’, ಕವಿ ಎಚ್.ಎಸ್.ಶಿವಪ್ರಕಾಶ್ ಬರೆದ ನಾಟಕ ‘ಮಹಾಚೈತ್ರ’, ಪಿ.ವಿ. ನಾರಾಯಣರ ‘ಧರ್ಮಕಾರಣ’, ಲೇಖಕ ಬಂಜಗೆರೆ ಜಯಪ್ರಕಾಶ್ ವಿರಚಿತ ‘ಆನುದೇವ ಹೊರಗಣವನು’ ಕೃತಿಗಳು ಸತ್ಯದ ಬೆಳಕು ಚೆಲ್ಲಿದವು. ಇದೇ ಕಾರಣಕ್ಕೆ ಮೂಲಭೂತವಾದಿ ಶಕ್ತಿಗಳು ಪ್ರಭುತ್ವದ ಮೇಲೆ ಒತ್ತಡ ತಂದು ಜನರ ಓದಿಗೆ ದೊರಕದಂತೆ ನೋಡಿಕೊಂಡವು. ಈ ನಾಲ್ಕು ಕೃತಿಗಳಲ್ಲಿ ಬಸವಣ್ಣ ಮತ್ತು ಚನ್ನಬಸವಣ್ಣನ ಹುಟ್ಟು ಕುರಿತು ಸತ್ಯವನ್ನು ಹೊರಹಾಕಿದ್ದು ಮೂಲಭೂತವಾದ ಶಕ್ತಿಗಳಿಗೆ ಸಹಿಸಲಾಗಲಿಲ್ಲ. ಪ್ರಭುತ್ವದೊಂದಿಗೆ ಕೈಜೋಡಿಸಿ ಕವಿಗಳು, ನಾಟಕಕಾರರನ್ನು ಕಷ್ಟಕ್ಕೆ ಸಿಲುಕಿಸಿದವು.

ಈಗ ಕವಿತೆಯೊಂದು ಪ್ರಭುತ್ವಕ್ಕೆ ಪ್ರಶ್ನೆ ಕೇಳಿದೆ. ಜನರ ಗುರುತನ್ನು ಕೇಳುವ ಪ್ರಭುತ್ವಕ್ಕೆ ತನ್ನ ಗುರುತನ್ನು ಕೇಳಿದರೆ ತಪ್ಪೇನು? ಪ್ರಭುತ್ವದ ತಪ್ಪ ನಡೆಗಳನ್ನು ಪ್ರಶ್ನಿಸುವುದು ಪ್ರತಿಯೊಬ್ಬ ಪ್ರಜೆಯ ಸಂವಿಧಾನಬದ್ದ ಮೂಲಭೂತ ಹಕ್ಕು. ಪ್ರಭುತ್ವದ ಚುಕ್ಕಾಣಿ ಹಿಡಿದವರು ಕೂಡ ನಮ್ಮ ನಡುವಿನಿಂದಲೇ ಹೋಗಿರುವುದು. ನಾವು ಮತ ಚಲಾವಣೆ ಮಾಡದಿದ್ದರೆ ಪ್ರಭುತ್ವದ ಗುಡಿಯಲ್ಲಿ ಕೂರಲು ಆಗುತ್ತಿರಲಿಲ್ಲ ಎಂಬುದನ್ನು ಅವರು ನೆನಪು ಇಟ್ಟುಕೊಳ್ಳಬೇಕು. ಪ್ರಭುತ್ವದ ದಾಖಲೆಗಳು ಮುಖ್ಯವಲ್ಲವೇ? ಪ್ರಭುತ್ವ ಯಾರಿಂದ ಆಯ್ಕೆಗೊಳ್ಳುತ್ತದೋ ಅವರನ್ನೇ ಅನುಮಾನದಿಂದ ನೋಡುವುದಾದರೆ ಸಾಮಾನ್ಯ ಪ್ರಜೆಯೂ ಕೂಡ ಶಂಕೆ ವ್ಯಕ್ತಪಡಿಸುವುದರಲ್ಲಿ ತಪ್ಪಿಲ್ಲ. ಪ್ರಶ್ನೆ ಮಾಡುವುದರಲ್ಲಿ ತಪ್ಪಿಲ್ಲ. ಹಾಗಂತ ಪ್ರಭುತ್ವವನ್ನು ಪ್ರಶ್ನೆ ಮಾಡಿದ ಎಂಬ ಒಂದೇ ಕಾರಣಕ್ಕೆ ಕವಿಯನ್ನೇ ಜೈಲಿಗಟ್ಟುವುದು ನ್ಯಾಯಸಮ್ಮತವೇ? ಇದು ಪ್ರಭುತ್ವದ ತರವಲ್ಲದ, ಸಹಜವಲ್ಲದ ನಡವಳಿಕೆ ಎಂದೇ ಪರಿಗಣಿಸಬೇಕಾಗುತ್ತದೆ.

ಸಿರಾಜ್ ಬಿಸರಳ್ಳಿ ಬರೆದದ್ದು ಒಂದೇ ಒಂದು ಕವನ. ಪುಸ್ತಕವನ್ನಲ್ಲ. ಪ್ರಶ್ನಿಸಿದ್ದು ಪ್ರಭುತ್ವವನ್ನು. ಭಾರತವೇ ನಕಲಿ ದಾಖಲೆಗಳ ತವರು ಆಗಿರುವಾಗ ಪ್ರಭುತ್ವದ ದಾಖಲೆಗಳನ್ನು ಕೇಳಿದ್ದು ತಪ್ಪಲ್ಲ. ಪ್ರಭುತ್ವದ ಕೈಕೆಳಗೆ ಮೂಲಭೂತವಾದ ಕೆಲಸ ಮಾಡುತ್ತದೆ. ಅದೇ ಮೂಲಭೂತವಾದ ಪ್ರಭುತ್ವದ ಮೇಲೆ ಒತ್ತಡ ಹೇರಿತು. ಕವಿಗೆ ಸಂಕಟವನ್ನು ತಂದೊಡ್ಡಿತು. ಕವಿ ಒಳಗಿದ್ದಾರೆ. ಕವಿತೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಇದೆ. ಕವಿಯ ದೇಹ ಸರಳುಗಳ ಹಿಂದಿದೆ. ಮನಸ್ಸು ವಿಶ್ವವ್ಯಾಪಿ ಹರಡಿಕೊಳ್ಳುತ್ತಿದೆ. ಕವಿತೆಯ ಧ್ವನಿ ಪ್ರತಿಧ್ವನಿಸುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವ ಮನಸ್ಸುಗಳನ್ನು ಹೆಚ್ಚಿಸುತ್ತಲೇ ಹೋಗುತ್ತಿದೆ. ಭಾಷೆ, ಧರ್ಮ, ಜಾತಿ, ಪ್ರದೇಶವನ್ನು ಮೀರಿ ಬೆಳೆಯುತ್ತಿದೆ. ಅದನ್ನು ತಡೆಯಲು ಪ್ರಭುತ್ವದಿಂದ ಸಾಧ್ಯವಿಲ್ಲ. ಪ್ರಶ್ನಿಸುವ ಎಲ್ಲರನ್ನು ಬಂಧಿಸಲು ಸಾಧ್ಯವೇ? ಬಹುಜನರನ್ನು ಬಂಧಿಸುವುದು ಗಾಳಿಯನ್ನು ಹಿಡಿದಿಟ್ಟಂತೆ. ಪ್ರಭುತ್ವ ತನ್ನ ದೇಹ-ಮನಸ್ಸನ್ನು ಬದಲಿಸುತ್ತಲೇ ಹೋದರೆ ಕವಿ ಪ್ರಶ್ನಿಸುತ್ತಲೇ ಇರುತ್ತಾನೆ ಎಂಬುದು ಪ್ರಭುತ್ವಕ್ಕೆ ಅರ್ಥವಾಗಬೇಕು.

ಬೆಂಗಳೂರಿನಲ್ಲಿ ಪ್ರಮಥರ ಗಣಮೇಳದಲ್ಲಿ ರಾಜಕೀಯ ನಾಯಕರೊಬ್ಬರು ಮಾತನಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಬಿಜ್ಜಳ ಇದ್ದಂತೆ. ಮುರುಘಾ ಮಠದ ಅಧ್ಯಕ್ಷರಾದ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮಿಗಳು ಸಾಕ್ಷಾತ್ ಬಸವಣ್ಣ ಇದ್ದಂತೆ ಎಂದರು. ಆ ಮುಖಂಡರ ಮನಸ್ಸಿಗೆ ಹಾಗೆ ಅನ್ನಿಸಿರಬಹುದು. ಇಲ್ಲಿರುವ ಪ್ರಶ್ನೆಯೆಂದರೆ. ಹನ್ನೆರಡನೇ ಶತಮಾನದ ಬಿಜ್ಜಳನ ಕಾಲದಲ್ಲಿ ಬಸವಣ್ಣನಿಗೆ ರಾಜಪ್ರಭುತ್ವವನ್ನು ಪ್ರಶ್ನಿಸುವ ಅಧಿಕಾರ ನೀಡಿದ್ದ. ಶರಣರು ಮುಕ್ತ ವಚನಗಳನ್ನು ಹೇಳಬಹುದಿತ್ತು., ಈಗಿನ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಹೋಲಿಸಿದರೆ ಅಂದು ನೂರಕ್ಕೆ ನೂರರಷ್ಟು ಮುಕ್ತ ವಾತಾವರಣವಿತ್ತು. ಮೂಲಭೂತವಾದಿ ಮನಸ್ಸುಗಳು ಬಿಜ್ಜಳನ ಮೇಲೆ ಒತ್ತಡ ತಂದರೂ ಅದಕ್ಕೆ ಬಿಜ್ಜಳ ಮಣಿಯಲಿಲ್ಲ. ಶರಣರು ಸ್ವತಂತ್ರರು. ಆದರೆ ಈಗಿನ ಬಿಜ್ಜಳ (ಯಡಿಯೂರಪ್ಪ ) ಕಾಲದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ಎಲ್ಲಿದೆ. ಸಿರಾಜ್ ಬಿಸರಳ್ಳಿ ಕವನ ಕೇಳಿಸಿಕೊಂಡ ಮೂಲಭೂತವಾದಿಯೊಬ್ಬ ಪ್ರಭುತ್ವದ ಮೇಲೆ ಒತ್ತಡ ಹೇರುತ್ತಿದ್ದಂತೆ ಬಂಧನ ಮಾಡಲಾಗಿದೆ. ಆಧುನಿಕ ಬಸವಣ್ಣನೆಂದು ಆ ಮುಖಂಡರಿಂದ ಕರೆಸಿಕೊಂಡಿರುವ ಮುರುಘಾ ಮಠದ ಪೀಠಾಧ್ಯಕ್ಷರಿಗೆ ಪ್ರಭುತ್ವವನ್ನು ಪ್ರಶ್ನಿಸಿ ಎದುರು ಹಾಕಿಕೊಳ್ಳುವ ಶಕ್ತಿ ಇದೆಯೇ? ಖಂಡಿತ ಇಲ್ಲ.

ಪ್ರಭುತ್ವದ ದಂಡಿಸುವ ಕೆಲಸಕ್ಕೆ ಕವಿ ನಲುಗಿಹೋಗಿದ್ದಾನೆ. ಧರ್ಮದ ಆಧಾರದ ಮೇಲೆಯೇ ದೂರುಗಳು ದಾಖಲಾಗುತ್ತಿವೆ. ಮೂಲಭೂತವಾದಿಗಳು ಮತ್ತು ಪ್ರಭುತ್ವ ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ಬೆದರಿಸುವ ಕೆಲಸಗಳು ನಡೆಯುತ್ತಿರುವಂತೆ ಕಾಣುತ್ತಿದೆ. ಜೆ.ಎನ್.ಯು ವಿವಿಯಲ್ಲಿ ಉಮರ್ ಖಾಲಿದ್, (ನಜೀಬ್ ಏನಾಗಿದ್ದಾನೋ ಗೊತ್ತಿಲ್ಲ) ಕವಿತೆ ಬರೆದದ್ದಕ್ಕಾಗಿ ಸಿರಾಜ್, ರಾಜಾ ಭಕ್ಷಿ, ಎನ್.ಆರ್.ಸಿ ವಿರುದ್ದ ಹೋರಾಟ ಮಾಡಿದ್ದಕ್ಕಾಗಿ ಡಾ.ಕಾಫೀಲ್ ವಿರುದ್ಧ ದೇಶದ್ರೋಹದ ಕೇಸ್ ದಾಖಲಾಗಿದೆ. ಶಾಹೀನ್ ಶಾಲೆಯಲ್ಲಿ ನಾಟಕ ಪ್ರದರ್ಶಿಸಿದ್ದಕ್ಕಾಗಿ ಶಾಲೆಯ ಮಕ್ಕಳ ವಿರುದ್ದ, ಅವರ ಪೋಷಕರ ವಿರುದ್ಧ, ಮುಖ್ಯೋಪಾಧ್ಯಾಯರ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸುವ ಮತ್ತು ಬಂಧಿಸುವ ಮೂಲಕ ಪ್ರಶ್ನಿಸುವ ಹಾಗೂ ಪ್ರತಿಭಟಿಸುವವರನ್ನು ಭಯದಲ್ಲಿ ಇಡಲು ಪ್ರಭುತ್ವ ಯತ್ನಿಸುತ್ತಲೇ ಇದೆ. ಇದು ಸಮಾಜದಲ್ಲಿ ಪ್ರತಿರೋಧವನ್ನು ಹೆಚ್ಚು ಮಾಡುತ್ತದೆಯೇ ಹೊರತು ದ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಇದನ್ನು ಪ್ರಭುತ್ವ ಅರ್ಥಮಾಡಿಕೊಂಡರೆ ಒಳಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...