Homeಮುಖಪುಟಕವಿತೆಯೆಂಬ ಗುಬ್ಬಿಯ ಮೇಲೆ ಪ್ರಭುತ್ವವೆಂಬ ಹದ್ದಿನ ದಾಳಿ..

ಕವಿತೆಯೆಂಬ ಗುಬ್ಬಿಯ ಮೇಲೆ ಪ್ರಭುತ್ವವೆಂಬ ಹದ್ದಿನ ದಾಳಿ..

- Advertisement -
- Advertisement -

ಪ್ರಭುತ್ವ ಮತ್ತು ಮೂಲಭೂತವಾದ ಎರಡೂ ಅಪಾಯಕಾರಿಗಳೇ ಆಗಿವೆ. ಇವು ಒಂದಕ್ಕೊಂದು ಕೈಜೋಡಿಸಿದರೆ, ಪರಸ್ಪರ ಅಪ್ಪಿಕೊಂಡರೆ ಆಗುವ ಅನಾಹುತಗಳಿಗೆ ಕೊನೆಯೇ ಇಲ್ಲ. ಅದೀಗ ಭಾರತದಲ್ಲಿ ಸಂಭವಿಸುತ್ತಿದೆ. ಪ್ರಭುತ್ವ ಹದ್ದಿನಂತೆ, ಮೂಲಭೂತವಾದ ಡ್ಯಾಗನಂತೆ. ಇವೆರಡೂ ಕೂಡ ರಕ್ಕಸನಂತೆ ಎರಗುವ ಗುಣ ಹೊಂದಿವೆ. ಒಂಟಿ ಸಿಗುವ ಅಥವಾ ಗುಂಪಿನಿಂದ ಚೆಲ್ಲಾಪಿಲ್ಲಿಯಾದ ಪ್ರಾಣಿಗಳು ಬಹುಬೇಗ ಬಲಿಯಾಗುತ್ತವೆ.

ಪ್ರಭುತ್ವವೂ ಕೂಡ ಸಾಮಾನ್ಯರ ಮೇಲೆ ಹಾಗೆಯೇ ಎರಗುತ್ತದೆ. ನಿರುಪದ್ರವಿ ಗುಬ್ಬಿಯ ಮೇಲೆ ಹದ್ದು ಬಂದೆರಗುವಂತೆ ಪ್ರಭುತ್ವ ನಿರುಪ್ರದವಿ ಕವಿಗಳ ಮೇಲೆ ಕ್ರೂರ ದೃಷ್ಟಿ ಬೀರಿದೆ. ಕ್ರೌರ್ಯದ ಹಲ್ಲುಗಳಡಿ ಸಿಕ್ಕಿಸಿಕೊಂಡು ಜಗಿಯತೊಡಗಿದೆ. ಯಕಶ್ಚಿತ್ ಕವಿತೆಯೊಂದು ಪ್ರಭುತ್ವ ನಡೆಸುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಪ್ರಶ್ನಿಸಿತು ಎಂಬ ಕಾರಣಕ್ಕೆ ಕವಿಯನ್ನು ದೇಶದ್ರೋಹಿಯಂತೆ ಬಿಂಬಿಸಿ ಕಾರಾಗೃಹಕ್ಕೆ ಅಟ್ಟಿದೆ.

ಪ್ರಭುತ್ವದ ದೌರ್ಜನ್ಯ, ದಬ್ಬಾಳಿಕೆ ಇಂದಿನದೇನೂ ಅಲ್ಲ. ಹಿಂದಿನಿಂದಲೂ ಪ್ರಭುತ್ವವನ್ನು ಪ್ರಶ್ನಿಸುವವರ ಮೇಲೆ ಕತ್ತಿ ಮಸೆಯುತ್ತಲೇ ಬರುತ್ತಿದೆ. ಕರ್ನಾಟಕದಲ್ಲಿ ಸತ್ಯ ಹೇಳಿದ್ದಕ್ಕಾಗಿ ಪ್ರಭುತ್ವಗಳು ಕೃತಿಗಳನ್ನು ಮುಟ್ಟುಗೋಲು ಹಾಕಿಕೊಂಡ ಉದಾಹರಣೆಗಳು ನಮ್ಮ ಕಣ್ಣಮುಂದಿವೆ. ಹಿರಿಯ ಸಂಶೋಧಕರಾಗಿದ್ದ ಎಂ.ಎಂ. ಕಲ್ಬುರ್ಗಿಯವರ ‘ಮಾರ್ಗ’, ಕವಿ ಎಚ್.ಎಸ್.ಶಿವಪ್ರಕಾಶ್ ಬರೆದ ನಾಟಕ ‘ಮಹಾಚೈತ್ರ’, ಪಿ.ವಿ. ನಾರಾಯಣರ ‘ಧರ್ಮಕಾರಣ’, ಲೇಖಕ ಬಂಜಗೆರೆ ಜಯಪ್ರಕಾಶ್ ವಿರಚಿತ ‘ಆನುದೇವ ಹೊರಗಣವನು’ ಕೃತಿಗಳು ಸತ್ಯದ ಬೆಳಕು ಚೆಲ್ಲಿದವು. ಇದೇ ಕಾರಣಕ್ಕೆ ಮೂಲಭೂತವಾದಿ ಶಕ್ತಿಗಳು ಪ್ರಭುತ್ವದ ಮೇಲೆ ಒತ್ತಡ ತಂದು ಜನರ ಓದಿಗೆ ದೊರಕದಂತೆ ನೋಡಿಕೊಂಡವು. ಈ ನಾಲ್ಕು ಕೃತಿಗಳಲ್ಲಿ ಬಸವಣ್ಣ ಮತ್ತು ಚನ್ನಬಸವಣ್ಣನ ಹುಟ್ಟು ಕುರಿತು ಸತ್ಯವನ್ನು ಹೊರಹಾಕಿದ್ದು ಮೂಲಭೂತವಾದ ಶಕ್ತಿಗಳಿಗೆ ಸಹಿಸಲಾಗಲಿಲ್ಲ. ಪ್ರಭುತ್ವದೊಂದಿಗೆ ಕೈಜೋಡಿಸಿ ಕವಿಗಳು, ನಾಟಕಕಾರರನ್ನು ಕಷ್ಟಕ್ಕೆ ಸಿಲುಕಿಸಿದವು.

ಈಗ ಕವಿತೆಯೊಂದು ಪ್ರಭುತ್ವಕ್ಕೆ ಪ್ರಶ್ನೆ ಕೇಳಿದೆ. ಜನರ ಗುರುತನ್ನು ಕೇಳುವ ಪ್ರಭುತ್ವಕ್ಕೆ ತನ್ನ ಗುರುತನ್ನು ಕೇಳಿದರೆ ತಪ್ಪೇನು? ಪ್ರಭುತ್ವದ ತಪ್ಪ ನಡೆಗಳನ್ನು ಪ್ರಶ್ನಿಸುವುದು ಪ್ರತಿಯೊಬ್ಬ ಪ್ರಜೆಯ ಸಂವಿಧಾನಬದ್ದ ಮೂಲಭೂತ ಹಕ್ಕು. ಪ್ರಭುತ್ವದ ಚುಕ್ಕಾಣಿ ಹಿಡಿದವರು ಕೂಡ ನಮ್ಮ ನಡುವಿನಿಂದಲೇ ಹೋಗಿರುವುದು. ನಾವು ಮತ ಚಲಾವಣೆ ಮಾಡದಿದ್ದರೆ ಪ್ರಭುತ್ವದ ಗುಡಿಯಲ್ಲಿ ಕೂರಲು ಆಗುತ್ತಿರಲಿಲ್ಲ ಎಂಬುದನ್ನು ಅವರು ನೆನಪು ಇಟ್ಟುಕೊಳ್ಳಬೇಕು. ಪ್ರಭುತ್ವದ ದಾಖಲೆಗಳು ಮುಖ್ಯವಲ್ಲವೇ? ಪ್ರಭುತ್ವ ಯಾರಿಂದ ಆಯ್ಕೆಗೊಳ್ಳುತ್ತದೋ ಅವರನ್ನೇ ಅನುಮಾನದಿಂದ ನೋಡುವುದಾದರೆ ಸಾಮಾನ್ಯ ಪ್ರಜೆಯೂ ಕೂಡ ಶಂಕೆ ವ್ಯಕ್ತಪಡಿಸುವುದರಲ್ಲಿ ತಪ್ಪಿಲ್ಲ. ಪ್ರಶ್ನೆ ಮಾಡುವುದರಲ್ಲಿ ತಪ್ಪಿಲ್ಲ. ಹಾಗಂತ ಪ್ರಭುತ್ವವನ್ನು ಪ್ರಶ್ನೆ ಮಾಡಿದ ಎಂಬ ಒಂದೇ ಕಾರಣಕ್ಕೆ ಕವಿಯನ್ನೇ ಜೈಲಿಗಟ್ಟುವುದು ನ್ಯಾಯಸಮ್ಮತವೇ? ಇದು ಪ್ರಭುತ್ವದ ತರವಲ್ಲದ, ಸಹಜವಲ್ಲದ ನಡವಳಿಕೆ ಎಂದೇ ಪರಿಗಣಿಸಬೇಕಾಗುತ್ತದೆ.

ಸಿರಾಜ್ ಬಿಸರಳ್ಳಿ ಬರೆದದ್ದು ಒಂದೇ ಒಂದು ಕವನ. ಪುಸ್ತಕವನ್ನಲ್ಲ. ಪ್ರಶ್ನಿಸಿದ್ದು ಪ್ರಭುತ್ವವನ್ನು. ಭಾರತವೇ ನಕಲಿ ದಾಖಲೆಗಳ ತವರು ಆಗಿರುವಾಗ ಪ್ರಭುತ್ವದ ದಾಖಲೆಗಳನ್ನು ಕೇಳಿದ್ದು ತಪ್ಪಲ್ಲ. ಪ್ರಭುತ್ವದ ಕೈಕೆಳಗೆ ಮೂಲಭೂತವಾದ ಕೆಲಸ ಮಾಡುತ್ತದೆ. ಅದೇ ಮೂಲಭೂತವಾದ ಪ್ರಭುತ್ವದ ಮೇಲೆ ಒತ್ತಡ ಹೇರಿತು. ಕವಿಗೆ ಸಂಕಟವನ್ನು ತಂದೊಡ್ಡಿತು. ಕವಿ ಒಳಗಿದ್ದಾರೆ. ಕವಿತೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಇದೆ. ಕವಿಯ ದೇಹ ಸರಳುಗಳ ಹಿಂದಿದೆ. ಮನಸ್ಸು ವಿಶ್ವವ್ಯಾಪಿ ಹರಡಿಕೊಳ್ಳುತ್ತಿದೆ. ಕವಿತೆಯ ಧ್ವನಿ ಪ್ರತಿಧ್ವನಿಸುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವ ಮನಸ್ಸುಗಳನ್ನು ಹೆಚ್ಚಿಸುತ್ತಲೇ ಹೋಗುತ್ತಿದೆ. ಭಾಷೆ, ಧರ್ಮ, ಜಾತಿ, ಪ್ರದೇಶವನ್ನು ಮೀರಿ ಬೆಳೆಯುತ್ತಿದೆ. ಅದನ್ನು ತಡೆಯಲು ಪ್ರಭುತ್ವದಿಂದ ಸಾಧ್ಯವಿಲ್ಲ. ಪ್ರಶ್ನಿಸುವ ಎಲ್ಲರನ್ನು ಬಂಧಿಸಲು ಸಾಧ್ಯವೇ? ಬಹುಜನರನ್ನು ಬಂಧಿಸುವುದು ಗಾಳಿಯನ್ನು ಹಿಡಿದಿಟ್ಟಂತೆ. ಪ್ರಭುತ್ವ ತನ್ನ ದೇಹ-ಮನಸ್ಸನ್ನು ಬದಲಿಸುತ್ತಲೇ ಹೋದರೆ ಕವಿ ಪ್ರಶ್ನಿಸುತ್ತಲೇ ಇರುತ್ತಾನೆ ಎಂಬುದು ಪ್ರಭುತ್ವಕ್ಕೆ ಅರ್ಥವಾಗಬೇಕು.

ಬೆಂಗಳೂರಿನಲ್ಲಿ ಪ್ರಮಥರ ಗಣಮೇಳದಲ್ಲಿ ರಾಜಕೀಯ ನಾಯಕರೊಬ್ಬರು ಮಾತನಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಬಿಜ್ಜಳ ಇದ್ದಂತೆ. ಮುರುಘಾ ಮಠದ ಅಧ್ಯಕ್ಷರಾದ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮಿಗಳು ಸಾಕ್ಷಾತ್ ಬಸವಣ್ಣ ಇದ್ದಂತೆ ಎಂದರು. ಆ ಮುಖಂಡರ ಮನಸ್ಸಿಗೆ ಹಾಗೆ ಅನ್ನಿಸಿರಬಹುದು. ಇಲ್ಲಿರುವ ಪ್ರಶ್ನೆಯೆಂದರೆ. ಹನ್ನೆರಡನೇ ಶತಮಾನದ ಬಿಜ್ಜಳನ ಕಾಲದಲ್ಲಿ ಬಸವಣ್ಣನಿಗೆ ರಾಜಪ್ರಭುತ್ವವನ್ನು ಪ್ರಶ್ನಿಸುವ ಅಧಿಕಾರ ನೀಡಿದ್ದ. ಶರಣರು ಮುಕ್ತ ವಚನಗಳನ್ನು ಹೇಳಬಹುದಿತ್ತು., ಈಗಿನ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಹೋಲಿಸಿದರೆ ಅಂದು ನೂರಕ್ಕೆ ನೂರರಷ್ಟು ಮುಕ್ತ ವಾತಾವರಣವಿತ್ತು. ಮೂಲಭೂತವಾದಿ ಮನಸ್ಸುಗಳು ಬಿಜ್ಜಳನ ಮೇಲೆ ಒತ್ತಡ ತಂದರೂ ಅದಕ್ಕೆ ಬಿಜ್ಜಳ ಮಣಿಯಲಿಲ್ಲ. ಶರಣರು ಸ್ವತಂತ್ರರು. ಆದರೆ ಈಗಿನ ಬಿಜ್ಜಳ (ಯಡಿಯೂರಪ್ಪ ) ಕಾಲದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ಎಲ್ಲಿದೆ. ಸಿರಾಜ್ ಬಿಸರಳ್ಳಿ ಕವನ ಕೇಳಿಸಿಕೊಂಡ ಮೂಲಭೂತವಾದಿಯೊಬ್ಬ ಪ್ರಭುತ್ವದ ಮೇಲೆ ಒತ್ತಡ ಹೇರುತ್ತಿದ್ದಂತೆ ಬಂಧನ ಮಾಡಲಾಗಿದೆ. ಆಧುನಿಕ ಬಸವಣ್ಣನೆಂದು ಆ ಮುಖಂಡರಿಂದ ಕರೆಸಿಕೊಂಡಿರುವ ಮುರುಘಾ ಮಠದ ಪೀಠಾಧ್ಯಕ್ಷರಿಗೆ ಪ್ರಭುತ್ವವನ್ನು ಪ್ರಶ್ನಿಸಿ ಎದುರು ಹಾಕಿಕೊಳ್ಳುವ ಶಕ್ತಿ ಇದೆಯೇ? ಖಂಡಿತ ಇಲ್ಲ.

ಪ್ರಭುತ್ವದ ದಂಡಿಸುವ ಕೆಲಸಕ್ಕೆ ಕವಿ ನಲುಗಿಹೋಗಿದ್ದಾನೆ. ಧರ್ಮದ ಆಧಾರದ ಮೇಲೆಯೇ ದೂರುಗಳು ದಾಖಲಾಗುತ್ತಿವೆ. ಮೂಲಭೂತವಾದಿಗಳು ಮತ್ತು ಪ್ರಭುತ್ವ ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ಬೆದರಿಸುವ ಕೆಲಸಗಳು ನಡೆಯುತ್ತಿರುವಂತೆ ಕಾಣುತ್ತಿದೆ. ಜೆ.ಎನ್.ಯು ವಿವಿಯಲ್ಲಿ ಉಮರ್ ಖಾಲಿದ್, (ನಜೀಬ್ ಏನಾಗಿದ್ದಾನೋ ಗೊತ್ತಿಲ್ಲ) ಕವಿತೆ ಬರೆದದ್ದಕ್ಕಾಗಿ ಸಿರಾಜ್, ರಾಜಾ ಭಕ್ಷಿ, ಎನ್.ಆರ್.ಸಿ ವಿರುದ್ದ ಹೋರಾಟ ಮಾಡಿದ್ದಕ್ಕಾಗಿ ಡಾ.ಕಾಫೀಲ್ ವಿರುದ್ಧ ದೇಶದ್ರೋಹದ ಕೇಸ್ ದಾಖಲಾಗಿದೆ. ಶಾಹೀನ್ ಶಾಲೆಯಲ್ಲಿ ನಾಟಕ ಪ್ರದರ್ಶಿಸಿದ್ದಕ್ಕಾಗಿ ಶಾಲೆಯ ಮಕ್ಕಳ ವಿರುದ್ದ, ಅವರ ಪೋಷಕರ ವಿರುದ್ಧ, ಮುಖ್ಯೋಪಾಧ್ಯಾಯರ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸುವ ಮತ್ತು ಬಂಧಿಸುವ ಮೂಲಕ ಪ್ರಶ್ನಿಸುವ ಹಾಗೂ ಪ್ರತಿಭಟಿಸುವವರನ್ನು ಭಯದಲ್ಲಿ ಇಡಲು ಪ್ರಭುತ್ವ ಯತ್ನಿಸುತ್ತಲೇ ಇದೆ. ಇದು ಸಮಾಜದಲ್ಲಿ ಪ್ರತಿರೋಧವನ್ನು ಹೆಚ್ಚು ಮಾಡುತ್ತದೆಯೇ ಹೊರತು ದ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಇದನ್ನು ಪ್ರಭುತ್ವ ಅರ್ಥಮಾಡಿಕೊಂಡರೆ ಒಳಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...