Homeಮುಖಪುಟಕವಿತೆಯೆಂಬ ಗುಬ್ಬಿಯ ಮೇಲೆ ಪ್ರಭುತ್ವವೆಂಬ ಹದ್ದಿನ ದಾಳಿ..

ಕವಿತೆಯೆಂಬ ಗುಬ್ಬಿಯ ಮೇಲೆ ಪ್ರಭುತ್ವವೆಂಬ ಹದ್ದಿನ ದಾಳಿ..

- Advertisement -
- Advertisement -

ಪ್ರಭುತ್ವ ಮತ್ತು ಮೂಲಭೂತವಾದ ಎರಡೂ ಅಪಾಯಕಾರಿಗಳೇ ಆಗಿವೆ. ಇವು ಒಂದಕ್ಕೊಂದು ಕೈಜೋಡಿಸಿದರೆ, ಪರಸ್ಪರ ಅಪ್ಪಿಕೊಂಡರೆ ಆಗುವ ಅನಾಹುತಗಳಿಗೆ ಕೊನೆಯೇ ಇಲ್ಲ. ಅದೀಗ ಭಾರತದಲ್ಲಿ ಸಂಭವಿಸುತ್ತಿದೆ. ಪ್ರಭುತ್ವ ಹದ್ದಿನಂತೆ, ಮೂಲಭೂತವಾದ ಡ್ಯಾಗನಂತೆ. ಇವೆರಡೂ ಕೂಡ ರಕ್ಕಸನಂತೆ ಎರಗುವ ಗುಣ ಹೊಂದಿವೆ. ಒಂಟಿ ಸಿಗುವ ಅಥವಾ ಗುಂಪಿನಿಂದ ಚೆಲ್ಲಾಪಿಲ್ಲಿಯಾದ ಪ್ರಾಣಿಗಳು ಬಹುಬೇಗ ಬಲಿಯಾಗುತ್ತವೆ.

ಪ್ರಭುತ್ವವೂ ಕೂಡ ಸಾಮಾನ್ಯರ ಮೇಲೆ ಹಾಗೆಯೇ ಎರಗುತ್ತದೆ. ನಿರುಪದ್ರವಿ ಗುಬ್ಬಿಯ ಮೇಲೆ ಹದ್ದು ಬಂದೆರಗುವಂತೆ ಪ್ರಭುತ್ವ ನಿರುಪ್ರದವಿ ಕವಿಗಳ ಮೇಲೆ ಕ್ರೂರ ದೃಷ್ಟಿ ಬೀರಿದೆ. ಕ್ರೌರ್ಯದ ಹಲ್ಲುಗಳಡಿ ಸಿಕ್ಕಿಸಿಕೊಂಡು ಜಗಿಯತೊಡಗಿದೆ. ಯಕಶ್ಚಿತ್ ಕವಿತೆಯೊಂದು ಪ್ರಭುತ್ವ ನಡೆಸುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಪ್ರಶ್ನಿಸಿತು ಎಂಬ ಕಾರಣಕ್ಕೆ ಕವಿಯನ್ನು ದೇಶದ್ರೋಹಿಯಂತೆ ಬಿಂಬಿಸಿ ಕಾರಾಗೃಹಕ್ಕೆ ಅಟ್ಟಿದೆ.

ಪ್ರಭುತ್ವದ ದೌರ್ಜನ್ಯ, ದಬ್ಬಾಳಿಕೆ ಇಂದಿನದೇನೂ ಅಲ್ಲ. ಹಿಂದಿನಿಂದಲೂ ಪ್ರಭುತ್ವವನ್ನು ಪ್ರಶ್ನಿಸುವವರ ಮೇಲೆ ಕತ್ತಿ ಮಸೆಯುತ್ತಲೇ ಬರುತ್ತಿದೆ. ಕರ್ನಾಟಕದಲ್ಲಿ ಸತ್ಯ ಹೇಳಿದ್ದಕ್ಕಾಗಿ ಪ್ರಭುತ್ವಗಳು ಕೃತಿಗಳನ್ನು ಮುಟ್ಟುಗೋಲು ಹಾಕಿಕೊಂಡ ಉದಾಹರಣೆಗಳು ನಮ್ಮ ಕಣ್ಣಮುಂದಿವೆ. ಹಿರಿಯ ಸಂಶೋಧಕರಾಗಿದ್ದ ಎಂ.ಎಂ. ಕಲ್ಬುರ್ಗಿಯವರ ‘ಮಾರ್ಗ’, ಕವಿ ಎಚ್.ಎಸ್.ಶಿವಪ್ರಕಾಶ್ ಬರೆದ ನಾಟಕ ‘ಮಹಾಚೈತ್ರ’, ಪಿ.ವಿ. ನಾರಾಯಣರ ‘ಧರ್ಮಕಾರಣ’, ಲೇಖಕ ಬಂಜಗೆರೆ ಜಯಪ್ರಕಾಶ್ ವಿರಚಿತ ‘ಆನುದೇವ ಹೊರಗಣವನು’ ಕೃತಿಗಳು ಸತ್ಯದ ಬೆಳಕು ಚೆಲ್ಲಿದವು. ಇದೇ ಕಾರಣಕ್ಕೆ ಮೂಲಭೂತವಾದಿ ಶಕ್ತಿಗಳು ಪ್ರಭುತ್ವದ ಮೇಲೆ ಒತ್ತಡ ತಂದು ಜನರ ಓದಿಗೆ ದೊರಕದಂತೆ ನೋಡಿಕೊಂಡವು. ಈ ನಾಲ್ಕು ಕೃತಿಗಳಲ್ಲಿ ಬಸವಣ್ಣ ಮತ್ತು ಚನ್ನಬಸವಣ್ಣನ ಹುಟ್ಟು ಕುರಿತು ಸತ್ಯವನ್ನು ಹೊರಹಾಕಿದ್ದು ಮೂಲಭೂತವಾದ ಶಕ್ತಿಗಳಿಗೆ ಸಹಿಸಲಾಗಲಿಲ್ಲ. ಪ್ರಭುತ್ವದೊಂದಿಗೆ ಕೈಜೋಡಿಸಿ ಕವಿಗಳು, ನಾಟಕಕಾರರನ್ನು ಕಷ್ಟಕ್ಕೆ ಸಿಲುಕಿಸಿದವು.

ಈಗ ಕವಿತೆಯೊಂದು ಪ್ರಭುತ್ವಕ್ಕೆ ಪ್ರಶ್ನೆ ಕೇಳಿದೆ. ಜನರ ಗುರುತನ್ನು ಕೇಳುವ ಪ್ರಭುತ್ವಕ್ಕೆ ತನ್ನ ಗುರುತನ್ನು ಕೇಳಿದರೆ ತಪ್ಪೇನು? ಪ್ರಭುತ್ವದ ತಪ್ಪ ನಡೆಗಳನ್ನು ಪ್ರಶ್ನಿಸುವುದು ಪ್ರತಿಯೊಬ್ಬ ಪ್ರಜೆಯ ಸಂವಿಧಾನಬದ್ದ ಮೂಲಭೂತ ಹಕ್ಕು. ಪ್ರಭುತ್ವದ ಚುಕ್ಕಾಣಿ ಹಿಡಿದವರು ಕೂಡ ನಮ್ಮ ನಡುವಿನಿಂದಲೇ ಹೋಗಿರುವುದು. ನಾವು ಮತ ಚಲಾವಣೆ ಮಾಡದಿದ್ದರೆ ಪ್ರಭುತ್ವದ ಗುಡಿಯಲ್ಲಿ ಕೂರಲು ಆಗುತ್ತಿರಲಿಲ್ಲ ಎಂಬುದನ್ನು ಅವರು ನೆನಪು ಇಟ್ಟುಕೊಳ್ಳಬೇಕು. ಪ್ರಭುತ್ವದ ದಾಖಲೆಗಳು ಮುಖ್ಯವಲ್ಲವೇ? ಪ್ರಭುತ್ವ ಯಾರಿಂದ ಆಯ್ಕೆಗೊಳ್ಳುತ್ತದೋ ಅವರನ್ನೇ ಅನುಮಾನದಿಂದ ನೋಡುವುದಾದರೆ ಸಾಮಾನ್ಯ ಪ್ರಜೆಯೂ ಕೂಡ ಶಂಕೆ ವ್ಯಕ್ತಪಡಿಸುವುದರಲ್ಲಿ ತಪ್ಪಿಲ್ಲ. ಪ್ರಶ್ನೆ ಮಾಡುವುದರಲ್ಲಿ ತಪ್ಪಿಲ್ಲ. ಹಾಗಂತ ಪ್ರಭುತ್ವವನ್ನು ಪ್ರಶ್ನೆ ಮಾಡಿದ ಎಂಬ ಒಂದೇ ಕಾರಣಕ್ಕೆ ಕವಿಯನ್ನೇ ಜೈಲಿಗಟ್ಟುವುದು ನ್ಯಾಯಸಮ್ಮತವೇ? ಇದು ಪ್ರಭುತ್ವದ ತರವಲ್ಲದ, ಸಹಜವಲ್ಲದ ನಡವಳಿಕೆ ಎಂದೇ ಪರಿಗಣಿಸಬೇಕಾಗುತ್ತದೆ.

ಸಿರಾಜ್ ಬಿಸರಳ್ಳಿ ಬರೆದದ್ದು ಒಂದೇ ಒಂದು ಕವನ. ಪುಸ್ತಕವನ್ನಲ್ಲ. ಪ್ರಶ್ನಿಸಿದ್ದು ಪ್ರಭುತ್ವವನ್ನು. ಭಾರತವೇ ನಕಲಿ ದಾಖಲೆಗಳ ತವರು ಆಗಿರುವಾಗ ಪ್ರಭುತ್ವದ ದಾಖಲೆಗಳನ್ನು ಕೇಳಿದ್ದು ತಪ್ಪಲ್ಲ. ಪ್ರಭುತ್ವದ ಕೈಕೆಳಗೆ ಮೂಲಭೂತವಾದ ಕೆಲಸ ಮಾಡುತ್ತದೆ. ಅದೇ ಮೂಲಭೂತವಾದ ಪ್ರಭುತ್ವದ ಮೇಲೆ ಒತ್ತಡ ಹೇರಿತು. ಕವಿಗೆ ಸಂಕಟವನ್ನು ತಂದೊಡ್ಡಿತು. ಕವಿ ಒಳಗಿದ್ದಾರೆ. ಕವಿತೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಇದೆ. ಕವಿಯ ದೇಹ ಸರಳುಗಳ ಹಿಂದಿದೆ. ಮನಸ್ಸು ವಿಶ್ವವ್ಯಾಪಿ ಹರಡಿಕೊಳ್ಳುತ್ತಿದೆ. ಕವಿತೆಯ ಧ್ವನಿ ಪ್ರತಿಧ್ವನಿಸುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವ ಮನಸ್ಸುಗಳನ್ನು ಹೆಚ್ಚಿಸುತ್ತಲೇ ಹೋಗುತ್ತಿದೆ. ಭಾಷೆ, ಧರ್ಮ, ಜಾತಿ, ಪ್ರದೇಶವನ್ನು ಮೀರಿ ಬೆಳೆಯುತ್ತಿದೆ. ಅದನ್ನು ತಡೆಯಲು ಪ್ರಭುತ್ವದಿಂದ ಸಾಧ್ಯವಿಲ್ಲ. ಪ್ರಶ್ನಿಸುವ ಎಲ್ಲರನ್ನು ಬಂಧಿಸಲು ಸಾಧ್ಯವೇ? ಬಹುಜನರನ್ನು ಬಂಧಿಸುವುದು ಗಾಳಿಯನ್ನು ಹಿಡಿದಿಟ್ಟಂತೆ. ಪ್ರಭುತ್ವ ತನ್ನ ದೇಹ-ಮನಸ್ಸನ್ನು ಬದಲಿಸುತ್ತಲೇ ಹೋದರೆ ಕವಿ ಪ್ರಶ್ನಿಸುತ್ತಲೇ ಇರುತ್ತಾನೆ ಎಂಬುದು ಪ್ರಭುತ್ವಕ್ಕೆ ಅರ್ಥವಾಗಬೇಕು.

ಬೆಂಗಳೂರಿನಲ್ಲಿ ಪ್ರಮಥರ ಗಣಮೇಳದಲ್ಲಿ ರಾಜಕೀಯ ನಾಯಕರೊಬ್ಬರು ಮಾತನಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಬಿಜ್ಜಳ ಇದ್ದಂತೆ. ಮುರುಘಾ ಮಠದ ಅಧ್ಯಕ್ಷರಾದ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮಿಗಳು ಸಾಕ್ಷಾತ್ ಬಸವಣ್ಣ ಇದ್ದಂತೆ ಎಂದರು. ಆ ಮುಖಂಡರ ಮನಸ್ಸಿಗೆ ಹಾಗೆ ಅನ್ನಿಸಿರಬಹುದು. ಇಲ್ಲಿರುವ ಪ್ರಶ್ನೆಯೆಂದರೆ. ಹನ್ನೆರಡನೇ ಶತಮಾನದ ಬಿಜ್ಜಳನ ಕಾಲದಲ್ಲಿ ಬಸವಣ್ಣನಿಗೆ ರಾಜಪ್ರಭುತ್ವವನ್ನು ಪ್ರಶ್ನಿಸುವ ಅಧಿಕಾರ ನೀಡಿದ್ದ. ಶರಣರು ಮುಕ್ತ ವಚನಗಳನ್ನು ಹೇಳಬಹುದಿತ್ತು., ಈಗಿನ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಹೋಲಿಸಿದರೆ ಅಂದು ನೂರಕ್ಕೆ ನೂರರಷ್ಟು ಮುಕ್ತ ವಾತಾವರಣವಿತ್ತು. ಮೂಲಭೂತವಾದಿ ಮನಸ್ಸುಗಳು ಬಿಜ್ಜಳನ ಮೇಲೆ ಒತ್ತಡ ತಂದರೂ ಅದಕ್ಕೆ ಬಿಜ್ಜಳ ಮಣಿಯಲಿಲ್ಲ. ಶರಣರು ಸ್ವತಂತ್ರರು. ಆದರೆ ಈಗಿನ ಬಿಜ್ಜಳ (ಯಡಿಯೂರಪ್ಪ ) ಕಾಲದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ಎಲ್ಲಿದೆ. ಸಿರಾಜ್ ಬಿಸರಳ್ಳಿ ಕವನ ಕೇಳಿಸಿಕೊಂಡ ಮೂಲಭೂತವಾದಿಯೊಬ್ಬ ಪ್ರಭುತ್ವದ ಮೇಲೆ ಒತ್ತಡ ಹೇರುತ್ತಿದ್ದಂತೆ ಬಂಧನ ಮಾಡಲಾಗಿದೆ. ಆಧುನಿಕ ಬಸವಣ್ಣನೆಂದು ಆ ಮುಖಂಡರಿಂದ ಕರೆಸಿಕೊಂಡಿರುವ ಮುರುಘಾ ಮಠದ ಪೀಠಾಧ್ಯಕ್ಷರಿಗೆ ಪ್ರಭುತ್ವವನ್ನು ಪ್ರಶ್ನಿಸಿ ಎದುರು ಹಾಕಿಕೊಳ್ಳುವ ಶಕ್ತಿ ಇದೆಯೇ? ಖಂಡಿತ ಇಲ್ಲ.

ಪ್ರಭುತ್ವದ ದಂಡಿಸುವ ಕೆಲಸಕ್ಕೆ ಕವಿ ನಲುಗಿಹೋಗಿದ್ದಾನೆ. ಧರ್ಮದ ಆಧಾರದ ಮೇಲೆಯೇ ದೂರುಗಳು ದಾಖಲಾಗುತ್ತಿವೆ. ಮೂಲಭೂತವಾದಿಗಳು ಮತ್ತು ಪ್ರಭುತ್ವ ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ಬೆದರಿಸುವ ಕೆಲಸಗಳು ನಡೆಯುತ್ತಿರುವಂತೆ ಕಾಣುತ್ತಿದೆ. ಜೆ.ಎನ್.ಯು ವಿವಿಯಲ್ಲಿ ಉಮರ್ ಖಾಲಿದ್, (ನಜೀಬ್ ಏನಾಗಿದ್ದಾನೋ ಗೊತ್ತಿಲ್ಲ) ಕವಿತೆ ಬರೆದದ್ದಕ್ಕಾಗಿ ಸಿರಾಜ್, ರಾಜಾ ಭಕ್ಷಿ, ಎನ್.ಆರ್.ಸಿ ವಿರುದ್ದ ಹೋರಾಟ ಮಾಡಿದ್ದಕ್ಕಾಗಿ ಡಾ.ಕಾಫೀಲ್ ವಿರುದ್ಧ ದೇಶದ್ರೋಹದ ಕೇಸ್ ದಾಖಲಾಗಿದೆ. ಶಾಹೀನ್ ಶಾಲೆಯಲ್ಲಿ ನಾಟಕ ಪ್ರದರ್ಶಿಸಿದ್ದಕ್ಕಾಗಿ ಶಾಲೆಯ ಮಕ್ಕಳ ವಿರುದ್ದ, ಅವರ ಪೋಷಕರ ವಿರುದ್ಧ, ಮುಖ್ಯೋಪಾಧ್ಯಾಯರ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸುವ ಮತ್ತು ಬಂಧಿಸುವ ಮೂಲಕ ಪ್ರಶ್ನಿಸುವ ಹಾಗೂ ಪ್ರತಿಭಟಿಸುವವರನ್ನು ಭಯದಲ್ಲಿ ಇಡಲು ಪ್ರಭುತ್ವ ಯತ್ನಿಸುತ್ತಲೇ ಇದೆ. ಇದು ಸಮಾಜದಲ್ಲಿ ಪ್ರತಿರೋಧವನ್ನು ಹೆಚ್ಚು ಮಾಡುತ್ತದೆಯೇ ಹೊರತು ದ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಇದನ್ನು ಪ್ರಭುತ್ವ ಅರ್ಥಮಾಡಿಕೊಂಡರೆ ಒಳಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...