Homeಮುಖಪುಟಕವಿತೆಯೆಂಬ ಗುಬ್ಬಿಯ ಮೇಲೆ ಪ್ರಭುತ್ವವೆಂಬ ಹದ್ದಿನ ದಾಳಿ..

ಕವಿತೆಯೆಂಬ ಗುಬ್ಬಿಯ ಮೇಲೆ ಪ್ರಭುತ್ವವೆಂಬ ಹದ್ದಿನ ದಾಳಿ..

- Advertisement -
- Advertisement -

ಪ್ರಭುತ್ವ ಮತ್ತು ಮೂಲಭೂತವಾದ ಎರಡೂ ಅಪಾಯಕಾರಿಗಳೇ ಆಗಿವೆ. ಇವು ಒಂದಕ್ಕೊಂದು ಕೈಜೋಡಿಸಿದರೆ, ಪರಸ್ಪರ ಅಪ್ಪಿಕೊಂಡರೆ ಆಗುವ ಅನಾಹುತಗಳಿಗೆ ಕೊನೆಯೇ ಇಲ್ಲ. ಅದೀಗ ಭಾರತದಲ್ಲಿ ಸಂಭವಿಸುತ್ತಿದೆ. ಪ್ರಭುತ್ವ ಹದ್ದಿನಂತೆ, ಮೂಲಭೂತವಾದ ಡ್ಯಾಗನಂತೆ. ಇವೆರಡೂ ಕೂಡ ರಕ್ಕಸನಂತೆ ಎರಗುವ ಗುಣ ಹೊಂದಿವೆ. ಒಂಟಿ ಸಿಗುವ ಅಥವಾ ಗುಂಪಿನಿಂದ ಚೆಲ್ಲಾಪಿಲ್ಲಿಯಾದ ಪ್ರಾಣಿಗಳು ಬಹುಬೇಗ ಬಲಿಯಾಗುತ್ತವೆ.

ಪ್ರಭುತ್ವವೂ ಕೂಡ ಸಾಮಾನ್ಯರ ಮೇಲೆ ಹಾಗೆಯೇ ಎರಗುತ್ತದೆ. ನಿರುಪದ್ರವಿ ಗುಬ್ಬಿಯ ಮೇಲೆ ಹದ್ದು ಬಂದೆರಗುವಂತೆ ಪ್ರಭುತ್ವ ನಿರುಪ್ರದವಿ ಕವಿಗಳ ಮೇಲೆ ಕ್ರೂರ ದೃಷ್ಟಿ ಬೀರಿದೆ. ಕ್ರೌರ್ಯದ ಹಲ್ಲುಗಳಡಿ ಸಿಕ್ಕಿಸಿಕೊಂಡು ಜಗಿಯತೊಡಗಿದೆ. ಯಕಶ್ಚಿತ್ ಕವಿತೆಯೊಂದು ಪ್ರಭುತ್ವ ನಡೆಸುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಪ್ರಶ್ನಿಸಿತು ಎಂಬ ಕಾರಣಕ್ಕೆ ಕವಿಯನ್ನು ದೇಶದ್ರೋಹಿಯಂತೆ ಬಿಂಬಿಸಿ ಕಾರಾಗೃಹಕ್ಕೆ ಅಟ್ಟಿದೆ.

ಪ್ರಭುತ್ವದ ದೌರ್ಜನ್ಯ, ದಬ್ಬಾಳಿಕೆ ಇಂದಿನದೇನೂ ಅಲ್ಲ. ಹಿಂದಿನಿಂದಲೂ ಪ್ರಭುತ್ವವನ್ನು ಪ್ರಶ್ನಿಸುವವರ ಮೇಲೆ ಕತ್ತಿ ಮಸೆಯುತ್ತಲೇ ಬರುತ್ತಿದೆ. ಕರ್ನಾಟಕದಲ್ಲಿ ಸತ್ಯ ಹೇಳಿದ್ದಕ್ಕಾಗಿ ಪ್ರಭುತ್ವಗಳು ಕೃತಿಗಳನ್ನು ಮುಟ್ಟುಗೋಲು ಹಾಕಿಕೊಂಡ ಉದಾಹರಣೆಗಳು ನಮ್ಮ ಕಣ್ಣಮುಂದಿವೆ. ಹಿರಿಯ ಸಂಶೋಧಕರಾಗಿದ್ದ ಎಂ.ಎಂ. ಕಲ್ಬುರ್ಗಿಯವರ ‘ಮಾರ್ಗ’, ಕವಿ ಎಚ್.ಎಸ್.ಶಿವಪ್ರಕಾಶ್ ಬರೆದ ನಾಟಕ ‘ಮಹಾಚೈತ್ರ’, ಪಿ.ವಿ. ನಾರಾಯಣರ ‘ಧರ್ಮಕಾರಣ’, ಲೇಖಕ ಬಂಜಗೆರೆ ಜಯಪ್ರಕಾಶ್ ವಿರಚಿತ ‘ಆನುದೇವ ಹೊರಗಣವನು’ ಕೃತಿಗಳು ಸತ್ಯದ ಬೆಳಕು ಚೆಲ್ಲಿದವು. ಇದೇ ಕಾರಣಕ್ಕೆ ಮೂಲಭೂತವಾದಿ ಶಕ್ತಿಗಳು ಪ್ರಭುತ್ವದ ಮೇಲೆ ಒತ್ತಡ ತಂದು ಜನರ ಓದಿಗೆ ದೊರಕದಂತೆ ನೋಡಿಕೊಂಡವು. ಈ ನಾಲ್ಕು ಕೃತಿಗಳಲ್ಲಿ ಬಸವಣ್ಣ ಮತ್ತು ಚನ್ನಬಸವಣ್ಣನ ಹುಟ್ಟು ಕುರಿತು ಸತ್ಯವನ್ನು ಹೊರಹಾಕಿದ್ದು ಮೂಲಭೂತವಾದ ಶಕ್ತಿಗಳಿಗೆ ಸಹಿಸಲಾಗಲಿಲ್ಲ. ಪ್ರಭುತ್ವದೊಂದಿಗೆ ಕೈಜೋಡಿಸಿ ಕವಿಗಳು, ನಾಟಕಕಾರರನ್ನು ಕಷ್ಟಕ್ಕೆ ಸಿಲುಕಿಸಿದವು.

ಈಗ ಕವಿತೆಯೊಂದು ಪ್ರಭುತ್ವಕ್ಕೆ ಪ್ರಶ್ನೆ ಕೇಳಿದೆ. ಜನರ ಗುರುತನ್ನು ಕೇಳುವ ಪ್ರಭುತ್ವಕ್ಕೆ ತನ್ನ ಗುರುತನ್ನು ಕೇಳಿದರೆ ತಪ್ಪೇನು? ಪ್ರಭುತ್ವದ ತಪ್ಪ ನಡೆಗಳನ್ನು ಪ್ರಶ್ನಿಸುವುದು ಪ್ರತಿಯೊಬ್ಬ ಪ್ರಜೆಯ ಸಂವಿಧಾನಬದ್ದ ಮೂಲಭೂತ ಹಕ್ಕು. ಪ್ರಭುತ್ವದ ಚುಕ್ಕಾಣಿ ಹಿಡಿದವರು ಕೂಡ ನಮ್ಮ ನಡುವಿನಿಂದಲೇ ಹೋಗಿರುವುದು. ನಾವು ಮತ ಚಲಾವಣೆ ಮಾಡದಿದ್ದರೆ ಪ್ರಭುತ್ವದ ಗುಡಿಯಲ್ಲಿ ಕೂರಲು ಆಗುತ್ತಿರಲಿಲ್ಲ ಎಂಬುದನ್ನು ಅವರು ನೆನಪು ಇಟ್ಟುಕೊಳ್ಳಬೇಕು. ಪ್ರಭುತ್ವದ ದಾಖಲೆಗಳು ಮುಖ್ಯವಲ್ಲವೇ? ಪ್ರಭುತ್ವ ಯಾರಿಂದ ಆಯ್ಕೆಗೊಳ್ಳುತ್ತದೋ ಅವರನ್ನೇ ಅನುಮಾನದಿಂದ ನೋಡುವುದಾದರೆ ಸಾಮಾನ್ಯ ಪ್ರಜೆಯೂ ಕೂಡ ಶಂಕೆ ವ್ಯಕ್ತಪಡಿಸುವುದರಲ್ಲಿ ತಪ್ಪಿಲ್ಲ. ಪ್ರಶ್ನೆ ಮಾಡುವುದರಲ್ಲಿ ತಪ್ಪಿಲ್ಲ. ಹಾಗಂತ ಪ್ರಭುತ್ವವನ್ನು ಪ್ರಶ್ನೆ ಮಾಡಿದ ಎಂಬ ಒಂದೇ ಕಾರಣಕ್ಕೆ ಕವಿಯನ್ನೇ ಜೈಲಿಗಟ್ಟುವುದು ನ್ಯಾಯಸಮ್ಮತವೇ? ಇದು ಪ್ರಭುತ್ವದ ತರವಲ್ಲದ, ಸಹಜವಲ್ಲದ ನಡವಳಿಕೆ ಎಂದೇ ಪರಿಗಣಿಸಬೇಕಾಗುತ್ತದೆ.

ಸಿರಾಜ್ ಬಿಸರಳ್ಳಿ ಬರೆದದ್ದು ಒಂದೇ ಒಂದು ಕವನ. ಪುಸ್ತಕವನ್ನಲ್ಲ. ಪ್ರಶ್ನಿಸಿದ್ದು ಪ್ರಭುತ್ವವನ್ನು. ಭಾರತವೇ ನಕಲಿ ದಾಖಲೆಗಳ ತವರು ಆಗಿರುವಾಗ ಪ್ರಭುತ್ವದ ದಾಖಲೆಗಳನ್ನು ಕೇಳಿದ್ದು ತಪ್ಪಲ್ಲ. ಪ್ರಭುತ್ವದ ಕೈಕೆಳಗೆ ಮೂಲಭೂತವಾದ ಕೆಲಸ ಮಾಡುತ್ತದೆ. ಅದೇ ಮೂಲಭೂತವಾದ ಪ್ರಭುತ್ವದ ಮೇಲೆ ಒತ್ತಡ ಹೇರಿತು. ಕವಿಗೆ ಸಂಕಟವನ್ನು ತಂದೊಡ್ಡಿತು. ಕವಿ ಒಳಗಿದ್ದಾರೆ. ಕವಿತೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಇದೆ. ಕವಿಯ ದೇಹ ಸರಳುಗಳ ಹಿಂದಿದೆ. ಮನಸ್ಸು ವಿಶ್ವವ್ಯಾಪಿ ಹರಡಿಕೊಳ್ಳುತ್ತಿದೆ. ಕವಿತೆಯ ಧ್ವನಿ ಪ್ರತಿಧ್ವನಿಸುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವ ಮನಸ್ಸುಗಳನ್ನು ಹೆಚ್ಚಿಸುತ್ತಲೇ ಹೋಗುತ್ತಿದೆ. ಭಾಷೆ, ಧರ್ಮ, ಜಾತಿ, ಪ್ರದೇಶವನ್ನು ಮೀರಿ ಬೆಳೆಯುತ್ತಿದೆ. ಅದನ್ನು ತಡೆಯಲು ಪ್ರಭುತ್ವದಿಂದ ಸಾಧ್ಯವಿಲ್ಲ. ಪ್ರಶ್ನಿಸುವ ಎಲ್ಲರನ್ನು ಬಂಧಿಸಲು ಸಾಧ್ಯವೇ? ಬಹುಜನರನ್ನು ಬಂಧಿಸುವುದು ಗಾಳಿಯನ್ನು ಹಿಡಿದಿಟ್ಟಂತೆ. ಪ್ರಭುತ್ವ ತನ್ನ ದೇಹ-ಮನಸ್ಸನ್ನು ಬದಲಿಸುತ್ತಲೇ ಹೋದರೆ ಕವಿ ಪ್ರಶ್ನಿಸುತ್ತಲೇ ಇರುತ್ತಾನೆ ಎಂಬುದು ಪ್ರಭುತ್ವಕ್ಕೆ ಅರ್ಥವಾಗಬೇಕು.

ಬೆಂಗಳೂರಿನಲ್ಲಿ ಪ್ರಮಥರ ಗಣಮೇಳದಲ್ಲಿ ರಾಜಕೀಯ ನಾಯಕರೊಬ್ಬರು ಮಾತನಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಬಿಜ್ಜಳ ಇದ್ದಂತೆ. ಮುರುಘಾ ಮಠದ ಅಧ್ಯಕ್ಷರಾದ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮಿಗಳು ಸಾಕ್ಷಾತ್ ಬಸವಣ್ಣ ಇದ್ದಂತೆ ಎಂದರು. ಆ ಮುಖಂಡರ ಮನಸ್ಸಿಗೆ ಹಾಗೆ ಅನ್ನಿಸಿರಬಹುದು. ಇಲ್ಲಿರುವ ಪ್ರಶ್ನೆಯೆಂದರೆ. ಹನ್ನೆರಡನೇ ಶತಮಾನದ ಬಿಜ್ಜಳನ ಕಾಲದಲ್ಲಿ ಬಸವಣ್ಣನಿಗೆ ರಾಜಪ್ರಭುತ್ವವನ್ನು ಪ್ರಶ್ನಿಸುವ ಅಧಿಕಾರ ನೀಡಿದ್ದ. ಶರಣರು ಮುಕ್ತ ವಚನಗಳನ್ನು ಹೇಳಬಹುದಿತ್ತು., ಈಗಿನ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಹೋಲಿಸಿದರೆ ಅಂದು ನೂರಕ್ಕೆ ನೂರರಷ್ಟು ಮುಕ್ತ ವಾತಾವರಣವಿತ್ತು. ಮೂಲಭೂತವಾದಿ ಮನಸ್ಸುಗಳು ಬಿಜ್ಜಳನ ಮೇಲೆ ಒತ್ತಡ ತಂದರೂ ಅದಕ್ಕೆ ಬಿಜ್ಜಳ ಮಣಿಯಲಿಲ್ಲ. ಶರಣರು ಸ್ವತಂತ್ರರು. ಆದರೆ ಈಗಿನ ಬಿಜ್ಜಳ (ಯಡಿಯೂರಪ್ಪ ) ಕಾಲದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ಎಲ್ಲಿದೆ. ಸಿರಾಜ್ ಬಿಸರಳ್ಳಿ ಕವನ ಕೇಳಿಸಿಕೊಂಡ ಮೂಲಭೂತವಾದಿಯೊಬ್ಬ ಪ್ರಭುತ್ವದ ಮೇಲೆ ಒತ್ತಡ ಹೇರುತ್ತಿದ್ದಂತೆ ಬಂಧನ ಮಾಡಲಾಗಿದೆ. ಆಧುನಿಕ ಬಸವಣ್ಣನೆಂದು ಆ ಮುಖಂಡರಿಂದ ಕರೆಸಿಕೊಂಡಿರುವ ಮುರುಘಾ ಮಠದ ಪೀಠಾಧ್ಯಕ್ಷರಿಗೆ ಪ್ರಭುತ್ವವನ್ನು ಪ್ರಶ್ನಿಸಿ ಎದುರು ಹಾಕಿಕೊಳ್ಳುವ ಶಕ್ತಿ ಇದೆಯೇ? ಖಂಡಿತ ಇಲ್ಲ.

ಪ್ರಭುತ್ವದ ದಂಡಿಸುವ ಕೆಲಸಕ್ಕೆ ಕವಿ ನಲುಗಿಹೋಗಿದ್ದಾನೆ. ಧರ್ಮದ ಆಧಾರದ ಮೇಲೆಯೇ ದೂರುಗಳು ದಾಖಲಾಗುತ್ತಿವೆ. ಮೂಲಭೂತವಾದಿಗಳು ಮತ್ತು ಪ್ರಭುತ್ವ ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ಬೆದರಿಸುವ ಕೆಲಸಗಳು ನಡೆಯುತ್ತಿರುವಂತೆ ಕಾಣುತ್ತಿದೆ. ಜೆ.ಎನ್.ಯು ವಿವಿಯಲ್ಲಿ ಉಮರ್ ಖಾಲಿದ್, (ನಜೀಬ್ ಏನಾಗಿದ್ದಾನೋ ಗೊತ್ತಿಲ್ಲ) ಕವಿತೆ ಬರೆದದ್ದಕ್ಕಾಗಿ ಸಿರಾಜ್, ರಾಜಾ ಭಕ್ಷಿ, ಎನ್.ಆರ್.ಸಿ ವಿರುದ್ದ ಹೋರಾಟ ಮಾಡಿದ್ದಕ್ಕಾಗಿ ಡಾ.ಕಾಫೀಲ್ ವಿರುದ್ಧ ದೇಶದ್ರೋಹದ ಕೇಸ್ ದಾಖಲಾಗಿದೆ. ಶಾಹೀನ್ ಶಾಲೆಯಲ್ಲಿ ನಾಟಕ ಪ್ರದರ್ಶಿಸಿದ್ದಕ್ಕಾಗಿ ಶಾಲೆಯ ಮಕ್ಕಳ ವಿರುದ್ದ, ಅವರ ಪೋಷಕರ ವಿರುದ್ಧ, ಮುಖ್ಯೋಪಾಧ್ಯಾಯರ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸುವ ಮತ್ತು ಬಂಧಿಸುವ ಮೂಲಕ ಪ್ರಶ್ನಿಸುವ ಹಾಗೂ ಪ್ರತಿಭಟಿಸುವವರನ್ನು ಭಯದಲ್ಲಿ ಇಡಲು ಪ್ರಭುತ್ವ ಯತ್ನಿಸುತ್ತಲೇ ಇದೆ. ಇದು ಸಮಾಜದಲ್ಲಿ ಪ್ರತಿರೋಧವನ್ನು ಹೆಚ್ಚು ಮಾಡುತ್ತದೆಯೇ ಹೊರತು ದ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಇದನ್ನು ಪ್ರಭುತ್ವ ಅರ್ಥಮಾಡಿಕೊಂಡರೆ ಒಳಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...