Homeಮುಖಪುಟಕವಿತೆಯೆಂಬ ಗುಬ್ಬಿಯ ಮೇಲೆ ಪ್ರಭುತ್ವವೆಂಬ ಹದ್ದಿನ ದಾಳಿ..

ಕವಿತೆಯೆಂಬ ಗುಬ್ಬಿಯ ಮೇಲೆ ಪ್ರಭುತ್ವವೆಂಬ ಹದ್ದಿನ ದಾಳಿ..

- Advertisement -
- Advertisement -

ಪ್ರಭುತ್ವ ಮತ್ತು ಮೂಲಭೂತವಾದ ಎರಡೂ ಅಪಾಯಕಾರಿಗಳೇ ಆಗಿವೆ. ಇವು ಒಂದಕ್ಕೊಂದು ಕೈಜೋಡಿಸಿದರೆ, ಪರಸ್ಪರ ಅಪ್ಪಿಕೊಂಡರೆ ಆಗುವ ಅನಾಹುತಗಳಿಗೆ ಕೊನೆಯೇ ಇಲ್ಲ. ಅದೀಗ ಭಾರತದಲ್ಲಿ ಸಂಭವಿಸುತ್ತಿದೆ. ಪ್ರಭುತ್ವ ಹದ್ದಿನಂತೆ, ಮೂಲಭೂತವಾದ ಡ್ಯಾಗನಂತೆ. ಇವೆರಡೂ ಕೂಡ ರಕ್ಕಸನಂತೆ ಎರಗುವ ಗುಣ ಹೊಂದಿವೆ. ಒಂಟಿ ಸಿಗುವ ಅಥವಾ ಗುಂಪಿನಿಂದ ಚೆಲ್ಲಾಪಿಲ್ಲಿಯಾದ ಪ್ರಾಣಿಗಳು ಬಹುಬೇಗ ಬಲಿಯಾಗುತ್ತವೆ.

ಪ್ರಭುತ್ವವೂ ಕೂಡ ಸಾಮಾನ್ಯರ ಮೇಲೆ ಹಾಗೆಯೇ ಎರಗುತ್ತದೆ. ನಿರುಪದ್ರವಿ ಗುಬ್ಬಿಯ ಮೇಲೆ ಹದ್ದು ಬಂದೆರಗುವಂತೆ ಪ್ರಭುತ್ವ ನಿರುಪ್ರದವಿ ಕವಿಗಳ ಮೇಲೆ ಕ್ರೂರ ದೃಷ್ಟಿ ಬೀರಿದೆ. ಕ್ರೌರ್ಯದ ಹಲ್ಲುಗಳಡಿ ಸಿಕ್ಕಿಸಿಕೊಂಡು ಜಗಿಯತೊಡಗಿದೆ. ಯಕಶ್ಚಿತ್ ಕವಿತೆಯೊಂದು ಪ್ರಭುತ್ವ ನಡೆಸುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಪ್ರಶ್ನಿಸಿತು ಎಂಬ ಕಾರಣಕ್ಕೆ ಕವಿಯನ್ನು ದೇಶದ್ರೋಹಿಯಂತೆ ಬಿಂಬಿಸಿ ಕಾರಾಗೃಹಕ್ಕೆ ಅಟ್ಟಿದೆ.

ಪ್ರಭುತ್ವದ ದೌರ್ಜನ್ಯ, ದಬ್ಬಾಳಿಕೆ ಇಂದಿನದೇನೂ ಅಲ್ಲ. ಹಿಂದಿನಿಂದಲೂ ಪ್ರಭುತ್ವವನ್ನು ಪ್ರಶ್ನಿಸುವವರ ಮೇಲೆ ಕತ್ತಿ ಮಸೆಯುತ್ತಲೇ ಬರುತ್ತಿದೆ. ಕರ್ನಾಟಕದಲ್ಲಿ ಸತ್ಯ ಹೇಳಿದ್ದಕ್ಕಾಗಿ ಪ್ರಭುತ್ವಗಳು ಕೃತಿಗಳನ್ನು ಮುಟ್ಟುಗೋಲು ಹಾಕಿಕೊಂಡ ಉದಾಹರಣೆಗಳು ನಮ್ಮ ಕಣ್ಣಮುಂದಿವೆ. ಹಿರಿಯ ಸಂಶೋಧಕರಾಗಿದ್ದ ಎಂ.ಎಂ. ಕಲ್ಬುರ್ಗಿಯವರ ‘ಮಾರ್ಗ’, ಕವಿ ಎಚ್.ಎಸ್.ಶಿವಪ್ರಕಾಶ್ ಬರೆದ ನಾಟಕ ‘ಮಹಾಚೈತ್ರ’, ಪಿ.ವಿ. ನಾರಾಯಣರ ‘ಧರ್ಮಕಾರಣ’, ಲೇಖಕ ಬಂಜಗೆರೆ ಜಯಪ್ರಕಾಶ್ ವಿರಚಿತ ‘ಆನುದೇವ ಹೊರಗಣವನು’ ಕೃತಿಗಳು ಸತ್ಯದ ಬೆಳಕು ಚೆಲ್ಲಿದವು. ಇದೇ ಕಾರಣಕ್ಕೆ ಮೂಲಭೂತವಾದಿ ಶಕ್ತಿಗಳು ಪ್ರಭುತ್ವದ ಮೇಲೆ ಒತ್ತಡ ತಂದು ಜನರ ಓದಿಗೆ ದೊರಕದಂತೆ ನೋಡಿಕೊಂಡವು. ಈ ನಾಲ್ಕು ಕೃತಿಗಳಲ್ಲಿ ಬಸವಣ್ಣ ಮತ್ತು ಚನ್ನಬಸವಣ್ಣನ ಹುಟ್ಟು ಕುರಿತು ಸತ್ಯವನ್ನು ಹೊರಹಾಕಿದ್ದು ಮೂಲಭೂತವಾದ ಶಕ್ತಿಗಳಿಗೆ ಸಹಿಸಲಾಗಲಿಲ್ಲ. ಪ್ರಭುತ್ವದೊಂದಿಗೆ ಕೈಜೋಡಿಸಿ ಕವಿಗಳು, ನಾಟಕಕಾರರನ್ನು ಕಷ್ಟಕ್ಕೆ ಸಿಲುಕಿಸಿದವು.

ಈಗ ಕವಿತೆಯೊಂದು ಪ್ರಭುತ್ವಕ್ಕೆ ಪ್ರಶ್ನೆ ಕೇಳಿದೆ. ಜನರ ಗುರುತನ್ನು ಕೇಳುವ ಪ್ರಭುತ್ವಕ್ಕೆ ತನ್ನ ಗುರುತನ್ನು ಕೇಳಿದರೆ ತಪ್ಪೇನು? ಪ್ರಭುತ್ವದ ತಪ್ಪ ನಡೆಗಳನ್ನು ಪ್ರಶ್ನಿಸುವುದು ಪ್ರತಿಯೊಬ್ಬ ಪ್ರಜೆಯ ಸಂವಿಧಾನಬದ್ದ ಮೂಲಭೂತ ಹಕ್ಕು. ಪ್ರಭುತ್ವದ ಚುಕ್ಕಾಣಿ ಹಿಡಿದವರು ಕೂಡ ನಮ್ಮ ನಡುವಿನಿಂದಲೇ ಹೋಗಿರುವುದು. ನಾವು ಮತ ಚಲಾವಣೆ ಮಾಡದಿದ್ದರೆ ಪ್ರಭುತ್ವದ ಗುಡಿಯಲ್ಲಿ ಕೂರಲು ಆಗುತ್ತಿರಲಿಲ್ಲ ಎಂಬುದನ್ನು ಅವರು ನೆನಪು ಇಟ್ಟುಕೊಳ್ಳಬೇಕು. ಪ್ರಭುತ್ವದ ದಾಖಲೆಗಳು ಮುಖ್ಯವಲ್ಲವೇ? ಪ್ರಭುತ್ವ ಯಾರಿಂದ ಆಯ್ಕೆಗೊಳ್ಳುತ್ತದೋ ಅವರನ್ನೇ ಅನುಮಾನದಿಂದ ನೋಡುವುದಾದರೆ ಸಾಮಾನ್ಯ ಪ್ರಜೆಯೂ ಕೂಡ ಶಂಕೆ ವ್ಯಕ್ತಪಡಿಸುವುದರಲ್ಲಿ ತಪ್ಪಿಲ್ಲ. ಪ್ರಶ್ನೆ ಮಾಡುವುದರಲ್ಲಿ ತಪ್ಪಿಲ್ಲ. ಹಾಗಂತ ಪ್ರಭುತ್ವವನ್ನು ಪ್ರಶ್ನೆ ಮಾಡಿದ ಎಂಬ ಒಂದೇ ಕಾರಣಕ್ಕೆ ಕವಿಯನ್ನೇ ಜೈಲಿಗಟ್ಟುವುದು ನ್ಯಾಯಸಮ್ಮತವೇ? ಇದು ಪ್ರಭುತ್ವದ ತರವಲ್ಲದ, ಸಹಜವಲ್ಲದ ನಡವಳಿಕೆ ಎಂದೇ ಪರಿಗಣಿಸಬೇಕಾಗುತ್ತದೆ.

ಸಿರಾಜ್ ಬಿಸರಳ್ಳಿ ಬರೆದದ್ದು ಒಂದೇ ಒಂದು ಕವನ. ಪುಸ್ತಕವನ್ನಲ್ಲ. ಪ್ರಶ್ನಿಸಿದ್ದು ಪ್ರಭುತ್ವವನ್ನು. ಭಾರತವೇ ನಕಲಿ ದಾಖಲೆಗಳ ತವರು ಆಗಿರುವಾಗ ಪ್ರಭುತ್ವದ ದಾಖಲೆಗಳನ್ನು ಕೇಳಿದ್ದು ತಪ್ಪಲ್ಲ. ಪ್ರಭುತ್ವದ ಕೈಕೆಳಗೆ ಮೂಲಭೂತವಾದ ಕೆಲಸ ಮಾಡುತ್ತದೆ. ಅದೇ ಮೂಲಭೂತವಾದ ಪ್ರಭುತ್ವದ ಮೇಲೆ ಒತ್ತಡ ಹೇರಿತು. ಕವಿಗೆ ಸಂಕಟವನ್ನು ತಂದೊಡ್ಡಿತು. ಕವಿ ಒಳಗಿದ್ದಾರೆ. ಕವಿತೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಇದೆ. ಕವಿಯ ದೇಹ ಸರಳುಗಳ ಹಿಂದಿದೆ. ಮನಸ್ಸು ವಿಶ್ವವ್ಯಾಪಿ ಹರಡಿಕೊಳ್ಳುತ್ತಿದೆ. ಕವಿತೆಯ ಧ್ವನಿ ಪ್ರತಿಧ್ವನಿಸುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವ ಮನಸ್ಸುಗಳನ್ನು ಹೆಚ್ಚಿಸುತ್ತಲೇ ಹೋಗುತ್ತಿದೆ. ಭಾಷೆ, ಧರ್ಮ, ಜಾತಿ, ಪ್ರದೇಶವನ್ನು ಮೀರಿ ಬೆಳೆಯುತ್ತಿದೆ. ಅದನ್ನು ತಡೆಯಲು ಪ್ರಭುತ್ವದಿಂದ ಸಾಧ್ಯವಿಲ್ಲ. ಪ್ರಶ್ನಿಸುವ ಎಲ್ಲರನ್ನು ಬಂಧಿಸಲು ಸಾಧ್ಯವೇ? ಬಹುಜನರನ್ನು ಬಂಧಿಸುವುದು ಗಾಳಿಯನ್ನು ಹಿಡಿದಿಟ್ಟಂತೆ. ಪ್ರಭುತ್ವ ತನ್ನ ದೇಹ-ಮನಸ್ಸನ್ನು ಬದಲಿಸುತ್ತಲೇ ಹೋದರೆ ಕವಿ ಪ್ರಶ್ನಿಸುತ್ತಲೇ ಇರುತ್ತಾನೆ ಎಂಬುದು ಪ್ರಭುತ್ವಕ್ಕೆ ಅರ್ಥವಾಗಬೇಕು.

ಬೆಂಗಳೂರಿನಲ್ಲಿ ಪ್ರಮಥರ ಗಣಮೇಳದಲ್ಲಿ ರಾಜಕೀಯ ನಾಯಕರೊಬ್ಬರು ಮಾತನಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಬಿಜ್ಜಳ ಇದ್ದಂತೆ. ಮುರುಘಾ ಮಠದ ಅಧ್ಯಕ್ಷರಾದ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮಿಗಳು ಸಾಕ್ಷಾತ್ ಬಸವಣ್ಣ ಇದ್ದಂತೆ ಎಂದರು. ಆ ಮುಖಂಡರ ಮನಸ್ಸಿಗೆ ಹಾಗೆ ಅನ್ನಿಸಿರಬಹುದು. ಇಲ್ಲಿರುವ ಪ್ರಶ್ನೆಯೆಂದರೆ. ಹನ್ನೆರಡನೇ ಶತಮಾನದ ಬಿಜ್ಜಳನ ಕಾಲದಲ್ಲಿ ಬಸವಣ್ಣನಿಗೆ ರಾಜಪ್ರಭುತ್ವವನ್ನು ಪ್ರಶ್ನಿಸುವ ಅಧಿಕಾರ ನೀಡಿದ್ದ. ಶರಣರು ಮುಕ್ತ ವಚನಗಳನ್ನು ಹೇಳಬಹುದಿತ್ತು., ಈಗಿನ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಹೋಲಿಸಿದರೆ ಅಂದು ನೂರಕ್ಕೆ ನೂರರಷ್ಟು ಮುಕ್ತ ವಾತಾವರಣವಿತ್ತು. ಮೂಲಭೂತವಾದಿ ಮನಸ್ಸುಗಳು ಬಿಜ್ಜಳನ ಮೇಲೆ ಒತ್ತಡ ತಂದರೂ ಅದಕ್ಕೆ ಬಿಜ್ಜಳ ಮಣಿಯಲಿಲ್ಲ. ಶರಣರು ಸ್ವತಂತ್ರರು. ಆದರೆ ಈಗಿನ ಬಿಜ್ಜಳ (ಯಡಿಯೂರಪ್ಪ ) ಕಾಲದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ಎಲ್ಲಿದೆ. ಸಿರಾಜ್ ಬಿಸರಳ್ಳಿ ಕವನ ಕೇಳಿಸಿಕೊಂಡ ಮೂಲಭೂತವಾದಿಯೊಬ್ಬ ಪ್ರಭುತ್ವದ ಮೇಲೆ ಒತ್ತಡ ಹೇರುತ್ತಿದ್ದಂತೆ ಬಂಧನ ಮಾಡಲಾಗಿದೆ. ಆಧುನಿಕ ಬಸವಣ್ಣನೆಂದು ಆ ಮುಖಂಡರಿಂದ ಕರೆಸಿಕೊಂಡಿರುವ ಮುರುಘಾ ಮಠದ ಪೀಠಾಧ್ಯಕ್ಷರಿಗೆ ಪ್ರಭುತ್ವವನ್ನು ಪ್ರಶ್ನಿಸಿ ಎದುರು ಹಾಕಿಕೊಳ್ಳುವ ಶಕ್ತಿ ಇದೆಯೇ? ಖಂಡಿತ ಇಲ್ಲ.

ಪ್ರಭುತ್ವದ ದಂಡಿಸುವ ಕೆಲಸಕ್ಕೆ ಕವಿ ನಲುಗಿಹೋಗಿದ್ದಾನೆ. ಧರ್ಮದ ಆಧಾರದ ಮೇಲೆಯೇ ದೂರುಗಳು ದಾಖಲಾಗುತ್ತಿವೆ. ಮೂಲಭೂತವಾದಿಗಳು ಮತ್ತು ಪ್ರಭುತ್ವ ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ಬೆದರಿಸುವ ಕೆಲಸಗಳು ನಡೆಯುತ್ತಿರುವಂತೆ ಕಾಣುತ್ತಿದೆ. ಜೆ.ಎನ್.ಯು ವಿವಿಯಲ್ಲಿ ಉಮರ್ ಖಾಲಿದ್, (ನಜೀಬ್ ಏನಾಗಿದ್ದಾನೋ ಗೊತ್ತಿಲ್ಲ) ಕವಿತೆ ಬರೆದದ್ದಕ್ಕಾಗಿ ಸಿರಾಜ್, ರಾಜಾ ಭಕ್ಷಿ, ಎನ್.ಆರ್.ಸಿ ವಿರುದ್ದ ಹೋರಾಟ ಮಾಡಿದ್ದಕ್ಕಾಗಿ ಡಾ.ಕಾಫೀಲ್ ವಿರುದ್ಧ ದೇಶದ್ರೋಹದ ಕೇಸ್ ದಾಖಲಾಗಿದೆ. ಶಾಹೀನ್ ಶಾಲೆಯಲ್ಲಿ ನಾಟಕ ಪ್ರದರ್ಶಿಸಿದ್ದಕ್ಕಾಗಿ ಶಾಲೆಯ ಮಕ್ಕಳ ವಿರುದ್ದ, ಅವರ ಪೋಷಕರ ವಿರುದ್ಧ, ಮುಖ್ಯೋಪಾಧ್ಯಾಯರ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸುವ ಮತ್ತು ಬಂಧಿಸುವ ಮೂಲಕ ಪ್ರಶ್ನಿಸುವ ಹಾಗೂ ಪ್ರತಿಭಟಿಸುವವರನ್ನು ಭಯದಲ್ಲಿ ಇಡಲು ಪ್ರಭುತ್ವ ಯತ್ನಿಸುತ್ತಲೇ ಇದೆ. ಇದು ಸಮಾಜದಲ್ಲಿ ಪ್ರತಿರೋಧವನ್ನು ಹೆಚ್ಚು ಮಾಡುತ್ತದೆಯೇ ಹೊರತು ದ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಇದನ್ನು ಪ್ರಭುತ್ವ ಅರ್ಥಮಾಡಿಕೊಂಡರೆ ಒಳಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...