Homeಮುಖಪುಟಕವಿತೆಯೆಂಬ ಗುಬ್ಬಿಯ ಮೇಲೆ ಪ್ರಭುತ್ವವೆಂಬ ಹದ್ದಿನ ದಾಳಿ..

ಕವಿತೆಯೆಂಬ ಗುಬ್ಬಿಯ ಮೇಲೆ ಪ್ರಭುತ್ವವೆಂಬ ಹದ್ದಿನ ದಾಳಿ..

- Advertisement -
- Advertisement -

ಪ್ರಭುತ್ವ ಮತ್ತು ಮೂಲಭೂತವಾದ ಎರಡೂ ಅಪಾಯಕಾರಿಗಳೇ ಆಗಿವೆ. ಇವು ಒಂದಕ್ಕೊಂದು ಕೈಜೋಡಿಸಿದರೆ, ಪರಸ್ಪರ ಅಪ್ಪಿಕೊಂಡರೆ ಆಗುವ ಅನಾಹುತಗಳಿಗೆ ಕೊನೆಯೇ ಇಲ್ಲ. ಅದೀಗ ಭಾರತದಲ್ಲಿ ಸಂಭವಿಸುತ್ತಿದೆ. ಪ್ರಭುತ್ವ ಹದ್ದಿನಂತೆ, ಮೂಲಭೂತವಾದ ಡ್ಯಾಗನಂತೆ. ಇವೆರಡೂ ಕೂಡ ರಕ್ಕಸನಂತೆ ಎರಗುವ ಗುಣ ಹೊಂದಿವೆ. ಒಂಟಿ ಸಿಗುವ ಅಥವಾ ಗುಂಪಿನಿಂದ ಚೆಲ್ಲಾಪಿಲ್ಲಿಯಾದ ಪ್ರಾಣಿಗಳು ಬಹುಬೇಗ ಬಲಿಯಾಗುತ್ತವೆ.

ಪ್ರಭುತ್ವವೂ ಕೂಡ ಸಾಮಾನ್ಯರ ಮೇಲೆ ಹಾಗೆಯೇ ಎರಗುತ್ತದೆ. ನಿರುಪದ್ರವಿ ಗುಬ್ಬಿಯ ಮೇಲೆ ಹದ್ದು ಬಂದೆರಗುವಂತೆ ಪ್ರಭುತ್ವ ನಿರುಪ್ರದವಿ ಕವಿಗಳ ಮೇಲೆ ಕ್ರೂರ ದೃಷ್ಟಿ ಬೀರಿದೆ. ಕ್ರೌರ್ಯದ ಹಲ್ಲುಗಳಡಿ ಸಿಕ್ಕಿಸಿಕೊಂಡು ಜಗಿಯತೊಡಗಿದೆ. ಯಕಶ್ಚಿತ್ ಕವಿತೆಯೊಂದು ಪ್ರಭುತ್ವ ನಡೆಸುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಪ್ರಶ್ನಿಸಿತು ಎಂಬ ಕಾರಣಕ್ಕೆ ಕವಿಯನ್ನು ದೇಶದ್ರೋಹಿಯಂತೆ ಬಿಂಬಿಸಿ ಕಾರಾಗೃಹಕ್ಕೆ ಅಟ್ಟಿದೆ.

ಪ್ರಭುತ್ವದ ದೌರ್ಜನ್ಯ, ದಬ್ಬಾಳಿಕೆ ಇಂದಿನದೇನೂ ಅಲ್ಲ. ಹಿಂದಿನಿಂದಲೂ ಪ್ರಭುತ್ವವನ್ನು ಪ್ರಶ್ನಿಸುವವರ ಮೇಲೆ ಕತ್ತಿ ಮಸೆಯುತ್ತಲೇ ಬರುತ್ತಿದೆ. ಕರ್ನಾಟಕದಲ್ಲಿ ಸತ್ಯ ಹೇಳಿದ್ದಕ್ಕಾಗಿ ಪ್ರಭುತ್ವಗಳು ಕೃತಿಗಳನ್ನು ಮುಟ್ಟುಗೋಲು ಹಾಕಿಕೊಂಡ ಉದಾಹರಣೆಗಳು ನಮ್ಮ ಕಣ್ಣಮುಂದಿವೆ. ಹಿರಿಯ ಸಂಶೋಧಕರಾಗಿದ್ದ ಎಂ.ಎಂ. ಕಲ್ಬುರ್ಗಿಯವರ ‘ಮಾರ್ಗ’, ಕವಿ ಎಚ್.ಎಸ್.ಶಿವಪ್ರಕಾಶ್ ಬರೆದ ನಾಟಕ ‘ಮಹಾಚೈತ್ರ’, ಪಿ.ವಿ. ನಾರಾಯಣರ ‘ಧರ್ಮಕಾರಣ’, ಲೇಖಕ ಬಂಜಗೆರೆ ಜಯಪ್ರಕಾಶ್ ವಿರಚಿತ ‘ಆನುದೇವ ಹೊರಗಣವನು’ ಕೃತಿಗಳು ಸತ್ಯದ ಬೆಳಕು ಚೆಲ್ಲಿದವು. ಇದೇ ಕಾರಣಕ್ಕೆ ಮೂಲಭೂತವಾದಿ ಶಕ್ತಿಗಳು ಪ್ರಭುತ್ವದ ಮೇಲೆ ಒತ್ತಡ ತಂದು ಜನರ ಓದಿಗೆ ದೊರಕದಂತೆ ನೋಡಿಕೊಂಡವು. ಈ ನಾಲ್ಕು ಕೃತಿಗಳಲ್ಲಿ ಬಸವಣ್ಣ ಮತ್ತು ಚನ್ನಬಸವಣ್ಣನ ಹುಟ್ಟು ಕುರಿತು ಸತ್ಯವನ್ನು ಹೊರಹಾಕಿದ್ದು ಮೂಲಭೂತವಾದ ಶಕ್ತಿಗಳಿಗೆ ಸಹಿಸಲಾಗಲಿಲ್ಲ. ಪ್ರಭುತ್ವದೊಂದಿಗೆ ಕೈಜೋಡಿಸಿ ಕವಿಗಳು, ನಾಟಕಕಾರರನ್ನು ಕಷ್ಟಕ್ಕೆ ಸಿಲುಕಿಸಿದವು.

ಈಗ ಕವಿತೆಯೊಂದು ಪ್ರಭುತ್ವಕ್ಕೆ ಪ್ರಶ್ನೆ ಕೇಳಿದೆ. ಜನರ ಗುರುತನ್ನು ಕೇಳುವ ಪ್ರಭುತ್ವಕ್ಕೆ ತನ್ನ ಗುರುತನ್ನು ಕೇಳಿದರೆ ತಪ್ಪೇನು? ಪ್ರಭುತ್ವದ ತಪ್ಪ ನಡೆಗಳನ್ನು ಪ್ರಶ್ನಿಸುವುದು ಪ್ರತಿಯೊಬ್ಬ ಪ್ರಜೆಯ ಸಂವಿಧಾನಬದ್ದ ಮೂಲಭೂತ ಹಕ್ಕು. ಪ್ರಭುತ್ವದ ಚುಕ್ಕಾಣಿ ಹಿಡಿದವರು ಕೂಡ ನಮ್ಮ ನಡುವಿನಿಂದಲೇ ಹೋಗಿರುವುದು. ನಾವು ಮತ ಚಲಾವಣೆ ಮಾಡದಿದ್ದರೆ ಪ್ರಭುತ್ವದ ಗುಡಿಯಲ್ಲಿ ಕೂರಲು ಆಗುತ್ತಿರಲಿಲ್ಲ ಎಂಬುದನ್ನು ಅವರು ನೆನಪು ಇಟ್ಟುಕೊಳ್ಳಬೇಕು. ಪ್ರಭುತ್ವದ ದಾಖಲೆಗಳು ಮುಖ್ಯವಲ್ಲವೇ? ಪ್ರಭುತ್ವ ಯಾರಿಂದ ಆಯ್ಕೆಗೊಳ್ಳುತ್ತದೋ ಅವರನ್ನೇ ಅನುಮಾನದಿಂದ ನೋಡುವುದಾದರೆ ಸಾಮಾನ್ಯ ಪ್ರಜೆಯೂ ಕೂಡ ಶಂಕೆ ವ್ಯಕ್ತಪಡಿಸುವುದರಲ್ಲಿ ತಪ್ಪಿಲ್ಲ. ಪ್ರಶ್ನೆ ಮಾಡುವುದರಲ್ಲಿ ತಪ್ಪಿಲ್ಲ. ಹಾಗಂತ ಪ್ರಭುತ್ವವನ್ನು ಪ್ರಶ್ನೆ ಮಾಡಿದ ಎಂಬ ಒಂದೇ ಕಾರಣಕ್ಕೆ ಕವಿಯನ್ನೇ ಜೈಲಿಗಟ್ಟುವುದು ನ್ಯಾಯಸಮ್ಮತವೇ? ಇದು ಪ್ರಭುತ್ವದ ತರವಲ್ಲದ, ಸಹಜವಲ್ಲದ ನಡವಳಿಕೆ ಎಂದೇ ಪರಿಗಣಿಸಬೇಕಾಗುತ್ತದೆ.

ಸಿರಾಜ್ ಬಿಸರಳ್ಳಿ ಬರೆದದ್ದು ಒಂದೇ ಒಂದು ಕವನ. ಪುಸ್ತಕವನ್ನಲ್ಲ. ಪ್ರಶ್ನಿಸಿದ್ದು ಪ್ರಭುತ್ವವನ್ನು. ಭಾರತವೇ ನಕಲಿ ದಾಖಲೆಗಳ ತವರು ಆಗಿರುವಾಗ ಪ್ರಭುತ್ವದ ದಾಖಲೆಗಳನ್ನು ಕೇಳಿದ್ದು ತಪ್ಪಲ್ಲ. ಪ್ರಭುತ್ವದ ಕೈಕೆಳಗೆ ಮೂಲಭೂತವಾದ ಕೆಲಸ ಮಾಡುತ್ತದೆ. ಅದೇ ಮೂಲಭೂತವಾದ ಪ್ರಭುತ್ವದ ಮೇಲೆ ಒತ್ತಡ ಹೇರಿತು. ಕವಿಗೆ ಸಂಕಟವನ್ನು ತಂದೊಡ್ಡಿತು. ಕವಿ ಒಳಗಿದ್ದಾರೆ. ಕವಿತೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಇದೆ. ಕವಿಯ ದೇಹ ಸರಳುಗಳ ಹಿಂದಿದೆ. ಮನಸ್ಸು ವಿಶ್ವವ್ಯಾಪಿ ಹರಡಿಕೊಳ್ಳುತ್ತಿದೆ. ಕವಿತೆಯ ಧ್ವನಿ ಪ್ರತಿಧ್ವನಿಸುತ್ತಿದೆ. ಪ್ರಭುತ್ವವನ್ನು ಪ್ರಶ್ನಿಸುವ ಮನಸ್ಸುಗಳನ್ನು ಹೆಚ್ಚಿಸುತ್ತಲೇ ಹೋಗುತ್ತಿದೆ. ಭಾಷೆ, ಧರ್ಮ, ಜಾತಿ, ಪ್ರದೇಶವನ್ನು ಮೀರಿ ಬೆಳೆಯುತ್ತಿದೆ. ಅದನ್ನು ತಡೆಯಲು ಪ್ರಭುತ್ವದಿಂದ ಸಾಧ್ಯವಿಲ್ಲ. ಪ್ರಶ್ನಿಸುವ ಎಲ್ಲರನ್ನು ಬಂಧಿಸಲು ಸಾಧ್ಯವೇ? ಬಹುಜನರನ್ನು ಬಂಧಿಸುವುದು ಗಾಳಿಯನ್ನು ಹಿಡಿದಿಟ್ಟಂತೆ. ಪ್ರಭುತ್ವ ತನ್ನ ದೇಹ-ಮನಸ್ಸನ್ನು ಬದಲಿಸುತ್ತಲೇ ಹೋದರೆ ಕವಿ ಪ್ರಶ್ನಿಸುತ್ತಲೇ ಇರುತ್ತಾನೆ ಎಂಬುದು ಪ್ರಭುತ್ವಕ್ಕೆ ಅರ್ಥವಾಗಬೇಕು.

ಬೆಂಗಳೂರಿನಲ್ಲಿ ಪ್ರಮಥರ ಗಣಮೇಳದಲ್ಲಿ ರಾಜಕೀಯ ನಾಯಕರೊಬ್ಬರು ಮಾತನಾಡಿದರು. ಮುಖ್ಯಮಂತ್ರಿ ಯಡಿಯೂರಪ್ಪ ಬಿಜ್ಜಳ ಇದ್ದಂತೆ. ಮುರುಘಾ ಮಠದ ಅಧ್ಯಕ್ಷರಾದ ಶಿವಮೂರ್ತಿ ಮುರುಘಾ ರಾಜೇಂದ್ರ ಸ್ವಾಮಿಗಳು ಸಾಕ್ಷಾತ್ ಬಸವಣ್ಣ ಇದ್ದಂತೆ ಎಂದರು. ಆ ಮುಖಂಡರ ಮನಸ್ಸಿಗೆ ಹಾಗೆ ಅನ್ನಿಸಿರಬಹುದು. ಇಲ್ಲಿರುವ ಪ್ರಶ್ನೆಯೆಂದರೆ. ಹನ್ನೆರಡನೇ ಶತಮಾನದ ಬಿಜ್ಜಳನ ಕಾಲದಲ್ಲಿ ಬಸವಣ್ಣನಿಗೆ ರಾಜಪ್ರಭುತ್ವವನ್ನು ಪ್ರಶ್ನಿಸುವ ಅಧಿಕಾರ ನೀಡಿದ್ದ. ಶರಣರು ಮುಕ್ತ ವಚನಗಳನ್ನು ಹೇಳಬಹುದಿತ್ತು., ಈಗಿನ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಹೋಲಿಸಿದರೆ ಅಂದು ನೂರಕ್ಕೆ ನೂರರಷ್ಟು ಮುಕ್ತ ವಾತಾವರಣವಿತ್ತು. ಮೂಲಭೂತವಾದಿ ಮನಸ್ಸುಗಳು ಬಿಜ್ಜಳನ ಮೇಲೆ ಒತ್ತಡ ತಂದರೂ ಅದಕ್ಕೆ ಬಿಜ್ಜಳ ಮಣಿಯಲಿಲ್ಲ. ಶರಣರು ಸ್ವತಂತ್ರರು. ಆದರೆ ಈಗಿನ ಬಿಜ್ಜಳ (ಯಡಿಯೂರಪ್ಪ ) ಕಾಲದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆ ಎಲ್ಲಿದೆ. ಸಿರಾಜ್ ಬಿಸರಳ್ಳಿ ಕವನ ಕೇಳಿಸಿಕೊಂಡ ಮೂಲಭೂತವಾದಿಯೊಬ್ಬ ಪ್ರಭುತ್ವದ ಮೇಲೆ ಒತ್ತಡ ಹೇರುತ್ತಿದ್ದಂತೆ ಬಂಧನ ಮಾಡಲಾಗಿದೆ. ಆಧುನಿಕ ಬಸವಣ್ಣನೆಂದು ಆ ಮುಖಂಡರಿಂದ ಕರೆಸಿಕೊಂಡಿರುವ ಮುರುಘಾ ಮಠದ ಪೀಠಾಧ್ಯಕ್ಷರಿಗೆ ಪ್ರಭುತ್ವವನ್ನು ಪ್ರಶ್ನಿಸಿ ಎದುರು ಹಾಕಿಕೊಳ್ಳುವ ಶಕ್ತಿ ಇದೆಯೇ? ಖಂಡಿತ ಇಲ್ಲ.

ಪ್ರಭುತ್ವದ ದಂಡಿಸುವ ಕೆಲಸಕ್ಕೆ ಕವಿ ನಲುಗಿಹೋಗಿದ್ದಾನೆ. ಧರ್ಮದ ಆಧಾರದ ಮೇಲೆಯೇ ದೂರುಗಳು ದಾಖಲಾಗುತ್ತಿವೆ. ಮೂಲಭೂತವಾದಿಗಳು ಮತ್ತು ಪ್ರಭುತ್ವ ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ಬೆದರಿಸುವ ಕೆಲಸಗಳು ನಡೆಯುತ್ತಿರುವಂತೆ ಕಾಣುತ್ತಿದೆ. ಜೆ.ಎನ್.ಯು ವಿವಿಯಲ್ಲಿ ಉಮರ್ ಖಾಲಿದ್, (ನಜೀಬ್ ಏನಾಗಿದ್ದಾನೋ ಗೊತ್ತಿಲ್ಲ) ಕವಿತೆ ಬರೆದದ್ದಕ್ಕಾಗಿ ಸಿರಾಜ್, ರಾಜಾ ಭಕ್ಷಿ, ಎನ್.ಆರ್.ಸಿ ವಿರುದ್ದ ಹೋರಾಟ ಮಾಡಿದ್ದಕ್ಕಾಗಿ ಡಾ.ಕಾಫೀಲ್ ವಿರುದ್ಧ ದೇಶದ್ರೋಹದ ಕೇಸ್ ದಾಖಲಾಗಿದೆ. ಶಾಹೀನ್ ಶಾಲೆಯಲ್ಲಿ ನಾಟಕ ಪ್ರದರ್ಶಿಸಿದ್ದಕ್ಕಾಗಿ ಶಾಲೆಯ ಮಕ್ಕಳ ವಿರುದ್ದ, ಅವರ ಪೋಷಕರ ವಿರುದ್ಧ, ಮುಖ್ಯೋಪಾಧ್ಯಾಯರ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಿಸುವ ಮತ್ತು ಬಂಧಿಸುವ ಮೂಲಕ ಪ್ರಶ್ನಿಸುವ ಹಾಗೂ ಪ್ರತಿಭಟಿಸುವವರನ್ನು ಭಯದಲ್ಲಿ ಇಡಲು ಪ್ರಭುತ್ವ ಯತ್ನಿಸುತ್ತಲೇ ಇದೆ. ಇದು ಸಮಾಜದಲ್ಲಿ ಪ್ರತಿರೋಧವನ್ನು ಹೆಚ್ಚು ಮಾಡುತ್ತದೆಯೇ ಹೊರತು ದ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ. ಇದನ್ನು ಪ್ರಭುತ್ವ ಅರ್ಥಮಾಡಿಕೊಂಡರೆ ಒಳಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...