Homeಮುಖಪುಟಸಿಸೋಡಿಯಾ, ಜೈನ್ ಬಿಜೆಪಿ ಸೇರಿದರೆ ನಾಳೆಯೇ ಜೈಲಿನಿಂದ ಹೊರಬರುತ್ತಾರೆ: ಅರವಿಂದ್ ಕೇಜ್ರಿವಾಲ್

ಸಿಸೋಡಿಯಾ, ಜೈನ್ ಬಿಜೆಪಿ ಸೇರಿದರೆ ನಾಳೆಯೇ ಜೈಲಿನಿಂದ ಹೊರಬರುತ್ತಾರೆ: ಅರವಿಂದ್ ಕೇಜ್ರಿವಾಲ್

- Advertisement -
- Advertisement -

ಮದ್ಯ ನೀತಿಯಲ್ಲಿನ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಎಎಪಿಯ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರು ಬಿಜೆಪಿಗೆ ಸೇರ್ಪಡೆಯಾದರೆ ನಾಳೆಯೇ ಜೈಲಿನಿಂದ ಹೊರಬರುತ್ತಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದ್ದಾರೆ.

”ಸಮಸ್ಯೆಯು ಭ್ರಷ್ಟಾಚಾರವಲ್ಲ, ಆಮ್ ಆದ್ಮಿ ಪಕ್ಷವು ಮಾಡುವ ಕೆಲಸವನ್ನು ನಿಲ್ಲಿಸುವುದು ಮತ್ತು ನಂತರ ಅವರ ವಿರುದ್ಧ ಕೇಂದ್ರೀಯ ತನಿಖಾ ಮತ್ತು ಜಾರಿ ನಿರ್ದೇಶನಾಲಯವನ್ನು ಕಳುಹಿಸುವುದು” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿಯಲ್ಲಿ ಈಗ ರದ್ದಾದ ಅಬಕಾರಿ ನೀತಿಯ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಸಿಬಿಐ ಭಾನುವಾರ ಬಂಧಿಸಿದೆ. ದೆಹಲಿ ನ್ಯಾಯಾಲಯವು ಸೋಮವಾರ ಅವರನ್ನು ಮಾರ್ಚ್ 4ರವರೆಗೆ ಸಿಬಿಐ ಕಸ್ಟಡಿಗೆ ಕಳುಹಿಸಿದೆ.

ಇದನ್ನೂ ಓದಿ: ‘ನಾನಲ್ಲ, ನೀವೇ ಅವರ ಟಾರ್ಗೆಟ್’: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಿಸೋಡಿಯಾ ಪತ್ರ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈನ್ ಅವರನ್ನು ಜಾರಿ ನಿರ್ದೇಶನಾಲಯವು ಮೇ 30 ರಂದು ಬಂಧಿಸಿತ್ತು. 2017ರಲ್ಲಿ ಅಸಮಂಜಸ ಆಸ್ತಿಯ ವಿವರ ಸಲ್ಲಿಸಿದ ಬಗ್ಗೆ ಸಿಬಿಐ ಎಫ್ಐಆರ್ ದಾಖಲಿಸಿತ್ತು. ಅದರ ಆಧಾರದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ ಜೈನ್ ಅವರನ್ನು ಬಂಧಿಸಲಾಗಿತ್ತು.

ಫೆಬ್ರವರಿ 28 ರಂದು ಈ ಇಬ್ಬರೂ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ”8 ವರ್ಷಗಳ ಕಾಲ ಪ್ರಾಮಾಣಿಕವಾಗಿ ಕೆಲಸ ಮಾಡಿದ ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಬಂದಿರುವುದು ದುರದೃಷ್ಟಕರ” ಎಂದು ಮನೀಶ್ ಸಿಸೋಡಿಯಾ ನೀಡಿರುವ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

”ತಮ್ಮ ವಿರುದ್ಧದ ಆರೋಪಗಳು ಸುಳ್ಳು ಮತ್ತು ಅರವಿಂದ್ ಕೇಜ್ರಿವಾಲ್ ಅವರ ಸತ್ಯದ ರಾಜಕಾರಣಕ್ಕೆ ಹೆದರುವ ಹೇಡಿಗಳು ಮತ್ತು ದುರ್ಬಲರು ತಮ್ಮ ವಿರುದ್ಧ ಪಿತೂರಿ ನಡೆಸಿದ್ದಾರೆ” ಎಂದು ಹೇಳಿದ್ದಾರೆ.

ಬುಧವಾರ ಕೇಜ್ರಿವಾಲ್ ಅವರು, ಆಮ್ ಆದ್ಮಿ ಪಕ್ಷ, ಬಿಜೆಪಿ ವಿರುದ್ಧ ಮನೆ ಮನೆಗೆ ತೆರಳಿ ಪ್ರಚಾರ ನಡೆಸಲಿದೆ ಎಂದು ಹೇಳಿದ್ದಾರೆ.

”ನಾವು ಪ್ರತಿ ಮನೆಗೆ ಹೋಗುತ್ತೇವೆ, ಪ್ರತಿಯೊಬ್ಬ ವ್ಯಕ್ತಿಯೊಂದಿಗೆ ಮಾತನಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿಯವರು ಹೇಗೆ ತೀವ್ರವಾಗಿ ನಡೆದುಕೊಳ್ಳುತ್ತಿದ್ದಾರೆ ಎಂಬುದನ್ನು ನಾವು ಜನರಿಗೆ ವಿವರಿಸುತ್ತೇವೆ. ಜನರು ಎಲ್ಲವನ್ನೂ ನೋಡುತ್ತಿದ್ದಾರೆ ಮತ್ತು ಅವರು ಕೇಂದ್ರದ ವಿರುದ್ಧ ಕೋಪಗೊಂಡಿದ್ದಾರೆ” ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದರು.

”ಕಳೆದ ವರ್ಷ ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಗೆಲುವಿನಿಂದ ಕೇಸರಿ ಪಕ್ಷವು ಕಂಗೆಟ್ಟಿದೆ. ನಾವು ಪಂಜಾಬ್‌ನಲ್ಲಿ ಗೆದ್ದಾಗಿನಿಂದ, ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಎಎಪಿಯ ಗೆಲುವಿನ ಓಟವನ್ನು ನಿಲ್ಲಿಸಲು ಬಿಜೆಪಿ ಬಯಸಿದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...