Homeಮುಖಪುಟಸಿಸೋಡಿಯಾ ಬಂಧನ: ಕೇಂದ್ರದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಎಎಪಿ ಕರೆ

ಸಿಸೋಡಿಯಾ ಬಂಧನ: ಕೇಂದ್ರದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಎಎಪಿ ಕರೆ

- Advertisement -
- Advertisement -

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಬಂಧನ ಮಾಡಿದ್ದಾರೆ. ಈ ಬಂಧನವನ್ನು ಖಂಡಿಸಿ ಇಂದು ರಾಷ್ಟ್ರದಾದ್ಯಂತ ಪ್ರತಿಭಟನೆ ಮಾಡುವುದಾಗಿ ಆಮ್ ಆದ್ಮಿ ಪಕ್ಷ (ಎಎಪಿ) ಘೋಷಿಸಿದೆ.

ಮದ್ಯ ನೀತಿ ಪ್ರಕರಣದಲ್ಲಿ ಎಂಟು ಗಂಟೆಗಳ ವಿಚಾರಣೆಯ ನಂತರ ಕೇಂದ್ರೀಯ ತನಿಖಾ ದಳವು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದ್ದು, ಸೋಮವಾರ ರೌಸ್ ಅವೆನ್ಯೂದಲ್ಲಿರುವ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಆಮ್ ಆದ್ಮಿ ಪಕ್ಷವೂ (ಎಎಪಿ) ಸಿಸೋಡಿಯಾ ಬಂಧನದ ವಿರುದ್ಧ ದೇಶಾದ್ಯಂತ ಬೀದಿಗಿಳಿಯಲು ನಿರ್ಧರಿಸಿದೆ. ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಎಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್ ಹೇಳಿದ್ದಾರೆ.

“ದೇಶದ ಲಕ್ಷಾಂತರ ಮಕ್ಕಳ ಭವಿಷ್ಯ ರೂಪಿಸಿದ ಮಹಾನ್ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಲಾಗಿದೆ. ಇದರ ವಿರುದ್ಧ ಆಮ್ ಆದ್ಮಿ ಪಕ್ಷ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ” ಎಂದು ಪಾಠಕ್ ಟ್ವೀಟ್ ಮಾಡಿದ್ದಾರೆ.

ರಾಷ್ಟ್ರ ರಾಜಧಾನಿಯ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಭಾರತೀಯ ಜನತಾ ಪಕ್ಷದ ಪ್ರಧಾನ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಎಎಪಿ ಪ್ರತಿಭಟನೆ ನಡೆಸಲಿದೆ. ಗುಜರಾತ್‌ನ ಗಾಂಧಿನಗರ, ಹರಿಯಾಣದ ರೋಹ್ಟಕ್, ನೋಯ್ಡಾ ಮತ್ತು ಇತರ ಸ್ಥಳಗಳಲ್ಲೂ ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿ: ಜೈಲಿಗೆ ಹೆದರುವುದಿಲ್ಲ: ಮತ್ತೆ CBI ಮುಂದೆ ವಿಚಾರಣೆಗೆ ಹಾಜರಾಗಲಿರುವ ಮನೀಶ್ ಸಿಸೋಡಿಯಾ

ಸಿಬಿಐ ಕಚೇರಿಗೆ ವಿಚಾರಣೆಗಾಗಿ ಆಗಮಿಸುವ ಸ್ವಲ್ಪ ಸಮಯದ ಮೊದಲು ಸಿಸೋಡಿಯಾ ಅವರು, ”ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಪ್ರಧಾನಿ ನರೇಂದ್ರ ಮೋದಿ “ಹೆದರಿದ್ದಾರೆ.” ನಮ್ಮ ಪಕ್ಷದ ನಾಯಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ” ಎಂದು ಹೇಳಿದ್ದರು.

”ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಹೆಚ್ಚುತ್ತಿರುವ ಜನಪ್ರಿಯತೆಗೆ ಪ್ರಧಾನಿ ನರೇಂದ್ರ ಮೋದಿ ಹೆದರಿದ್ದಾರೆ. ಹಾಗಾಗಿ ಸಿಬಿಐ ಮತ್ತು ಇಡಿಯಿಂದ ಪಿತೂರಿ ನಡೆಸಲಾಗುತ್ತಿದೆ. ನಮ್ಮ ಪಕ್ಷದ ನಾಯಕರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಎಎಪಿ ಮತ್ತಷ್ಟು ಬೆಳೆದಂತೆ ಬಿಜೆಪಿ ನಮ್ಮ ಮೇಲೆ ಸುಳ್ಳು ಪ್ರಕರಣಗಳನ್ನು ಹಾಕುತ್ತಲೇ ಇರುತ್ತದೆ. ಸಿಬಿಐ, ಇಡಿ ಮತ್ತು ಅವರ ಸುಳ್ಳು ಪ್ರಕರಣಗಳಿಗೆ ನಾವು ಹೆದರುವುದಿಲ್ಲ” ಎಂದು ಸಿಸೋಡಿಯಾ ಹೇಳಿದ್ದಾರೆ.

”ಯಾವುದೇ ವಿಚಾರಣೆಯ ಸಮಯದಲ್ಲಿ, ಆರೋಪಿ ಅಥವಾ ಶಂಕಿತರು ಸಹಕರಿಸದಿದ್ದರೆ ಮತ್ತು ವ್ಯಕ್ತಿಯ ವಿರುದ್ಧ ಸಾಕಷ್ಟು ಸಾಕ್ಷ್ಯಗಳು ಮತ್ತು ಹೇಳಿಕೆಗಳು ಇದ್ದಲ್ಲಿ ಅವರನ್ನು ಪೊಲೀಸ್ ಕಸ್ಟಡಿಯನ್ನು ಪಡೆದುಕೊಳ್ಳಲು, ಬಂಧನ ಮಾಡಲಾಗುತ್ತದೆ. ನಂತರ ಮತ್ತಷ್ಟು ವಿಚಾರಣೆಯನ್ನು ನಡೆಸಬಹುದು” ಎಂದು ಅಧಿಕಾರಿ ಹೇಳಿದರು.

”ವಾಟ್ಸಾಪ್ ಚಾಟ್‌ಗಳು, ಕರೆ ಡೇಟಾ ದಾಖಲೆಗಳು (ಸಿಡಿಆರ್), ಇಮೇಲ್‌ಗಳು, ಸಿಸೋಡಿಯಾ ಕಾರ್ಯದರ್ಶಿ ಸಿ ಅರವಿಂದ್ ಸೇರಿದಂತೆ ದೆಹಲಿ ಸರ್ಕಾರದ ಪ್ರಮುಖ ಅಧಿಕಾರಿಗಳ ಹೇಳಿಕೆಗಳು, ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳು ನಿರ್ಣಾಯಕ ಪಿತೂರಿ ಸಭೆಗಳು, ಹೋಟೆಲ್‌ಗಳ ಬಗ್ಗೆ ಸಾಕಷ್ಟು ಪುರಾವೆಗಳಿವೆ” ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಸಿಸೋಡಿಯಾ ಅವರು ಭಾನುವಾರ ಸಿಬಿಐ ಪ್ರಧಾನ ಕಛೇರಿಗೆ ಹೋಗುವ ಮುನ್ನ, ಮಹಾತ್ಮ ಗಾಂಧಿಯವರ ಸ್ಮಾರಕ ರಾಜ್‌ಘಾಟ್‌ಗೆ ಭೇಟಿ ನೀಡಿದ್ದರು.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ” ಈ ಬಂಧನವು ‘ಕೊಳಕು ರಾಜಕೀಯ’ ಎಂದು ಹೇಳಿದರು ಮತ್ತು ಸಿಸೋಡಿಯಾ ಅವರು ನಿರಪರಾಧಿ” ಎಂದು ಹೇಳಿದ್ದಾರೆ.

”ಮನೀಶ್ ಸಿಸೋಡಿಯಾ ಮುಗ್ಧ. ಅವರ ಬಂಧನವು ಕೊಳಕು ರಾಜಕೀಯ. ಮನೀಶ್ ಬಂಧನದಿಂದಾಗಿ ಜನರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ” ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

”ಸರ್ಕಾರ ಈ ನಡವಳಿಕೆಯನ್ನು ಎಲ್ಲರೂ ನೋಡುತ್ತಿದ್ದಾರೆ. ಜನರು ಎಲ್ಲವನ್ನೂ ಅರ್ಥಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಜನ ಸ್ಪಂದಿಸುತ್ತಾರೆ. ಇದು ನಮ್ಮ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸುತ್ತದೆ. ನಮ್ಮ ಹೋರಾಟವು ಬಲಗೊಳ್ಳುತ್ತದೆ” ಎಂದು ಅವರು ಟ್ವೀಟ್‌ನಲ್ಲಿ ತೀಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...