Homeಮುಖಪುಟಅತ್ಯಾಚಾರ ಆರೋಪಿ ಬಿಷಪ್ ವಿರುದ್ಧ ಪ್ರತಿಭಟನೆ: ಸನ್ಯಾಸತ್ವ ತೊರೆದು ಸಾಮಾನ್ಯ ಜೀವನಕ್ಕೆ ಮರಳಿದ ಸಿಸ್ಟರ್ ಅನುಪಮಾ

ಅತ್ಯಾಚಾರ ಆರೋಪಿ ಬಿಷಪ್ ವಿರುದ್ಧ ಪ್ರತಿಭಟನೆ: ಸನ್ಯಾಸತ್ವ ತೊರೆದು ಸಾಮಾನ್ಯ ಜೀವನಕ್ಕೆ ಮರಳಿದ ಸಿಸ್ಟರ್ ಅನುಪಮಾ

- Advertisement -
- Advertisement -

ಅತ್ಯಾಚಾರ ಆರೋಪಿ ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ಧದ ಹೋರಾಟದ ನೇತೃತ್ವ ವಹಿಸಿದ್ದ ಆರು ಕ್ರೈಸ್ತ ಸನ್ಯಾಸಿನಿಗಳಲ್ಲಿ ಒಬ್ಬರಾದ ಸಿಸ್ಟರ್ ಅನುಪಮಾ ಕೆಲಮಂಗಲತುವೆಲಿಯಿಲ್ ಅವರು ಅಧಿಕೃತವಾಗಿ ಸನ್ಯಾಸತ್ವ ತೊರೆದು ಕೇರಳದ ಅಲಪ್ಪುಝದಲ್ಲಿರುವ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ.

2018ರಲ್ಲಿ, ಕೊಟ್ಟಾಯಂನ ಮಿಷನರೀಸ್ ಆಫ್ ಜೀಸಸ್ ಕಾನ್ವೆಂಟ್‌ನ ಸನ್ಯಾಸಿನಿಯೊಬ್ಬರು, 2014ರಿಂದ 2016ರ ನಡುವೆ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರು ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಈ ವೇಳೆ ಕ್ಯಾಥೋಲಿಕ್ ಚರ್ಚ್‌ನಿಂದ ತೀವ್ರ ಒತ್ತಡ ಎದುರಿಸುತ್ತಿದ್ದರೂ, ಸಿಸ್ಟರ್ ಅನುಪಮಾ ಸೇರಿದಂತೆ ಇತರ ಆರು ಮಂದಿ ಸನ್ಯಾಸಿನಿಗಳು ಸಂತ್ರಸ್ತೆಯ ಬೆಂಬಲಕ್ಕೆ ನಿಂತು ಹೋರಾಡಿದ್ದರು.

ಆದರೂ, ಅತ್ಯಾಚಾರ ಪ್ರಕರಣ ದಾಖಲಾಗಿ ಮೂರು ತಿಂಗಳು ಕಳೆದರೂ ಜಲಂಧರ್‌ನ ಲ್ಯಾಟಿನ್ ಕ್ಯಾಥೋಲಿಕ್ ಡಯಾಸಿಸ್‌ನ ಮುಖ್ಯಸ್ಥರಾಗಿದ್ದ ಬಿಷಪ್ ಅವರನ್ನು ಬಂಧಿಸಿರಲಿಲ್ಲ.

ನಂತರ, ಸಿಸ್ಟರ್ ಅನುಪಮಾ ನೇತೃತ್ವದಲ್ಲಿ ಸನ್ಯಾಸಿಗಳು ಕೊಚ್ಚಿಯಲ್ಲಿ ಸಾರ್ವಜನಿಕ ಧರಣಿ ಪ್ರತಿಭಟನೆ ನಡೆಸಿದ್ದರು. ನಂತರ ಸಾರ್ವಜನಿಕ ವಲಯದಿಂದ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಅಕ್ರಮ ಬಂಧನ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಲ್ಲಿ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಬಂಧಿಸಲಾಗಿತ್ತು.

ಈ ಪ್ರಕರಣದಲ್ಲಿ, ಭಾರತದ ಕ್ಯಾಥೋಲಿಕ್ ಚರ್ಚ್‌ನ ಅಧಿಕಾರವನ್ನು ಸನ್ಯಾಸಿನಿಯರ ಗುಂಪೊಂದು ಪ್ರಶ್ನಿಸಿದ್ದು ಇದೇ ಮೊದಲ ಬಾರಿಯಾಗಿತ್ತು.

2019ರಲ್ಲಿ, ಬಿಷಪ್ ವಿರುದ್ದ ಹೋರಾಟ ನಡೆಸಿದ್ದ ಆರು ಸನ್ಯಾಸಿನಿಗಳಲ್ಲಿ ನಾಲ್ವರಿಗೆ ಚರ್ಚ್ ವರ್ಗಾವಣೆ ಆದೇಶ ನೀಡಿತ್ತು. ಈ ವೇಳೆ ಸನ್ಯಾಸಿನಿಯರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದು, ಬಿಷಪ್ ವಿರುದ್ದ ಪ್ರಕರಣದ ವಿಚಾರಣೆಯ ಅಂತ್ಯದವರೆಗೆ ತಮ್ಮ ವರ್ಗಾವಣೆ ಆದೇಶವನ್ನು ತಡೆಯುವಂತೆ ಕೋರಿದ್ದರು.

ಈ ಸಂದರ್ಭದಲ್ಲಿ ಸನ್ಯಾಸಿನಿಯರು ಭಾರೀ ವಿರೋಧ ಮತ್ತು ಬಹಿಷ್ಕಾರವನ್ನು ಎದುರಿಸಬೇಕಾಯಿತು. ಆದರೂ, ಅವರು ತಮ್ಮ ಕಾನ್ವೆಂಟ್ ಬಿಡಲು ನಿರಾಕರಿಸಿದ್ದರು. ಸಂತ್ರಸ್ತೆ ಸನ್ಯಾಸಿನಿಯ ಬೆನ್ನಿಗೆ ದೃಢವಾಗಿ ನಿಂತಿದ್ದರು.

ಈ ವೇಳೆ ಕೇರಳ ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ಸಂತ್ರಸ್ತೆ ಸನ್ಯಾಸಿನಿ, “ನನ್ನನ್ನು ಇತರ ಸನ್ಯಾಸಿನಿಗಳಿಂದ ಪ್ರತ್ಯೇಕಿಸಲು, ಕಿರುಕುಳ ಮತ್ತು ಚಿತ್ರಹಿಂಸೆ ನೀಡಲು ಚರ್ಚ್ ಪ್ರಯತ್ನಿಸುತ್ತಿದೆ. ಅಂತಹ ಪರಿಸ್ಥಿತಿ ಎದುರಾದರೆ ನನ್ನ ಜೀವಕ್ಕೆ ಅಪಾಯವಿದೆ” ಎಂದು ಆರೋಪಿಸಿದ್ದರು.

ಈ ನಡುವೆ 2022ರಲ್ಲಿ, ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಕೊಟ್ಟಾಯಂನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಳಿಸಿತು.

ಆಗ, ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿಸ್ಟರ್ ಅನುಪಮಾ “ನಮ್ಮ ಸಹೋದರಿಗೆ ನ್ಯಾಯ ಸಿಗುವವರೆಗೂ ನಾವು ಹೋರಾಟವನ್ನು ಮುಂದುವರಿಸುತ್ತೇವೆ. ನಾವು ಸಾಯಬೇಕಾಗಿ ಬಂದರೂ ಸರಿ, ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಬಿಷಪ್ ಫ್ರಾಂಕೊ ಹಣ ಮತ್ತು ತೋಳ್ಬಲ ಎರಡನ್ನೂ ಹೊಂದಿರುವ ವ್ಯಕ್ತಿ” ಎಂದು ಹೇಳಿದ್ದರು.

ಬಳಿಕ ಸಂತ್ರಸ್ತೆ ಸನ್ಯಾಸಿನಿ ಕೊಟ್ಟಾಯಂ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಸ್ತುತ ಪ್ರಕರಣ ಹೈಕೋರ್ಟ್‌ನಲ್ಲಿ ಬಾಕಿಯಿದೆ.

ಜಿಲ್ಲಾ ನ್ಯಾಯಾಲಯದ ತೀರ್ಪಿನ ಬಳಿಕ ಹೋರಾಟ ನಿರತ ಎಲ್ಲಾ ಸನ್ಯಾಸಿನಿಗಳು ತಮ್ಮ ಕಾನ್ವೆಂಟ್‌ನಲ್ಲೇ ಉಳಿದು ಹೋರಾಟ ಮುಂದುವರಿಸುವುದಾಗಿ ಹೇಳಿದ್ದರು. ಆದಾಗ್ಯೂ, ಕಳೆದ ಮೂರು ವರ್ಷಗಳಲ್ಲಿ ಸಿಸ್ಟರ್ ಅನುಪಮಾ ಅಲ್ಲದೆ, ಇತರ ಇಬ್ಬರು ಸನ್ಯಾಸಿನಿಗಳು ಕೂಡ ಸನ್ಯಾಸಿನಿತ್ವವನ್ನು ತ್ಯಜಿಸಿ ಕಾನ್ವೆಂಟ್ ತೊರೆದಿದ್ದಾರೆ.

ಪೋಕ್ಸೋ ಕಾಯ್ದೆಯಡಿ ತೀವ್ರ ಲೈಂಗಿಕ ದೌರ್ಜನ್ಯಕ್ಕೆ 20 ವರ್ಷಗಳಿಗಿಂತ ಕಡಿಮೆ ಅವಧಿಯ ಶಿಕ್ಷೆ ವಿಧಿಸುವಂತಿಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...