Homeಮುಖಪುಟಅತ್ಯಾಚಾರ ಆರೋಪಿ ಬಿಷಪ್ ವಿರುದ್ಧ ಪ್ರತಿಭಟನೆ: ಸನ್ಯಾಸತ್ವ ತೊರೆದು ಸಾಮಾನ್ಯ ಜೀವನಕ್ಕೆ ಮರಳಿದ ಸಿಸ್ಟರ್ ಅನುಪಮಾ

ಅತ್ಯಾಚಾರ ಆರೋಪಿ ಬಿಷಪ್ ವಿರುದ್ಧ ಪ್ರತಿಭಟನೆ: ಸನ್ಯಾಸತ್ವ ತೊರೆದು ಸಾಮಾನ್ಯ ಜೀವನಕ್ಕೆ ಮರಳಿದ ಸಿಸ್ಟರ್ ಅನುಪಮಾ

- Advertisement -
- Advertisement -

ಅತ್ಯಾಚಾರ ಆರೋಪಿ ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ಧದ ಹೋರಾಟದ ನೇತೃತ್ವ ವಹಿಸಿದ್ದ ಆರು ಕ್ರೈಸ್ತ ಸನ್ಯಾಸಿನಿಗಳಲ್ಲಿ ಒಬ್ಬರಾದ ಸಿಸ್ಟರ್ ಅನುಪಮಾ ಕೆಲಮಂಗಲತುವೆಲಿಯಿಲ್ ಅವರು ಅಧಿಕೃತವಾಗಿ ಸನ್ಯಾಸತ್ವ ತೊರೆದು ಕೇರಳದ ಅಲಪ್ಪುಝದಲ್ಲಿರುವ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ.

2018ರಲ್ಲಿ, ಕೊಟ್ಟಾಯಂನ ಮಿಷನರೀಸ್ ಆಫ್ ಜೀಸಸ್ ಕಾನ್ವೆಂಟ್‌ನ ಸನ್ಯಾಸಿನಿಯೊಬ್ಬರು, 2014ರಿಂದ 2016ರ ನಡುವೆ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರು ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಈ ವೇಳೆ ಕ್ಯಾಥೋಲಿಕ್ ಚರ್ಚ್‌ನಿಂದ ತೀವ್ರ ಒತ್ತಡ ಎದುರಿಸುತ್ತಿದ್ದರೂ, ಸಿಸ್ಟರ್ ಅನುಪಮಾ ಸೇರಿದಂತೆ ಇತರ ಆರು ಮಂದಿ ಸನ್ಯಾಸಿನಿಗಳು ಸಂತ್ರಸ್ತೆಯ ಬೆಂಬಲಕ್ಕೆ ನಿಂತು ಹೋರಾಡಿದ್ದರು.

ಆದರೂ, ಅತ್ಯಾಚಾರ ಪ್ರಕರಣ ದಾಖಲಾಗಿ ಮೂರು ತಿಂಗಳು ಕಳೆದರೂ ಜಲಂಧರ್‌ನ ಲ್ಯಾಟಿನ್ ಕ್ಯಾಥೋಲಿಕ್ ಡಯಾಸಿಸ್‌ನ ಮುಖ್ಯಸ್ಥರಾಗಿದ್ದ ಬಿಷಪ್ ಅವರನ್ನು ಬಂಧಿಸಿರಲಿಲ್ಲ.

ನಂತರ, ಸಿಸ್ಟರ್ ಅನುಪಮಾ ನೇತೃತ್ವದಲ್ಲಿ ಸನ್ಯಾಸಿಗಳು ಕೊಚ್ಚಿಯಲ್ಲಿ ಸಾರ್ವಜನಿಕ ಧರಣಿ ಪ್ರತಿಭಟನೆ ನಡೆಸಿದ್ದರು. ನಂತರ ಸಾರ್ವಜನಿಕ ವಲಯದಿಂದ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಅಕ್ರಮ ಬಂಧನ, ಅತ್ಯಾಚಾರ, ಅಸ್ವಾಭಾವಿಕ ಲೈಂಗಿಕತೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದಲ್ಲಿ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಬಂಧಿಸಲಾಗಿತ್ತು.

ಈ ಪ್ರಕರಣದಲ್ಲಿ, ಭಾರತದ ಕ್ಯಾಥೋಲಿಕ್ ಚರ್ಚ್‌ನ ಅಧಿಕಾರವನ್ನು ಸನ್ಯಾಸಿನಿಯರ ಗುಂಪೊಂದು ಪ್ರಶ್ನಿಸಿದ್ದು ಇದೇ ಮೊದಲ ಬಾರಿಯಾಗಿತ್ತು.

2019ರಲ್ಲಿ, ಬಿಷಪ್ ವಿರುದ್ದ ಹೋರಾಟ ನಡೆಸಿದ್ದ ಆರು ಸನ್ಯಾಸಿನಿಗಳಲ್ಲಿ ನಾಲ್ವರಿಗೆ ಚರ್ಚ್ ವರ್ಗಾವಣೆ ಆದೇಶ ನೀಡಿತ್ತು. ಈ ವೇಳೆ ಸನ್ಯಾಸಿನಿಯರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದು, ಬಿಷಪ್ ವಿರುದ್ದ ಪ್ರಕರಣದ ವಿಚಾರಣೆಯ ಅಂತ್ಯದವರೆಗೆ ತಮ್ಮ ವರ್ಗಾವಣೆ ಆದೇಶವನ್ನು ತಡೆಯುವಂತೆ ಕೋರಿದ್ದರು.

ಈ ಸಂದರ್ಭದಲ್ಲಿ ಸನ್ಯಾಸಿನಿಯರು ಭಾರೀ ವಿರೋಧ ಮತ್ತು ಬಹಿಷ್ಕಾರವನ್ನು ಎದುರಿಸಬೇಕಾಯಿತು. ಆದರೂ, ಅವರು ತಮ್ಮ ಕಾನ್ವೆಂಟ್ ಬಿಡಲು ನಿರಾಕರಿಸಿದ್ದರು. ಸಂತ್ರಸ್ತೆ ಸನ್ಯಾಸಿನಿಯ ಬೆನ್ನಿಗೆ ದೃಢವಾಗಿ ನಿಂತಿದ್ದರು.

ಈ ವೇಳೆ ಕೇರಳ ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ಸಂತ್ರಸ್ತೆ ಸನ್ಯಾಸಿನಿ, “ನನ್ನನ್ನು ಇತರ ಸನ್ಯಾಸಿನಿಗಳಿಂದ ಪ್ರತ್ಯೇಕಿಸಲು, ಕಿರುಕುಳ ಮತ್ತು ಚಿತ್ರಹಿಂಸೆ ನೀಡಲು ಚರ್ಚ್ ಪ್ರಯತ್ನಿಸುತ್ತಿದೆ. ಅಂತಹ ಪರಿಸ್ಥಿತಿ ಎದುರಾದರೆ ನನ್ನ ಜೀವಕ್ಕೆ ಅಪಾಯವಿದೆ” ಎಂದು ಆರೋಪಿಸಿದ್ದರು.

ಈ ನಡುವೆ 2022ರಲ್ಲಿ, ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಕೊಟ್ಟಾಯಂನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಖುಲಾಸೆಗೊಳಿಸಿತು.

ಆಗ, ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿಸ್ಟರ್ ಅನುಪಮಾ “ನಮ್ಮ ಸಹೋದರಿಗೆ ನ್ಯಾಯ ಸಿಗುವವರೆಗೂ ನಾವು ಹೋರಾಟವನ್ನು ಮುಂದುವರಿಸುತ್ತೇವೆ. ನಾವು ಸಾಯಬೇಕಾಗಿ ಬಂದರೂ ಸರಿ, ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಬಿಷಪ್ ಫ್ರಾಂಕೊ ಹಣ ಮತ್ತು ತೋಳ್ಬಲ ಎರಡನ್ನೂ ಹೊಂದಿರುವ ವ್ಯಕ್ತಿ” ಎಂದು ಹೇಳಿದ್ದರು.

ಬಳಿಕ ಸಂತ್ರಸ್ತೆ ಸನ್ಯಾಸಿನಿ ಕೊಟ್ಟಾಯಂ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಸ್ತುತ ಪ್ರಕರಣ ಹೈಕೋರ್ಟ್‌ನಲ್ಲಿ ಬಾಕಿಯಿದೆ.

ಜಿಲ್ಲಾ ನ್ಯಾಯಾಲಯದ ತೀರ್ಪಿನ ಬಳಿಕ ಹೋರಾಟ ನಿರತ ಎಲ್ಲಾ ಸನ್ಯಾಸಿನಿಗಳು ತಮ್ಮ ಕಾನ್ವೆಂಟ್‌ನಲ್ಲೇ ಉಳಿದು ಹೋರಾಟ ಮುಂದುವರಿಸುವುದಾಗಿ ಹೇಳಿದ್ದರು. ಆದಾಗ್ಯೂ, ಕಳೆದ ಮೂರು ವರ್ಷಗಳಲ್ಲಿ ಸಿಸ್ಟರ್ ಅನುಪಮಾ ಅಲ್ಲದೆ, ಇತರ ಇಬ್ಬರು ಸನ್ಯಾಸಿನಿಗಳು ಕೂಡ ಸನ್ಯಾಸಿನಿತ್ವವನ್ನು ತ್ಯಜಿಸಿ ಕಾನ್ವೆಂಟ್ ತೊರೆದಿದ್ದಾರೆ.

ಪೋಕ್ಸೋ ಕಾಯ್ದೆಯಡಿ ತೀವ್ರ ಲೈಂಗಿಕ ದೌರ್ಜನ್ಯಕ್ಕೆ 20 ವರ್ಷಗಳಿಗಿಂತ ಕಡಿಮೆ ಅವಧಿಯ ಶಿಕ್ಷೆ ವಿಧಿಸುವಂತಿಲ್ಲ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...