Homeಕರ್ನಾಟಕಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ, ಹನಿಟ್ರ್ಯಾಪ್, ಹೆಚ್‌ಐವಿ ಹರಡಿದ ಆರೋಪ : ಚಾರ್ಜ್‌ಶೀಟ್ ಸಲ್ಲಿಸಿದ...

ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ, ಹನಿಟ್ರ್ಯಾಪ್, ಹೆಚ್‌ಐವಿ ಹರಡಿದ ಆರೋಪ : ಚಾರ್ಜ್‌ಶೀಟ್ ಸಲ್ಲಿಸಿದ ಎಸ್‌ಐಟಿ

- Advertisement -
- Advertisement -

ಆರ್‌.ಆರ್‌ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ದದ ಅತ್ಯಾಚಾರ, ಹನಿಟ್ರ್ಯಾಪ್ ಮತ್ತು ಹೆಚ್‌ಐವಿ ಸೋಂಕು ಹರಡಲು ಯತ್ನಿಸಿದ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ ವರದಿಯಾಗಿದೆ.

ವರದಿಗಳ ಪ್ರಕಾರ, ಡಿಸೆಂಬರ್ 17ರಂದು 2,481 ಪುಟಗಳ ದೋಷಾರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿರುದ್ದದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಕೆ ಮಾಡಿದೆ.

ದೋಷಾರೋಪ ಪಟ್ಟಿ 146 ಸಾಕ್ಷಿಗಳ ಹೇಳಿಕೆಗಳು ಮತ್ತು 850 ದಾಖಲೆಗಳನ್ನು ಒಳಗೊಂಡಿದೆ. 146 ಸಾಕ್ಷಿಗಳ ಪೈಕಿ 8 ಮಂದಿ ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ದಾಖಲಿಸಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಮುನಿರತ್ನ ಹನಿಟ್ರ್ಯಾಪ್ ಮಾಡಿ ರೆಕಾರ್ಡ್‌ ಮಾಡಿದ್ದಾರೆ ಎನ್ನಲಾದ ಕೆಲವು ವಿಡಿಯೋಗಳನ್ನೂ ವಶಪಡಿಸಿಕೊಂಡಿದ್ದಾರೆ. ಅವುಗಳನ್ನೂ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಕೋವಿಡ್ ಸಮಯದಲ್ಲಿ ಪರಿಚಯ ಮಾಡಿಕೊಂಡ ಮುನಿರತ್ನ ಅವರು, ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ. ಅದನ್ನು ವಿಡಿಯೋ ಮಾಡಿಟ್ಟುಕೊಂಡು ನನ್ನನ್ನು ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಅವರ ರಾಜಕೀಯ ವಿರೋಧಿಗಳನ್ನು ಹೆಚ್‌ಐವಿ ಪೀಡಿತ ಮಹಿಳೆಯರ ಮೂಲಕ ಹನಿಟ್ರ್ಯಾಪ್ ಮಾಡಲು ಸಹಾಯ ಮಾಡುವಂತೆ ನನಗೆ ಒತ್ತಡ ಹೇರಿದ್ದಾರೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದರು.

ಪ್ರಕರಣದ ತನಿಖೆಯ ವೇಳೆ ಮುನಿರತ್ನ ಅವರು ಇನ್ಸ್‌ಪೆಕ್ಟರ್ ಐಯ್ಯನರೆಡ್ಡಿ ಜೊತೆಗೂಡಿ ಮಾಜಿ ಕಂದಾಯ ಸಚಿವ ಹಾಗೂ ಹಾಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಹೆಚ್‌ಐವಿ ಹರಡಲು ಸಂಚು ರೂಪಿಸಿದ್ದರು. ಅದರೆ, ಅದು ವಿಫಲವಾಗಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ದಿ ಹಿಂದೂ ವರದಿ ತಿಳಿಸಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಎಂಟು ಮಂದಿ ಆರೋಪಿಗಳಲ್ಲಿ ಶಾಸಕ ಮುನಿರತ್ನ, ಪೊಲೀಸ್ ಇನ್ಸ್‌ಪೆಕ್ಟರ್ ಐಯ್ಯನ ರೆಡ್ಡಿ ಮತ್ತು ಮುನಿರತ್ನ ಅವರ ಇಬ್ಬರು ಸಹಚರರಾದ ಶ್ರೀನಿವಾಸ್ ಪಿ. ಮತ್ತು ಸುಧಾಕರ್ ಆರ್ ವಿರುದ್ಧ ಎಸ್‌ಐಟಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಆರೋಪಿಗಳ ವಿರುದ್ದ ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಕ್ಕಾಗಿ ಸೆಕ್ಷನ್ 376 (2)(n), ಜೀವಕ್ಕೆ ಅಪಾಯಕಾರಿಯಾದ ಕಾಯಿಲೆಯ ಸೋಂಕನ್ನು ಹರಡಿದ್ದಕ್ಕಾಗಿ ಸೆಕ್ಷನ್‌ 270 ಮತ್ತು ಯಾವುದೇ ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ಭಾಗದ ಚಿತ್ರವನ್ನು ಸೆರೆಹಿಡಿದಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಸಿ, ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಇ ಅಡಿ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಪ್ರಿಯಾಂಕ್ ಖರ್ಗೆ ಆಪ್ತನಿಂದ ಬೆದರಿಕೆ ಪ್ರಕರಣ : ಇಬ್ಬರು ಹೆಡ್‌ ಕಾನ್‌ಸ್ಟೇಬಲ್‌ಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...