Homeಕರ್ನಾಟಕರಜೆ ಮೇಲೆ ತೆರಳಿದ ಲೈಂಗಿಕ ಹಗರಣ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥ, ತನಿಖೆ ಸ್ಥಗಿತ: ಸಿದ್ದರಾಮಯ್ಯ

ರಜೆ ಮೇಲೆ ತೆರಳಿದ ಲೈಂಗಿಕ ಹಗರಣ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥ, ತನಿಖೆ ಸ್ಥಗಿತ: ಸಿದ್ದರಾಮಯ್ಯ

ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ

- Advertisement -
- Advertisement -

ರಮೇಶ್ ಜಾರಕಿಹೊಳಿ ಲೈಂಗಿಕ ಹಗರಣದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥರು ರಜೆ ಮೇಲೆ ತೆರಳಿ, ತನಿಖೆ ಸ್ಥಗಿತಗೊಂಡಿರುವುದರಿಂದ, ಹೈಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆಯನ್ನು ಮುಂದುವರೆಸಬೇಕು ಹಾಗೂ ಆರೋಪಿ ರಮೇಶ್ ಜಾರಕಿಹೊಳಿಯನ್ನು ಕೂಡಲೇ ಬಂಧಿಸಬೇಕು ಎಂದು ರಾಜ್ಯ ಸರ್ಕಾರವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ಒತ್ತಾಯಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, “ಅತ್ಯಾಚಾರ ಪ್ರಕರಣದ ಆರೋಪಿ ರಮೇಶ್ ಜಾರಕಿಹೊಳಿಯನ್ನು ಭೇಟಿಯಾಗಿ, ಚರ್ಚೆ ನಡೆಸಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಮ್ಮ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದು, ಈ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗಿರವಿ ಇರಿಸಿದ ಮೆದುಳುಗಳು ಮತ್ತು ಕಾಣೆಯಾದ ಹಸುಗೂಸು!: ಡಿ.ಉಮಾಪತಿ

“ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ರಮೇಶ್ ಜಾರಕಿಹೊಳಿ ಅವರಿಗೆ ಯಾರೆಲ್ಲಾ ಮಂತ್ರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ರಕ್ಷಣೆ ನೀಡುತ್ತಿದ್ದಾರೆ ಅವರೆಲ್ಲರ ಹೆಸರುಗಳನ್ನು ತನಿಖೆಯ ಮೂಲಕ ಬಹಿರಂಗಪಡಿಸಬೇಕು ಮತ್ತು ಅಂಥವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

“ಅತ್ಯಾಚಾರ ಪ್ರಕರಣ ದಾಖಲಾಗಿ, ಸಂತ್ರಸ್ತ ಯುವತಿ ವಿಶೇಷ ತನಿಖಾ ತಂಡದ ಎದುರು ರಮೇಶ್ ಜಾರಕಿಹೊಳಿ ತನ್ನನ್ನು ದೈಹಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಹೇಳಿಕೆ ನೀಡಿದ ಮೇಲೆಯೂ ಜಾರಕಿಹೊಳಿಯನ್ನು ಪೊಲೀಸರು ಏಕೆ ಬಂಧಿಸಿಲ್ಲ? ಅತ್ಯಾಚಾರ ಆರೋಪಿಯೊಬ್ಬ ಸ್ವಚ್ಛಂದವಾಗಿ ಓಡಾಡಿಕೊಂಡಿರಲು ರಾಜ್ಯ ಸರ್ಕಾರದ ಕೃಪಾಕಟಾಕ್ಷ ಕಾರಣವಲ್ಲದೆ ಇನ್ನೇನು?” ಎಂದು ಅವರು ಪ್ರಶ್ನಿಸಿದ್ದಾರೆ.

“ಅತ್ಯಾಚಾರ ಆರೋಪಿಯಾದ ರಮೇಶ್ ಜಾರಕಿಹೊಳಿ ಕಳೆದ ಶನಿವಾರ ರಾಜ್ಯದ ಗೃಹ ಸಚಿವರನ್ನು ಭೇಟಿಮಾಡಿ, ಎರಡು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದ್ದಾರೆ. ಅತ್ಯಾಚಾರ ಆರೋಪಿಯೊಬ್ಬ ಗೃಹ ಸಚಿವರನ್ನು ಭೇಟಿಮಾಡಿ, ಮಾತುಕತೆ ನಡೆಸಿರುವುದು ರಾಜ್ಯದ ಇತಿಹಾಸದಲ್ಲೇ ಇದೇ ಮೊದಲು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: #SaveLakshadweep-ಬಿಜೆಪಿಯ ದ್ವೇಷ ರಾಜಕೀಯಕ್ಕೆ ಹೊಸ ಬಲಿ; ಲಕ್ಷದ್ವೀಪದಲ್ಲಿ ಏನಾಗುತ್ತಿದೆ?

“ಸಿ.ಆರ್.ಪಿ.ಸಿ ಸೆಕ್ಷನ್ 53(A) ಪ್ರಕಾರ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆ ಒಳಪಡಿಸಬೇಕು ಎಂದಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿ ಇಷ್ಟು ದಿನ ಕಳೆದರೂ ಈ ವರೆಗೆ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸದಿರಲು ಕಾರಣವೇನು?” ಎಂದು ಕೇಳಿದ್ದಾರೆ.

“ತನ್ನ ರಾಸಲೀಲೆ ಸಿಡಿ ಹೊರಬಂದಾಗ ಸಿಡಿಯಲ್ಲಿರುವುದು ನಾನಲ್ಲ, ನನಗೂ ವೀಡಿಯೋಗೂ ಸಂಬಂಧವೇ ಇಲ್ಲ ಎಂದಿದ್ದ ರಮೇಶ್ ಜಾರಕಿಹೊಳಿ, ನಿನ್ನೆ ಸಿಡಿ ಯಲ್ಲಿರುವುದು ನಾನೇ ಎಂದು ಎಸ್.ಐ.ಟಿ ಮುಂದೆ ಒಪ್ಪಿಕೊಂಡಿದ್ದಾರೆಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಅಂದರೆ ಇದು ಅತ್ಯಾಚಾರವನ್ನು ಒಪ್ಪಿಕೊಂಡಂತೆ ಅಲ್ಲವೇ?” ಎಂದು ಕೇಳಿದ್ದಾರೆ.

“ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಳ್ಳುವ ಮೊದಲೇ ವಿಶೇಷ ತನಿಖಾ ತಂಡದ ಮುಖ್ಯಸ್ಥರಾದ ಸೌಮೇಂಧು ಮುಖರ್ಜಿ ಅವರನ್ನು ಸರ್ಕಾರ ರಜೆಯ ಮೇಲೆ ಕಳುಹಿಸಿದೆ.
ಇದು ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ತನಿಖೆಯನ್ನು ವಿಳಂಬ ಮಾಡುತ್ತಿದೆ ಎಂಬುದನ್ನು ತೋರಿಸುತ್ತದೆ.
ಸಿ.ಆರ್.ಪಿ.ಸಿ ಸೆಕ್ಷನ್ 173 (1)(A) ಪ್ರಕಾರ ಅತ್ಯಾಚಾರ ಪ್ರಕರಣದ ತನಿಖೆ ಎರಡು ತಿಂಗಳುಗಳೊಳಗೆ ಕಡ್ಡಾಯವಾಗಿ ಮುಗಿಯಬೇಕು ಎಂದಿದೆ. ಆದರೆ ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ ಸಂವಿಧಾನದ ಈ ಯಾವ ನಿಯಮಗಳನ್ನು ಪೊಲೀಸ್ ಇಲಾಖೆ ಪಾಲಿಸುತ್ತಿಲ್ಲ. ತಮಗೆ ಬೇಕಾದಂತೆ ಸಂವಿಧಾನದ ನಿಯಮಗಳನ್ನು ತಿರುಚಿಕೊಂಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ 2 ನೆ ಅಲೆಯಲ್ಲಿ ಅನಾಥರಾದ ಸಾವಿರಾರು ಮಕ್ಕಳು: ಸದ್ಯ ಲೆಕ್ಕಕ್ಕೆ ಸಿಕ್ಕಿದ್ದು 577!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...